Author: admin
ಸಂವಾದದಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ.ಪ್ರಕಾಶ ಕಮ್ಮರಡಿ ಹೇಳಿಕೆ ಶಿರಸಿ: ಅಡಕೆ ಹಾಳೆಯಿಂದ ತಯಾರಿಸಿದ ಪರಿಸರ ಸ್ನೇಹಿ ಊಟದ ತಟ್ಟೆ, ಲೋಟ ಬಳಕೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ತರ್ಕವೇ ಹಾಸ್ಯಾಸ್ಪದ. ಅಮೆರಿಕಾಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮನವರಿಕೆ ಮಾಡಿಕೊಟ್ಟು, ಈ ಉತ್ಪನ್ನಗಳ ಮೇಲೆ ಹೇರಲಾಗಿರುವ ನಿಷೇಧವನ್ನು ವಾಪಸ್ ತೆಗೆಸುವಂತೆ ಮಾಡಬೇಕು ಎಂದು ಕೃಷಿ ಆರ್ಥಿಕ ತಜ್ಞ ಹಾಗೂ ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ.ಪ್ರಕಾಶ ಕಮ್ಮರಡಿ ಹೇಳಿದ್ಧಾರೆ. https://chat.whatsapp.com/EbVKVnWB6rlHT1mWtsgbch ಶಿರಸಿಯಲ್ಲಿ ಟಿಎಸ್ಎಸ್ ಸಹಕಾರ ಸಂಸ್ಥೆಯಲ್ಲಿ ಆಯೋಜಿಸಿದ್ದ ಅಡಕೆ ಉತ್ಪನ್ನಗಳ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು. ಅಡಕೆ ಕ್ಯಾನ್ಸರ್ ಕಾರಕವಲ್ಲ, ಅಡಕೆ ಹಾಳೆಯಿಂದ ತಯಾರಿಸಿದ ಉತ್ಪನ್ನ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂಬುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು, ಅಮೆರಿಕಾ ಸಂಯುಕ್ತ ಸಂಸ್ಥಾನದ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ ಅಡಕೆ ಹಾಳೆ ಉತ್ಪನ್ನಗಳನ್ನು ನಿಷೇಧಿಸಿದೆ. ಇವುಗಳ ಬಳಕೆಯಿಂದ ಅಡಕೆಯೊಳಗಿನ ಅತ್ಯಂತ ನೈಸರ್ಗಿಕ…
ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ವತಿಯಿಂದ ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ 2 ದಿನಗಳ “ಆಡಳಿತ ಪರಿಣಿತಿ ಹಾಗೂ ವ್ಯವಹಾರ ಅಭಿವೃದ್ಧಿ ತರಬೇತಿ” ಕಾರ್ಯಕ್ರಮ ಬೆಂಗಳೂರಿನ ಮಲ್ಲೇಶ್ವರದ ಸಂಯುಕ್ತ ಸಹಕಾರಿಯ ಸೌಹಾರ್ದ ಸಹಕಾರಿ ಸೌಧದಲ್ಲಿ ಆಯೋಜಿಸಲಾಗಿತ್ತು. https://chat.whatsapp.com/EbVKVnWB6rlHT1mWtsgbch ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ವಹಿಸಿದ್ದರು. ಉದ್ಘಾಟನೆಯನ್ನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜಿ. ಶ್ರೀಧರ ಮಾನ್ಯ ನೆರವೇರಿಸಿದರು. ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ.ಪಾಟೀಲ ಇವರು ಪ್ರಾಸ್ತಾವಿಕ ಮಾತನಾಡಿದರು. ಸಹಕಾರ ಸಂಘಗಳ ಅಪರ ನಿಬಂಧಕರಾದ ಹೆಚ್.ಎಸ್. ನಾಗರಾಜಯ್ಯ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಕವಿತಾ ಸ್ವಾಗತಿಸಿದರು. ಸಹಾಯಕಿ ನಂದಿನಿ ಕಾರ್ಯಕ್ರಮ ನಿರೂಪಿಸಿದರು. ಬಾಬು ಪಠಾಣ ವಂದಿಸಿದರು. 30 ಸೌಹಾರ್ದ ಸಹಕಾರಿಗಳಿಂದ 59 ಶಿಬಿರಾರ್ಥಿಗಳು ಭಾಗವಹಿಸಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಮೈಸೂರು: ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಭಾನುವಾರ ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಪಾಟೀಲ ಅವರ ಜನ್ಮದಿನ ಆಚರಣೆ ಕಾರ್ಯಕ್ರಮ ನಡೆಸಲಾಯಿತು. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಜೆ.ಯೋಗೇಶ್, ಉಪಾಧ್ಯಕ್ಷ ಟಿ.ರವಿ, ನಿರ್ದೇಶಕರಾದ ಎಸ್.ಬಿ.ಎಂ ಮಂಜು, ಎನ್.ಯೋಗಾನಂದ, ಜಿ.ನಿರಂಜನ್, ಆರ್.ಸೋಮಣ್ಣ, ಕೆ.ಗಿರೀಶ್, ಪ್ರಮೀಳಾ ಲೋಕೇಶ್, ಸಿ.ಎಸ್ ರಾಮಕೃಷ್ಣಯ್ಯ, ಕಾರ್ಯದರ್ಶಿ ಹರ್ಷಿತ್ ಗೌಡ, ಸದಸ್ಯ ಲೋಕೇಶ್, ಬ್ಯಾಂಕಿನ ಸಿಬ್ಬಂದಿಗಳು ಭಾಗವಹಿಸಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ದೇಶದ ಉನ್ನತ ಸಹಕಾರಿಗಳು ಸೇರ್ಪಡೆ ಕೇಂದ್ರ ಸಚಿವಾಲಯಗಳು, ಸಹಕಾರಿ ಸಂಸ್ಥೆಗಳು, ರಾಜ್ಯ ಸರ್ಕಾರಗಳ ಪದನಿಮಿತ್ತ ಸದಸ್ಯರನ್ನೊಳಗೊಂಡ ಸಮತೋಲಿತ ತಂಡ ನವದೆಹಲಿ: ಭಾರತದ ಸಹಕಾರಿ ಚಳವಳಿಯ ಪ್ರಮುಖ ಮೈಲಿಗಲ್ಲುಗಳಲ್ಲೊಂದಾದ ಗುಜರಾತ್ನ ಆನಂದ್ ಎಂಬಲ್ಲಿ ಸ್ಥಾಪಿಸಲಾಗುತ್ತಿರುವ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯಕ್ಕೆ ಸಹಕಾರ ಸಚಿವಾಲಯವು ಆಡಳಿತ ಮಂಡಳಿಯನ್ನು ರಚಿಸಿದೆ. ಆಡಳಿತ ಮಂಡಳಿಯು ಕೇಂದ್ರ ಸಚಿವಾಲಯಗಳು, ಸಹಕಾರಿ ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರಗಳಿಂದ ಪಡೆದ ಪದನಿಮಿತ್ತ ಸದಸ್ಯರು ಮತ್ತು ನಾಮನಿರ್ದೇಶಿತ ಪ್ರತಿನಿಧಿಗಳ ಸಮತೋಲಿತ ಮಿಶ್ರಣವನ್ನು ಒಳಗೊಂಡಿದೆ.https://chat.whatsapp.com/EbVKVnWB6rlHT1mWtsgbch ವಿದ್ಯಾಲಯದ ಉಪಕುಲಪತಿಗಳು, ಸಹಕಾರ, ಕೃಷಿ ಮತ್ತು ರೈತರ ಕಲ್ಯಾಣ, ಪಶುಸಂಗೋಪನೆ ಮತ್ತು ಹೈನುಗಾರಿಕೆ, ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಮೀನುಗಾರಿಕೆ ಸಚಿವಾಲಯಗಳ ಕಾರ್ಯದರ್ಶಿಗಳು ಪದನಿಮಿತ್ತ ಸದಸ್ಯರಲ್ಲಿ ಸೇರಿದ್ದಾರೆ. ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ಸಿಡಿಸಿ) ಯ ವ್ಯವಸ್ಥಾಪಕ ನಿರ್ದೇಶಕರು, ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್ಡಿಡಿಬಿ) ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಗಳ ಅಧ್ಯಕ್ಷರು, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇತರ ಮಿತ್ರ ಸಂಸ್ಥೆಗಳ ಹಿರಿಯ…
ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ದಯಾನಂದ ಅಮೈ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. https://chat.whatsapp.com/EbVKVnWB6rlHT1mWtsgbch ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆ ವೇಳೆ ನಿರ್ದೇಶಕರಾದ ವಿಶ್ವನಾಥ ಪೂಜಾರಿ, ಹೇಮಂತ ಕುಮಾರ್, ಸದಾನಂದ ಶೆಟ್ಟಿ, ಸರಸ್ವತಿ ಕೆ, ಗಾಯತ್ರಿ ಅರುಣ್, ಉಮ್ಮಣ್ಣ, ಕೃಷ್ಣ ನಾಯ್ಕ್, ಚಂದ್ರಹಾಸ, ಪ್ರವೀಣ್ ಕುಮಾರ್, ಜನಾರ್ದನ ಹಾಜರಿದ್ದರು. ಸಹಕಾರ ಸಂಘಗಳ ಮಂಗಳೂರು ಸಹಾಯಕ ನಿಬಂಧಕರ ಕಚೇರಿಯ ಉಪನಿಬಂಧಕರಾದ ಜ್ಯೋತಿ ಡಿ ಚುನಾವಣಾಧಿಕಾರಿಯಾಗಿದ್ದರು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಸೀಮಾ ಬಾನು ಮತ್ತು ಸಿಬ್ಬಂದಿಗಳು ಸಹಕರಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ನವದೆಹಲಿ: ಮಹತ್ವದ ನೇಮಕಾತಿಯೊಂದರಲ್ಲಿ ಸಚಿವ ಸಂಪುಟದ ನೇಮಕಾತಿ ಸಮಿತಿಯು ಐಎಎಸ್ ರಮಣ್ ಕುಮಾರ್(ಬಿಹಾರ ಕೇಡರ್, 2009 ಬ್ಯಾಚ್) ಅವರನ್ನು ಸಹಕಾರ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲು ಅನುಮೋದನೆ ನೀಡಿದೆ. https://chat.whatsapp.com/EbVKVnWB6rlHT1mWtsgbch ಅವರು ಐದು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಸೇವೆ ಸಲ್ಲಿಸಲಿದ್ದಾರೆ. ಅವರು ಪಂಕಜ್ ಕುಮಾರ್ ಬನ್ಸಾಲ್ ಅವರ ಸ್ಥಾನ ಅಲಂಕರಿಸಲಿದ್ದಾರೆ. ರಮಣ್ ಕುಮಾರ್ ಆಡಳಿತಾತ್ಮಕ ಅನುಭವ ಹೊಂದಿದ್ದು, ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡರಲ್ಲೂ ಹಲವಾರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ರಾಜ್ಯ ಮಟ್ಟದಲ್ಲಿ, ಅವರು ಬಿಹಾರದ ಪೂರ್ವ ಚಂಪಾರಣ್ ಮತ್ತು ಬಕ್ಸಾರ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ಸೇವೆ ಸಲ್ಲಿಸಿದ್ದರು. ಅಲ್ಲಿ ಅವರು ಅಭಿವೃದ್ಧಿ ಉಪಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಮತ್ತು ಆಡಳಿತ ರಚನೆಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೇಂದ್ರ ಮಟ್ಟದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಮತ್ತು ಜವಳಿ ಮೊದಲಾದ ಸಚಿವಾಲಯಗಳಲ್ಲಿಯೂ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಖಾಸಗಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು…
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಪ್ರತಿಪಾದನೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಹಕಾರಿ ಯೂನಿಯನ್, ಸಹಕಾರ ಇಲಾಖೆಯಿಂದ ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಸ್ವಚ್ಛತಾ ಸೇ ಸಹಕಾರ್ ಕಾರ್ಯಕ್ರಮ ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಸಹಕಾರ ಇಲಾಖೆ ದ.ಕ. ಜಿಲ್ಲೆ ಹಾಗೂ ಸಂತ ಪೀಲೋಮಿನಾ ಕಾಲೇಜು(ಸ್ವಾಯತ್ತ) ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ಪ್ರಯುಕ್ತ ಸ್ವಚ್ಛತಾ ಸೇ ಸಹಕಾರ್ ಕಾರ್ಯಕ್ರಮ ಬುಧವಾರ ಸಂತ ಫಿಲೋಮಿನಾ ಕಾಲೇಜಿ(ಸ್ವಾಯತ್ತ)ನಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಗೊಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ ನಿರ್ಮಾಣ ಮಾಡುವುದು ಈ ಕಾರ್ಯಕ್ರಮ ಸಂಘಟನೆಯ ಉದ್ದೇಶವಾಗಿದೆ. ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸುತ್ತವೆ ಎಂಬುದು ಈ ಕಾರ್ಯಕ್ರಮದ ಧ್ಯೇಯ.…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ಸಂಘದ ಸದಸ್ಯರಾದ ಪುಟ್ಟಸ್ವಾಮಿ ಎಚ್, ಸತೀಶ್ ಕಂಪ, ಲಕ್ಷ್ಮಣ ಪೂಜಾರಿ, ಲವೀನಾ ಪಿರೇರ ಹಾಗೂ ಶಶಿಪ್ರಭ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಮಾತನಾಡಿ “ಠೇವಣಿ ಸಂಗ್ರಹಣೆಯೊಂದಿಗೆ ಸಾಲ ವಸೂಲಾತಿ ಕ್ರಮವು ಸರಿಯಾದ ಪ್ರಮಾಣದಲ್ಲಿ ಆದಾಗ ಮಾತ್ರ ಸಂಘದ ಬೆಳವಣಿಗೆ ಸಾಧ್ಯ. ಸಿಬ್ಬಂದಿ ವರ್ಗ, ಗ್ರಾಹಕರ ಸಹಕಾರದೊಂದಿಗೆ ಪ್ರತಿವರ್ಷದಂತೆ ಈ ವರ್ಷವೂ ಸಂಘವು ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಅಗತ್ಯ ಸಂದರ್ಭಗಳಲ್ಲಿ ಹಿರಿಯ ನಾಗರಿಕ ಸದಸ್ಯರ ಮನೆಗೆ ಭೇಟಿ ನೀಡಿ ಸೇವೆ ನೀಡುತ್ತಿದ್ದೇವೆ. ಈಗಾಗಲೇ ಸಂಘದ ಸದಸ್ಯರಿಗೆ ಹಬ್ಬದ ಕೊಡುಗೆಯಾಗಿ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಮ್ಗೆ ಗರಿಷ್ಟ ಮೌಲ್ಯ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗುರುಶ್ರೀ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಮಾಡೂರು ಶಾಖೆಯ ಆವರಣದಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ಮಾಡೂರು ಶಾಖೆಯ ಹಿರಿಯ ಸದಸ್ಯರಾದ ಸುಂದರಿ ಕಾರ್ಯಾಗಾರ ಉದ್ಘಾಟಿಸಿದರು. ಸಂತ ಆಗ್ನೆಸ್ ಕಾಲೇಜಿನ ಸಹ ಪ್ರಾದ್ಯಾಪಕರಾಗಿರುವ ಡಾ.ಮೀರಾ ರಮೇಶ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಸಂಘದ ಗುರುಶ್ರೀ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ಇಂತಹ ಅಚ್ಚುಕಟ್ಟಾದ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರವನ್ನು ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಹಮ್ಮಿಕೊಂಡಿರುವುದು ಶ್ಲಾಘನೀಯ ಹಾಗೂ ಅಂತಾರಾಷ್ಟ್ರೀಯ ಕಾರ್ಯಾಗಾರದಲ್ಲಿ ಈ ತರಬೇತಿಯ ಬಗ್ಗೆ ಮಂಡಿಸಲಿದ್ದೇನೆ ಎಂದು ತಿಳಿಸಿದರು. ಕಾರ್ಯಕ್ರಮದ ತರಬೇತುದಾರರಾದ ಜಿಲ್ಲಾ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷರಾದ ರೇಖಾಲತಾ ಮಾತನಾಡಿ, ಸ್ವ-ಸಹಾಯ ಗುಂಪಿನ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಉದ್ಯೋಗದ ತರಬೇತಿ ಪಡೆದು, ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.…
ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ ಮಹಾಸಭೆ ಮಂಗಳವಾರ ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಸೊಸೈಟಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ಅಧ್ಯಕ್ಷತೆಯಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ದೇವರ ಸ್ತುತಿಯೊಂದಿಗೆ ಶಾಖಾ ಸಿಬ್ಬಂದಿಗಳು ಕಾರ್ಯಕ್ರಮ ಆರಂಭಿಸಿದರು. ಕಾರ್ಯಕ್ರಮ ನಿರ್ವಹಿಸಿದ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀವನ್ ಡಿಸೋಜ ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು. ಗುರುಚರಣ್ ಇವರು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿದ್ದ ಸಮಾಜಸೇವಕ ಶೈಲೇಶ್ ಆರ್.ಹಳದಿಪುರ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿ ಸಲಹೆ ಸೂಚನೆಗಳನ್ನು ನೀಡಿ ಸಹಕಾರಿಯ ಅಭಿವೃದ್ಧಿ ಮತ್ತು ಸಹಕಾರಿಯ ಮಹತ್ವದ ಕುರಿತು ಅನಿಸಿಕೆಗಳನ್ನು ತಿಳಿಸಿದರು. ಅಧ್ಯಕ್ಷೀಯ ಭಾಷಣ ಮಾಡಿದ ಸಹಕಾರಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ನಮ್ಮ ಸಹಕಾರಿಯು ಅಭಿವೃದ್ಧಿ ಹೊಂದುತ್ತಿದ್ದು ಎಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬೆಳೆದಿದೆ ಎನ್ನಲು ಸಂತೋಷವಾಗುತ್ತದೆ. ಸದಸ್ಯರು ಸಂಪೂರ್ಣ ಸಹಕಾರ ಇನ್ನೂ ಹೆಚ್ಚು ನೀಡಿದಲ್ಲಿ ನಮ್ಮ ಸಹಕಾರಿಯು ಇನ್ನಷ್ಟು ಅಭಿವೃದ್ಧಿ ಹೊಂದಲು ಸಹಕಾರಿಯಾಗುವುದು ಎಂದು ತಿಳಿಸಿದರು. ಸೊಸೈಟಿಯ ಉಪಾಧ್ಯಕ್ಷರಾದ ಅಜಯ್ ಕುಮಾರ್, ನಿರ್ದೇಶಕರಾದ ಪ್ರಶಾಂತ್ ಕುಮಾರ್, ಜೂದ್…
