Author: admin
ಬೆಂಗಳೂರು: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ, ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು ವತಿಯಿಂದ ನೀಡಲಾಗುವ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ನೊಬೆಲ್ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಸಹಕಾರಿ ಧುರೀಣ ಡಾ.ಬಿ.ಡಿ.ಭೂಕಾಂತ್ ಅವರು ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಡಾ.ಬಿ.ಡಿ ಭೂಕಾಂತ್ ಅವರು ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕೆ ಮತ್ತು ಮಾರಾಟ ಮಹಾಮಂಡಲದ ಅಧ್ಯಕ್ಷರಾಗಿ, ನವದೆಹಲಿಯ ನ್ಯಾಶನಲ್ ಫಿಲ್ಮ್ ಆಂಡ್ ಫೈನ್ ಆರ್ಟ್ಸ್ ಕೋ ಆಪರೇಟಿವ್ ಲಿಮಿಟೆಡ್(ನ್ಯಾಕ್ ಕ್ಯಾಬ್)ನ ನಿರ್ದೇಶಕರಾಗಿದ್ದಾರೆ. ಜೂನ್ ೭ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಅಡಕೆ ಉತ್ಪನ್ನದ ರಫ್ತು ಉದ್ಯಮದ ಮೇಲೆ ಕರಿಛಾಯೆ ಮಂಗಳೂರು: ಕೃಷಿ ಪ್ರಧಾನ ಅದರಲ್ಲೂ ದಕಿಷಣ ಕನ್ನಡ, ಉಡುಪಿ, ಮಲೆನಾಡು ಭಾಗದ ಪ್ರಮುಖ ಕೃಷಿ ಬೆಳೆಯಾಗಿರುವ ಅಡಕೆಯ ಬೆಲೆ ಏರುಗತಿಯಲ್ಲಿದೆ. 450-500 ರೂ. ಆಸುಪಾಸಿನಲ್ಲಿರುವ ಅಡಕೆಯ ಉಪ ಉತ್ಪನ್ನಗಳಿಗೂ ಉತ್ತಮ ದಾರಣೆ ಇದೆ. ಅಡಕೆ ಹಾಳೆ ತಟ್ಟೆಯಂತ ಉತ್ಪನ್ನಗಳು ವಿದೇಶಕ್ಕೂ ರಫ್ತಾಗುತ್ತಿತ್ತು. ಆದರೆ ಈಗ ಅಮೆರಿಕಾದಲ್ಲಿ ಅಡಕೆ ಹಾಳೆ ತಟ್ಟೆಯ ಬಳಕೆಗೆ ನಿಷೇಧ ಹೇರಲಾಗುತ್ತಿದೆ ಎನ್ನಲಾಗುತ್ತಿದೆ. https://chat.whatsapp.com/EbVKVnWB6rlHT1mWtsgbch ಮೂಲಗಳ ಪ್ರಕಾರ ಅಮೆರಿಕಾದ ಆಹಾರ ಮತ್ತು ಔಷಧ ಆಡಳಿತ ಸಮಿತಿ (ಎಫ್ಡಿಎ) ಭಾರತದಿಂದ ರಫ್ತಾಗುತ್ತಿರುವ ಅಡಕೆ ಹಾಳೆಗಳ ಬಳಕೆಯ ಮೇಲೆ ನಿಷೇಧ ಹೇರುತ್ತಿದೆ. ಇದರಿಂದ ಅಡಕೆ ಹಾಳೆ ತಟ್ಟೆಯ ರಫ್ತು ವಿನಿಮಯದ ಮೇಲೆ ಪೆಟ್ಟು ಬೀಳುತ್ತಿದೆ. ಅಡಕೆ ಹಾಳೆ ತಟ್ಟೆಯನ್ನು ಅಡಕೆಯಂತೆ ಯಾರೂ ತಿನ್ನುವುದಿಲ್ಲ. ಅದರ ಬಳಕೆ ಊಟ, ತಿಂಡಿ ತೆಗೆದುಕೊಳ್ಳಲು ಮಾತ್ರ. ಪ್ಲಾಸ್ಟಿಕ್ನಂತೆ ಪರಿಸರಕ್ಕೆ ಯಾವುದೇ ಹಾನಿ ಮಾಡದೆ ಪರಿಸರ ಪೂರಕವಾಗಿ ಬಳಕೆಯಾಗುತ್ತಿದ್ದರೂ ಅಡಕೆ ಹಾನಿಕಾರಕ ಎಂಬ ಅಪವಾದ ಹೊರಿಸಿ ಅಮೆರಿಕಾದಂಥ ಮುಂದುವರಿದ…
ಸದಸ್ಯರ ಕಲ್ಯಾಣಕ್ಕೆ ಸಾಂತ್ವನ, ಚೇತನಾ, ಸುಭದ್ರಾ ಯೋಜನೆಗಳ ಬಿಡುಗಡೆ ವರ್ಷಪೂರ್ತಿ ನಡೆಯಲಿದೆ ಸ್ವಚ್ಛ ಭಾರತ್ (ಅವೇಕ್ ಕುಡ್ಲ) ಕಾರ್ಯಕ್ರಮ ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ಪ್ರಸಕ್ತ ವರ್ಷ ಸ್ವರ್ಣ ಜಯಂತಿ ವರ್ಷದ ಸ್ವರ್ಣ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಯೋಜನೆ ಹಾಕಿಕೊಂಡಿದ್ದು, ಮೇ 11, 2025ರಿಂದ ಮುಂದಿನ ಮೇ 11, 2026ವರೆಗೆ ಇಡೀ ವರ್ಷ ಸದಸ್ಯರ ಕಲ್ಯಾಣ ಕಾರ್ಯಕ್ರಮಗಳು, ಮೌಲ್ಯವರ್ಧಿತ ಗ್ರಾಹಕ ಸೇವೆಗಳು ಹಾಗೂ ರಚನಾತ್ಮಕ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. https://chat.whatsapp.com/EbVKVnWB6rlHT1mWtsgbch ಭಾನುವಾರ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ೪೯ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಸ್ವರ್ಣ ಜಯಂತಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಂದರ್ಭ ನಾಲ್ಕು ಯೋಜನಗೆಳನ್ನು ಅನಾವರಣಗೊಳಿಸಲಾಗಿದೆ. ಈ ಸಂದರ್ಭದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಸ್ ಆರ್ ಹರೀಶ್ ಆಚಾರ್ಯ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ಮಂಗಳೂರು ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್, ಬ್ಯಾಂಕಿನ ಸ್ಥಾಪಕ ಸದಸ್ಯರಾಗಿದ್ದ ಮುನಿಯಾಲು ದಾಮೋದರ ಆಚಾರ್ಯ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್…
ಮಂಗಳೂರು: ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ 2024-25ರ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಗಳಿಸಿದ “ ಎ“ ವರ್ಗ ಮತ್ತು “ ಸಿ“ ವರ್ಗದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳ ಪೋಷಕರು 31.05.2024ರೊಳಗೆ ನಮ್ಮ ಸಂಘದ ಸದಸ್ಯರಾಗಿದ್ದಲ್ಲಿ ಮಾತ್ರ ತಮ್ಮ ಹತ್ತಿರದ ಶಾಖೆಯಿಂದ ಅರ್ಜಿ ಪಡೆದುಕೊಂಡು 30-06-2025ರೊಳಗೆ ತಲುಪಿಸಬೇಕಾಗಿ ಕೋರಲಾಗಿದೆ. https://chat.whatsapp.com/EbVKVnWB6rlHT1mWtsgbch ಹೆಚ್ಚಿನ ಮಾಹಿತಿಗೆ: ಪ್ರಧಾನ ವ್ಯವಸ್ಥಾಪಕರು, ಎಸ್. ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ., “ವಿಶ್ವಸೌಧ”, ರಾಷ್ಟ್ರೀಯ ಹೆದ್ದಾರಿ -66, ಕೊಟ್ಟಾರಚೌಕಿ, ಅಂಚೆ: ಅಶೋಕ ನಗರ, ಮಂಗಳೂರು -575006(ದ.ಕ.) ದೂರವಾಣಿ: 0824-2451320 ಸಂಪರ್ಕಿಸಬಹುದು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಅನಾಥಾಶ್ರಮ, ಟ್ರಸ್ಟ್ಗೆ ದೇಣಿಗೆ ಹಸ್ತಾಂತರ, ಸಿಎ ತೇರ್ಗಡೆಯಾದವರಿಗೆ ಸನ್ಮಾನ ಮಂಗಳೂರು: ಎಂಸಿ.ಸಿ.ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಛೇರಿಯ ಅವರಣದಲ್ಲಿ ಆಚರಿಸಲಾಯಿತು.ಬ್ಯಾಂಕಿನ ಇತಿಹಾಸ ಮತ್ತು ಪ್ರಗತಿಯ ಕುರಿತ ಸಾಕ್ಷಚಿತ್ರವನ್ನು ಈ ಸಂದರ್ಭ ಪ್ರಸ್ತುತಪಡಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಫಾ|ಡೆನಿಸ್ ಡೇಸಾ, ಅತಿಥಿಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ಪ್ರಾಂತೀಯ ಸುಪೀರಿಯರ್ ಸಿ|ಕ್ಲಾರಾ ಮಿನೇಜಸ್, ಯುಎಫ್ಸಿ, ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ನ ನಿರ್ದೇಶಕಿ ಪ್ರೊ.ಹಿಲ್ಡಾ ರಾಯಪ್ಪನ್, ಮಂಗಳೂರು ಕೊಂಕಣ್ಸ್ ದುಬಾಯ್, ಅಧ್ಯಕ್ಷ ಸ್ಟೀಫನ್ ಮಿನೇಜಸ್ ಮತ್ತು ಬ್ಯಾಂಕಿನ ಮಹಾಪ್ರಬಂಧಕ ಸುನೀಲ್ ಮಿನೇಜಸ್ ಹಾಜರಿದ್ದರು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಪ್ರಾಸ್ತಾವಿಕ ಮಾತನಾಡಿ, ಎಂ.ಸಿ.ಸಿ. ಬ್ಯಾಂಕಿನ ರೂಪಾಂತರ, ಸೇವೆ ಮತ್ತು ಕಾರ್ಯಕ್ಷಮತೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಎಂಸಿಸಿ ಬ್ಯಾಂಕ್ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ವಿವರಿಸಿದರು. ಬ್ಯಾಂಕಿನ ಪ್ರಗತಿ, ಸಾಧನೆಯನ್ನು ವಿವರಿಸಿ ಸಂಸ್ಥಾಪಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ…
ಅನಾಥಾಶ್ರಮ, ಟ್ರಸ್ಟ್ಗೆ ದೇಣಿಗೆ ಹಸ್ತಾಂತರ ಸಿಎ ತೇರ್ಗಡೆಯಾದವರಿಗೆ ಸನ್ಮಾನ ಮಂಗಳೂರು: ಎಂಸಿ.ಸಿ.ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಛೇರಿಯ ಅವರಣದಲ್ಲಿ ಆಚರಿಸಲಾಯಿತು.ಬ್ಯಾಂಕಿನ ಇತಿಹಾಸ ಮತ್ತು ಪ್ರಗತಿಯ ಕುರಿತ ಸಾಕ್ಷಚಿತ್ರವನ್ನು ಈ ಸಂದರ್ಭ ಪ್ರಸ್ತುತಪಡಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಫಾ|ಡೆನಿಸ್ ಡೇಸಾ, ಅತಿಥಿಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ಪ್ರಾಂತೀಯ ಸುಪೀರಿಯರ್ ಸಿ|ಕ್ಲಾರಾ ಮಿನೇಜಸ್, ಯುಎಫ್ಸಿ, ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ನ ನಿರ್ದೇಶಕಿ ಪ್ರೊ.ಹಿಲ್ಡಾ ರಾಯಪ್ಪನ್, ಮಂಗಳೂರು ಕೊಂಕಣ್ಸ್ ದುಬಾಯ್, ಅಧ್ಯಕ್ಷ ಸ್ಟೀಫನ್ ಮಿನೇಜಸ್ ಮತ್ತು ಬ್ಯಾಂಕಿನ ಮಹಾಪ್ರಬಂಧಕ ಸುನೀಲ್ ಮಿನೇಜಸ್ ಹಾಜರಿದ್ದರು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಪ್ರಾಸ್ತಾವಿಕ ಮಾತನಾಡಿ, ಎಂ.ಸಿ.ಸಿ. ಬ್ಯಾಂಕಿನ ರೂಪಾಂತರ, ಸೇವೆ ಮತ್ತು ಕಾರ್ಯಕ್ಷಮತೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಎಂಸಿಸಿ ಬ್ಯಾಂಕ್ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ವಿವರಿಸಿದರು. ಬ್ಯಾಂಕಿನ ಪ್ರಗತಿ, ಸಾಧನೆಯನ್ನು ವಿವರಿಸಿ ಸಂಸ್ಥಾಪಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ…
ವಿಶ್ವಕರ್ಮ ಸಹಕಾರ ಬ್ಯಾಂಕ್ ಸ್ವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿಕೆ ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕಿನ ಸ್ವರ್ಣ ಸಂಭ್ರಮದಲ್ಲಿ ಬಿಡುಗಡೆ ಮಾಡಿದ ಯೋಜನೆಗಳು ಸಮಾಜಮುಖಿಯಾಗಿದೆ. ಇದರಿಂದ ಸಾಕಷ್ಟು ಕುಶಲಕರ್ಮಿ ಸಮಾದಾಯದ ಜನರಿಗೆ ಪ್ರಯೋಜನವಾಗುತ್ತದೆ. ಈ ಸ್ವರ್ಣ ಜಯಂತಿ ವರ್ಷದ ಸ್ವರ್ಣ ಸಂಭ್ರಮ ಕಾರ್ಯಕ್ರಮಗಳ ಅಂಗವಾಗಿ ರೂಪಿಸಿರುವ ಹಲವಾರು ಯೋಜನೆಗಳು ಯಶಸ್ವಿಯಾಗಲಿ ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಶುಭ ಹಾರೈಸಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಭಾನುವಾರ ವಿಶ್ವಕರ್ಮ ಸಹಕಾರ ಬ್ಯಾಂಕ್ನ 49ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಸ್ವರ್ಣ ಜಯಂತಿ ವರ್ಷದ “ಸ್ವರ್ಣ ಸಂಭ್ರಮ” ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ವಿಶ್ವಕರ್ಮ ಸಹಕಾರ ಬ್ಯಾಂಕ್ ಹಮ್ಮಿಕೊಂಡಿರುವ ಒಂದು ವರ್ಷದ ಕಾರ್ಯಕ್ರಮಗಳು ಯಶಸ್ವಿಯಾಗಿ ಬ್ಯಾಂಕ್ನ ವಹಿವಾಟು ದ್ವಿಗುಣಗೊಳ್ಳಲಿ. ಸಾಲ ತೆಗೆದುಕೊಂಡವರು ಅವರು ಯಾವ ಕಾರ್ಯಕ್ಕೆ ತೆಗೆದುಕೊಂಡಿರುತ್ತಾರೋ ಅದೇ ಕಾರ್ಯಕ್ಕೆ ವಿನಿಯೋಗಿಸಿದಾಗ ಅದರ ಮರು ಪಾವತಿ…
ಸಂಸ್ಥೆಯಿಂದ ಮಹಿಳಾ ಸಬಲೀಕರಣ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರಶಂಸೆ
ಮಂಗಳೂರು: ದೇಶದಲ್ಲಿ ಯುದ್ಧ ಸ್ಥಿತಿ ತಲೆದೋರಿದ್ದು ಪಾಕಿಸ್ತಾನ ವಿರುದ್ಧದ ಆಪರೇಶನ್ ಸಿಂಧೂರ್ ಕಾರ್ಯಾಚರಣೆ ನಡೆಯುತ್ತಿದೆ. ಭಯೋತ್ಪಾದನೆಯ ವಿರುದ್ಧದ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿರುವ ಸೈನಿಕರಿಗೆ ಶಕ್ತಿ ತುಂಬುವುದಕ್ಕಾಗಿ ನವೋದಯ ಸಂಸ್ಥೆ ಮತ್ತು ತನ್ನ ವೈಯಕ್ತಿಕ ನೆಲೆಯಲ್ಲಿ 3 ಕೋಟಿ ರೂ. ಸೈನಿಕರ ಕಲ್ಯಾಣಕ್ಕೆ ನೀಡಲಾಗುವುದು ಎಂದು ಸಹಕಾರ ರತ್ನ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ನವೋದಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಘೋಷಿಸಿದರು. https://chat.whatsapp.com/EbVKVnWB6rlHT1mWtsgbch ಶನಿವಾರ ಮಂಗಳೂರಿನ ಬಂಗ್ರಕೂಳೂರು ಗೋಲ್ಡ್ಫಿಂಚ್ ಮೈದಾನದಲ್ಲಿ ನಡೆದ ನವೋದಯ ಸ್ವಸಹಾಯ ಸಂಘಗಳ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡುವ ವೇಳೆ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಸಚಿವರಾದ ಕೆ.ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಆರ್.ಬಿ.ತಿಮ್ಮಾಪುರ್, ಲಕ್ಷ್ಮೀ ಹೆಬ್ಬಾಳ್ಕರ್, ಎಸ್ಸಿಡಿಸಿಸಿ…
ಮಂಗಳೂರು: ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಸರ್ಕಾರ ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ ಹೇಳಿರುವ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ರಾಷ್ಟ್ರೀಯ ರಕ್ಷಣಾ ನಿಧಿಗೆ ಕ್ಯಾಂಪ್ಕೊದಿಂದ (ಎನ್ಡಿಎಫ್) 5 ಕೋಟಿ (ಐದು ಕೋಟಿ ರೂಪಾಯಿ) ಕೊಡುಗೆ ನೀಡುವುದಾಗಿ ಘೋಷಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಪ್ರಸ್ತುತ ಸಂದಿಗ್ಥ ಪರಿಸ್ಥಿತಿಯಲ್ಲಿ ದೇಶದ ಗಡಿ ರಕ್ಷಣೆಗಾಗಿ ಹೋರಾಡುತ್ತಿರುವ ಯೋಧರಿಗೆ ನೆರವಾಗಲು ಕ್ಯಾಂಪ್ಕೊ ರಾಷ್ಟ್ರೀಯ ರಕ್ಷಣಾ ನಿಧಿಗೆ (ಎನ್ಡಿಎಫ್) 5 ಕೋಟಿ ರೂಪಾಯಿ ಕೊಡುಗೆ ನೀಡುವ ಮೂಲಕ ರಾಷ್ಟ್ರದ ಹಿತ ಕಾಪಾಡುವಲ್ಲಿ ಬದ್ಧತೆ ತೋರಿಸಿದೆ. ಕ್ಯಾಂಪ್ಕೋ ಯಾವಾಗಲೂ ರಾಷ್ಟ್ರೀಯ ಹಿತ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಮುಂಚೂಣಿಯಲ್ಲಿರುವ ರೈತರ ಸಹಕಾರಿ ಸಂಸ್ಥೆಯಾಗಿದೆ. ಈ ಹಿಂದೆಯೂ, ನೈಸರ್ಗಿಕ ವಿಕೋಪಗಳು ಮತ್ತು ರಾಷ್ಟ್ರೀಯ ತುರ್ತು ಪರಿಸ್ಥಿತಿಗಳ ಸಮಯದಲ್ಲಿ ನಾವು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಆರ್ಥಿಕ ಬೆಂಬಲ ನೀಡಿದ್ದೇವೆ. ಈ ನಿರ್ಣಾಯಕ ಹಂತದಲ್ಲಿ, ನಮ್ಮ ಸಶಸ್ತ್ರ ಪಡೆಗಳು ಭಯೋತ್ಪಾದನೆ ಮತ್ತು ಬಾಹ್ಯ ಬೆದರಿಕೆಗಳ ವಿರುದ್ಧ…
