Author: admin

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕುದ್ರೋಳಿ ಶ್ರೀ ಗೋಕರ್ಣನಾಥ ಕೋ- ಆಪರೇಟಿವ್ ಬ್ಯಾಂಕ್ 2025-26ನೇ ಆರ್ಥಿಕ ವರ್ಷದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದು ಒಟ್ಟು ರೂ. 3.07 ಕೋಟಿ ಲಾಭ ದಾಖಲಿಸಿದೆ. ಬ್ಯಾಂಕು 2025 26ನೇ ಸಾಲಿನಲ್ಲಿ ಒಟ್ಟು 2028.64 ಕೋಟಿ ರೂ. ವ್ಯವಹಾರ ದಾಖಲಿಸಿದ್ದು, ಗಣನೀಯ ಏರಿಕೆ ಕಂಡಿದೆ. ಕಳೆದ ಸಾಲಿಗಿಂತ ಠೇವಣಿಯಲ್ಲಿ 16% ಹಾಗೂ ಸಾಲ ನೀಡುವಿಕೆಯಲ್ಲಿ 25% ವೃದ್ಧಿ ಸಾಧಿಸಿರುವ ಬ್ಯಾಂಕ್, ಅನುತ್ಪಾದಕ ಆಸ್ತಿ NPA ಪ್ರಮಾಣವನ್ನು 1.13% ಇಳಿಸುವಲ್ಲಿ ಯಶಸ್ವಿಯಾಗಿದೆ. https://chat.whatsapp.com/FCEnlTkAKCC0MGPhXtX4i4 ನೂರು ವರ್ಷಗಳ ಪ್ರಾಮಾಣಿಕ ಸೇವೆಯೊಂದಿಗೆ ಗ್ರಾಹಕರ ನಂಬಿಕಸ್ತ ಬ್ಯಾಂಕ್ ಎನಿಸಿಕೊಂಡಿರುವ ಶ್ರೀ ಗೋಕರ್ಣನಾಥ ಕೋ- ಆಪರೇಟಿವ್ ಬ್ಯಾಂಕ್, 17 ಶಾಖೆಗಳ ಮೂಲಕ ಗ್ರಾಹಕರಿಗೆ ಅತ್ಯಾಧುನಿಕ ಸೇವೆಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ. ಡಿಜಿಟಲ್ ತಂತ್ರಜ್ಞಾನಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದು ವಿಶೇಷವಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಹಕರಿಗೆ ಯುಪಿಐ (UPI) ಸೌಲಭ್ಯ ಪರಿಚಯಿಸಿದ ಮೊದಲ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಏಪ್ರಿಲ್‌ 26ರಂದು ಭಾನುವಾರ 9.30ರಿಂದ ಮಧ್ಯಾಹ್ನ 12.30ರ ತನಕ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು “ಉಚ್ಚಿಲಸ್ ಕಾಂಪ್ಲೆಕ್ಸ್”, ಸುಜಾತ ಜ್ಯುವೆಲ್ಲರಿ ಹತ್ತಿರ, ಕೆ.ಸಿ.ರೋಡ್ (ಶಾಖೆಯ ಆವರಣ) ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ವೈದ್ಯಕೀಯ ಶಿಬಿರದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಇದರ ನುರಿತ ವೈದ್ಯರ ತಂಡದಿಂದ ಉಚಿತ ದಂತ ತಪಾಸಣೆ ಮತ್ತು ಸಲಹೆ, ಹಲ್ಲುಗಳ ಶುಚಿತ್ವ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಅನಾರೋಗ್ಯಕರ ಹಲ್ಲುಗಳನ್ನು ಕೀಳಿಸುವುದು, ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಬಿ.ಪಿ. ತಪಾಸಣೆ, ಮಧುಮೇಹ ತಪಾಸಣೆ, ಕಿವಿ ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡ್‌ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ…

Read More

ಮಂಗಳೂರು: ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು ಮಂಗಳೂರು ತಾಲೂಕಿನ 2026ನೇ ಸಾಲಿನ ಸರಕಾರಿ ಮತ್ತು ಅನುದಾನಿತ ಶಾಲೆಗಳ ಎಸ್ಸೆಸ್ಸೆಲ್ಸಿ (ಕನ್ನಡ ಮಾಧ್ಯಮ) ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಆಯ್ದ ಎಲ್ಲಾ ವಿದ್ಯಾರ್ಥಿಗಳಿಗೂ ಸಹಾಯಧನದೊಂದಿಗೆ ಪ್ರಶಂಸಾ ಪತ್ರವನ್ನೂ ನೀಡಿ ಗೌರವಿಸಲಾಗುತ್ತದೆ. https://chat.whatsapp.com/FCEnlTkAKCC0MGPhXtX4i4 ನಿಬಂಧನೆಗಳು: ವ್ಯಾಪ್ತಿ: ಮಂಗಳೂರು ತಾಲೂಕು. ಅರ್ಹತೆ: 2026ನೇ ಸಾಲಿನ ಸರಕಾರಿ ಕನ್ನಡ ಮಾಧ್ಯಮದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿಧ್ಯಾರ್ಥಿಗಳು. 2026ನೇ ಸಾಲಿನ ಸರಕಾರಿ ಅಥವಾ ಅನುದಾನಿತ ಪದವಿ ಪೂರ್ವ ಕಾಲೇಜಿನ (ಪಿಯುಸಿ) ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿಧ್ಯಾರ್ಥಿಗಳು. ಅರ್ಜಿ ಹೇಗೆ – ಎಲ್ಲಿ ಸಲ್ಲಿಸಬೇಕು?: ಅರ್ಜಿಯ ಜೊತೆಗೆ ವಿಧ್ಯಾರ್ಥಿಗಳು ಆಧಾರ್ ಕಾರ್ಡ್ ಪ್ರತಿ, ಪ್ರಾಂಶುಪಾಲರಿಂದ ದೃಢೀಕೃತ ಅಂತಿಮ ಪರೀಕ್ಷೆಯ ಅಂಕ ಪಟ್ಟಿ ಹಾಗೂ ಫೋಟೋದೊಂದಿಗೆ ಈ ಕೆಳಗೆ ನೀಡಿದ ವಿಳಾಸಕ್ಕೆ ಪೋಸ್ಟ್ ಮಾಡಬೇಕು.…

Read More

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪೊಂದನ್ನು ನೀಡಿದ್ದು, ಬ್ಯಾಂಕ್ ನೀಡುವ ರಿಟರ್ನ್ ಮೆಮೊಗಳಲ್ಲಿ ಅಧಿಕಾರಿಗಳ ಸಹಿ ಇಲ್ಲ ಎಂಬ ಕಾರಣಕ್ಕೆ ಪ್ರಕರಣವನ್ನು ವಜಾಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇಂದಿನ ಡಿಜಿಟಲ್ ವ್ಯವಸ್ಥೆಯಲ್ಲಿ ತಾಂತ್ರಿಕ ದಾಖಲೆಗಳೇ ಪುರಾವೆಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬ್ಯಾಂಕ್‌ಗಳು ನೀಡುವ ಕಂಪ್ಯೂಟರ್‌ ಆಧಾರಿತ ‘ರಿಟರ್ನ್ ಮೆಮೊ’ಗಳಲ್ಲಿ (ಚೆಕ್ ಅಮಾನ್ಯಗೊಂಡ ಬಗ್ಗೆ ಬ್ಯಾಂಕ್ ನೀಡುವ ಚೀಟಿ) ಬ್ಯಾಂಕ್ ಅಧಿಕಾರಿಗಳ ಸಹಿ ಅಥವಾ ಅಧಿಕೃತ ಸೀಲು ಇಲ್ಲ ಎಂಬ ಏಕೈಕ ಕಾರಣಕ್ಕೆ ಕ್ರಿಮಿನಲ್ ದೂರನ್ನು ವಜಾಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. https://chat.whatsapp.com/FCEnlTkAKCC0MGPhXtX4i4 ಬೆಂಗಳೂರಿನ ವ್ಯಕ್ತಿಯೊಬ್ಬರು ಎಂಬುವವರು ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯೊಂದರಿಂದ 3 ಲಕ್ಷ ರೂ. ಸಾಲ ಪಡೆದಿದ್ದರು. ಸಾಲಕ್ಕೆ ಖಾತರಿಯಾಗಿ ಅವರು ಮುಂದಿನ ದಿನಾಂಕದ ಚೆಕ್ ನೀಡಿದ್ದರು. ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಸೊಸೈಟಿಯು ಚೆಕ್ ಅನ್ನು ಬ್ಯಾಂಕಿಗೆ ಸಲ್ಲಿಸಿದಾಗ, ಖಾತೆಯಲ್ಲಿ ಹಣವಿಲ್ಲದೆ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಕೆಳಹಂತದ ನ್ಯಾಯಾಲಯವು…

Read More

39ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶ್ರೀನಿವಾಸ್ ಕೆ. ಅಭಿಪ್ರಾಯ ಬೆಳ್ತಂಗಡಿ: ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಸಹಕಾರ ಬ್ಯಾಂಕ್‌ ತಮ್ಮ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಚರಣೆಯ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಸ್ವಚ್ಛತಾ ಶ್ರಮದಾನವು ಶ್ಲಾಘನೀಯವಾದುದು ಎಂದುj ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶ್ರೀನಿವಾಸ್ ಕೆ. ಅಭಿಪ್ರಾಯಪಟ್ಟರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 39ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಕ್ಕೆಜಾಲು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಚ್ಛತೆ ಕಾಪಾಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ಹಾಗಾಗಿ ನಾವೆಲ್ಲರೂ ನಮ್ಮ ನಮ್ಮ ಊರಿನ ಸ್ವಚ್ಛತಾ ಕಾರ್ಯದಲ್ಲಿ ಭಾಗಿಗಳಾಗಬೇಕು ಎಂದು ಹೇಳಿದರು. ಉಜಿರೆ ಗ್ರಾಮದ ಗಾಂಧಿನಗರ ಪರಿಸರದ ಸುತ್ತಮುತ್ತಲಿನಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯ ದಿನೇಶ್ , ಕಕ್ಕೆಜಾಲು ಫ್ರೆಂಡ್ಸ್‌…

Read More

ಮಂಗಳೂರು: ಶ್ರೀಶಾ ಸೌಹಾರ್ದ ಸಹಕಾರಿ ಸಂಘದ ಪ್ರಾಯೋಜಕತ್ವದಲ್ಲಿ ಮಂಗಳೂರಿನ ಶ್ರೀ ರಾಮಕೃಷ್ಣ ಆಶ್ರಮದ ಸಹಯೋಗದೊಂದಿಗೆ ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಪ್ರಸ್ತುತಪಡಿಸುತ್ತಿರುವ ದಾಸಲಹರಿ [ಹರಿದಾಸರ ಕೃತಿ ಕೀರ್ತನೆಗಳ ಗಾಯನ] ಕಾರ್ಯಕ್ರಮ ಏಪ್ರಿಲ್‌ 26ರಂದು ಭಾನುವಾರ ಸಂಜೆ 5 ಗಂಟೆಗೆ ಮಂಗಳೂರಿನ ಮಂಗಳಾದೇವಿ ಶ್ರೀ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. https://chat.whatsapp.com/FCEnlTkAKCC0MGPhXtX4i4 ನಾಡು ಕಂಡ ಅಪರೂಪದ ಖ್ಯಾತ ಹಿಂದೂಸ್ಥಾನಿ ಗಾಯಕ ರಹಮಾನ್ ಸಾಬ್ ಮುದ್ಗಲ್, ಲಿಂಗಸೂಗೂರು ಇವರು ಕಾರ್ಯಕ್ರಮ ಪ್ರಸ್ತುತಪಡಿಸಲಿದ್ದಾರೆ ಎಂದು ಶ್ರೀಶಾ ಸೌಹಾರ್ದ ಸೊಸೈಟಿಯ ಅಧ್ಯಕ್ಷರಾದ ಎಂ.ಎಸ್‌ ಗುರುರಾಜ್ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು 2025-26ನೇ ಸಾಲಿನಲ್ಲಿ 842.47 ಕೋಟಿ ರೂ. ವ್ಯವಹಾರ ನಡೆಸಿದ್ದು, 3.02 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸುವುದರ ಮೂಲಕ ಸಾರ್ವಕಾಲಿಕ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಭಾಸ್ಕರ್ ಎಂ ಪೆರುವಾಯಿ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸುದೀರ್ಘ 68 ವರ್ಷಗಳ ಇತಿಹಾಸ ಹೊಂದಿರುವ ಗ್ರಾಮೀಣ ಗುಡಿಕೈಗಾರಿಕೆಯಾದ ಕುಂಬಾರಿಕೆಯ ಅಭಿವೃದ್ಧಿಗಾಗಿ ಸಹಕಾರಿ ಕ್ಷೇತ್ರದಲ್ಲಿ ಕಾರ್ಯಯೋಜನೆ ರೂಪಿಸಿ ಬೆಳೆಸುತ್ತಿರುವ ಸಹಕಾರ ಸಂಘವು ದಕ್ಷಿಣ ಕನ್ನಡ ಜಿಲ್ಲಾದ್ಯಂತ 18 ಶಾಖೆಗಳನ್ನು ಹೊಂದಿದೆ. ಪುತ್ತೂರು ತಾಲೂಕಿನ ಆರಿಯಡ್ಕ ಗ್ರಾಮದಲ್ಲಿ ಕುಂಬಾರಿಕಾ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದ್ದು, ಈ ಭಾಗದ ಕುಶಲಕರ್ಮಿಗಳ ಉತ್ಪನ್ನಗಳಿಗೆ ಯೋಗ್ಯ ಮಾರುಕಟ್ಟೆ ಒದಗಿಸುತ್ತಿದೆ. ಸಹಕಾರ ಸಂಘವು ಎಲ್ಲಾ ವರ್ಗದ ಸದಸ್ಯರಿಗೆ ಸೇವೆಯನ್ನು ನೀಡಿದ್ದು ಸಂಘವು 155 ಕೋಟಿ ರೂ. ಠೇವಣಿ ಹೊಂದಿದ್ದು, ವಿವಿಧ ಯೋಜನೆಗಳಿಗೆ ನೀಡಲಾದ ಸಾಲದಲ್ಲಿ 117 ಕೋಟಿ ರೂ. ಹೊರಬಾಕಿ ಸಾಲ…

Read More

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ 2025-26ನೇ ಸಾಲಿನಲ್ಲಿ 1953.29 ಕೋಟಿ ರೂ. ಒಟ್ಟು ವ್ಯವಹಾರ ನಡೆಸಿದ್ದು ರೂ. 5.85 ಕೋಟಿ ನಿವ್ವಳ ಲಾಭ ಗಳಿಸಿದೆ. ಈಗಾಗಲೇ ಸಂಘವು 27 ಶಾಖೆಗಳೊಂದಿಗೆ ಮುನ್ನಡೆಯುತ್ತಿದ್ದು ಶೀಘ್ರದಲ್ಲಿ ಇನ್ನೂ ಮೂರು ಶಾಖೆಗಳು ಪ್ರಾರಂಭವಾಗಲಿದೆ ಎಂದು ಸಂಘದ ಅಧ್ಯಕ್ಷ ಭಗೀರಥ ಜಿ. ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. https://chat.whatsapp.com/FCEnlTkAKCC0MGPhXtX4i4 2008ರಲ್ಲಿ ಪ್ರಾರಂಭವಾದ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು, ಸಹಕಾರ ಕ್ಷೇತ್ರದಲ್ಲಿ ಕಳೆದ 17 ವರ್ಷಗಳ ಅತ್ಯಲ್ಪ ಅವಧಿಯಲ್ಲಿ ಅದ್ವಿತೀಯ ಸಾಧನೆ ಮಾಡಿದೆ. ಸಂಘವನ್ನು ಕಟ್ಟಿ ಬೆಳೆಸಿದ ಮಾರ್ಗದರ್ಶಕರಾಗಿದ್ದ ಸಂಘದ ಮಾಜಿ ಅಧ್ಯಕ್ಷರಾಗಿದ್ದ ದಿ. ಎನ್.ಪದ್ಮನಾಭ ಮಾಣಿಂಜ, ಸಂಘದ ಮುಖ್ಯ ಪ್ರವರ್ತಕರಾಗಿದ್ದ ಮಾಜಿ ಶಾಸಕ ದಿ.ಕೆ.ವಸಂತ ಬಂಗೇರ ಮತ್ತು ಸ್ಥಾಪಕ ಅಧ್ಯಕ್ಷ ದಿ.ಕೆ.ಜಿ.ಬಂಗೇರ ಇವರ ಸೇವೆಯು ಯಾವತ್ತಿಗೂ ಸ್ಮರಣೀಯ ಎಂದು ಅವರು ನೆನಪಿಸಿಕೊಂಡರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕಾರ್ಯವ್ಯಾಪ್ತಿ ಹೊಂದಿರುವ ಈ ಸಂಸ್ಥೆಯು ಬೆಳ್ತಂಗಡಿ, ಶಿರ್ತಾಡಿ, ಕಲ್ಲಡ್ಕ, ಕಕ್ಕಿಂಜೆ, ಬೆಳುವಾಯಿ,…

Read More

ಮೇ 17ರಂದು ಸಂಘದ 18ನೇ ಶಾಖೆ ಬೋಳಿಯಾರ್ ನಲ್ಲಿ ಉದ್ಘಾಟನೆ  ಬಂಟ್ವಾಳ: ಬಂಟ್ವಾಳದಲ್ಲಿ ಸ್ವಂತ ಕಟ್ಟಡದಲ್ಲಿ ಕೇಂದ್ರ ಕಛೇರಿ ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ರೂ. 1432.13 ಕೋಟಿ ಅತ್ಯುತ್ತಮ ವ್ಯವಹಾರ ನಡೆಸಿದ್ದು ಸುಮಾರು ರೂ. 5.28 ಕೋಟಿ (ತಾತ್ಕಾಲಿಕ) ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸ್ವಾತಂತ್ರ್ಯ ಹೋರಾಟಗಾರ ಸಮಾಜರತ್ನ ದಿ.ಡಾ| ಅಮ್ಮೆಂಬಳ ಬಾಳಪ್ಪರವರ ನೇತೃತ್ವ ಹಾಗೂ ಸಹಕಾರಿ ಧುರೀಣ ಬಿ.ಹೂವಯ್ಯ ಮೂಲ್ಯರ ಸಾರಥ್ಯದಲ್ಲಿ 131 ಸದಸ್ಯರನ್ನೊಳಗೊಂಡು ರೂ. 22,620 ಪಾಲು ಬಂಡವಾಳದೊಂದಿಗೆ ಸ್ಥಾಪಿಸಲ್ಪಟ್ಟ ಸಮಾಜ ಸೇವಾ ಸಹಕಾರಿ ಸಂಘವು ಪ್ರಸ್ತುತ 17 ಶಾಖೆಗಳನ್ನು ಹೊಂದಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಕಾರ್ಯವ್ಯಾಪ್ತಿಯನ್ನು ಹೊಂದಿದೆ. ಸಂಘದ ಪುಂಜಾಲಕಟ್ಟೆ, ಮುಡಿಪು ಮತ್ತು ಉಪ್ಪಿನಂಗಡಿ ಶಾಖೆಯು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ಆರ್ಥಿಕ ವರ್ಷ 2025-26ರ ಅಂತ್ಯಕ್ಕೆ ಸಂಘದಲ್ಲಿ 9319 ‘ಎ’ ತರಗತಿ, 5921 ‘ಬಿ’ ತರಗತಿ ಸದಸ್ಯರಿದ್ದು ರೂ. 8.28 ಕೋಟಿ…

Read More

ಮಡಿಕೇರಿ: ಕೊಡಗು ಪ್ರೆಸ್‌ಕ್ಲಬ್‌ ಸೌಹಾರ್ದ ಸಹಕಾರಿ ಸಂಘದ ಆಶ್ರಯದಲ್ಲಿ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಇತ್ತೀಚೆಗೆ ಜಿಲ್ಲಾಮಟ್ಟದ ಸೌಹಾರ್ದ ಕಪ್ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯದಲ್ಲಿ ಮೀಡಿಯಾ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಕಾವೇರಿ ತಂಡ ರನ್ನರ್ ಅಪ್ ಸ್ಥಾನ ಪಡೆದುಕೊಂಡಿತು. https://chat.whatsapp.com/FCEnlTkAKCC0MGPhXtX4i4 ಫೈನಲ್ ಪಂದ್ಯದಲ್ಲಿರೆಜಿತ್ ಕುಮಾರ್ ಗುಹ್ಯ ಪಂದ್ಯಶ್ರೇಷ್ಠ, ಇಸ್ಮಾಯಿಲ್ ಕಂಡಕ್ಕರೆ ಬೆಸ್ಟ್ ಬ್ಯಾಟ್ಸ್‌ಮನ್‌, ಯುಗ ದೇವಯ್ಯ ಬೆಸ್ಟ್ ಬೌಲರ್, ಜಯಪ್ರಕಾಶ್ ಬೆಸ್ಟ್ ಕೀಪರ್, ಪ್ರದೀಪ್ ಬೆಸ್ಟ್ ಕ್ಯಾಚ್, ಆದರ್ಶ್ ಸರಣಿಶ್ರೇಷ್ಠ, ಪ್ರಮೀಳಾ ನಾಚಯ್ಯ ಉತ್ತಮ ಮಹಿಳಾ ಆಟಗಾರ್ತಿ, ಹನೀಫ್ ಕೊಡ್ಲಿಪೇಟೆ ಉತ್ತಮ ಹಿರಿಯ ಆಟಗಾರ, ವಿನು ಕುಶಾಲಪ್ಪ ಬೆಸ್ಟ್ ಫೀಲ್ಡರ್ ಪ್ರಶಸ್ತಿ ಪಡೆದುಕೊಂಡರು. ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಕ್ರಿಕೆಟ್‌ ಟೂರ್ನಿ ಉದ್ಘಾಟಿಸಿದರು. ಯುವ ಮುಖಂಡ ಎಡಿಕೇರಿ ಪ್ರಸನ್ನ, ಕೊಡಗು ಪ್ರೆಸ್‌ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಪ್ರೆಸ್‌ಕ್ಲಬ್‌ ಅಧ್ಯಕ್ಷ ಬೊಳ್ಳಜೀರ ಬಿ.ಅಯ್ಯಪ್ಪ, ಕೊಡಗು ಜಿಲ್ಲಾ…

Read More