Author: admin

ವಿಜಯಪುರ: ಇಲ್ಲಿನ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ ಹಾಗೂ ದೀಪಕ ಶಿಂತ್ರೆ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. https://chat.whatsapp.com/FCEnlTkAKCC0MGPhXtX4i4 ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರ ಸಭೆ ಅಧ್ಯಕ್ಷರಾದ ಸಂಜಯ ಪಾಟೀಲ ಕನಮಡಿ ಅವರ ಅಧ್ಯಕ್ಷತೆಯಲ್ಲಿ ಚಾಲುಕ್ಯ ನಗರದ ಕಚೇರಿಯಲ್ಲಿ ಜರುಗಿತು. ಈ ಸಭೆಯಲ್ಲಿ ಆಡಳಿತ ಮಂಡಳಿಗೆ ಸಹಕಾರಿ ಕ್ಷೇತ್ರದಲ್ಲಿ ಅನುಭವಿಗಳನ್ನು, ಪರಿಣಿತರನ್ನು ಸೇರಿಸಿಕೊಳ್ಳಲು ತೀರ್ಮಾನಿಸಿ ಸಹಕಾರ ಇಲಾಖೆಯ ನಿವೃತ್ತ ಅಧಿಕಾರಿ ಪರಶುರಾಮ ಚಿಂಚಲಿ ಹಾಗೂ ಸುಮಾರು ೨೫ ವರ್ಷಗಳ ಕಾಲ ಸಹಕಾರ ಕ್ಷೇತ್ರದ ಅನುಭವವಿರುವ ದೀಪಕ ಶಿಂತ್ರೆ ಇವರುಗಳನ್ನು ಒಕ್ಕೂಟದ ಆಡಳಿತ ಮಂಡಳಿಗೆ ನಾಮನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಚಂದ್ರಶೇಖರ್ ಕವಟಗಿ, ಆಡಳಿತ ಮಂಡಳಿಯ ಸದಸ್ಯರಾದ ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ್ ವಾರದ, ಅರುಣ್ ಮಠ , ಬಾಲಚಂದ್ರ ಮುಂಜಾಣೆ, ಯಮನಪ್ಪ ಸಾತಿಹಾಳ, ಕಾಂತುಗೌಡ ಪಾಟೀಲ,(ಚಂದ್ರಕಾಂತ ), ರಾಜು ಹಂಚಾಟೆ, ಮಲ್ಕಪ್ಪ ರೊಟ್ಟಿ, ಆರ್ ಡಿ…

Read More

ಬಳ್ಳಾರಿ: ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಮೋಹಿತ್‌ ಮಸ್ಕಿ ಅವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಸೋಮವಾರ ಸ್ವೀಕರಿಸಿದ್ದಾರೆ. ಸುಕೋ ಬ್ಯಾಂಕಿನ ಉಪಾಧ್ಯಕ್ಷರಾಗಿ ಮುರಳೀಧರ ರೆಡ್ಡಿಯವರು ಆಯ್ಕೆಯಾಗಿದ್ದಾರೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿ.ಎಸ್‌ ರವಿ ಸುಧಾಕರ್‌ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮೋಹಿತ್‌ ಮಸ್ಕಿ ಅವರು ಸುಕೋ ಬ್ಯಾಂಕಿನ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು ಕಳೆದ ಎರಡು ಅವಧಿಗಳಲ್ಲಿ ಅಧ್ಯಕ್ಷರಾಗಿದ್ದು ಗ್ರಾಹಕರ ವಿಶ್ವಾಸ ಪಡೆದು ಬ್ಯಾಂಕನ್ನು ಆರ್ಥಿಕವಾಗಿ ಸದೃಢವಾಗಿಸುವಲ್ಲಿ ಶ್ರಮಿಸಿದ್ದಾರೆ. ಅಲ್ಲದೆ ರಿಸರ್ವ್‌ ಬ್ಯಾಂಕ್‌ ಸೂಚನೆ, ನಿರ್ದೇಶನಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸಿ, ಎಟಿಎಂ, ಮೊಬೈಲ್‌ ಬ್ಯಾಂಕಿಂಗ್‌, ಯುಪಿಐ ಬ್ಯಾಂಕಿಂಗ್‌ ಸೇವೆ ಇತ್ಯಾದಿ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ನವದೆಹಲಿ: ಕೇಂದ್ರ ಸಹಕಾರ ಸಚಿವಾಲಯವು ಸಹಕಾರಿ ಆಧಾರಿತ ಭಾರತ್ ಟ್ಯಾಕ್ಸಿಯನ್ನು ಫೆಬ್ರವರಿ 5ರಂದು (ಇಂದು) ನವದೆಹಲಿಯ ವಿಜ್ಞಾನ ಭವನದಲ್ಲಿ ಲೋಕಾರ್ಪಣೆ ಮಾಡಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಕಾರ್ಯಕ್ರಮ ಉದ್ಘಾಟಿಸಿ ಭಾರತ್‌ ಟ್ಯಾಕ್ಸಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಭಾರತ್‌ ಟ್ಯಾಕ್ಸಿ ಲೋಕಾರ್ಪಣಾ ಕಾರ್ಯಕ್ರಮವು ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದು, ಸಚಿವಾಲಯದ ಅಧಿಕೃತ ಯೂಟ್ಯೂಬ್ ಮತ್ತು ಫೇಸ್‌ಬುಕ್ ವೇದಿಕೆಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಸಹಕಾರಿ ಆಂದೋಲನವನ್ನು ಉದಯೋನ್ಮುಖ ಮತ್ತು ತಂತ್ರಜ್ಞಾನ ಆಧಾರಿತ ಸೇವಾ ವಲಯಗಳಿಗೆ, ವಿಶೇಷವಾಗಿ ನಗರ ಮತ್ತು ಅರೆ-ನಗರ ಚಲನಶೀಲತೆಗೆ ವಿಸ್ತರಿಸುವ ಸರ್ಕಾರದ ಪ್ರಯತ್ನಗಳಲ್ಲಿ ಭಾರತ್ ಟ್ಯಾಕ್ಸಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಸಹಕಾರ ಸಚಿವಾಲಯದ ಈ ಕ್ರಮವು ಚಾಲಕ-ಸದಸ್ಯರಿಗೆ ಕೈಗೆಟುಕುವಿಕೆ, ಪಾರದರ್ಶಕತೆ ಮತ್ತು ಸಮಾನ ಆದಾಯದ ಅವಕಾಶಗಳ ಮೇಲೆ ಕೇಂದ್ರೀಕರಿಸುವ ಮೂಲಕ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ಪರಿಸರ ವ್ಯವಸ್ಥೆಯೊಳಗೆ ಸಹಕಾರಿ ನೇತೃತ್ವದ ಪರ್ಯಾಯವನ್ನು ಪರಿಚಯಿಸುವ ನಿರೀಕ್ಷೆಯಿದೆ. ಸಹಕಾರ ಸಚಿವಾಲಯದ ಅಧಿಕಾರಿಗಳ ಪ್ರಕಾರ, ಭಾರತ್ ಟ್ಯಾಕ್ಸಿ ಸರ್ಕಾರದ “ಸಹಕಾರ್ ಸೆ…

Read More

ಹುಬ್ಬಳ್ಳಿ: ಸಹಕಾರಿ ಸಂಘಗಳು, ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸುರಕ್ಷಿತ ಮತ್ತು ದೀರ್ಘಕಾಲ ಬಾಳಿಕೆ ಬರುವ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ Chubbsafes and Steelage ಕಂಪನಿಯ ಚಾನಲ್‌ ಪಾರ್ಟ್‌ನರ್‌ ವಸುಧಾ ಆಟೋಮೇಶನ್‌ನ “ಗೇಟ್‌ವೇ ಆಫ್‌ ನಾರ್ತ್‌ ಕರ್ನಾಟಕ” ಹುಬ್ಬಳ್ಳಿ ಘಟಕದ ಶೋರೂಮ್‌ ಲೋಕಾರ್ಪಣಾ ಕಾರ್ಯಕ್ರಮ ನಾಳೆ (ಫೆ.4) ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಬೆಳಗ್ಗೆ 10.30ಕ್ಕೆ ಹುಬ್ಬಳ್ಳಿಯ ಸ್ಟೇಶನ್‌ ರಸ್ತೆಯ ಲಕ್ಷ್ಮೀ ಬಾಲಕೃಷ್ಣ ಸ್ಕ್ವೇರ್‌ನ ಹರ್ಷ ಶೋರೂಮ್‌ನ ಕೆಳಗಿರುವ ಕರ್ನಾಟಕ ಕ್ಲಾತ್‌ ಸೆಂಟರ್‌ನ ಎದುರು ವಸುಧಾ ಆಟೋಮೇಶನ್‌ನ ಶೋರೂಮ್‌ ಉದ್ಘಾಟನೆಯಾಗಲಿದೆ. ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಜಿ.ನಂಜನ ಗೌಡ ಹಾಗೂ Gunnebo India Pvt.Ltd ಇದರ ಸೇಲ್ಸ್‌ ಆಂಡ್‌ ಸರ್ವೀಸ್‌ ಉಪಾಧ್ಯಕ್ಷರಾದ ವಿಶಾದ್‌ ಮಿಶ್ರಾ ಶೋರೂಮ್‌ ಲೋಕಾರ್ಪಣೆಗೊಳಿಸಲಿದ್ದಾರೆ. 2018ರಲ್ಲಿ ಸ್ಥಾಪಿತವಾದ ವಸುಧಾ ಆಟೋಮೇಶನ್ ಬೆಂಗಳೂರಿನ ರಾಜಾಜಿನಗರದಲ್ಲಿ ಪ್ರಧಾನ ಕಚೇರಿ ಹೊಂದಿದೆ. ಉತ್ತಮ ಗುಣಮಟ್ಟದ ಸೆಕ್ಯುರಿಟಿ ಪ್ರಾಡಕ್ಟ್ಸ್‌ಗಳ ವಿಶ್ವಾಸಾರ್ಹ ಪೂರೈಕೆದಾರರಾಗಿದ್ದು, ಗ್ರಾಹಕರಿಂದ ಉತ್ತಮ ಮೆಚ್ಚುಗೆ ಗಳಿಸಿದೆ. ಸ್ಟ್ರಾಂಗ್‌ರೂಮ್ ಬಾಗಿಲುಗಳು (Strong Room Doors), ಜುವೆಲ್ಲರಿ ಲಾಕರ್‌ಗಳು…

Read More

ವಿಶ್ವಕರ್ಮ ಬ್ಯಾಂಕ್‌ ಉಡುಪಿ ಶಾಖೆ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪ್ರಭಾಕರ ಪೂಜಾರಿ ಆಶಯ ಉಡುಪಿ: ಸ್ವಚ್ಛತೆ ಎಂಬುದು ಒಂದು ದಿನಕ್ಕೆ ಸೀಮಿತವಾದ ಕಾರ್ಯಕ್ರಮವಲ್ಲ. ಅದು ನಿತ್ಯ ನಿರಂತರ ಮುಂದುವರಿದು ಪ್ರತಿಯೊಬ್ಬರ ದಿನನಿತ್ಯದ ಜೀವನ ಶೈಲಿಯಾಗಬೇಕು. ಸಮಾಜದ ಪ್ರತಿಯೊಬ್ಬರೂ ಸ್ವಚ್ಛತೆಯ ಬಗ್ಗೆ ಜಾಗೃತರಾಗಬೇಕೆಂಬ ಉದ್ದೇಶದಿಂದ ವಿಶ್ವಕರ್ಮ ಸಹಕಾರ ಬ್ಯಾಂಕ್ ನಿರಂತರವಾಗಿ ಇಂತಹ ಶ್ರಮದಾನ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಉತ್ತಮ ವಿಚಾರ ಎಂದು ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಡುಪಿಯಲ್ಲಿ ಆಯೋಜಿಸಿದ 24ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಹೇಳಿದರು. ಜಯಂಟ್ಸ್ ಗ್ರೂಪ್ ಆಫ್ ಉಡುಪಿ ಇದರ ಅಧ್ಯಕ್ಷ ವಿನಯ್ ಕುಮಾರ್ ಪೂಜಾರಿ ಕರಂಬಳ್ಳಿ, ಹಾಗೂ ನಮೋ ಫ್ರೆಂಡ್ಸ್ ದೊಡ್ಡಣಗುಡ್ಡೆ ಇದರ ಅಧ್ಯಕ್ಷ ರಾಜೇಶ್ ಕುಮಾರ್ ಹಸಿರು ನಿಶಾನೆ ತೋರಿಸಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಡುಪಿ ನಗರದ ದೊಡ್ಡನಗುಡ್ಡೆ ಹುಡ್ಕೋ ಕಾಲನಿ ಪರಿಸರದಲ್ಲಿ…

Read More

ಮಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿದ ಬಜೆಟ್ ಸಹಕಾರ ಕ್ಷೇತ್ರದ ದೂರಗಾಮಿ ಅಭಿವೃದ್ಧಿಗೆ ಪೂರಕವಾಗಿದೆ. ಬಜೆಟ್ ನಲ್ಲಿ ಪ್ರಾಥಮಿಕ ಸಹಕಾರಿ ಸಂಘಗಳಿಗೆ ಆದಾಯ ತೆರಿಗೆ ಕಡಿತವನ್ನು ವಿಸ್ತರಿಸಿರುವುದು ಉತ್ತಮ ನಡೆ ಎಂದು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಅಭಿಪ್ರಾಯ ಪಟ್ಟಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಇದುವರೆಗೆ ತೆರಿಗೆ ಕಡಿತದ, ಪ್ರಯೋಜನವು ಹಾಲು ಉತ್ಪಾದನೆ, ಹಣ್ಣು ಮತ್ತು ತರಕಾರಿಗಳ ಸಂಸ್ಕರಣೆ ಹಾಗೂ ಮಾರುಕಟ್ಟೆ ಪೂರೈಸುವಲ್ಲಿ ತೊಡಗಿರುವ ಸಹಕಾರಿ ಸಂಸ್ಥೆಗಳಿಗೆ ಅನ್ವಯಿಸುತ್ತಿದ್ದವು. ಈ ಬಾರಿ ಅವುಗಳ ಸದಸ್ಯರು ಬೆಳೆಸಿದ ಅಥವಾ ಬೆಳೆದ ಜಾನುವಾರು ಮೇವು ಮತ್ತು ಹತ್ತಿ ಬೀಜಗಳನ್ನು ಪೂರೈಸುವ ಪ್ರಾಥಮಿಕ ಸಹಕಾರಿ ಸಂಸ್ಥೆಗಳನ್ನು ಸಹ ಸೇರಿಸಿ ತೆರಿಗೆ ಕಡಿತದ ವ್ಯಾಪ್ತಿಯನ್ನು ವಿಸ್ತರಿಸಲು ಪ್ರಸ್ತಾಪಿಸಲಾಗಿದೆ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗಳಿಗೂ ಹೆಚ್ಚುವರಿ ಬೆಂಬಲ ನೀಡಲು ಬಜೆಟ್ ನಲ್ಲಿ ಪ್ರಸ್ತಾಪವನ್ನು ಮಾಡಲಾಗಿದೆ. ಆಡಳಿತವು ಹೊಸ ರೀತಿಯ ತೆರಿಗೆ ಸುಧಾರಣೆಗೆ ಪ್ರಮುಖ ಅಂಶಗಳನ್ನು…

Read More

ಕಂಪನಿಗಳಲ್ಲಿ ಮಾಡಿದ ಹೂಡಿಕೆ ಮೇಲಿನ ಲಾಭಾಂಶಕ್ಕೆ ವಿನಾಯಿತಿ: ಕೇಂದ್ರ ಬಜೆಟ್‌ ಘೋಷಣೆ ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭಾನುವಾರ ಮಂಡಿಸಿದ ಬಜೆಟ್‌ನಲ್ಲಿ ಸಹಕಾರಿ ವಲಯಕ್ಕೆ ಒಂದಷ್ಟು ಪೂರಕವಾದ ಅಂಶಗಳನ್ನು ಹೊಂದಿದೆ. ಸಹಕಾರಿ ವಲಯದ ಬೆನ್ನಿಗೆ ನಿಂತಿರುವ ಕೇಂದ್ರ ಸರಕಾರ ತೆರಿಗೆ ವಿನಾಯಿತಿ ಘೋಷಿಸಿದೆ. https://chat.whatsapp.com/FCEnlTkAKCC0MGPhXtX4i4 ಇಷ್ಟರವರೆಗೆ ತೆರಿಗೆ ವಿನಾಯಿತಿಯನ್ನು ಪ್ರಾಥಮಿಕ ಸಹಕಾರಿ ಸಂಘಗಳ ಸದಸ್ಯರು ಉತ್ಪಾದಿಸಿದ ಹಾಲು, ಎಣ್ಣೆಬೀಜಗಳು, ಹಣ್ಣುಗಳು ಅಥವಾ ತರಕಾರಿಗಳನ್ನು ಪೂರೈಸುವಲ್ಲಿ ತೊಡಗಿರುವ ಸಂಘಕ್ಕೆ ಮತ್ತು ಅದೇ ಚಟುವಟಿಕೆಗಳಲ್ಲಿ ತೊಡಗಿರುವ ಇತರರಿಗೆ ನೀಡಲಾಗುತ್ತಿತ್ತು. ಪ್ರಸ್ತುತ ಇದರ ವ್ಯಾಪ್ತಿಯನ್ನು ಸದಸ್ಯರು ಉತ್ಪಾದಿಸುವ ಪಶು ಆಹಾರ ಮತ್ತು ಹತ್ತಿ ಬೀಜ ಪೂರೈಕೆಗೂ ವಿಸ್ತರಿಸಲಾಗುತ್ತಿದೆ. ಹೊಸ ತೆರಿಗೆ ಪದ್ಧತಿಯಡಿ ಸಹಕಾರಿ ಸಂಘದ ಲಾಭಾಂಶದ ಮೇಲೆಯೂ ತೆರಿಗೆ ವಿನಾಯಿತಿಯನ್ನು ವಿಸ್ತರಿಸಲಾಗಿದೆ. ಒಂದು ಸಹಕಾರ ಸಂಘವು ಬೇರೊಂದು ಸಹಕಾರ ಸಂಘದಿಂದ ಪಡೆಯುವ ಲಾಭಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಇದನ್ನು ಸದಸ್ಯರಿಗೆ ವಿತರಿಸಿದರೂ ಈ ಸೌಲಭ್ಯ ಲಭಿಸಲಿದೆ. ರಾಷ್ಟ್ರೀಯ ಸಹಕಾರ ಒಕ್ಕೂಟಗಳು ಜ.31ರವರೆಗೆ ಕಂಪನಿಗಳಲ್ಲಿ ಮಾಡಿದ…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್‌ ಆಯೋಜನೆಯ 23ನೇ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮರೋಳಿ ಗ್ರಾಮ ಸಮಿತಿ ಅಧ್ಯಕ್ಷ ಚಂದ್ರನಾಥ ಅತ್ತಾವರ ಅಭಿಪ್ರಾಯ ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕಿನ ಮಂಗಳೂರು ಶಾಖೆಯ ಆಶ್ರಯದಲ್ಲಿ ‘ಸ್ವಚ್ಛತಾ ಹೀ ಸೇವಾ’ ಧ್ಯೇಯದೊಂದಿಗೆ 23ನೇ ಸ್ವಚ್ಛತಾ ಹೀ ಸೇವಾ ಶ್ರಮದಾನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಪರಿಸರದಲ್ಲಿ ಭಾನುವಾರ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಮರೋಳಿ ಗ್ರಾಮ ಸಮಿತಿ ಅಧ್ಯಕ್ಷರಾದ ಚಂದ್ರನಾಥ ಅತ್ತಾವರ ಮಾತನಾಡಿ, ಸಮಾಜದಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದರೆ ಸ್ವಸ್ಥ ಹಾಗೂ ಆರೋಗ್ಯಕರ ಸಮಾಜ ನಿರ್ಮಿಸುವುದಕ್ಕೆ ಸಾಧ್ಯ. ಪರಿಸರ ಸ್ವಚ್ಛವಾಗಿದ್ದರೆ ನಾವೂ ಆರೋಗ್ಯಯುತ ಹಾಗೂ ನೆಮ್ಮದಿಯ ಜೀವನವನ್ನು ಕಂಡುಕೊಳ್ಳಲು ಸಾಧ್ಯವಿದೆ. ವಿಶ್ವಕರ್ಮ ಸಹಕಾರ ಬ್ಯಾಂಕಿನ ಸೇವಾಕಾರ್ಯ ಸಮಾಜಕ್ಕೆ ಉತ್ತಮ ಮಾದರಿ ಎಂದು ಶ್ಲಾಘಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯ ಕೇಶವ ಮರೋಳಿ ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕಿನ ಈ ಸ್ವಚ್ಛತಾ ಕಾರ್ಯಕ್ರಮ ಅನೇಕ ಸಂಘಟನೆಗಳಿಗೆ ಪ್ರೇರಣಾ ಶಕ್ತಿಯಾಗಲಿ ಹಾಗೂ ಇದು ಸ್ವಚ್ಛ ಭಾರತ ಪರಿಕಲ್ಪನೆಯ ಆಶಯಕ್ಕೆ ಹಸಿರು ನಿಶಾನೆಯಾಗಲಿ ಎಂದು ಆಶಿಸಿದರು.…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 100ನೇ ಉಚಿತ ಆರೋಗ್ಯ ಶಿಬಿರದಲ್ಲಿ ವಿಧಾನಸಭಾ ಸ್ಪೀಕರ್‌ ಯು.ಟಿ ಖಾದರ್‌ ಅಭಿಪ್ರಾಯ ಮಂಗಳೂರು: ಸಹಕಾರ ಕ್ಷೇತ್ರದ ವಿವಿಧ ಚಿಂತನೆಯಿಟ್ಟುಕೊಂಡು ಸಾಮಾಜಿಕವಾದ ಚಿಂತನೆ ಇಟ್ಟುಕೊಂಡು ಆ ನಿಟ್ಟಿನಲ್ಲಿ ಕೆಲಸ ಮಾಡಿಕೊಂಡು ಅದ್ಭುತವಾದುದನ್ನು ಸಾಧಿಸಿ ಜನರ ಪ್ರೀತಿಗೆ ಪಾತ್ರವಾಗಿ ಯಶಸ್ವಿಯಾಗಿ ಕೆಲಸ ಮಾಡಬಹುದು ಎಂಬುದನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ತೋರಿಸಿದೆ. ಸ್ಪಷ್ಟವಾದ ನಾಯಕತ್ವ, , ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸಾಮಾಜಿಕ ಚಿಂತನೆಯ ಮನೋಭಾವ, ಪರಸ್ಪರ ಸಹಕಾರ ಇದಕ್ಕೆ ಪ್ರಮುಖ ಕಾರಣ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಪಡೀಲಿನ ಆತ್ಮಶಕ್ತಿ ಸೌಧದಲ್ಲಿ ಭಾನುವಾರ ಉಚಿತ ಆರೋಗ್ಯ ಶಿಬಿರದ 100ನೇ ಶಿಬಿರ ಆರೋಗ್ಯ ಸೇವಾ ಸಂಗಮದ ಅಂಗವಾಗಿ ಹಮ್ಮಿಕೊಂಡ ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ತಪಾಸಣೆ ಹಾಗೂ ರಕ್ತದಾನ ಶಿಬಿರ ಮತ್ತು ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ 14ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ…

Read More

ಸ್ಥಾಪನಾ ದಿನಾಚರಣೆ ಪ್ರಯುಕ್ತ ಆರೋಗ್ಯ ಸೇವಾ ಸಂಗಮ, ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ ಮಂಗಳೂರು: ನಗರದ ಪಡೀಲ್‌ನಲ್ಲಿ ಆಡಳಿತ ಕಚೇರಿ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಆರೋಗ್ಯ ಸೇವಾ ಸಂಗಮ “ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ , ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ 14ನೇ ವಾರ್ಷಿಕೋತ್ಸವ ಸಮಾರಂಭʼʼ ಫೆಬ್ರವರಿ 1ರ ಭಾನುವಾರ ಬೆಳಗ್ಗೆ 9ರಿಂದ ಆತ್ಮಶಕ್ತಿ ಸೌಧ ಪಡೀಲ್, ಮಂಗಳೂರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕರ್ನಾಟಕ…

Read More