Author: admin

ನವದೆಹಲಿ: ದೇಶದಲ್ಲಿ 8.32 ಲಕ್ಷ ನೋಂದಾಯಿತ ಸಹಕಾರ ಸಂಘಗಳ ಪೈಕಿ 45,811 ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದರು. https://chat.whatsapp.com/EbVKVnWB6rlHT1mWtsgbch ರಾಷ್ಟ್ರೀಯ ಸಹಕಾರಿ ದತ್ತಸಂಚಯದ ಪ್ರಕಾರ, 6.37 ಲಕ್ಷ ಸಂಘಗಳು ಸಹಕಾರಿ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದರೆ, 1.50 ಲಕ್ಷಕ್ಕೂ ಹೆಚ್ಚು ಸಂಘಗಳು ಕಾರ್ಯನಿರ್ವಹಿಸುತ್ತಿಲ್ಲ. 2021ರ ಜುಲೈನಲ್ಲಿ ಸಹಕಾರ ಸಚಿವಾಲಯ ಸ್ಥಾಪನೆಯಾದ ಬಳಿಕ ಸಹಕಾರಿ ವಲಯವನ್ನು ಬಲಪಡಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಬಜೆಟ್ ಹಂಚಿಕೆಯಲ್ಲೂ ಹೆಚ್ಚಳವಾಗಿದೆ ಎಂದು ಅಂಕಿ ಅಂಶಗಳ ಸಹಿತ ಅಮಿತ್‌ ಷಾ ರಾಜ್ಯಸಭೆಯ ಮುಂದಿಟ್ಟರು. ಕೇಂದ್ರ ಸರ್ಕಾರದ ನಿರಂತರ ಬೆಂಬಲ ಮತ್ತು ಸುಧಾರಣಾ ನೀತಿಗಳ ಮೂಲಕ ಸಹಕಾರಿ ವಲಯವನ್ನು ಪುನರುಜ್ಜೀವನಗೊಳಿಸುವ ಗುರಿ ಹೊಂದಲಾಗಿದೆ ಎಂದು ಅಮಿತ್‌ ಷಾ ಹೇಳಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಸಹಕಾರಿ ಸಂಸ್ಥೆಗಳ ಕಾರ್ಯಕ್ಷಮತೆಯ ಮೌಲ್ಯಮಾಪನಕ್ಕೆ ದೇಶದಲ್ಲೇ ಮೊದಲ ಸಲ ಜಾರಿಗೆ  ನವದೆಹಲಿ: ಇನ್ಮುಂದೆ ಸಹಕಾರಿ ಕ್ಷೇತ್ರದಲ್ಲೂ ರ್ಯಾಂಕಿಂಗ್‌(Ranking) ಸಿಸ್ಟಮ್‌ ಜಾರಿಗೆ ಬರಲಿದೆ. ಸಹಕಾರಿ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ವ್ಯವಸ್ಥಿತವಾಗಿ ಮೌಲ್ಯಮಾಪನ ಮಾಡುವ ಗುರಿ ಇದ್ದು, ಇದಕ್ಕಾಗಿ ದೇಶದಲ್ಲೇ ಮೊದಲ ಸಲ ಸಹಕಾರಿ ರ್ಯಾಂಕಿಂಗ್‌ ವ್ಯವಸ್ಥೆಯನ್ನು ಪ್ರಾರಂಭಿಸುವುದಾಗಿ ಕೇಂದ್ರ ಸಹಕಾರಿ ಸಚಿವ ಅಮಿತ್‌ ಷಾ ಘೋಷಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳು (PACS), ಡೈರಿ, ಮೀನುಗಾರಿಕೆ, ನಗರ ಸಹಕಾರಿ ಸಂಸ್ಥೆಗಳು, ವಸತಿ ಸಾಲ ಮತ್ತು ಖಾದಿ ಮತ್ತು ಗ್ರಾಮ ಕೈಗಾರಿಕಾ ಸಮಿತಿಗಳಲ್ಲಿ ಈ ರ್ಯಾಂಕಿಂಗ್‌ ನಿಯಮ ಜಾರಿಗೆ ತರುವ ಸುಳಿವು ನೀಡಿದ್ದಾರೆ. ರ್ಯಾಂಕಿಂಗ್‌ ಸಿಸ್ಟಮ್‌ ಮೂಲಕ ತಮ್ಮ ಕ್ಷೇತ್ರಗಳಲ್ಲಿ ಶ್ರೇಷ್ಠತೆ ಸಾಧಿಸುವ ಸಹಕಾರಿ ಸಂಸ್ಥೆಗಳನ್ನು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳೊಂದಿಗೆ ಗುರುತಿಸಲಾಗುತ್ತದೆ. ಹೆಚ್ಚುವರಿಯಾಗಿ, ಶ್ರೇಯಾಂಕಗಳು ಸಹಕಾರಿ ಸಂಸ್ಥೆಗಳಿಗೆ ಸಹಕಾರಿ ಬ್ಯಾಂಕ್‌ಗಳಿಂದ ಹೆಚ್ಚು ಸಾಲಗಳನ್ನು ಪರಿಣಾಮಕಾರಿಯಾಗಿ ಪಡೆಯಲು ಸಹಾಯ ಮಾಡುತ್ತದೆ. ಸಹಕಾರಿ ಸಚಿವಾಲಯದ ನಿರಂತರ ಪ್ರಯತ್ನಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ‘ಸಹಕಾರದಿಂದ…

Read More

ಕೇಂದ್ರ ಸಹಕಾರ ಸಚಿವ ಅಮಿತ್‌ ಷಾ ಘೋಷಣೆ ನವದೆಹಲಿ: ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ವಿಮಾ ಸೌಲಭ್ಯ ಒದಗಿಸಲು ಸರ್ಕಾರದಿಂದಲೇ ಕೋ ಆಪರೇಟಿವ್‌ ವಿಮಾ ಕಂಪನಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಷಾ ಲೋಕಸಭೆಯಲ್ಲಿ ಘೋಷಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಹಕಾರಿ ಕ್ಷೇತ್ರದ ವಲಯದೊಳಗೆ ವಿಮಾ ಸೇವೆಗಳನ್ನು ಸುಗಮಗೊಳಿಸಲು ಸಹಕಾರಿ ವಿಮಾ ಕಂಪನಿಯ ಸ್ಥಾಪನೆಯಿಂದ ಲಕ್ಷಾಂತರ ಜನರಿಗೆ ಉಪಯೋಗವಾಗಲಿದೆ. ಪ್ರಸ್ತಾಪಿತ ಹೊಸ ಸಹಕಲಾರಿ ವಿಮಾ ಕಂಪನಿಯು ಸಹಕಾರಿ ಸಂಸ್ಥೆಗಳಿಗೆ ಸೂಕ್ತವಾದ ವಿಮಾ ಪರಿಹಾರಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉತ್ತಮ ರಿಸ್ಕ್‌ ಕವರೇಜ್‌ ಮತ್ತು ಸಿಬ್ಬಂದಿಗಳಿಗೆ ಆರ್ಥಿಕ ಭದ್ರತೆಯನ್ನು ಇದು ಖಚಿತಪಡಿಸುತ್ತದೆ ಎಂದು ಅಮಿತ್‌ ಷಾ ತಿಳಿಸಿದರು. ಪ್ರಸ್ತಾಪಿತ ಸಹಕಾರಿ ವಿಮಾ ಕಂಪನಿಯು ಖಾಸಗಿ ವಲಯದ ವಿಮಾ ಕ್ಷೇತ್ರದವರ ಜೊತೆ ಸ್ಪರ್ಧೆ ನೀಡಲಿದೆ ಮತ್ತು ಈ ಉದ್ಯಮದಲ್ಲಿ ಪ್ರಮುಖ ಕಂಪನಿಯಾಗಿ ಹೊರಹೊಮ್ಮುವ ನಿರೀಕ್ಷೆಯಿದೆ ಎಂದು ಅಮಿತ್‌ ಷಾ ಹೇಳಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ:…

Read More

ಭಾರತದ ಮೊತ್ತಮೊದಲ ಸಹಕಾರಿ ವಿವಿ ಸ್ಥಾಪನೆಗೆ ಸಂಸತ್‌ ಅಸ್ತು ನವದೆಹಲಿ: ಭಾರತದ ಮೊದಲ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಯ ನಿಟ್ಟಿನಲ್ಲಿ ಬುಧವಾರ ಲೋಕಸಭೆಯಲ್ಲಿ ತ್ರಿಭುವನ್‌ ಸಹಕಾರಿ ವಿಶ್ವವಿದ್ಯಾಲಯ ಮಸೂದೆ 2025ನ್ನು ಅಂಗೀಕರಿಸಲಾಗಿದೆ. ಗುಜರಾತ್‌ನಲ್ಲಿ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್‌ಮೆಂಟ್ ಆನಂದ್ (ಐಆರ್‌ಎಂಎ) ಅನ್ನು ವಿಶ್ವವಿದ್ಯಾಲಯವಾಗಿ ಸ್ಥಾಪಿಸುವ ಗುರಿಯನ್ನು ಹೊಂದಿರುವ “ತ್ರಿಭುವನ್” ಸಹಕಾರಿ ವಿಶ್ವವಿದ್ಯಾಲಯ ಮಸೂದೆಯು ಅಂಗೀಕಾರವಾಗುವುದರೊಂದಿಗೆ ದೇಶದ ಮೊದಲ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಗೆ ಅಡಿಗಲ್ಲು ಹಾಕಿದಂತಾಗಿದೆ. ಬುಧವಾರ ಸಂಜೆ ಮಸೂದೆಯ ಅಂಗೀಕಾರವನ್ನು ಘೋಷಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಇದು ಭಾರತದ ಸಹಕಾರಿ ಕ್ಷೇತ್ರದಲ್ಲಿ ಪ್ರಮುಖ ಸಾಧನೆ ಎಂದು ಅಭಿಪ್ರಾಯಪಟ್ಟರು. https://chat.whatsapp.com/EbVKVnWB6rlHT1mWtsgbch ಇದು ಗ್ರಾಮೀಣ ಆರ್ಥಿಕತೆ, ಸ್ವ-ಉದ್ಯೋಗ ಮತ್ತು ಸಣ್ಣ ಉದ್ಯಮಗಳನ್ನು ಬಲಪಡಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಮಸೂದೆಯ ಚರ್ಚೆಯ ಸಂದರ್ಭದಲ್ಲಿ, ಮಸೂದೆ ಅಂಗೀಕಾರವಾದ ನಂತರ, “ಇದು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತದೆ, ಸ್ವ-ಉದ್ಯೋಗ ಮತ್ತು ಸಣ್ಣ ಉದ್ಯಮಗಳು ಅಭಿವೃದ್ಧಿಗೊಳ್ಳುತ್ತದೆ, ಸಾಮಾಜಿಕ ಸೇರ್ಪಡೆಯೂ ಹೆಚ್ಚಾಗುತ್ತದೆ ಮತ್ತು ಸಂಶೋಧನೆಯಲ್ಲಿ ಹೊಸ…

Read More

ಲೋಕಸಭೆಯಲ್ಲಿ ಸಹಕಾರ ಸಚಿವ ಅಮಿತ್‌ ಷಾ ಮಾಹಿತಿ ನವದೆಹಲಿ: ಕೇಂದ್ರ ಸರ್ಕಾರವು ಸಹಕಾರಿ ಚಳುವಳಿಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಆರಂಭಿಸಿದ ಪ್ರಯತ್ನಗಳಿಂದಾಗಿ ಕಳೆದ ಜನವರಿ ತಿಂಗಳ ಅಂತ್ಯಕ್ಕೆ 12,957 ಹೊಸ ಸಹಕಾರ ಸಂಸ್ಥೆಗಳು ನೋಂದಣಿಯಾಗಿವೆ. ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರದ ವ್ಯಾಪ್ತಿಯನ್ನು ತಳಮಟ್ಟಕ್ಕೆ ವಿಸ್ತರಿಸುವ ಗುರಿಯನ್ನು ಹೊಂದಿದ್ದು, ಈ ಉಪಕ್ರಮದ ಭಾಗವಾಗಿ 2023ರ ಫೆಬ್ರವರಿ 15ರಂದು ಗ್ರಾಮಗಳು ಮತ್ತು ಪಂಚಾಯತ್‌ಗಳಲ್ಲಿ ಹೊಸ ಬಹೂಪಯೋಗಿ ಪ್ರಾಥಮಿಕ ಕೃಷಿ ಸಾಲ ಸಂಘಗಳು (M-PACS), ಡೈರಿ ಸಹಕಾರ ಸಂಘಗಳು ಮತ್ತು ಮೀನುಗಾರಿಕೆ ಸಹಕಾರ ಸಂಘಗಳನ್ನು ಸ್ಥಾಪಿಸಲು ಸಮಗ್ರ ಯೋಜನೆಯನ್ನು ಅನುಮೋದಿಸಲಾಯಿತು ಎಂದು ಕೇಂದ್ರ ಸಹಕಾರ ಸಚಿವ ಅಮಿತ್‌ ಷಾ ಹೇಳಿದರು. https://chat.whatsapp.com/EbVKVnWB6rlHT1mWtsgbch ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಅಮಿತ್‌ ಷಾ, ಸರ್ಕಾರವು ಸಹಕಾರಿ ಚಳುವಳಿಯನ್ನು ಬಲಪಡಿಸುವ ಪ್ರಯತ್ನಗಳನ್ನು ತೀವ್ರಗೊಳಿಸಿರುವ ಬಗ್ಗೆ ಮಾಹಿತಿ ನೀಡಿದರು. ಈ ಐದು ವರ್ಷಗಳ ಯೋಜನೆಯು ಡೈರಿ ಮೂಲಸೌಕರ್ಯ ಅಭಿವೃದ್ಧಿ ನಿಧಿ (DIDF), ಡೈರಿ ಅಭಿವೃದ್ಧಿಗಾಗಿ ರಾಷ್ಟ್ರೀಯ ಕಾರ್ಯಕ್ರಮ (NPDD) ಮತ್ತು ಪ್ರಧಾನಮಂತ್ರಿ…

Read More

ಉಚಿತ ನೇತ್ರ ತಪಾಸಣೆ, ದಂತ ತಪಾಸಣೆ ಚಿಕಿತ್ಸಾ ಶಿಬಿರದಲ್ಲಿ ವೀಣಾ ಮಂಗಳ ಶ್ಲಾಘನೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಕೆ.ವಿ.ಕೆ. ಸೇವಾ ಸಮಿತಿ ಕಸಿಹಿತ್ಲು ಜಪ್ಪಿನಮೊಗರು, ಲಯನ್ಸ್ ಕ್ಲಬ್ ಕುಡ್ಲ, ಲಯನ್ಸ್ ಕ್ಲಬ್ ಮಂಗಳೂರು, ಪಂಪ್‌ವೆಲ್, ಕಲ್ಪವೃಕ್ಷ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಜಂಟಿ ಆಶ್ರಯದಲ್ಲಿ ಸಮುದಾಯ ದಂತ ಆರೋಗ್ಯ ವಿಭಾಗ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದ ನೆರವಿನಿಂದ ಉಚಿತ ದಂತ ತಪಾಸಣೆ ಮತ್ತು ನೇತ್ರ ತಪಾಸಣಾ ಶಿಬಿರ ಕಸಿಹಿತ್ಲು ಕೆ.ವಿ.ಕೆ ಮೈದಾನದಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ನಿಕಟಪೂರ್ವ ಕಾರ್ಪೋರೇಟರ್, ಕೆ.ವಿ.ಕೆ. ಸೇವಾ ಸಮಿತಿ ಅಧ್ಯಕ್ಷೆ ವೀಣಾ ಮಂಗಳ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯದ ಕಾಳಜಿಗಾಗಿ ನಿರಂತರ ಆರೋಗ್ಯ ಶಿಬಿರ ಆಯೋಜಿಸುತ್ತಾ ಬರುತ್ತಿರುವುದು…

Read More

ಶಿಕಾರಿಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮತ್ತು ಮಾರಾಟ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಕಾರ್ಯಕ್ರಮ ಶಿವಮೊಗ್ಗ: ನ್ಯಾಶನಲ್‌ ಸೆಂಟರ್‌ ಫಾರ್‌ ಕೋ ಆಪರೇಟಿವ್‌ ಎಜುಕೇಶನ್‌(ಎನ್‌ಸಿಸಿಇ), ತೋಟಗಾರಿಕಾ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮತ್ತು ಮಾರಾಟ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಎರಡು ದಿನಗಳ ನಾಯಕತ್ವ ಅಭಿವೃದ್ದಿ ತರಬೇತಿ ಹಾಗೂ ಒಂದು ದಿನದ ಅಧ್ಯಯನ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. https://chat.whatsapp.com/EbVKVnWB6rlHT1mWtsgbch ಶಿಕಾರಿಪುರ ಅರ್ಬನ್‌ ಬ್ಯಾಂಕ್‌ನ ರಜತ ಭವನದಲ್ಲಿ ಹಮ್ಮಿಕೊಂಡ ತರಬೇತಿ ಶಿಬಿರವನ್ನು ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ ಅಧ್ಯಕ್ಷ, ಸಹಕಾರ ರತ್ನ ಡಾ.ಬಿ.ಡಿ.ಭೂಕಾಂತ್‌ ಉದ್ಘಾಟಿಸಿದರು. ತೋಟಗಾರಿಕಾ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ ಅಧ್ಯಕ್ಷ ಸಂಗಪ್ಪ ಎಚ್‌ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ಸಹಕಾರ…

Read More

ಮಂಗಳೂರು: ಬಡವರ ಬ್ಯಾಂಕ್ ಖಾತೆಗಳನ್ನು ಗುರಿಯಾಗಿಸಿಕೊಂಡು ಖಾತೆಯ ವಿವರಗಳನ್ನು ವಂಚಕರಿಗೆ ನೀಡಿ ಆನ್‌ಲೈನ್ ವಂಚನೆ ಎಸಗುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ತಹಶೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್ (28) ಮತ್ತು ರಾಮದೇವ್ ಗಲ್ಲಿಯ ಅನೂಪ್ ಕಾರೇಕರ್ (42) ಬಂಧಿತರು. https://chat.whatsapp.com/EbVKVnWB6rlHT1mWtsgbch ಸೈಬರ್ ಅಪರಾಧ ಪ್ರಕರಣದ ತನಿಖೆಯ ಸಮಯದಲ್ಲಿ, ಪೊಲೀಸರು ಅಮಾಯಕರ ಬ್ಯಾಂಕ್ ಖಾತೆಗಳನ್ನು ದುರುಪಯೋಗಪಡಿಸಿಕೊಳ್ಳುವ ಇಬ್ಬರ ಯೋಜನೆಯನ್ನು ಬಹಿರಂಗಪಡಿಸಿದರು. ಆರೋಪಿಗಳು ಬಡ ವ್ಯಕ್ತಿಗಳಿಗೆ ಸಣ್ಣ ಪ್ರಮಾಣದ ಹಣ ನೀಡುವ ಮೂಲಕ ಬ್ಯಾಂಕ್ ಖಾತೆ ತೆರೆಯಲು ಮನವೊಲಿಸಿ, ನಂತರ ಆನ್‌ಲೈನ್ ವ್ಯವಹಾರದ ನೆಪದಲ್ಲಿ ಖಾತೆಯ ವಿವರಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಹಸ್ತಾಂತರಿಸುತ್ತಿದ್ದರು. ವಂಚಕರು ಈ ಖಾತೆಗಳನ್ನು ಬಳಸಿಕೊಂಡು ವೀಡಿಯೊ ಕರೆಗಳು ಮತ್ತು ಡಿಜಿಟಲ್ ಬಂಧನಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ಒಮ್ಮೆ ಅವರ ಬಲೆಗೆ ಬಿದ್ದ ನಂತರ, ಅವರನ್ನು ಈ ಅನುಮಾನಾಸ್ಪದ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಒತ್ತಾಯಿಸಲಾಯಿತು. ಪುತ್ತೂರಿನ ರಾಧಾಕೃಷ್ಣ ನಾಯಕ್ ಎಂಬವರಿಗೆ ಸೈಬರ್ ವಂಚಕರು ವೀಡಿಯೊ ಕರೆ ಮಾಡಿ ಹಣ…

Read More

ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್‌ ಮ್ಯಾನೇಜಿಂಗ್ ಟ್ರಸ್ಟಿ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಹೇಳಿಕೆ ಮಂಗಳೂರು: ನವೋದಯ ಸ್ವಸಹಾಯ ಗುಂಪುಗಳು ದೇಶಕ್ಕೇ ಮಾದರಿಯಾಗಿ ರಚನೆಯಾಗಿ ಕೆಲಸ ಮಾಡುತ್ತಿದ್ದು ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ‘ಸಹಕಾರ ರತ್ನ’ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್‌ ವತಿಯಿಂದ ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ, ನವೋದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ಹಿಂದಿನ ಕಾಲದಲ್ಲಿ ಹೊರಗಿನ ಕಾರ್ಯಕ್ರಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಅತ್ಯಂತ ಕಡಿಮೆಯಾಗಿತ್ತು. ಮಹಿಳೆಯರನ್ನು ಪುರುಷರಿಗೆ ಸಮಾನವಾಗಿ ಬೆಳೆಸುವ ಚಿಂತನೆ 25 ವರ್ಷಗಳ ಹಿಂದೆ ಮೂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನವೋದಯ ಸ್ವಸಹಾಯ ಗುಂಪಿನ ಉಗಮವಾಯಿತು. 2000ರಲ್ಲಿ ಕಾರ್ಕಳದಲ್ಲಿ…

Read More

ಗ್ರಾಮೀಣ ಸಾಲ ವಿತರಣೆಗೆ ಮಾದರಿಯಾಗಿ ಕಾರ್ಯ: ಆರ್‌ಬಿಐ ಕೇಂದ್ರ ಮಂಡಳಿಯ ನಿರ್ದೇಶಕ ಸತೀಶ್ ಮರಾಠೆ ಅಭಿಪ್ರಾಯ ನವದೆಹಲಿ: ಕೇರಳದ ಜಿಲ್ಲಾ ಸಹಕಾರಿ ಬ್ಯಾಂಕ್‌ಗಳನ್ನು ರಾಜ್ಯ ಸಹಕಾರಿ ಬ್ಯಾಂಕ್‌ನಲ್ಲಿ ವಿಲೀನಗೊಳಿಸುವ ಮೂಲಕ ರೂಪುಗೊಂಡ ಕೇರಳ ಬ್ಯಾಂಕಿನ ಯಶಸ್ಸನ್ನು ಸಹಕಾರಿ ವಲಯದಲ್ಲಿ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಈ ಪ್ರಯೋಗ ಯಶಸ್ವಿಯಾದರೆ, ಅದು ಗ್ರಾಮೀಣ ಸಾಲ ವಿತರಣೆಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಕೇಂದ್ರ ಮಂಡಳಿ ನಿರ್ದೇಶಕ ಸತೀಶ್ ಮರಾಠೆ ಹೇಳಿದರು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಕೇರಳ ಬ್ಯಾಂಕಿನ ನಿರ್ದೇಶಕ ಮಂಡಳಿ ಮತ್ತು ನಿರ್ವಹಣಾ ಮಂಡಳಿಯ ಜಂಟಿ ಸಭೆಯಲ್ಲಿ ಮಾತನಾಡಿದ ಅವರು, ಕೇರಳ ಬ್ಯಾಂಕ್ ಒಂದು ಲಕ್ಷಕ್ಕೂ ಹೆಚ್ಚು ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳಿಗೆ ಸಾಲಗಳನ್ನು ವಿತರಿಸಿದೆ. ಗ್ರಾಮೀಣ ಆರ್ಥಿಕ ಬೆಳವಣಿಗೆಯನ್ನು ಬೆಂಬಲಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ. ಕೃಷಿ ಸಾಲಗಳು ಬ್ಯಾಂಕಿನ ಒಟ್ಟು ಸಾಲ ಬಂಡವಾಳದ 27% ರಷ್ಟಿದ್ದು, ಕೃಷಿ ವಲಯಕ್ಕೆ ಅದರ ಬದ್ಧತೆಯನ್ನು ಪ್ರದರ್ಶಿಸುತ್ತವೆ. ಕೃಷಿ ಮತ್ತು ಕೃಷಿಯೇತರ ವಲಯಗಳಲ್ಲಿ ಗ್ರಾಮೀಣ…

Read More