Author: admin
ಸಹಕಾರ ಸಂಘಗಳ ಉಪನಿಬಂಧಕಿ ಗಗನ ಕೆ ಅಭಿಪ್ರಾಯ ಮಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ತಮ್ಮ ಅಧೀನದ ಸೌಹಾರ್ದ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ, ನಿರ್ದೇಶಕರುಗಳಿಗೆ ಕಾಲಕಾಲಕ್ಕೆ ತರಬೇತಿ ಶಿಬಿರಗಳನ್ನು ಆಯೋಜಿಸುತ್ತ ಸಹಕಾರಿಗಳ ಬಗ್ಗೆ ಜ್ಞಾನ ಹೆಚ್ಚಿಸುವ ಕೆಲಸ ಮಾಡುತ್ತಿದೆ. ಸಂಬಂಧಪಟ್ಟವರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಜ್ಞಾನ ಹೆಚ್ಚಿಸುವ ಕೆಲಸ ಮಾಡುತ್ತಿರಬೇಕು ಎಂದು ಸೌಹಾರ್ದ ಸಹಕಾರಿಗಳ ದಾವಾ ಪಂಚಾಯಿತಿ ನ್ಯಾಯಾಲಯದ ಸಹಕಾರ ಸಂಘಗಳ ಉಪನಿಬಂಧಕಿ, ಗಗನ ಕೆ ಅಭಿಪ್ರಾಯಪಟ್ಟರು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ಶನಿವಾರ ಮಂಗಳೂರಿನ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ನಡೆದ ಲೆಕ್ಕ ಪರಿಶೋಧನಾ ವರದಿಗಳ ಪೂರ್ವ ಸಿದ್ಧತೆಗಳು ಹಾಗೂ ದಾವಾ ದಾಖಲಾತಿ ಪ್ರಕ್ರಿಯೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿಗಳಲ್ಲಿ ಭಾಗವಹಿಸಿದಾಗ ಜ್ಞಾನ ಹೆಚ್ಚುತ್ತದೆ. ಹೆಚ್ಚಿನ ಜ್ಞಾನ ಸಂಪಾದನೆಯಿಂದ ಪ್ರಾಮಾಣಿಕತೆ ಹೆಚ್ಚುತ್ತದೆ. ಮನುಷ್ಯ ಜನ್ಮ ಎಂಬುದು ಬಹಳಷ್ಟು ಪುಣ್ಯ ಸಂಚಯದಿಂದ ಸಿಗುವಂಥದ್ದು. ಮನುಷ್ಯ ಜೀವನದಲ್ಲಿ ಸಿಗುವ ಪ್ರತಿಯೊಂದು ಕ್ಷಣವನ್ನೂ ಸದುಪಯೋಗ ಮಾಡಿಕೊಳ್ಳಬೇಕು.…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಡೂರು ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಮಾಡೂರು ಹಾಗೂ ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರ ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಏಪ್ರಿಲ್ 27ರ ಭಾನುವಾರ ಬೆಳಗ್ಗೆ 9.30ರಿಂದ ಮದ್ಯಾಹ್ನ 12.30ರವರೆಗೆ ಮಾಡೂರಿನ ಕೊರಗಜ್ಜನ ಕಟ್ಟೆಯ ಮುಂಭಾಗದ ಮಾತೃಶ್ರೀ ಕಾಂಪ್ಲೆಕ್ಸ್ನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆವರಣದಲ್ಲಿ ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಈ ಶಿಬಿರದಲ್ಲಿ ಎ.ಜೆ. ಇನ್ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್ ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ಕಣ್ಣಿನ ತಪಾಸಣೆ, ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಇತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ದಂತ ತಪಾಸಣೆ, ಹುಳುಕು ಹಲ್ಲುಗಳ…
ಸ್ವಾತಂತ್ರ್ಯ ಹೋರಾಟಗಾರ, ಸಮಾಜರತ್ನ ದಿ.ಡಾ.ಅಮ್ಮೆಂಬಳ ಬಾಳಪ್ಪರವರ ನೇತೃತ್ವ ಹಾಗೂ ಸಹಕಾರಿ ಧುರೀಣ ಬಿ.ಹೂವಯ್ಯ ಮೂಲ್ಯರವರ ಸಾರಥ್ಯದಲ್ಲಿ ಆರಂಭವಾದ ಬಂಟ್ವಾಳದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘವು ಪ್ರಸಕ್ತ 5.05 ಕೋಟಿ ರೂ.(ತಾತ್ಕಾಲಿಕ) ಲಾಭ ಗಳಿಸಿದೆ. https://chat.whatsapp.com/EbVKVnWB6rlHT1mWtsgbch ಕೇವಲ 131 ಸದಸ್ಯರನ್ನೊಳಗೊಂಡು ರೂ. 22,620 ಪಾಲು ಬಂಡವಾಳದೊಂದಿಗೆ ಸ್ಥಾಪಿಸಲ್ಪಟ್ಟ ಸಮಾಜ ಸೇವಾ ಸಹಕಾರಿ ಸಂಘವು ಪ್ರಸ್ತುತ 16 ಶಾಖೆಗಳನ್ನು ಹೊಂದಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಕಾರ್ಯ ವ್ಯಾಪ್ತಿಯನ್ನು ಹೊಂದಿದೆ. ಸಂಘದ ಪುಂಜಾಲಕಟ್ಟೆ, ಮುಡಿಪು ಮತ್ತು ಉಪ್ಪಿನಂಗಡಿ ಶಾಖೆಯು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ಸಂಘವು 2024-25ನೇ ಸಾಲಿನಲ್ಲಿ ರೂ.1159 ಕೋಟಿ ವ್ಯವಹಾರ ನಡೆಸಿದೆ. ಆರ್ಥಿಕ ವರ್ಷ 2024-25ರ ಅಂತ್ಯಕ್ಕೆ ಸಂಘದಲ್ಲಿ 9047 ‘ಎ’ ತರಗತಿ, 5556 ‘ಬಿ’ ತರಗತಿ ಸದಸ್ಯರಿದ್ದು ರೂ.8.09 ಕೋಟಿ ಪಾಲು ಬಂಡವಾಳ ಹೊಂದಿದೆ. 19.78 ಕೋಟಿ ರೂ. ನಿಧಿಗಳು, 55.35 ಕೋಟಿ ರೂ. ವಿನಿಯೋಗಗಳು, 229.47 ಕೋಟಿ ರೂ. ಠೇವಣಾತಿ ಇದ್ದು 215.21 ಕೋಟಿ…
ಬಂಗ್ರಕೂಳೂರು ಗೋಲ್ಡ್ಫಿಂಚ್ ಮೈದಾನದಲ್ಲಿ ಮೇ 10ರಂದು ನಡೆಯಲಿದೆ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ದೇಶಕ್ಕೆ ಮಾದರಿ, ಸಂದೇಶ ಕೊಡುವ ಕಾರ್ಯಕ್ರಮ: ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾಹಿತಿ ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನವೋಧಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಅಂಗವಾಗಿ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಮೈದಾನದಲ್ಲಿ ಮೇ 10ರಂದು ಬಹೃತ್ ಮಹಿಳಾ ಸಮಾವೇಶ ನಡೆಯಲಿದೆ. ಒಂದೇ ರೀತಿಯ ಸಮವಸ್ತ್ರದಲ್ಲಿ ವಿವಿಧ ಜಿಲ್ಲೆಗಳ ಒಂದೂವರೆ ಲಕ್ಷ ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸಲಿದ್ದು ಇದೊಂದು ಐತಿಹಾಸಿಕ, ದೇಶಕ್ಕೆ ಸಂದೇಶ ಕೊಡುವ ಮಾದರಿ ಕಾರ್ಯಕ್ರಮವಾಗಿ ಮೂಡಿಬರಲಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಂಸ್ಥಾಪಕ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ತಿಳಿಸಿದರು. https://chat.whatsapp.com/EbVKVnWB6rlHT1mWtsgbch ಮಂಗಳವಾರ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಜತ ಸಂಭ್ರಮವನ್ನು ಮೇ 10ರ ಬೆಳಗ್ಗೆ 10ಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನವೋದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್…
ಏಪ್ರಿಲ್ 26ರಂದು ಚುನಾವಣೆ, ಅಂದೇ ಮತ ಎಣಿಕೆ, ಫಲಿತಾಂಶ ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುವುದು ಪಕ್ಕಾ ಆಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಲಿದ್ದು, ಒಟ್ಟು 16 ನಿರ್ದೇಶಕ ಸ್ಥಾನಕ್ಕೆ ಅಂತಿಮವಾಗಿ 41 ಅಭ್ಯರ್ಥಿಗಳು ಕಣದಲ್ಲಿದ್ದಾರೆ. https://chat.whatsapp.com/EbVKVnWB6rlHT1mWtsgbch 16 ನಿರ್ದೇಶಕ ಸ್ಥಾನಗಳಿದ್ದು ದ.ಕ. ಮತ್ತು ಉಡುಪಿ ಜಿಲ್ಲೆಗಳ ತಲಾ 8 ಸ್ಥಾನಗಳಂತೆ ಹಂಚಿಕೆ ಮಾಡಲಾಗಿದೆ. ಇದರಲ್ಲಿ ತಲಾ ಒಂದು ಸ್ಥಾನ ಮಹಿಳೆಯರಿಗೆ ಮೀಸಲು. ಅವಿಭಜಿತ ದ.ಕ. ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಒಟ್ಟು 60 ನಾಮಪತ್ರ ಸಿಂಧುವಾಗಿತ್ತು. ಹಾಲಿ 16 ನಿರ್ದೇಶಕರ ಪೈಕಿ 13 ಮಂದಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಇವರಲ್ಲಿ ಹಾಲಿ ಅಧ್ಯಕ್ಷ ಸುಚರಿತ ಶೆಟ್ಟಿ 4ನೇ ಬಾರಿ, ಮಾಜಿ ಅಧ್ಯಕ್ಷರಾದ ರವಿರಾಜ ಹೆಗ್ಡೆ ಹಾಗೂ ಕಾಪು ದಿವಾಕರ ಶೆಟ್ಟಿ5ನೇ ಬಾರಿ, ಪ್ರಕಾಶ್ಚಂದ್ರ ಶೆಟ್ಟಿ, ಮಂಜಯ್ಯ ಶೆಟ್ಟಿ, ಎಸ್ .ಬಿ.ಜಯರಾಮ ರೈ 3ನೇ ಬಾರಿ, ಸುಭದ್ರಾ ರಾವ್ 2ನೇ ಬಾರಿ ಕಣಕ್ಕೆ…
ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಹಕರ ಸೇವೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳಿಗಿಂತ ಮುಂಚೂಣಿಯಲ್ಲಿದೆ. ಬ್ಯಾಂಕ್ ತನ್ನ 113 ಶಾಖೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ್ದು, ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡಿ ‘ಗ್ರಾಹಕ ಸ್ನೇಹಿ ಬ್ಯಾಂಕ್ ‘ ಆಗಿ ಬೆಳೆದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಸಿಬ್ಬಂದಿಗಳಿಗೆ ಭಾನುವಾರ ಗಿಫ್ಟ್ ಕೂಪನ್ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಬ್ಬಂದಿಗಳಿಗೆ ಪೂರಕವಾಗಿರುವ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮೊದಲ ಬಾರಿ ಜಾರಿಗೆ ತಂದ ಹೆಗ್ಗಳಿಕೆ ಎಸ್ಸಿಡಿಸಿಸಿ ಬ್ಯಾಂಕಿನದ್ದು. ಮಾತ್ರವಲ್ಲ ಬ್ಯಾಂಕ್ ಕಾಲಕಾಲಕ್ಕೆ ವಿವಿಧ ಸವಲತ್ತುಗಳನ್ನು ಸಿಬ್ಬಂದಿಗಳಿಗೆ ನೀಡುತ್ತಿದೆ. ಹಾಗಾಗಿ ಸಿಬ್ಬಂದಿಗಳು ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಿ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು. ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಎಸ್ಸಿಡಿಸಿಸಿ ಬ್ಯಾಂಕ್ ಇಂದು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ದಕ್ಷ ನಾಯಕತ್ವ ಕಾರಣವಾಗಿದೆ.…
ಬೆಳಗಾವಿ: ಇಲ್ಲಿನ ಅಂಕಲಿ ಗ್ರಾಮದ ಡಾ.ಪ್ರಭಾಕರ ಕೋರೆ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ (ಬಹುರಾಜ್ಯ) 2024-25ನೇ ಸಾಲಿನಲ್ಲಿ 25.30 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ರಾಜ್ಯಾದ್ಯಂತ 55 ಶಾಖೆಗಳನ್ನು ಹೊಂದಿರುವ ಸೊಸೈಟಿಯು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ.92 ಸಾಲ ವಸೂಲಾತಿ ಮಾಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಲಿ.ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಂಸ್ಥೆಯು 1989ರಲ್ಲಿ ವಿಜಯಪುರದ ಜ್ಞಾನಯೋಗಾಶ್ರಮದ ಲಿಂಗೈಕ್ಯ ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಅಮೃತಹಸ್ತದಿಂದ ಪ್ರಾರಂಭವಾಗಿ ಸಂಸ್ಥಾಪಕರಾದ ಡಾ.ಪ್ರಭಾಕರ ಕೋರೆಯವರ ಮಾರ್ಗದರ್ಶನ ಮತ್ತು ಅಮಿತ್ ಕೋರೆ ಹಾಗೂ ಪ್ರೀತಿ ದೊಡವಾಡ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಯು ಗ್ರಾಮೀಣ ಭಾಗದ ಶಾಖೆಗಳಿಂದ ರೈತಾಪಿ ವರ್ಗದವರಿಗೆ ಆಧುನಿಕ ತಂತ್ರಜ್ಞಾನಗಳ ಮೂಲಕ ತ್ವರಿತ ಸೇವೆಗಳನ್ನು ನೀಡುತ್ತಿದ್ದು, ವರ್ಷಾಂತ್ಯಕ್ಕೆ 97,727 ಸದಸ್ಯರನ್ನು ಹೊಂದಿದೆ. ರೂ.4 ಕೋಟಿಗೂ ಮಿಕ್ಕಿ ಶೇರು ಬಂಡವಾಳ ಹೊಂದಿದ್ದು, 141 ಕೋಟಿಗೂ ಮಿಕ್ಕಿ ನಿಧಿಗಳನ್ನು ಸಂಗ್ರಹಿಸಿ 1511 ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹಿಸಿದೆ. 1064 ಕೋಟಿಗೂ ಅಧಿಕ ಸಾಲ ವಿತರಿಸಿದೆ.…
ನವದೆಹಲಿ: ಸಾರಿಗೆ ವಲಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಬಲಪಡಿಸುವ ಗುರಿ ಹೊಂದಿರುವ ಕೇಂದ್ರ ಸಹಕಾರ ಸಚಿವಾಲಯದ “ಸಹಕಾರ್ ಟ್ಯಾಕ್ಸಿ” ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ಕೇಂದ್ರ ಸಹಕಾರ ಸಚಿವಾಲಯದ ಕಾರ್ಯದರ್ಶಿ ಆಶಿಶ್ ಕುಮಾರ್ ಭೂತಾನಿ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಹಕಾರ್ ಟ್ಯಾಕ್ಸಿ ಕುರಿತ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ಸಿಡಿಸಿ) ಉಪಕ್ರಮದ ಪರಿಕಲ್ಪನೆ, ಅದರ ಪ್ರಮುಖ ಪಾಲುದಾರರು ಮತ್ತು ಕಾರ್ಯತಂತ್ರದ ಉದ್ದೇಶಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. “ಸಹಕಾರ್ ಟ್ಯಾಕ್ಸಿ” ಯೋಜನೆಯು ಹೇಗೆ ಸಹಕಾರಿ ಸಂಘಗಳನ್ನು ಇನ್ನಷ್ಟು ಬಲಪಡಿಸುವ ಮತ್ತು ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂಬುದನ್ನು ಚರ್ಚಿಸಲಾಯಿತು. ಸಹಕಾರ್ ಟ್ಯಾಕ್ಸಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಂಕಜ್ ಕುಮಾರ್ ಬನ್ಸಾಲ್ ಮತ್ತು ಸಚಿವಾಲಯ ಮತ್ತು ಎನ್ಸಿಡಿಸಿ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಮೂಲ ಮಟ್ಟದಲ್ಲಿ ಸಮಗ್ರ ಬೆಳವಣಿಗೆ ಉತ್ತೇಜಿಸಲು ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಕಾರಿ ಮಾದರಿಗಳನ್ನು ಬಳಸಿಕೊಳ್ಳುವ ಕುರಿತ ಬದ್ಧತೆಯನ್ನು ಸಚಿವಾಲಯ ಈ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿದೆ.…
ಮಂಗಳೂರು: ಇಲ್ಲಿನ ಮಂಗಳೂರು ಸೌಹಾರ್ದ ಸಹಕಾರಿ ಸಂಘ ಮತ್ತು ಪ್ರಸಾದ್ ನೇತ್ರಾಲಯ ಜಂಟಿ ಆಶ್ರಯದಲ್ಲಿ ಜರುಗಿದ ಕಣ್ಣಿನ ಉಚಿತ ತಪಾಸಣೆಯ ಪ್ರಯುಕ್ತ ಬುಧವಾರ ಮಂಗಳೂರು ಸ್ಕೋರ್ ಸಭಾಂಗಣದಲ್ಲಿ “ಉಚಿತ ಕನ್ನಡಕ ವಿತರಣೆ” ಕಾರ್ಯಕ್ರಮ ಜರಗಿತು. https://chat.whatsapp.com/EbVKVnWB6rlHT1mWtsgbch ಮಂಗಳೂರು ಸೌಹಾರ್ದ ಸಹಕಾರಿಯ ಅಧ್ಯಕ್ಷ, ಮಾಜಿ ಕಾರ್ಪೊರೇಟರ್ ಕೆ.ಭಾಸ್ಕರ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಪ್ರಸಾದ್ ನೇತ್ರಾಲಯದ ನಿರ್ದೇಶಕ ನಾಡೋಜ ಕೃಷ್ಣಪ್ರಸಾದ್ ಕೂಡ್ಲು ಮತ್ತು ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್, ಮಂಗಳೂರು ಸೌಹಾರ್ದ ಸಹಕಾರಿಯ ನಿರ್ದೇಶಕರಾದ ರವೀಂದ್ರ ಬೇಕಲ್, ಪೂರ್ಣಿಮಾ ಬಿ.ರಾವ್, ಸುಂದರ ಸಾಲ್ಯಾನ್, ಕೆ.ರವೀಂದ್ರ ರಾವ್ ಮುಖ್ಯ ಅತಿಥಿಗಳಾಗಿದ್ದರು. ನಾಡೋಜ ಕೃಷ್ಣಪ್ರಸಾದ್ ಕೂಡ್ಲು” ಅವರನ್ನು ಅಭಿನಂದಿಸಲಾಯಿತು. 200 ಕನ್ನಡಕಗಳನ್ನು ವಿತರಿಸಲಾಯಿತು. ಚಂದ್ರಿಕಾ ಡಿ.ರಾವ್, ಇಮ್ರಾನ್ ಎ.ಆರ್, ಮೀನಾ ಟೆಲ್ಲಿಸ್ ಹಾಜರಿದ್ದರು. ಆನಂದ ಸೋನ್ಸ್ , ವಿದ್ಯಾ ಬಾಬುಗುಡ್ಡ, ರೋನಾಲ್ಡ್ ಸಹಕರಿಸಿದರು. ಸದಾಶಿವ ಅಮೀನ್, ಸೈಯದ್ ಅಮೀನ್ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ನವದೆಹಲಿ: ಪ್ರಸಿದ್ಧ ವಿಧಿವಿಜ್ಞಾನ ತಜ್ಞ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ.ಜೆ.ಎಂ. ವ್ಯಾಸ್ (ಜಯಂತ್ಕುಮಾರ್ ಮಗನ್ಲಾಲ್ ವ್ಯಾಸ್ ) ಅವರನ್ನು ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಗೃಹ ಸಚಿವಾಲಯದ ಅಧೀನದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ (ಎನ್ಎಫ್ಎಸ್ಯು) ಸ್ಥಾಪಕ ಉಪಕುಲಪತಿಯಾಗಿರುವ ಡಾ.ಜೆ.ಎಂ.ವ್ಯಾಸ್ ಈ ಹೊಸ ಹುದ್ದೆ ವಹಿಸಿಕೊಳ್ಳುವ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮತ್ತೊಂದು ಹೊಸ ಮಜಲು ಏರಿದ್ದಾರೆ. ಭಾರತದಲ್ಲಿ ವಿಧಿವಿಜ್ಞಾನ ಮತ್ತು ಶಿಕ್ಷಣದ ಪ್ರವರ್ತಕರೂ ಆಗಿರುವ ಜಯಂತ್ಕುಮಾರ್ ಮಗನ್ಲಾಲ್ ವ್ಯಾಸ್ ಗುಜರಾತ್ ರಾಜ್ಯದ ಗಾಂಧಿನಗರದ ಎನ್ಎಫ್ಎಸ್ಯುನ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದಾರೆ. 1993ರಿಂದ 2009ರ ತನಕ ನಿವೃತ್ತರಾಗುವವರೆಗೆ ಗುಜರಾತ್ ರಾಜ್ಯದ ವಿಧಿವಿಜ್ಞಾನ ನಿರ್ದೇಶನಾಲಯದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದ ಅವರು ಮೂರು ದಶಕಗಳ ಕಾಲ ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದರು. ಡಾ.ವ್ಯಾಸ್ ಅವರು 2009 ರಲ್ಲಿ ಪ್ರಾರಂಭವಾದಾಗಿನಿಂದ 2020ರಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಎಂದು ಮರುನಾಮಕರಣಗೊಳ್ಳುವವರೆಗೆ ಗುಜರಾತ್ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಮಹಾನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ನಂತರ ಉಪಕುಲಪತಿಯಾಗಿ ನೇತೃತ್ವ ವಹಿಸಿದ್ದರು.…
