Author: admin
ವಿಷಯಾಧಾರಿತ ತರಬೇತಿ ಕಾರ್ಯಕ್ರಮದಲ್ಲಿ ಎಚ್.ಎನ್ ರಮೇಶ್ ಕಿವಿಮಾತು ಮಂಗಳೂರು: ಯಾವುದೇ ಸಹಕಾರಿ ಸಂಸ್ಥೆಗಳು ಸಾಲಗಳನ್ನು ಕೊಡುವಾಗ ಅವುಗಳಿಗೆ ಸಾಲ ತೆಗೆದುಕೊಳ್ಳುವವರು ಕೊಡುವ ದಾಖಲೆಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಳ್ಳಬೇಕು. ಹಿಂದಿನ ವರದಿಗಳನ್ನು ಗಮನಿಸಿಕೊಳ್ಳಬೇಕು ಎಂದು ಸಹಕಾರ ಸಂಘಗಳ ದಕ್ಷಿಣ ಕನ್ನಡ ಜಿಲ್ಲಾ ಉಪನಿಬಂಧಕರಾದ ಎಚ್.ಎನ್ ರಮೇಶ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಮಂಗಳೂರಿನ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇದರ ವತಿಯಿಂದ ಮಂಗಳೂರು, ಮೂಲ್ಕಿ, ಉಳ್ಳಾಲ ಹಾಗೂ ಮೂಡುಬಿದರೆ ತಾಲೂಕಿನ ಸೌಹಾರ್ದ ಸಹಕಾರಿಗಳಿಗಾಗಿ ಆಯೋಜಿಸಿದ ವಿಷಯಾಧಾರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರಿಗೇ ಆಗಲಿ ಸಾಲ ಕೊಡುವಾಗ ಕನಿಷ್ಠ ದಾಖಲೆಗಳನ್ನು ಪಡೆದುಕೊಳ್ಳಲೇಬೇಕು. ಸಾಲ ತೆಗೆದುಕೊಳ್ಳವವ ಅದನ್ನು ಮರುಪಾವತಿ ಮಾಡುವಷ್ಟು ಶಕ್ತನಾಗಿದ್ದಾನೆಯೇ ಎಂದು ಗಮನಿಸಿಕೊಳ್ಳಬೇಕು. ಸಾಲ ತೆಗೆದುಕೊಳ್ಳುವವ ಮರುಪಾವತಿ ಮಾಡುವಷ್ಟು ಶಕ್ತನಲ್ಲದಿದ್ದರೆ ಮುಂದೆ ಸಮಸ್ಯೆಗೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಕಾನೂನು ಚೌಕಟ್ಟು ಬಿಗಿಯಾಗಿರುವ ಕಾರಣ ಎಲ್ಲ ಅಂಶಗಳ ಬಗ್ಗೆಯೂ ಗಮನ ಹರಿಸುವುದು ಮುಖ್ಯವಾಗುತ್ತದೆ ಎಂದು ಹೇಳಿದರು. ಈಗೀಗ…
ಹತ್ತು ವರ್ಷ: ಶತ ಶಿಬಿರ; ಆರೋಗ್ಯ ರಕ್ಷಣೆಗೆ ಆತ್ಮಶಕ್ತಿ ಸಹಕಾರಿ ಸಂಸ್ಥೆ ಕಾಳಜಿ: ಫೆ.೧ರಂದು ೧೦೦ನೇ ಬೃಹತ್ ಆರೋಗ್ಯ ಶಿಬಿರ -ಆರೋಗ್ಯ ಸೇವಾ ಸಂಗಮ ಮಂಗಳೂರು: ಜಗತ್ತು ಆಧುನಿಕ ಕಾಲಘಟ್ಟದ ನಾಗಾಲೋಟದಲ್ಲಿ ಓಡುತ್ತಿದೆ. ಆಧುನಿಕ ಸಲಕರಣೆಗಳು, ತಂತ್ರಜ್ಞಾನಗಳ ಉಪಯೋಗಗಳ ಭರಾಟೆಯಲ್ಲಿ ಮನುಷ್ಯ ಸ್ವಂತ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವ ತನಕ ಕಾಲ ಮುಂದುವರಿದಿದೆ. ಯಾವುದೇ ಒಬ್ಬ ವ್ಯಕ್ತಿ ತನಗೆ ಬೇಕಾದಷ್ಟು ಹಣ, ಯಶಸ್ಸು ಅಥವಾ ಭೌತಿಕ ಸೌಕರ್ಯಗಳನ್ನು ಹೊಂದಿದರೂ, ಆತ ಅನಾರೋಗ್ಯಕ್ಕೀಡಾದರೆ ಸಂತೋಷದ ಜೀವನ ನಡೆಸಲು ಸಾಧ್ಯವಿಲ್ಲ. ಆರೋಗ್ಯವು ಉತ್ತಮವಾಗಿದ್ದರಷ್ಟೇ ಮನುಷ್ಯ ಚೆನ್ನಾಗಿ ಅಧ್ಯಯನ ಮಾಡಲು, ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ಅಥವಾ ಯಾವುದೇ ಸವಾಲುಗಳನ್ನು ವಿಶ್ವಾಸದಿಂದ ಎದುರಿಸಲು ಶಕ್ತನಾಗುತ್ತಾನೆ. https://chat.whatsapp.com/FCEnlTkAKCC0MGPhXtX4i4 ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಕಷ್ಟದ ಕೆಲಸವೇನೂ ಅಲ್ಲ. ಪೌಷ್ಟಿಕ ಆಹಾರ ಸೇವನೆ, ನಿಯಮಿತ ದೈಹಿಕ ವ್ಯಾಯಾಮ, ಸರಿಯಾದ ವಿಶ್ರಾಂತಿ, ಸ್ವಚ್ಛ ಪರಿಸರ ಇವೆಲ್ಲವೂ ಸಿಕ್ಕರೆ ಆರೋಗ್ಯ ಚೆನ್ನಾಗಿರುತ್ತದೆ. ಆದರೆ ವರ್ತಮಾನದ ತಲ್ಲಣಗಳು ಈ ಮೇಲಿನ ಅಂಶಗಳನ್ನು ನಿಯಮಿತವಾಗಿ ಮಾಡುವುದಕ್ಕೆ ತಡೆಯೊಡ್ಡುತ್ತಲೇ…
ಮಂಗಳೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮೇಘರಾಜ್ ಜೈನ್ ಅವರು ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಟ್ರಸ್ಟಿ ಆಗಿದ್ದಾರೆ. ಉಪಾಧ್ಯಕ್ಷರಾಗಿ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ರತ್ನಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೆ ಚುನಾವಣಾ ಪ್ರಕ್ರಿಯೆ ನಡೆಯಿತು. ಚುನಾವಣಾ ಪ್ರಕ್ರಿಯೆಯನ್ನು ಸಹಾಯಕ ನಿಬಂಧಕರ ಕಚೇರಿ ಅಧೀಕ್ಷಕ ಬಿ.ನಾಗೇಂದ್ರ ಅವರು ನಡೆಸಿಕೊಟ್ಟರು. ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಡಾ। ಎಂ.ಎನ್. ರಾಜೇಂದ್ರ ಕುಮಾರ್, ವಿನಯ ಕುಮಾರ್ ಸೂರಿಂಜೆ, ರತ್ನಾಕರ ಶೆಟ್ಟಿ, ರಾಘವ ಶೆಟ್ಟಿ, ಮೋನಪ್ಪ ಶೆಟ್ಟಿ, ಸುನೀಲ್ ಕುಮಾರ್, ನಜೀರ್ ಹುಸೈನ್, ಎಂ.ಮಹೇಶ್ ಹೆಗ್ಡೆ, ಎಸ್.ರಾಜು ಪೂಜಾರಿ, ಎಂ. ವಾದಿರಾಜ ಶೆಟ್ಟಿ, ಮೇಘರಾಜ್…
ರಿಸರ್ವ್ ಬ್ಯಾಂಕ್ ಕರಡು ಮಾರ್ಗಸೂಚಿ: ಗ್ರಾಮೀಣ, ಪಟ್ಟಣ ಸಹಕಾರಿ ಬ್ಯಾಂಕುಗಳಲ್ಲಿ ಏಕರೂಪದ ಪರಿಹಾರದ ಗುರಿ ನವದೆಹಲಿ: ಪ್ರವಾಹ, ಚಂಡಮಾರುತ, ಬರ ಮತ್ತು ಇತರ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಸಾಲಗಾರರಿಗೆ ಹೊರೆಯಾಗದಂತೆ ಸಾಲ ಮರುಪಾವತಿ ಮಾಡಲು ಪರಿಹಾರ ಕ್ರಮಗಳನ್ನು ಪ್ರಸ್ತಾಪಿಸುವ ಕರಡು ಮಾರ್ಗಸೂಚಿಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಬಿಡುಗಡೆ ಮಾಡಿದೆ. ಪ್ರಸ್ತಾವಿತ ಮಾರ್ಗಸೂಚಿಗಳು ನೈಸರ್ಗಿಕ ವಿಕೋಪಗಳಾದಂಥ ಸಂದರ್ಭದಲ್ಲಿ ಮರುಪಾವತಿ ಸಾಮರ್ಥ್ಯವು ತಾತ್ಕಾಲಿಕವಾಗಿ ಪರಿಣಾಮ ಬೀರುವ ಗ್ರಾಹಕರನ್ನು ಗ್ರಾಮೀಣ, ಪಟ್ಟಣ ಸಹಕಾರಿ ಬ್ಯಾಂಕ್ಗಳಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದೆ. https://chat.whatsapp.com/FCEnlTkAKCC0MGPhXtX4i4 ಕರಡು ಮಾರ್ಗಸೂಚಿಗಳು ಗ್ರಾಮೀಣ ಸಹಕಾರಿ ಬ್ಯಾಂಕ್ಗಳು ಮತ್ತು ಪಟ್ಟಣ ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸಲಿದ್ದು, ನಿಯಂತ್ರಿತ ಘಟಕಗಳಲ್ಲಿ ಪರಿಹಾರ ಕ್ರಮಗಳಲ್ಲಿ ಹೆಚ್ಚಿನ ಏಕರೂಪತೆಯನ್ನು ತರಲು ಪ್ರಯತ್ನಿಸಲಿವೆ. ಸಾರ್ವಜನಿಕ ಸಮಾಲೋಚನೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಏಪ್ರಿಲ್ 1, 2026ರಿಂದ ಈ ಮಾರ್ಗಸೂಚಿಗಳನ್ನು ಜಾರಿಗೆ ಬರಲು ಯೋಜಿಸಲಾಗಿದೆ. ಕರಡು ಮಾನದಂಡಗಳ ಪ್ರಕಾರ, ಸಾಲ ಖಾತೆಗಳನ್ನು ಪ್ರಮಾಣಿತ ಎಂದು ವರ್ಗೀಕರಿಸಿ, ಪ್ರಕೃತಿ ವಿಕೋಪ ಸಂಭವಿಸಿದ…
ಗುರುವಾಯನಕೆರೆ: ಇಲ್ಲಿನ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 21ನೇ ನೂತನ ಶಾಖೆ ವಾಮಂಜೂರಿನಲ್ಲಿ ಆರಂಭವಾಗಲಿದ್ದು ಫೆಬ್ರವರಿ 5ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/FCEnlTkAKCC0MGPhXtX4i4 ವಾಮಂಜೂರಿನ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ನ ಒಂದನೇ ಮಹಡಿಯಲ್ಲಿ ಫೆ.5ರ ಗುರುವಾರ ಬೆಳಗ್ಗೆ 10.30ಕ್ಕೆ ಶಾಸಕರಾದ ಡಾ.ವೈ.ಭರತ್ ಶೆಟ್ಟಿಯವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಅಜಿತ್ ಜಿ.ಶೆಟ್ಟಿ ಕೋರ್ಯಾರು ಅಧ್ಯಕ್ಷತೆ ವಹಿಸಲಿದ್ದಾರೆ. ವಾಮಂಜೂರು ಚರ್ಚ್ನ ಧರ್ಮಗುರುಗಳಾದ ರೆವರೆಂಡ್ ಫಾದರ್ ಜೇಮ್ಸ್ ಡಿಸೋಜ, ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶೆಡ್ಡೆ ಮಂಜುನಾಥ ಭಂಡಾರಿ, ಮೂಡುಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎಸ್.ಶಿವರಾಮ ಮಲ್ಲಿ, ಗುರುಪುರ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಶೆಡ್ಡೆ, ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಓಂಪ್ರಕಾಶ್ ಶೆಟ್ಟಿ ವಾಮಂಜೂರು, ನಿಕಟಪೂರ್ವ ಕಾರ್ಪೊರೇಟರ್ ಹೇಮಲತಾ ರಘು ಸಾಲ್ಯಾನ್, ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್ ಜೆ.ಕರ್ಕೇರ ಸಾನದ…
ಬೆಂಗಳೂರು: ಬನವಾಸಿ ಸೌಹಾರ್ದ ಸಹಕಾರ ಸಂಘ ನಿಯಮಿತ ಅಧ್ಯಕ್ಷರಾಗಿ ಮಂಜುನಾಥ ಎನ್ ಮತ್ತು ಉಪಾಧ್ಯಕ್ಷರಾಗಿ ಬಾಬು ಎಸ್ ಕುಂಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಭಾನುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಇಬ್ಬರ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು. ಆರ್.ಎಲ್ ವಿಮಲಾ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆಗಳನ್ನು ನೆಡಸಿಕೊಟ್ಟರು. ನಿರ್ದೇಶಕರಾಗಿ ಅನಿಲ್ ಕುಮಾರ್ ಬಿ, ಚಂದ್ರಶೇಖರ ಅಕ್ಕಿ, ತುಳಸಿ ರಾಮ್ ಮೌರ್ಯ, ಡಿ.ಎಂ. ಭತ್ತದ, ಶೋಭಾರಾಣಿ ಎಂ, ರೂಪಶ್ರೀ, ಭೀಮಪ್ಪ, ಸಂಜೀವ ಕುಮಾರ್, ನಾರಾಯಣ ಸ್ವಾಮಿ ಹೆಚ್, ಸರೋಜ ಬಿ ಕೋಷ್ಠಿ, ಉಮೇಶಯ್ಯ ಎಂ ವಿ, ಮಾರೇಗೌಡ ಕೆ ಎನ್, ಶಿವಕುಮಾರ ಸ್ವಾಮಿ ಕೆ ಜಿ ಆಯ್ಕೆಯಾಗಿರುತ್ತಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಬಂಟ್ವಾಳ: ಮೆದುಳಿನ ರಕ್ತಸ್ರಾವದಿಂದ ಕೋಮಾದ ಸ್ಥಿತಿಯಲ್ಲಿ ಇದ್ದ ತನ್ನ ಅವಿವಾಹಿತ ಮಗಳ ಅಂಗಾಂಗಗಳಾದ ಹೃದಯ, ಶ್ವಾಸಕೋಶ, ಕಿಡ್ನಿ, ಲಿವರ್ ಹಾಗೂ ಕಣ್ಣುಗಳನ್ನು ದಾನ ಮಾಡುವ ದಿಟ್ಟ ನಿರ್ಧಾರ ತೆಗೆದುಕೊಂಡಿರುವ ಮಮತಾ ಶೆಟ್ಟಿಯವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವತಿಯಿಂದ ಮಂಗಳವಾರ ಸಂಘದ ಸಭಾಂಗಣದಲ್ಲಿ ಗೌರವಿಸಿ ಆರ್ಥಿಕ ನೆರವನ್ನು ನೀಡಲಾಯಿತು. https://chat.whatsapp.com/FCEnlTkAKCC0MGPhXtX4i4 ಮಗಳ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಇತರರ ಜೀವಗಳಿಗೆ ಜೀವದಾನ ನೀಡಿದ ಸಾರ್ಥಕತೆಯ, ತಾಯಿ ಹೃದಯದ ಶ್ರೀಮಂತಿಕೆಯ ಮಮತಾ ಶೆಟ್ಟಿಯವರ ಧೈರ್ಯದ ದಿಟ್ಟ ನಿರ್ಧಾರವು ಇತರರಿಗೆ ಮಾದರಿಯಾಗಿದೆ. ಇದು ಪ್ರೇರಣಾದಾಯಿ ನಡೆಯಾಗಿದ್ದು, ಇತರರಿಗೆ ಅನುಕರಣೀಯವೂ ಹೌದು. ಈ ಹೃದಯ ವೈಶಾಲ್ಯತೆಯನ್ನು ಗೌರವಿಸಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಮಮತಾ ಶೆಟ್ಟಿಯವರನ್ನು ಗೌರವಿಸಿದೆ. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ ಶೆಟ್ಟಿ, ನಿರ್ದೇಶಕರಾದ ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಶಿವ ಗೌಡ, ವೀರಪ್ಪ ಪರವ, ಜಾರಪ್ಪ…
ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾಗೇಶ್ ಕುಲಾಲ್, ಉಪಾಧ್ಯಕ್ಷರಾಗಿ ಮಾಧವ ಬಂಗೇರ ಆಯ್ಕೆ
ಸುರತ್ಕಲ್: ಇಲ್ಲಿನ ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾಗೇಶ್ ಕುಲಾಲ್, ಉಪಾಧ್ಯಕ್ಷರಾಗಿ ಮಾಧವ ಬಂಗೇರ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷ -ಉಪಾಧ್ಯಕ್ಷರ ಹಾಗೂ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ಚುನಾವಣಾಧಿಕಾರಿ ನಾಗೇಂದ್ರ ಇವರ ಸಮ್ಮುಖದಲ್ಲಿ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಿತು. ಆಯ್ಕೆ ಪ್ರಕ್ರಿಯೆ ವೇಳೆ ಸಂಘದ ನಿರ್ದೇಶಕರಾದ, ಮುದ್ದು ಮೂಲ್ಯ, ಭೋಜ ಬಂಗೇರ, ಮೋಹನ್ ಐ, ಗಂಗಾಧರ ಬಂಜನ್, ವಾಸು ಬಂಜನ್, ಲೀಲಾ ಬಂಜನ್, ಉಷಾ ಆರ್ ಬಂಗೇರ, ಮಮತಾ ಗಣೇಶ್, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮೂಲ್ಯ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ ಗೌಡ ಅಭಿಪ್ರಾಯ ಉಜಿರೆ: ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯ ಜವಾಬ್ದಾರಿ ನಮ್ಮೆಲ್ಲರ ಸಮಾನ ಹೊಣೆ. ನಾವು ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ಹಸ್ತಾಂತರಿಸಬೇಕಾದರೆ ಸ್ವಚ್ಛತೆಯ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ನಾಗರಿಕ ಭಾಗಿದಾರಿಕೆ ಬೇಕು. ಪ್ರಮುಖವಾಗಿ ಸಾಮಾಜಿಕ ಸಂಘ ಸಂಸ್ಥೆಗಳು ಸ್ವಚ್ಛತೆಯ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜಾಗೃತಿ ಮೂಡಿಸುವ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ ಗೌಡ ಶಿವಾಜಿನಗರ ಹೇಳಿದರು. https://chat.whatsapp.com/FCEnlTkAKCC0MGPhXtX4i4 ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ“ ಧ್ಯೇಯದೊಂದಿಗೆ ನಡೆದ 21ನೇ ಸ್ವಚ್ಛ ಭಾರತ್ ಶ್ರಮದಾನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡುತಿದ್ದರು. ರೋಟರಿ ಕ್ಲಬ್ ಬೆಳ್ತಂಗಡಿ ಇದರ ಕಾರ್ಯದರ್ಶಿ ಡಾ.ಎಂ.ಎಂ.ದಯಾಕರ್ ಹಸಿರು ನಿಶಾನೆ ತೋರಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಗಳ ಜೊತೆಜೊತೆಗೆ ಸ್ವಚ್ಛತೆಯಂತಹ ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ…
ಪಾಣೆಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ತಮ್ಮ ಬ್ಯಾಂಕಿಂಗ್ ಸೇವೆಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ಅದರಲ್ಲಿಯೂ ಸ್ವಚ್ಛತೆಯಂತಹ ಸವಾಲಿನ ಕಾರ್ಯವನ್ನು ಕೈಗೊಂಡು ತಮ್ಮ ಎಲ್ಲಾ ಶಾಖೆಗಳ ಪರಿಸರಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳನ್ನು ಹಾಗೂ ನಾಗರಿಕರನ್ನು ತಮ್ಮೊಂದಿಗೆ ಒಗ್ಗೂಡಿಸಿಕೊಂಡು ಸಮಾಜದಲ್ಲಿ ಸ್ವಚ್ಛತೆಯ ಅರಿವನ್ನು ಮೂಡಿಸುತ್ತಿರುವುದು ತುಂಬಾ ಸಂತಸವನ್ನು ಮೂಡಿಸಿದೆ. ಇದು ಅನುಕರಣೀಯ ಹಾಗೂ ಸ್ತುತ್ಯರ್ಹ ಕಾರ್ಯವಾಗಿದೆ ಎಂದು ಯುವ ಸಂಗಮ ಮೆಲ್ಕಾರ್ ಇದರ ಅಧ್ಯಕ್ಷರಾದ ಎಂ. ಎನ್. ಕುಮಾರ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಬ್ಯಾಂಕಿನ ಮೆಲ್ಕಾರ್ ಶಾಖೆಯು “ಸ್ವಚ್ಛತಾ ಹೀ ಸೇವಾ ಧ್ಯೇಯ”ದೊಂದಿಗೆ ಆಯೋಜಿಸಿದ 20ನೇ ಸ್ವಚ್ಚ ಭಾರತ್ ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಲ| ರಾಮಕೃಷ್ಣ ರಾವ್ “ಪರಿಸರ ಸಂರಕ್ಷಣೆಯ ಪ್ರತಿಯೊಬ್ಬ ನಾಗರಿಕನ ಕರ್ತವ್ಯವನ್ನು ಸ್ವಚ್ಛತಾ ಆಂದೋಲನದ ಮೂಲಕ ಜಾಗೃತಗೊಳಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಬ್ಯಾಂಕ್ ಅತ್ಯುತ್ತಮ ಕೆಲಸ ಮಾಡಿದೆ” ಎಂದು ಅಭಿಪ್ರಾಯಪಟ್ಟರು. ಮೊಗರ್ನಾಡು ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಶ್ರಮದಾನವು ನಡೆಯಿತು. ವಿಶ್ವಕರ್ಮ…
