Author: admin
ಕೋಟ: ಒಂದು ಊರಿನ ಸರ್ಕಾರಿ ಶಾಲೆ, ಆಸ್ಪತ್ರೆಗಳಿಗೆ ಆಯಾ ಊರಿನ ಸಹಕಾರಿ ಸಂಘಗಳು, ರೋಟರಿಯಂಥ ಸಂಸ್ಥೆಗಳು ಸೇವೆ ನೀಡಿದಲ್ಲಿ ಜನರಿಗೆ ಉಪಕಾರವಾಗುತ್ತದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಹೇಳಿದರು. ಕೋಟ ವ್ಯವಸಾಯಿಕ ಸಹಕಾರಿ ಸಂಘ ಮತ್ತು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಜಂಟಿಯಾಗಿ ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಹಸ್ತಾಂತರ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ಕೋಟ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಾಧವ ಪೈ ಅವರಿಗೆ ಇಸಿಜಿ ಯಂತ್ರ ಹಸ್ತಾಂತರಿಸಿದರು. ಸಹಕಾರಿ ಸಂಘದ ಉಪಾಧ್ಯಕ್ಷ ನಾಗರಾಜ ಹಂದೆ, ಸಿಇಒ ಶರತ್ ಕುಮಾರ್ ಶೆಟ್ಟಿ, ವೈದ್ಯ ಡಾ.ವಿಶ್ವನಾಥ್, ಸದಸ್ಯರಾದ ಅಚ್ಯುತ ಪೂಜಾರಿ, ಕುಸುಮಾ, ಬಸವ ಪೂಜಾರಿ ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು. ರೋಠರಿ ಕ್ಲಬ್ ಮಾಜಿ ಅಧ್ಯಕ್ಷ ದೇವಪ್ಪ ಪಟಗಾರ ಕಾರ್ಯಕ್ರಮ ನಿರೂಪಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ ದಶಮಾನೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಪಡೀಲ್, ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ ಮತ್ತು ಮಹಿಳಾ ವಿಭಾಗ ಬಂಡಿಕೊಟ್ಯ, ಉಳ್ಳಾಲ ಮತ್ತು ವಿದ್ಯಾರಣ್ಯ ಯುವಕ ವೃಂದ ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ, ಶಿವಶಕ್ತಿ ಯುವಕ ಮಂಡಲ ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ಕಣ್ಣಿನ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ ಜೂನ್ 15ರ ಭಾನುವಾರ ಬೆಳಗ್ಗೆ 9.30ರಿಂದ 12.30ರವರೆಗೆ ಉಳ್ಳಾಲ ನಗರಸಭೆ ಆವರಣದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ವೈದ್ಯಕೀಯ ಶಿಬಿರದಲ್ಲಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಯನ್ಸಸ್ ಮಂಗಳೂರು, ಇವರ ನುರಿತ ವೈದ್ಯರ ತಂಡ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು…
ಫೋನ್ ಪೇ, ಗೂಗಲ್ ಪೇ ಬಳಕೆದಾರರಿಗೆ ತಟ್ಟಲಿದೆಯೇ ಬಿಸಿ…? ಇಲ್ಲ ಎನ್ನುತ್ತಿದೆ ಕೇಂದ್ರ ಸರ್ಕಾರ, ಊಹಾಪೋಹ ನಂಬಬೇಡಿ ಎಂದ ಸರ್ಕಾರ ನವದೆಹಲಿ: ಫೋನ್ ಪೇ, ಗೂಗಲ್ ಪೇ ಸೇರಿ ಯುಪಿಐ ಆಪ್ಗಳ ಮೂಲಕ ನಡೆಸುವ 3,000 ರೂ.ಗಳಿಗಿಂತ ಹೆಚ್ಚಿನ ಮೊತ್ತದ ವಹಿವಾಟಿಗೆ ಶುಲ್ಕ ವಿಧಿಸುವ ಸಾಧ್ಯತೆ ಇದೆಯೇ? ಹೌದು ಎನ್ನುತ್ತಿವೆ ಮೂಲಗಳು. ಹೀಗಾದರೆ ಬ್ಯಾಂಕುಗಳು ಮತ್ತು ಪಾವತಿ ಸೇವಾ ಪೂರೈಕೆದಾರರಿಗೆ ಅನುಕೂಲವಾಗಲಿದೆ. ಸಣ್ಣ ವ್ಯಾಪಾರಿಗಳು ಮತ್ತು ಬಳಕೆದಾರರಿಗೆ ತೊಂದರೆಯಾಗದಂತೆ, ಹೆಚ್ಚಿನ ಮೊತ್ತದ ವಹಿವಾಟುಗಳಿಗೆ ಮಾತ್ರ ಶುಲ್ಕ ವಿಧಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ. https://chat.whatsapp.com/EbVKVnWB6rlHT1mWtsgbch ಇದರಿಂದ ಬ್ಯಾಂಕುಗಳು, ಫಿನ್ಟೆಕ್ ಸಂಸ್ಥೆಗಳು ಮತ್ತು ಫೋನ್ ಪೇ, ಗೂಗಲ್ ಪೇನಂತಹ ಸೇವಾ ಪೂರೈಕೆದಾರ ಕಂಪನಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಇವುಗಳಿಗೆ ಆದಾಯ ಗಳಿಸಲು ಸಹಾಯ ಮಾಡಲಿದೆ. ಸಣ್ಣ ವ್ಯಾಪಾರಿಗಳು ಮತ್ತು ದೈನಂದಿನ ಬಳಕೆದಾರರ ಮೇಲೆ ಪರಿಣಾಮ ಬೀರದಂತೆ ಹೆಚ್ಚಿನ ವಹಿವಾಟುಗಳ ಮೇಲೆ ಮಾತ್ರ ಶುಲ್ಕ ವಿಧಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ವರದಿ ಹೇಳಿದೆ.…
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಜಿಲ್ಲಾ ಸಹಕಾರ ಇಲಾಖೆ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ʼʼ ಕಾರ್ಯಕ್ರಮ ಜೂನ್ 17ರಂದು ಮಂಗಳವಾರ ಬೆಳಗ್ಗೆ 10ಕ್ಕೆ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ “ಏಕ್ ಪೇಡ್ ಮಾ ಕೇ ನಾಮ್ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಡಾ.ಎಸ್ ಆರ್ ಹರೀಶ್ ಆಚಾರ್ಯ ವಿಷಯ ಮಂಡನೆ…
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ವತಿಯಿಂದ ಆರು ತಿಂಗಳ ಅವಧಿಯ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಶಿಬಿರಕ್ಕೆ (ಜುಲೈ -ಡಿಸೆಂಬರ್ ಬ್ಯಾಚ್) ಅರ್ಜಿ ಆಹ್ವಾನಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಕೋರ್ಸ್ ಅವಧಿ ಆರು ತಿಂಗಳು ಆಗಿದ್ದು, ಜುಲೈನಿಂದ ತರಗತಿಗಳು ಆರಂಭವಾಗಲಿದೆ. ಖಾಸಗಿ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ ವಿದ್ಯಾರ್ಹತೆ ಪಿ.ಯು.ಸಿ ಪರೀಕ್ಷೆ ಉರ್ತ್ತೀರಾಗಿರಬೇಕು. ಆಸಕ್ತಿಯುಳ್ಳ ಎಲ್ಲಾ ಅಭ್ಯರ್ಥಿಗಳು ಪ್ರವೇಶ ಪಡೆಯಲು ಅವಕಾಶವಿದೆ. ಅರ್ಜಿಯನ್ನು ದಿನಾಂಕ: 30.06.2025ರ ಒಳಗಾಗಿ ಸಲ್ಲಿಸಬೇಕು. ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/- ಶಿಷ್ಯ ವೇತನ ನೀಡಲಾಗುವುದು. ಈ ತರಬೇತಿಯು ಕೆ.ಎ.ಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರವಾಗಿದ್ದು, ಸಹಕಾರ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿಯೂ ಆದ್ಯತೆ ಸಿಗುತ್ತದೆ. ಅರ್ಜಿ ದೊರೆಯುವ ಸ್ಥಳ ಕೆ.ಐ.ಸಿ.ಎಂ, ನಂ 1/3, 2ನೇ ಮಹಡಿ, 3ನೇ ಮುಖ್ಯ ರಸ್ತೆ, ಚಾಮರಾಜಪೇಟೆ…
ಮಂಗಳೂರು: ನವದೆಹಲಿಯ ಫ್ರೆಂಡ್ಶಿಪ್ ಫೋರಂ ನೀಡುವ ಪ್ರತಿಷ್ಟಿತ ‘ಗ್ಲೋಬಲ್ ಅಚೀವರ್ಸ್’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಡಾ| ರಾಜೇಂದ್ರ ಕುಮಾರ್ ಅವರು ಸಹಕಾರ, ಸಮಾಜಸೇವೆ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಸಂಸ್ಥೆ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಹಲವಾರು ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ಎಸ್ಸಿಡಿಸಿಸಿ ಬ್ಯಾಂಕನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ. ನವೋದಯ ಸ್ವಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆ ರೂಪಿಸಿದ್ದಾರೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಮಹಿಳೆಯರಿಗೆ ಆರ್ಥಿಕ ಚೈತನ್ಯ ತುಂಬಿದ್ದಾರೆ. ಡಾ|ರಾಜೇಂದ್ರ ಕುಮಾರ್ ಅವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಈಗಾಗಲೇ…
ಕನಿಷ್ಠ ಬೆಂಬಲ ಬೆಲೆ (MSP) ನೀಡುವ ಭಾರತದ ಮೊದಲ ರಾಜ್ಯವಾಗಿ ದಾಖಲು ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಿಮಾಚಲ ಪ್ರದೇಶ ರಾಜ್ಯವು ಹಾಲಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿಪಡಿಸಿದ್ದು ಇದನ್ನು ಜಾರಿಗೆ ತಂದ ಭಾರತದ ಮೊದಲ ರಾಜ್ಯವಾಗಿ ದಾಖಲಾಗಿದೆ. https://chat.whatsapp.com/EbVKVnWB6rlHT1mWtsgbch ಹಿಮಾಚಲ ಪ್ರದೇಶದ ಈ ಕ್ರಮ ಡೈರಿ ವಲಯದಲ್ಲಿ ಪರಿವರ್ತನಾತ್ಮಕ ಹೆಜ್ಜೆಗಳನ್ನು ದಾಖಲಿಸಲಿದೆ. ಕಳೆದ ಎರಡೂವರೆ ವರ್ಷಗಳಲ್ಲಿ, ರಾಜ್ಯ ಸರ್ಕಾರವು ಜಾನುವಾರು ಸಾಕುತ್ತಿರುವ ರೈತರನ್ನು ಉನ್ನತಿಗೇರಿಸಲು, ಡೈರಿ ಸಹಕಾರ ಸಂಘಗಳನ್ನು ಬಲಪಡಿಸಲು ಮತ್ತು ಸುಸ್ಥಿರ ಗ್ರಾಮೀಣ ಆರ್ಥಿಕತೆ ಸ್ಥಾಪಿಸಲು ವ್ಯಾಪಕವಾದ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದೆ. ಹಿಮಾಚಲ ಪ್ರದೇಶದಲ್ಲಿ ಪ್ರಸ್ತುತ ಸುಮಾರು 38,400 ರೈತರು ಲೀಟರ್ಗೆ 51 ರೂ.ಗೆ ಪ್ರತಿದಿನ 2.25 ಲಕ್ಷ ಲೀಟರ್ ಹಸುವಿನ ಹಾಲನ್ನು ಪೂರೈಸುತ್ತಿದ್ದಾರೆ. 1,482 ಎಮ್ಮೆ ಸಾಕಣೆದಾರರು ಲೀಟರ್ಗೆ 61 ರೂ.ಗೆ 7,800 ಲೀಟರ್ ಕೊಡುಗೆ ನೀಡುತ್ತಾರೆ. ಪ್ರತಿ ಲೀಟರ್ಗೆ 70 ರೂ.ಗೆ ಪೈಲಟ್ ಆಧಾರದ ಮೇಲೆ ಮೇಕೆ ಹಾಲು ಸಂಗ್ರಹವೂ ಪ್ರಾರಂಭವಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ…
ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ಇದರ ವತಿಯಿಂದ ಬ್ಯಾಂಕಿನ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ ಪುತ್ತೂರಿನ ತೆಂಕಿಲದಲ್ಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀಯಲ್ಲಿ ಶನಿವಾರದಂದು ಜರಗಿತು. https://chat.whatsapp.com/EbVKVnWB6rlHT1mWtsgbch ಸಂಪನ್ಮೂಲ ವ್ಯಕ್ತಿಯಾಗಿ “ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಮಂಗಳೂರು” ಇದರ ಮುಖ್ಯಸ್ಥ ಶ್ರೀಶ ಕೆ.ಎಂ ಸಿಬ್ಬಂದಿಗಳಿಗೆ ” People Skill Development Programʼʼ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಹೆಚ್ ಜಗನ್ನಾಥ ಸಾಲಿಯಾನ್, ಉಪಾಧ್ಯಕ್ಷ ಮನೋರಂಜನ್ ಕೆ.ಆರ್, ನಿರ್ದೇಶಕರಾದ ದಯಾನಂದ ಆಳ್ವ ಕೆ., ಮೋಹನ್ ಕೆ.ಎಸ್., ಭಾಸ್ಕರ್ ಶೆಟ್ಟಿ, ದಿವಾಕರ ವಿ., ಸತೀಶ ಪಿ., ಪೂವಪ್ಪ ಎಸ್, ಶುಭಲಕ್ಷ್ಮಿ, ಜಯಂತಿ ಎಚ್.ರಾವ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದರು. ತರಬೇತಿ ನಂತರ ಶ್ರೀಶ ಕೆ.ಎಂ ಇವರನ್ನು ಬ್ಯಾಂಕಿನ ಅಧ್ಯಕ್ಷ ಜಗನ್ನಾಥ ಸಾಲಿಯಾನ್ ಹಾಗೂ ಪದಾಧಿಕಾರಿಗಳು ಗೌರವಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್:…
ಮೂಡುಬಿದಿರೆ: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಆಶ್ರಯದಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್, ಇಂಟರಾಕ್ಟ್ ಕ್ಲಬ್ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ, ಮಂಜುಶ್ರೀ ಭಜನಾ ಮಂದಿರ ದಂಡ್ಯೊಟ್ಟು, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಇವರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಹಣ್ಣು ಹಂಪಲು ಸಸಿಗಳ ನಾಟಿ ಮತ್ತು ಗಿಡ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ಬಡಕೋಡಿ ಮಂಜುಶ್ರೀ ಭಜನಾ ಮಂದಿರ ಆವರಣದಲ್ಲಿ ಆಯೋಜಿಸಲಾಯಿತು. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮದಲ್ಲಿ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ನೂಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಸಿಗಳನ್ನು ನೆಡುವ ಕಾರ್ಯಕ್ರಮ ಯಾರು ಕೂಡ ಮಾಡಬಹುದು, ಆದರೆ ಅದನ್ನು ಪೋಷಿಸುವ ಕಾರ್ಯವನ್ನು ಕೂಡ ಮಾಡುವಲ್ಲಿ ಭಾಗಿಯಾಗಬೇಕು ಎಂದರು. ಇಂದಿರಾ ಗಾಂದಿ ವಸತಿ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಶಾಲೆಯ ಎಲ್ಲಾ ಮಕ್ಕಳ ಜನ್ಮದಿನದ ಪ್ರಯುಕ್ತ 125 ಮಕ್ಕಳಲ್ಲಿ 105 ಮಕ್ಕಳು ಗಿಡ ನೆಟ್ಟು ಬೆಳೆಸಿದ್ದಾರೆ ಎಂದು…
ಗದಗ: ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ 2025ರ ಅಂಗವಾಗಿ ಗದಗ ಜಿಲ್ಲೆಯ ಸಹಕಾರ ಸಂಘಗಳು ಹಾಗೂ ಬ್ಯಾಂಕ್ಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಸಹಕಾರದಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಕೆ.ಸಿ.ಸಿ. ಬ್ಯಾಂಕ್ನಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ಕೆ.ಸಿ.ಸಿ. ಬ್ಯಾಂಕ್ ಧಾರವಾಡ ಇದರ ನಿರ್ದೇಶಕ ಎಂ.ಎಫ್ ಕಲಗುಡಿ ಸಹಕಾರ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಸ್ವಚ್ಛ ಭಾರತ ಅಭಿಯಾನ’ದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮಗಳು ನಡೆಯುತ್ತಿವೆ. ಕೇಂದ್ರ ಸರ್ಕಾರವು ಈ ವರ್ಷವನ್ನು ಅಂತಾರಾಷ್ಟ್ರೀಯ ಸಹಕಾರ ವರ್ಷ ಎಂದು ಘೋಷಿಸಿದ್ದು ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು ಎಂಬುದು ಅದರ ಧ್ಯೇಯವಾಗಿದೆ. ಸಹಕಾರದಿಂದ ಸ್ವಚ್ಛತೆ ಅಭಿಯಾನ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಸಹಕಾರ ಸಂಘಗಳು ವಿವಿಧ ಸ್ಥಳಗಳಲ್ಲಿ ವರ್ಷವಿಡೀ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗದಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿ.ಎಂ.ಪಾಟೀಲ, ದೇಶ, ರಾಜ್ಯ, ಜಿಲ್ಲೆ ತಾಲೂಕು ಹಾಗೂ ಹಳ್ಳಿಗಳಿಂದ ಸ್ವಚ್ಛತೆಯ ಕೆಲಸ…
