Author: admin
ಬ್ಯಾಂಕ್ ಕೇವಲ ವ್ಯಾವಹಾರಿಕ ಕ್ಷೇತ್ರವಾಗದೆ ಸಾಮಾಜಿಕ ಕಾರ್ಯದಲ್ಲೂ ಭಾಗಿಯಾಗಿರುವುದು ಶ್ಲಾಘನೀಯ: ಲಕ್ಷ್ಮೀನಾರಾಯಣ ಆಸ್ರಣ್ಣ ಅಭಿಪ್ರಾಯ ಮಂಗಳೂರು: ತಾನು ಬದುಕುವುದರ ಜೊತೆಗೆ ಮತ್ತೊಬ್ಬರಿಗೂ ಬದುಕು ಕಲ್ಪಿಸುವ ವ್ಯವಸ್ಥೆ ಸಮಾಜದಲ್ಲಿ ಬರಬೇಕು. ಬ್ಯಾಂಕ್ಗಳು ಕೇವಲ ವ್ಯಾವಹಾರಿಕ ಕ್ಷೇತ್ರಕ್ಕಷ್ಟೇ ಸೀಮಿತವಾಗದೆ ಸಾಮಾಜಿಕ ಕಾರ್ಯದಲ್ಲೂ ತೊಡಗಿಕೊಳ್ಳಬೇಕು. ಎಸ್.ಕೆ ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯು ಈ ಧ್ಯೇಯದಂತೆ ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟು ಬದುಕು ಕಲ್ಪಿಸಿಕೊಟ್ಟಿದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು. https://chat.whatsapp.com/EbVKVnWB6rlHT1mWtsgbch ಕಿನ್ನಿಗೋಳಿ ಉಲ್ಲಂಜೆಯ ವೀಣಾ ಆಚಾರ್ಯ ಎಂಬುವವರಿಗೆ ಎಸ್.ಕೆ.ಗೋಲ್ಡ್ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಹಮ್ಮಿಕೊಂಡ ಗೃಹ ನಿರ್ಮಾಣ ಯೋಜನೆಯಡಿಯಲ್ಲಿ ನಿರ್ಮಾಣವಾದ ನೂತನ ಮನೆಯನ್ನು ಮನೆಯವರಿಗೆ ಸ್ತಾಂತರಿಸಿ ಮಾತನಾಡಿದರು. ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಫಾಲ್ಕೆ ಬಾಬುರಾಯ ಆಚಾರ್ಯ ಅವರು ಅಂದು ಬ್ಯಾಂಕ್ ಸ್ಟಾಪಿಸಿ ದೊಡ್ಡ ಸಾಧನೆ ಮಾಡಿದ್ದು, ಇಂದು ಪ್ರತಿಷ್ಠಿತ ಬ್ಯಾಂಕ್ ಆಗಿ ಮುಂದುವರಿಯುತ್ತಿದೆ ಎಂದು ಹೇಳಿದರು. ಸೊಸೈಟಿಯ ಅಧ್ಯಕ್ಷ ಉಪೇಂದ್ರ ಆಚಾರ್ಯ…
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಕಾರ್ಯಕ್ರಮ ಮಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ಮಂಗಳೂರಿನ ಶ್ರೀನಿವಾಸ ಹೋಟೆಲ್ನಲ್ಲಿ ಶನಿವಾರ ಆಯೋಜಿಸಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಂಗಳೂರಿನ ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿಯವರು ಸೈಬರ್ ಕ್ರೈಂ ಬಗ್ಗೆ ಜಾಗೃತಿ ಮೂಡಿಸಿದರು. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಗೀತಾ ಕುಲಕರ್ಣಿ, ಮೂರು ರೀತಿಯಲ್ಲಿ ಸೈಬರ್ ಕ್ರೈಂ ಜಾಲಕ್ಕೆ ಸಿಲುಕಬಹುದು. ಇದರಿಂದ ಹೊರಬರಲು ನಮ್ಮಲ್ಲಿ ಸ್ವಯಂ ಜಾಗೃತಿಯಾಗಬೇಕು ಎಂದು ಎಚ್ಚರಿಕೆ ನೀಡಿದರು. ಮೊದಲನೆಯದಾಗಿ ನಮಗೆ ಪರಿಚಯವಿಲ್ಲದ ನಂಬರ್ನಿಂದ ಬರುವ ಯಾವುದೇ ವಿಡಿಯೋ ಕಾಲ್ಗೆ ಉತ್ತರಿಸುವ ಅಥವಾ ಅದನ್ನು ಅಟೆಂಡ್ ಮಾಡುವ ಕಾರ್ಯಕ್ಕೆ ನಾವು ಸಿಲುಕಬಾರದು. ಅಪರಿಚಿತರಿಂದ ಬರುವ ಯಾವುದೇ ವಿಡಿಯೋ ಕಾಲ್ ನಮ್ಮನ್ನು ಮೋಸದ ಜಾಲಕ್ಕೆ ಸಿಲುಕಿಸಬಹುದು ಎಂದು ಎಚ್ಚರಿಕೆ ನೀಡಿದ ಗೀತಾ ಕುಲಕರ್ಣಿಯವರು ಎರಡನೆಯದಾಗಿ ಬ್ಯಾಂಕ್ನಿಂದ ಕೆವೈಸಿ ಅಪ್ಡೇಟ್ ನೆಪದಲ್ಲಿ ಬರುವ ಕಾಲ್ಗಳಿಗೆ ಉತ್ತರಿಸಲು ಹೋಗಬೇಡಿ ಎಂದು ಎಚ್ಚರಿಸಿದರು. ಬ್ಯಾಂಕ್ನಿಂದ ಕೆವೈಸಿ ಅಪ್ಡೇಟ್ಗಾಗಿ ಯಾರೂ ಕರೆ…
ಸಂಸ್ಥೆಯ ವಜ್ರಮಹೋತ್ಸವ ಆಚರಣೆಗೆ ವಿಶೇಷ ಕಳೆ ಕಟೀಲು ಸಮೀಪದ ಉಲ್ಲಂಜೆಯಲ್ಲಿ ನಿರ್ಮಾಣ ಮಂಗಳೂರು: ಠೇವಣಿ ಸಂಗ್ರಹಿಸುವುದು, ಸಾಲ ವಿತರಿಸುವುದು, ಸಾಲ ಮರುಪಾವತಿಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಆರೋಗ್ಯ, ರಕ್ತದಾನ ಶಿಬಿರಗಳಂತಹ ಆರ್ಥಿಕ ಚಟುವಟಿಕೆಗಳಲ್ಲೇ ನಿರತರಾಗಿರುವ ಕೋ-ಆಪರೇಟಿವ್ ಸೊಸೈಟಿಗಳು ಕೂಡ ತಮ್ಮ ವಿಶೇಷ ಕಾರ್ಯಕ್ರಮಗಳಿಗೆ ಮಾನವೀಯ ಸ್ಪರ್ಶ ಹೇಗೆ ಕೊಡಬಲ್ಲವು ಎಂಬುದಕ್ಕೆ ಮಂಗಳೂರಿನ ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ನಿದರ್ಶನ ಕೊಟ್ಟಿದೆ. ವಿಭಿನ್ನ ಯೋಚನೆ, ಯೋಜನೆಗಳನ್ನು ಕಾರ್ಯಗತಗೊಳಿಸಿದರೆ ಜನರು ಗುರುತಿಸುವ ಕೆಲಸ ಮಾಡಬಹುದು ಎಂಬುದನ್ನು ಎಸ್.ಕೆ.ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಸಾಧಿಸಿ ತೋರಿಸಿದ್ದು, ತಮ್ಮ ಸಂಸ್ಥೆಯ ವಜ್ರ ಮಹೋತ್ಸವ ಆಚರಣೆಯ ಶುಭ ಸಂದರ್ಭದಲ್ಲಿ ಬಡ ಮಹಿಳೆಯೊಬ್ಬರಿಗೆ ಕಿನ್ನಿಗೋಳಿ ಸಮೀಪದ ಮೆನ್ನಬೆಟ್ಟು ಉಲ್ಲಂಜೆಯಲ್ಲಿ ಮನೆ ನಿರ್ಮಾಣ ಮಾಡಿಕೊಟ್ಟಿದೆ. https://chat.whatsapp.com/EbVKVnWB6rlHT1mWtsgbch ಎಸ್.ಕೆ.ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯು ಕ್ರಿಯಾಶೀಲ ವ್ಯವಸ್ಥಾಪನೆ, ದಕ್ಷ ಆಡಳಿತ ನಿರ್ವಹಣೆಯಿಂದ ಹೆಸರು ವಾಸಿಯಾಗಿದೆ. ಎರಡು ಬಾರಿ ರಾಜ್ಯದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ, ನಾಲ್ಕು ಬಾರಿ ಜಿಲ್ಲೆಯ…
ನವದೆಹಲಿ: ಕೇರಳ ರಾಜ್ಯವನ್ನು ಹೊರತುಪಡಿಸಿ ದೇಶದ 35 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಸಹಕಾರ ಸಂಘಗಳ ನೋಂದಣಿ ಕಚೇರಿ (ಆರ್ಒಸಿ) ಗಣಕೀಕರಣಕ್ಕೆ ಆಸಕ್ತಿ ತೋರಿಸಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಈ ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಂದ ಸಚಿವಾಲಯವು ಪ್ರಸ್ತಾವನೆಗಳನ್ನು ಪಡೆದುಕೊಂಡಿವೆ ಮತ್ತು ಯೋಜನೆಯನ್ನು ಸುಗಮಗೊಳಿಸಲು 18.22 ಕೋಟಿ ರೂ. (ಅಂದಾಜು) ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಸಹಕಾರ ಸಂಘಗಳ ಕೇಂದ್ರ ನೋಂದಣಿ (ಸಿಆರ್ಸಿಎಸ್) ಕಚೇರಿಯ ಡಿಜಿಟಲ್ ರೂಪಾಂತರದೊಂದಿಗೆ, ನೋಂದಣಿ, ಉಪ-ಕಾನೂನುಗಳ ತಿದ್ದುಪಡಿ, ವಾರ್ಷಿಕ ರಿಟರ್ನ್ಸ್ ಸಲ್ಲಿಕೆ, ಶಾಖೆ ತೆರೆಯುವುದು, ಮಾರಾಟ ಅಧಿಕಾರಿಗಳ ನೇಮಕಾತಿ ಮತ್ತು ಸಹಕಾರಿ ಶಿಕ್ಷಣ ನಿಧಿ (ಸಿಇಎಫ್) ಮತ್ತು ಸಹಕಾರಿ ಪುನರ್ವಸತಿ, ಪುನರ್ನಿರ್ಮಾಣ ಮತ್ತು ಅಭಿವೃದ್ಧಿ ನಿಧಿ (ಸಿಆರ್ಆರ್ಡಿಎಫ್)ಗೆ ಆನ್ಲೈನ್ ಪಾವತಿಗಳಂತಹ ಪ್ರಮುಖ ಕಾರ್ಯಗಳನ್ನು ಈಗ ಸುಧಾರಿತ ಆನ್ಲೈನ್ ಪೋರ್ಟಲ್ ಮೂಲಕ ಸರಾಗವಾಗಿ ನಿರ್ವಹಿಸಲಾಗುತ್ತಿದೆ. ಸಿಆರ್ಸಿಎಸ್ ಕಚೇರಿಯ ಗಣಕೀಕರಣವು ಯಶಸ್ವಿಯಾಗಿ ಪೂರ್ಣಗೊಂಡಿದೆ ಮತ್ತು ಅಧಿಕೃತ ಸಿಆರ್ಸಿಎಸ್ ಪೋರ್ಟಲ್ (www.crcs.gov.in) ಅನ್ನು ಆಗಸ್ಟ್ 6, 2023ರಂದು ಪ್ರಾರಂಭಿಸಲಾಗಿದೆ. ನಿಮ್ಮ…
ನವೋದಯ ಟ್ರಸ್ಟ್ ರಜತ ಸಂಭ್ರಮ ಮಂಗಳೂರು: ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆ ಮೂಡಿಸುತ್ತಿರುವ ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ನಿರಂತರ ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿದೆ. ಮಹಿಳೆಯರಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಉನ್ನತಿಗೆ ಪ್ರೇರಕ ಶಕ್ತಿಯಾಗಿರುವ ನವೋದಯ ಟ್ರಸ್ಟ್ 25 ವರ್ಷ ಯಶಸ್ವಿಯಾಗಿ ಪೂರೈಸಿ, ರಜತ ಸಂಭ್ರಮದಲ್ಲಿದೆ. https://chat.whatsapp.com/EbVKVnWB6rlHT1mWtsgbch ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭ ಮಾರ್ಚ್ 24ರ ಸೋಮವಾರ ಬೆಳಗ್ಗೆ 11ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿರುವರು. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಿಸಲಿರುವರು. ವಿಧಾನ ಪರಿಷತ್ ಸದಸ್ಯ ಐವನ್…
ಮಾರ್ಚ್ 24, 25ಕ್ಕೆ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನವದೆಹಲಿ: ಬ್ಯಾಂಕ್ ಉದ್ಯೋಗಿಗಳು ಮಾರ್ಚ್ 24 ಮತ್ತು 25ರಂದು ರಾಷ್ಟ್ರವ್ಯಾಪಿ ಮುಷ್ಕರ ಹಮ್ಮಿಕೊಂಡಿರುವ ಕಾರಣ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಂದ್ ಆಗಲಿದ್ದು, ಹಣಕಾಸು ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಮಾರ್ಚ್ 22, 23ರಂದು ನಾಲ್ಕನೇ ಶನಿವಾರ ಮತ್ತು ಭಾನುವಾರದ ರಜೆ ಇರಲಿದ್ದು, 24 ಮತ್ತು 25ರಂದು ನೌಕರರು ಮುಷ್ಕರ ಹೂಡಿದರೆ ಸತತ ನಾಲ್ಕು ರಜೆಗಳಿಂದಾಗಿ ಸೇವೆಯಲ್ಲಿ ವ್ಯತ್ಯಯವಾಗಲಿದೆ. https://chat.whatsapp.com/EbVKVnWB6rlHT1mWtsgbch ಬ್ಯಾಂಕ್ ಉದ್ಯೋಗಿಗಳ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಮಾರ್ಚ್ 24, 25ರಂದು ಮುಷ್ಕರ ನಡೆಯುವ ಸಾಧ್ಯತೆ ದಟ್ಟವಾಗಿದೆ. ಭಾರತೀಯ ಬ್ಯಾಂಕ್ಗಳ ಸಂಘಟನೆ ಐಬಿಎ ಜೊತೆ ನಡೆದ ಮಾತುಕತೆಯಲ್ಲಿ ಯಾವುದೇ ಭರವಸೆ ಮೂಡದ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್ಗಳ ಸಂಯುಕ್ತ ವೇದಿಕೆಯು (UFBU- United Forum for Bank Unions) ರಾಷ್ಟ್ರವ್ಯಾಪಿ ಮುಷ್ಕರದ ನಿರ್ಧಾರವನ್ನು ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಒಂಬತ್ತು ಸರ್ಕಾರಿ ಬ್ಯಾಂಕ್ ಕಾರ್ಮಿಕರ ಒಕ್ಕೂಟಗಳು ಸೇರಿ ರಚಿಸಲಾಗಿರುವ ಯುನೈಟೆಡ್ ಫೋರಂ ಮುಷ್ಕರದ ನಿರ್ಧಾರ ಹಿಂಪಡೆಯುವುದಿಲ್ಲ…
ಶಿವಮೊಗ್ಗ: ನ್ಯಾಶನಲ್ ಸೆಂಟರ್ ಫಾರ್ ಕೋ ಆಪರೇಟಿವ್ ಎಜುಕೇಶನ್(ಎನ್ಸಿಸಿಇ), ತೋಟಗಾರಿಕಾ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮತ್ತು ಮಾರಾಟ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಎರಡು ದಿನಗಳ ನಾಯಕತ್ವ ಅಭಿವೃದ್ದಿ ತರಬೇತಿ ಹಾಗೂ ಒಂದು ದಿನದ ಅಧ್ಯಯನ ಪ್ರವಾಸ ಕಾರ್ಯಕ್ರಮ ಮಾರ್ಚ್ 22 ಮತ್ತು 23ರಂದು ಶಿಕಾರಿಪುರದ ದಿ.ಅರ್ಬನ್ ಬ್ಯಾಂಕ್ನ ರಜತ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. https://chat.whatsapp.com/EbVKVnWB6rlHT1mWtsgbch ಮಾರ್ಚ್ 22ರಂದು ಬೆಳಗ್ಗೆ 10ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ ಅಧ್ಯಕ್ಷ, ಸಹಕಾರ ರತ್ನ ಡಾ.ಬಿ.ಡಿ.ಭೂಕಾಂತ್ ಉದ್ಘಾಟಿಸಲಿದ್ದಾರೆ. ತೋಟಗಾರಿಕಾ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ ಅಧ್ಯಕ್ಷ ಸಂಗಪ್ಪ ಎಚ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಮೊಗ್ಗ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ್ ಕಲ್ಮನೆ, ಶಿವಮೊಗ್ಗ ಜಿಲ್ಲಾ ಕೇಂದ್ರ…
ಪಾರ್ಲಿಮೆಂಟ್ ಸ್ಥಾಯಿ ಸಮಿತಿ ಶಿಫಾರಸು ನವದೆಹಲಿ: ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಸಹಕಾರ ಚುನಾವಣಾ ಪ್ರಾಧಿಕಾರ ಸ್ಥಾಪಿಸಲು ಪ್ರೋತ್ಸಾಹಿಸಬೇಕು ಎಂದು ಸಹಕಾರ ಸಚಿವಾಲಯಕ್ಕೆ ಅನುದಾನ ಬೇಡಿಕೆಯ ತಮ್ಮ ಒಂಬತ್ತನೇ ವರದಿಯಲ್ಲಿ ಪಾರ್ಲಿಮೆಂಟ್ನ ಸ್ಥಾಯಿ ಸಮಿತಿ ಶಿಫಾರಸು ಮಾಡಿದೆ. https://chat.whatsapp.com/EbVKVnWB6rlHT1mWtsgbch ಸಹಕಾರ ಚುನಾವಣಾ ಪ್ರಾಧಿಕಾರ ಸ್ಥಾಪನೆಯಾದರೆ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಇತರ ಸಹಕಾರ ಸಂಘಗಳ ಚುನಾವಣೆಗಳನ್ನು ಅದು ಮೇಲ್ವಿಚಾರಣೆ ಮಾಡಲಿದೆ. ಸಹಕಾರಿ ಸಂಘಗಳಲ್ಲಿ ಪಾರದರ್ಶಕ ಮತ್ತು ನ್ಯಾಯಯುತ ಚುನಾವಣೆಗಳ ಅಗತ್ಯವನ್ನು ಗಮನಿಸಿ ಸ್ಥಾಯಿ ಸಮಿತಿಯು, ಸಹಕಾರ ಚುನಾವಣಾ ಪ್ರಾಧಿಕಾರದ ಅಗತ್ಯವನ್ನು ಒತ್ತಿ ಹೇಳಿದೆ. ಈ ಮಧ್ಯೆ ಬಹು-ರಾಜ್ಯ ಸಹಕಾರಿ ಸಂಘಗಳಿಗೆ ಚುನಾವಣೆ ನಡೆಸಲು, ಬಹು-ರಾಜ್ಯ ಸಹಕಾರಿ ಸಂಘಗಳ ಕಾಯ್ದೆ 2002ರ ಅಡಿಯಲ್ಲಿ ಸ್ವತಂತ್ರ ಸಹಕಾರಿ ಚುನಾವಣಾ ಪ್ರಾಧಿಕಾರ ಸ್ಥಾಪಿಸಿರುವ ಬಗ್ಗೆ ಸಮಿತಿ ತೃಪ್ತಿ ವ್ಯಕ್ತಪಡಿಸಿದೆ. ಮತದಾರರ ಪಟ್ಟಿಗಳ ತಯಾರಿಕೆಗೆ ಸಂಬಂಧಿಸಿದ ವಿಷಯಗಳನ್ನು ಮೇಲ್ವಿಚಾರಣೆ ಮಾಡುವುದು, ನಿರ್ದೇಶಿಸುವುದು ಮತ್ತು ನಿಯಂತ್ರಿಸುವ ಜವಾಬ್ದಾರಿಯನ್ನು ಈ ಪ್ರಾಧಿಕಾರ ಹೊಂದಿದೆ. ಬಹು-ರಾಜ್ಯ…
ಮಹಾರಾಷ್ಟ್ರದ ಮರಾಠವಾಢ ಡೈರಿ ಮುಂದಿನ ಐದು ವರ್ಷಗಳಲ್ಲಿ ಹಾಲು ಖರೀದಿ ಪ್ರಮಾಣ 11 ಲಕ್ಷ ಕಿಲೋಗ್ರಾಂಗಳಿಗೆ ಹೆಚ್ಚಿಸುವ ಮಹತ್ವಾಕಾಂಕ್ಷೆ ಮುಂಬೈ : ಮಹಿಳೆಯರದೇ ನೇತೃತ್ವದಲ್ಲಿ ಹೊಸದಾಗಿ ಆರಂಭಿಸಲಾಗಿರುವ ಮರಾಠವಾಢ ಹಾಲು ಉತ್ಪಾದಕ ಸಂಸ್ಥೆ (ಎಂಪಿಒ) ಮುಂದಿನ ಐದು ವರ್ಷಗಳಲ್ಲಿ ತನ್ನ ದೈನಂದಿನ ಹಾಲು ಖರೀದಿ ಪ್ರಮಾಣವನ್ನು 11 ಲಕ್ಷ ಕಿಲೋಗ್ರಾಂಗಳಿಗೆ ಹೆಚ್ಚಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದ್ದು, ವಾರ್ಷಿಕ ರೂ. 1,800 ಕೋಟಿ ವಹಿವಾಟು ಸಾಧಿಸುವ ಗುರಿ ಇಟ್ಟುಕೊಂಡಿದೆ. https://chat.whatsapp.com/EbVKVnWB6rlHT1mWtsgbch ಈ ಉಪಕ್ರಮ ವಿದರ್ಭ ಮತ್ತು ಮರಾಠವಾಡ ಡೈರಿ ಅಭಿವೃದ್ಧಿ ಯೋಜನೆಯ (ವಿಎಂಡಿಡಿಪಿ) ಅಧೀನದಲ್ಲಿ ನಡೆಯುತ್ತಿದೆ. 2013ರಲ್ಲಿ ಎನ್ಡಿಡಿಬಿ ಮತ್ತು ಮಹಾರಾಷ್ಟ್ರ ಸರ್ಕಾರ ಬರಪೀಡಿತ ಪ್ರದೇಶಗಳಾದ ವಿದರ್ಭ ಮತ್ತು ಮರಾಠವಾಡಾದಲ್ಲಿ ಡೈರಿ ಅಭಿವೃದ್ಧಿ ಪ್ರಾರಂಭಿಸಲು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದವು. ರೈತರಿಗೆ ಪರ್ಯಾಯ, ದೀರ್ಘಕಾಲೀನ ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವುದು ಇದರ ಗುರಿಯಾಗಿತ್ತು. ಈ ಪ್ರದೇಶಗಳಲ್ಲಿ ಸಾಂಪ್ರದಾಯಿಕ ಕೃಷಿಗಿಂತ ಹೈನುಗಾರಿಕೆ ಹೆಚ್ಚು ಸ್ಥಿರ ಆದಾಯದ ಮೂಲವನ್ನು ಒದಗಿಸುತ್ತದೆಯಾದ್ದರಿಂದ ಈ ನಿಟ್ಟಿನಲ್ಲಿ ಕೆಲಸಗಳು ಆರಂಭವಾಗಿತ್ತು.…
ಬಂಟ್ವಾಳ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗನ್ನಾಥ ಸಾಲಿಯಾನ್ ಎಚ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮನೋರಂಜನ್ ಕೆ.ಆರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಿಟರ್ನಿಂಗ್ ಅಧಿಕಾರಿ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ ಸಹಕರಿಸಿದರು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು: ಕೇಶವ ಎ., ಗೋವರ್ಧನ್ ಕುಮಾರ್ ಐ, ಭಾಸ್ಕರ ಶೆಟ್ಟಿ, ರಾಮದಾಸ್ ಶೆಣೈ ವಿ., ಮೋಹನ್ ಕೆ.ಎಸ್. ವಿಶ್ವನಾಥ ಎಂ., ತಿರುಮಲೇಶ್ವರ ಭಟ್ ಪಿ., ಜಯಂತಿ ಹೆಚ್.ರಾವ್, ಶುಭಲಕ್ಷ್ಮಿ, ದಯಾನಂದ ಆಳ್ವ ಕೆ, ಪೂವಪ್ಪ ಎಸ್., ದಿವಾಕರ ವಿ., ಸತೀಶ್ ಪಿ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
