Author: admin

ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ ಕಾರ್ಯಾರಂಭ: ಬ್ಯಾಂಕ್‌ ಅಧ್ಯಕ್ಷ ಅನಿಲ್ ಲೋಬೊ ಘೋಷಣೆ ಮಂಗಳೂರು: 113 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ಮಾರ್ಚ್‌ 31ಕ್ಕೆ ಕೊನೆಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13.00 ಕೋಟಿ ರೂಪಾಯಿ ವ್ಯವಹಾರಿಕ ಲಾಭ ಗಳಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷ 1.30% ಎನ್.ಪಿ.ಎ. ದಾಖಲಿಸಿದೆ ಎಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2024–2025ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು, ವಿತ್ತೀಯ ವರ್ಷದಲ್ಲಿ ಬೆಳ್ತಂಗಡಿ ಮತ್ತು ಬೆಳ್ಮಣ್‌ನಲ್ಲಿ ಕ್ರಮವಾಗಿ 18 ಮತ್ತು 19ನೇ ಶಾಖೆಯನ್ನು ತೆರೆಯಲಾಗಿದೆ. ಬೈಂದೂರಿನಲ್ಲಿ…

Read More

ದಾಖಲೆಯ ಗಳಿಕೆ, ವಿಶೇಷ ಸಾಧನೆ: ಬ್ಯಾಂಕ್‌ ಅಧ್ಯಕ್ಷ ಎಚ್‌.ಜಗನ್ನಾಥ ಸಾಲ್ಯಾನ್‌ ಹೇಳಿಕೆ ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಅಭೂತಪೂರ್ವ ಕಾರ್ಯಸಾಧನೆಯೊಂದಿಗೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಮುನ್ನಡೆಯುತ್ತಿದ್ದು 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ದಾಖಲೆಯ ರೂ. 3.45 ಕೋಟಿಗೂ ಮಿಕ್ಕಿ ಲಾಭ ಗಳಿಸಿ ವಿಶೇಷ ಸಾಧನೆ ಮಾಡಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಎಚ್‌.ಜಗನ್ನಾಥ ಸಾಲ್ಯಾನ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ವಿಟ್ಲದಲ್ಲಿ ಪ್ರಧಾನ ಕಛೇರಿ ಮತ್ತು ಕನ್ಯಾನ, ಕಲ್ಲಡ್ಕ, ಬಿ.ಸಿ.ರೋಡ್‌ ಹಾಗೂ ಪುತ್ತೂರಿನಲ್ಲಿ ಶಾಖೆಗಳನ್ನು ಹೊಂದಿರುವ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ನಲ್ಲಿ ಒಟ್ಟು 8515 ಸದಸ್ಯರಿದ್ದು, ರೂ. 2.82 ಕೋಟಿ ಪಾಲು ಬಂಡವಾಳ ಹೊಂದಿದೆ. ಪ್ರಸಕ್ತ ವರ್ಷ ದಾಖಲೆಯ 950 ಕೋಟಿ ರೂ.ಗಳ ವ್ಯವಹಾರ ದಾಖಲಿಸಿದ್ದು, ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ 259 ಕೋಟಿ ರೂಪಾಯಿ ಹೆಚ್ಚಿನ ವ್ಯವಹಾರ ಮಾಡಿದೆ. ಸ್ಪರ್ಧಾತ್ಮಕ ಯುಗದಲ್ಲಿ ರೂ.134.73 ಕೋಟಿ ರೂಪಾಯಿಗಳ ಠೇವಣಿ ಸಂಗ್ರಹಿಸಿದ್ದು, ಕಳೆದ ಸಾಲಿಗಿಂತ 5.93%ರಷ್ಟು ಹೆಚ್ಚಳವಾಗಿದೆ.…

Read More

ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ ಕಾರ್ಯಾರಂಭ: ಬ್ಯಾಂಕ್‌ ಅಧ್ಯಕ್ಷ ಅನಿಲ್ ಲೋಬೊ ಘೋಷಣೆ ಮಂಗಳೂರು: 113 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ಮಾರ್ಚ್‌ 31ಕ್ಕೆ ಕೊನೆಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13.00 ಕೋಟಿ ರೂಪಾಯಿ ವ್ಯವಹಾರಿಕ ಲಾಭ ಗಳಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷ 1.30% ಎನ್.ಪಿ.ಎ. ದಾಖಲಿಸಿದೆ ಎಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2024–2025ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು, ವಿತ್ತೀಯ ವರ್ಷದಲ್ಲಿ ಬೆಳ್ತಂಗಡಿ ಮತ್ತು ಬೆಳ್ಮಣ್‌ನಲ್ಲಿ ಕ್ರಮವಾಗಿ 18 ಮತ್ತು 19ನೇ ಶಾಖೆಯನ್ನು ತೆರೆಯಲಾಗಿದೆ. ಬೈಂದೂರಿನಲ್ಲಿ…

Read More

240 ಹೊಸ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳ ಸ್ಥಾಪನೆ: ರಾಷ್ಟ್ರೀಯ ಮಟ್ಟದ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪ ಶಿಲ್ಲಾಂಗ್‌: ದೇಶಾದ್ಯಂತ ಸಹಕಾರಿ ಬ್ಯಾಂಕಿಂಗ್ ಜಾಲವನ್ನು ಮತ್ತಷ್ಟು ಬಲಶಾಲಿಯಾಗಿ ವಿಸ್ತರಿಸುವ ಮತ್ತು ಬ್ಯಾಂಕ್‌ಗಳ ಸೇವೆ ಇಲ್ಲದ ಪ್ರದೇಶಗಳಲ್ಲಿ ಆರ್ಥಿಕ ಸೇರ್ಪಡೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದ್ದು ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್ ಮತ್ತು ಲಕ್ಷದ್ವೀಪಗಳಲ್ಲಿ ಅಪೆಕ್ಸ್‌ ಸ್ಟೇಟ್‌ ಕೋ ಆಪರೇಟಿವ್‌ ಬ್ಯಾಂಕ್‌ ಸ್ಥಾಪನೆಯ ವಿಚಾರ ಮುನ್ನೆಲೆಗೆ ಬಂದಿದೆ. https://chat.whatsapp.com/EbVKVnWB6rlHT1mWtsgbch ಮೇಘಾಲಯದ ಶಿಲ್ಲಾಂಗ್‌ನಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ಮಟ್ಟದ ಪರಿಶೀಲನಾ ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಿದ್ದು, ಎರಡು ಹೊಸ ರಾಜ್ಯ ಸಹಕಾರಿ ಬ್ಯಾಂಕ್‌ಗಳು ಮತ್ತು 240 ಹೊಸ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳ (DCC) ಸ್ಥಾಪನೆಯ ಕುರಿತು ಚರ್ಚೆಗಳು ನಡೆದಿವೆ. ಲಡಾಖ್‌ ಮತ್ತು ಲಕ್ಷದ್ವೀಪಗಳಲ್ಲಿ ಪ್ರಸ್ತುತ ಯಾವುದೇ ಪ್ರಾದೇಶಿಕ ಸಹಕಾರಿ ಬ್ಯಾಂಕ್‌ಗಳು ಇಲ್ಲ ಎಂಬ ವಿಷಯ ಚರ್ಚೆಯಾಗಿದ್ದು, ಈ ಪ್ರದೇಶಗಳಲ್ಲಿ ಸಹಕಾರಿ ವಲಯವನ್ನು ಬಲಪಡಿಸಲು ಮತ್ತು ಅಸ್ತಿತ್ವದಲ್ಲಿರುವ ಸಹಕಾರಿ ಸಂಸ್ಥೆಗಳ ಆರ್ಥಿಕ ಅಗತ್ಯಗಳನ್ನು…

Read More

ಮಂಗಳೂರು: ವಜ್ರಮಹೋತ್ಸವ ಸಂಭ್ರಮಾಚರಣೆಯಲ್ಲಿರುವ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿ 2024-25ನೇ ಸಾಲಿನಲ್ಲಿ 1292.45 ಕೋಟಿ ರೂ. ವ್ಯವಹಾರ ನಡೆಸಿ 6.09 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch 1964ರಲ್ಲಿ ದೇವಮಾನವ ದಿ|ಪಾಲ್ಕೆ ಬಾಬುರಾಯ ಆಚಾರ್ಯರ ಮುಂದಾಳತ್ವದಲ್ಲಿ ಸ್ಥಾಪನೆಗೊಂಡ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯು ಒಟ್ಟು 22848 ಸದಸ್ಯ ರಿಂದ 7.03 ಕೋಟಿ ರೂ ಪಾಲು ಬಂಡವಾಳ ಹೊಂದಿದೆ. ಒಟ್ಟು ಠೇವಣಿ 253.86 ಕೋಟಿ ರೂ. ಇದ್ದು, ಸದಸ್ಯ/ಗ್ರಾಹಕರಿಗೆ ಚಿನ್ನಾಭರಣ ಸಾಲ, ಜಾಮೀನು ಸಾಲ, ವಾಹನ ಖರೀದಿ ಸಾಲ, ಆಸ್ತಿ ಅಡವು / ಗೃಹ ನಿರ್ಮಾಣ ಸಾಲ, ಯಂತ್ರೋಪಕರಣ ಸಾಲ, ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಲ ಹಾಗೂ ನಿಬಡ್ಡಿಯಲ್ಲಿ ಸೋಲಾರ್ ಯಂತ್ರೋಪಕರಣ ಸಾಲ ನೀಡುತ್ತಿದ್ದು ವರ್ಷಾಂತ್ಯಕ್ಕೆ ರೂ.240.32 ಕೋಟಿ ಹೊರಬಾಕಿ ಸಾಲ ಇದ್ದು ಡಿಮ್ಯಾಂಡ್ ಮೇಲೆ ಸುಸ್ತಿ ಬಾಕಿ ಪ್ರಮಾಣ ಶೇ.2.76 ಆಗಿರುತ್ತದೆ. ಕಳೆದ ಸಾಲಿನಲ್ಲಿ ಸುಸ್ತಿ ಬಾಕಿ ಶೇ.3.77 ಇದ್ದು ಶೇ.1.01 ಕಡಿಮೆಯಾಗಿರುತ್ತದೆ.…

Read More

ಮಂಗಳೂರು: ವೈಜ್ಞಾನಿಕ ಮಣ್ಣಿನ ವಿಶ್ಲೇಷಣೆಯ ಮೂಲಕ ಉತ್ತಮ ಬೆಳೆ ಇಳುವರಿ ಸಾಧಿಸಲು ರೈತರಿಗೆ ಬೆಂಬಲ ನೀಡುವ ಉದ್ದೇಶದಿಂದ ಕ್ಯಾಂಪ್ಕೊ ಪುತ್ತೂರು ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಘಟಕವನ್ನು ಪ್ರಾರಂಭಿಸಲಾಗಿದ್ದು ಪ್ರಗತಿಪರ ಕೃಷಿಕ ಸುರೇಶ್‌ ಬಲ್ನಾಡು ಶುಕ್ರವಾರ  ಉದ್ಘಾಟಿಸಿದರು. https://chat.whatsapp.com/EbVKVnWB6rlHT1mWtsgbch ಈ ಮಣ್ಣು ಪರೀಕ್ಷಾ ಯಂತ್ರವು ಮಣ್ಣಿನಲ್ಲಿರುವ 12 ಪ್ರಮುಖ ಪೋಷಕಾಂಶಗಳನ್ನು ವಿಶ್ಲೇಷಿಸುವ ಜೊತೆಗೆ ಪೋಷಕಾಂಶಗಳ ನಿರ್ವಹಣೆಗೆ ಸಂಕ್ಷಿಪ್ತ ಶಿಫಾರಸುಗಳನ್ನು ನೀಡುತ್ತದೆ. ರೈತರು ಮಣ್ಣಿನ ಪೋಷಕಾಂಶಗಳ ಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ. ನಿಖರವಾದ ಮಣ್ಣಿನ ಪರೀಕ್ಷೆಯ ಮೂಲಕ ಸಮತೋಲಿತ ಪೋಷಕಾಂಶಗಳ ನಿರ್ವಹಣೆ ಮಾಡುವುದು ಅತ್ಯಗತ್ಯ. ಈ ಉತ್ತಮವಾದ ಸೇವೆಯನ್ನು ಕ್ಯಾಂಪ್ಕೊ ಸದಸ್ಯರು ಸದುಪಯೋಗ ಮಾಡಿಕೊಳ್ಳಬೇಕಾಗಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿಯವರು ಮನವಿ ಮಾಡಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ.ಸತ್ಯನಾರಾಯಣ, ನಿರ್ದೇಶಕ ರಾಘವೇಂದ್ರ ಭಟ್, ಎ.ಆರ್.ಡಿ.ಎಫ್ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೇಶವ ಭಟ್, ಕ್ಯಾಂಪ್ಕೊ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ…

Read More

ಮುಂಬೈ: ಬೋಧನೆ, ಸಂಶೋಧನೆ ಮತ್ತು ಶೈಕ್ಷಣಿಕ ನಾಯಕತ್ವದಲ್ಲಿ ಎರಡು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ಪ್ರತಿಷ್ಠಿತ ಶಿಕ್ಷಣ ತಜ್ಞ ಡಾ.ಸುವಕಾಂತ ಮೊಹಾಂತಿ ಅವರನ್ನು ಪುಣೆಯ ವೈಕುಂಠ ಮೆಹ್ತಾ ರಾಷ್ಟ್ರೀಯ ಸಹಕಾರಿ ನಿರ್ವಹಣಾ ಸಂಸ್ಥೆಯ (VAMNICOM) ನಿರ್ದೇಶಕರಾಗಿ ನೇಮಿಸಲಾಗಿದೆ. ಡಾ.ಹೇಮಾ ಯಾದವ್ ಅವರ ಜಾಗದಲ್ಲಿ ಡಾ.ಮೊಹಾಂತಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. https://chat.whatsapp.com/EbVKVnWB6rlHT1mWtsgbch ಕೇಂದ್ರ ಸಹಕಾರ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಸಹಕಾರ ಸಚಿವಾಲಯವು ಸಹಕಾರಿ ಶಿಕ್ಷಣ ಮತ್ತು ತರಬೇತಿಯ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿರುವ ಸಮಯದಲ್ಲೇ VAMNICOMನಲ್ಲಿ ಡಾ.ಮೊಹಾಂತಿ ಅವರ ನಾಯಕತ್ವವು ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ. ರಾಷ್ಟ್ರೀಯ ಮಟ್ಟದ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪಿಸಲು ಸಂಸತ್ತಿನಲ್ಲಿ ಅಂಗೀಕಾರವಾದ ಮಸೂದೆ, ಜೊತೆಗೆ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್‌ಮೆಂಟ್‌ ಆನಂದ್ (IRMA) ನ ಪ್ರಸ್ತಾವಿತ ಮೇಲ್ದರ್ಜೆಗೇರಿಸುವಿಕೆಯ ಈ ಸಮಯದಲ್ಲೇ ಡಾ.ಮೊಹಾಂತಿಯವರ ನೇಮಕಾತಿ ಮಹತ್ವ ಪಡೆದಿದೆ. ವ್ಯಾಮ್ನಿಕಾಮ್‌ಗೆ ನಿಯೋಜನೆಗೊಳ್ಳುವ ಮೊದಲು ಮೊಹಾಂತಿಯವರು ಭುವನೇಶ್ವರದ ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (KIIT ವಿಶ್ವವಿದ್ಯಾಲಯ) ದಲ್ಲಿ ಮ್ಯಾನೇಜ್‌ಮೆಂಟ್ ಸ್ಕೂಲ್‌ ನಿರ್ದೇಶಕರಾಗಿ…

Read More

2,935 ಕೋಟಿ ರೂ. ವಾರ್ಷಿಕ ವಹಿವಾಟು: ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾಹಿತಿ ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 2,935 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿದ್ದು, 19.37 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ 107 ವರ್ಷಗಳಿಂದ ಸೇವೆ ನೀಡುತ್ತಿರುವ ಸಂಘವು 2024-25ರ ಆರ್ಥಿಕ ವರ್ಷಾಂತ್ಯಕ್ಕೆ 21,519 ಸದಸ್ಯರಿಂದ 4.83 ಕೋಟಿ ರೂ. ಬಂಡವಾಳ ಹೊಂದಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಂಘವು ಒಟ್ಟು 573 ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು, ಕಳೆದ ಸಾಲಿಗಿಂತ ಶೇ.12.45 ಏರಿಕೆ ಕಂಡಿದೆ. ಸದಸ್ಯರಿಗೆ ಗೃಹನಿರ್ಮಾಣ, ವಾಹನ ಖರೀದಿ, ಜಮೀನು ಖರೀದಿ ಮತ್ತು ಅಭಿವೃದ್ಧಿ ವಾಣಿಜ್ಯ ಸಂಕೀರ್ಣ, ವಸತಿ ಸಮುಚ್ಚಯ ನಿರ್ಮಾಣ, ಸ್ವ ಉದ್ಯೋಗಕ್ಕಾಗಿ ವಿದ್ಯಾಭ್ಯಾಸ, ಮದುವೆ, ಚಿನ್ನಾಭರಣಗಳ ಈಡಿನ ಮೇಲೆ ಹಾಗೂ ಮನೆವಾರ್ತೆಗಳಿಗೆ ಸಾಲ ವಿತರಿಸುತ್ತಿದ್ದು, 477 ಕೋಟಿ ರೂ. ಸಾಲ (ಹೊರಬಾಕಿ)…

Read More

ಮಂಗಳೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಸಕ್ತ ಸಾಲಿನಲ್ಲಿ 16.01 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷ ರೂ.12.01 ಕೋಟಿ ರೂ. ಲಾಭ ಗಳಿಸಿದ್ದು, ಈ ಬಾರಿ 4 ಕೋಟಿ ರೂ. ಲಾಭ ಹೆಚ್ಚಳದೊಂದಿಗೆ ಶೇ.31 ಏರಿಕೆಯಾಗಿದೆ. ಇದು ಸಂಘದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಎಂದು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪೇರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಜೈರಾಜ್ ಬಿ.ರೈ ತಿಳಿಸಿದ್ದಾರೆ. ಸಂಘದ ಅನುತ್ಪಾದಕ ಆಸ್ತಿ 24 ಲಕ್ಷ ರೂ. ಇದ್ದು ಇದು ಹೊರಬಾಕಿ ಸಾಲದ ಶೇ.0.05ಕ್ಕೆ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch 2020ನೇ ಸಾಲಿನಲ್ಲಿ ಜೈರಾಜ್ ಬಿ.ರೈ ಅವರು 2ನೇ ಬಾರಿ ಅಧ್ಯಕ್ಷರಾಗಿ ನೇತೃತ್ವ ವಹಿಸಿಕೊಂಡ ಸಂದರ್ಭ ಹಮ್ಮಿಕೊಂಡ ವಿಷನ್-2025ರಂತೆ ಮಾರ್ಚ್ 2025ಕ್ಕೆ ಸಂಘದ ಒಟ್ಟು ವ್ಯವಹಾರ ರೂ.1000 ಕೋಟಿ, 5 ಹೊಸ ಶಾಖೆಗಳೊಂದಿಗೆ 30 ಶಾಖೆಗಳನ್ನು ಹೊಂದುವುದು, ರೂ.10 ಕೋಟಿ ಲಾಭ, ಅನುತ್ಪಾದಕ ಆಸ್ತಿಯನ್ನು ಶೇ.10ಕ್ಕೆ ಸೀಮಿತಗೊಳಿಸುವುದು ಎಂಬ ಗುರಿಗಳನ್ನು ನಿಗದಿತ ಅವಧಿಗಿಂತ ಮೊದಲೇ…

Read More

ಮಂಗಳೂರು: ದಿ ಕರಾವಳಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 15ನೇ ಪಡೀಲ್ ಶಾಖೆಯು ಏಪ್ರಿಲ್‌ 13ರಂದು ಭಾನುವಾರ ಬೆಳಗ್ಗೆ 10.05ಕ್ಕೆ ಪಡೀಲಿನ “ಪ್ಯಾರಡೈಸ್ ಕಾಂಪ್ಲೆಕ್ಸ್”ನಲ್ಲಿ ಉದ್ಘಾಟನೆಗೊಳ್ಳಲಿದೆ. https://chat.whatsapp.com/EbVKVnWB6rlHT1mWtsgbch ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸುವರು. ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮದರ್ಶಿ ಶ್ರೀ ದೇವು ಮೂಲ್ಯಣ್ಣ ದೀಪ ಪ್ರಜ್ವಲನೆ ಮಾಡುವರು. ದಿ ಕರಾವಳಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷ ಎ.ಎಸ್. ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಣೇಶ್ ಶೆಟ್ಟಿ ಗುಡ್ಡೆಗುತ್ತು ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಪಡೀಲು ರೆಹಮಾನಿಯಾ ಜುಮ್ಮಾ ಮಸೀದಿಯ ಉಸ್ತಾದ್‌ ಜವಾದ್ ಮಿಸ್ಬಾಹಿ ಕಂಪ್ಯೂಟರ್ ಉದ್ಘಾಟನೆ ಮಾಡಲಿದ್ದಾರೆ. ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಪ್ರವರ್ತಕ ಡಾ. ಎಂ. ಅಣ್ಣಯ್ಯ ಕುಲಾಲ್ ಕ್ಯಾಶ್ ಕೌಂಟರ್ ಉದ್ಘಾಟಿಸಲಿದ್ದಾರೆ. ನಾಗುರಿ ಏಂಜಲೋರ್‌ ಚರ್ಚ್‌ನ ಧರ್ಮಗುರು ರೆ.ಫಾ.ಫೆಡ್ರಿಕ್ ಮೊಂತೇರೊ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ…

Read More