Author: admin

ಉಡುಪಿ: ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಎಂಜಿಎಂ ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಉಡುಪಿ ವಿಭಾಗದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ, ವಾರ್ಷಿಕ ವರದಿ ಮಂಡಿಸಿದರು. ಗತ ವರ್ಷದಲ್ಲಿ 19 ಕೋಟಿ ರೂ. ವ್ಯವಹಾರ ಆಗಿದ್ದು, ಸೊಸೈಟಿ ಪ್ರಸ್ತುತ 19.50 ಲಕ್ಷ ರೂ. ಲಾಭದಲ್ಲಿದೆ. ಎರಡು ವರ್ಷಗಳ ಬೆಳವಣಿಗೆಯಲ್ಲಿ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು. ಕಳೆದ ಮೂರು ವರ್ಷಗಳಲ್ಲಿ ಗ್ರಾಹಕರಿಂದ ಸೊಸೈಟಿಗೆ ಉತ್ತಮ ವ್ಯವಹಾರ ದೊರಕಿದ್ದು, ದಿನೇದಿನೆ ಉತ್ತಮ ಪ್ರಗತಿ ಹೊಂದುತ್ತಿದೆ. ಗೃಹ, ಚಿನ್ನಾಭರಣ ಮತ್ತು…

Read More

ರಾಜಾಪುರ ಸಾರಸ್ವತ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ ಪಾಚ್ಪೊರೆ ಅಭಿಮತ ಕಾರ್ಕಳ: ಪ್ರತಿಷ್ಠಿತ ರಾಜಾಪುರ ಸಾರಸ್ವತ ಕೋ ಆಪರೇಟಿವ್‌ ಸೊಸೈಟಿಗೆ ಸೋಮವಾರ ಸಂಜೆ ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ ಪಾಚ್ಪೊರೆ ಭೇಟಿ ನೀಡಿದ್ದು ಅವರನ್ನು ಸೊಸೈಟಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 30 ವರ್ಷದ ಹಿಂದೆ 300 ಚದರ ಅಡಿಯ ಬಾಡಿಗೆ ಕಟ್ಟಡದಲ್ಲಿ ಕಾರ್ಯಾರಂಭಿಸಿದ್ದ ಅಂದಿನ ಅವಿಭಜಿತ ದಕ್ಷಿಣ ಜಿಲ್ಲಾಮಟ್ಟದ ಗ್ರಾಮೀಣ ಭಾಗದ ಸಹಕಾರಿ ಸಂಸ್ಥೆ ಇಂದು ಸ್ವಂತ ನಿವೇಶನದಲ್ಲಿ ಮುಖ್ಯ ಕಚೇರಿಯ ಸಭಾಂಗಣದ ಪಕ್ಕದಲ್ಲಿ ಖರೀದಿಸಿದ ನಿವೇಶನಲ್ಲಿ ನಾಲ್ಕು ಅಂತಸ್ತಿನ 45,000 ಚದರ ಅಡಿ ವಾಣಿಜ್ಯ ಕಟ್ಟಡ ಸಂಕೀರ್ಣವನ್ನು ಸ್ಥಾಪಿಸಿ 3 ಮಲ್ಟಿಪ್ಲೆಕ್ಸ್ ಸಿನಿಮಾ ಥಿಯೇಟರ್ ( ಭಾರತ್ ಸಿನೆಮಾಸ್ ), ದೇಶದ ಪ್ರತಿಷ್ಠಿತ ವಿಶಾಲ್ ಮಾರ್ಟ್ ಮತ್ತು ಸ್ಥಳೀಯ ಉದ್ಯಮ ಸಂಸ್ಥೆಯ ಎಲೆಕ್ಟ್ರಾನಿಕ್ ಮತ್ತು ಆಹಾರ ಮಳಿಗೆಗೆ ಬಾಡಿಗೆ ನೀಡಿರುವ ಸಹಕಾರ ಸಿಂಧೂರ ಕಟ್ಟಡದ ಆಧುನಿಕ ವ್ಯವಸ್ಥೆಗಳನ್ನು ವೀಕ್ಷಿಸಿ…

Read More

ಲಕ್ನೋ ಮಹಾಸಮ್ಮೇಳನದಲ್ಲಿ ದೇಶದಲ್ಲೇ ಅತ್ಯಧಿಕ ಪ್ರಶಸ್ತಿ ಪಡೆದ ಏಕೈಕ ಬ್ಯಾಂಕ್ ಎಂಬ ಹೆಗ್ಗಳಿಕೆ: ತಂತ್ರಜ್ಞಾನ ಕ್ರಾಂತಿ ಹಾಗೂ ಆಡಳಿತಾತ್ಮಕ ಶ್ರೇಷ್ಠತೆಗೆ ಸಂದ ಜಾಗತಿಕ ಮಟ್ಟದ ಮಾನ್ಯತೆ ಪುತ್ತೂರು: ಉತ್ತರ ಪ್ರದೇಶದ ಲಕ್ನೋದಲ್ಲಿ ಇತ್ತೀಚೆಗೆ ನಡೆದ ಪಟ್ಟಣ ಸಹಕಾರಿ ಬ್ಯಾಂಕ್‌ಗಳ ಪ್ರತಿಷ್ಠಿತ ರಾಷ್ಟ್ರೀಯ ಮಹಾಸಮ್ಮೇಳನದಲ್ಲಿ (National Conference of Urban Co-operative Banks) ಕರ್ನಾಟಕದ ಹೆಮ್ಮೆಯ ಬ್ಯಾಂಕಿಂಗ್ ಸಂಸ್ಥೆಯಾದ ‘ದಿ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿಮಿಟೆಡ್’ ಬರೋಬ್ಬರಿ ಐದು ರಾಷ್ಟ್ರೀಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ದೇಶದ ಸಹಕಾರಿ ರಂಗದಲ್ಲಿ ಸುವರ್ಣ ಅಕ್ಷರಗಳ ಹೊಸ ದಾಖಲೆ ಬರೆದಿದೆ. https://chat.whatsapp.com/FCEnlTkAKCC0MGPhXtX4i4 ದೇಶದ ಎಲ್ಲಾ ರಾಜ್ಯಗಳ ನೂರಾರು ಪಟ್ಟಣ ಸಹಕಾರಿ ಬ್ಯಾಂಕ್‌ಗಳು ಭಾಗವಹಿಸಿದ್ದ ಈ ಉನ್ನತ ಮಟ್ಟದ ರಾಷ್ಟ್ರೀಯ ಸಮ್ಮೇಳನದಲ್ಲಿ, ಅತ್ಯಧಿಕ 5 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ದೇಶದ ಏಕೈಕ ಬ್ಯಾಂಕ್ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಪಾತ್ರವಾಗಿದೆ. ಈ ಅಪೂರ್ವ ಸಾಧನೆಯ ಮೂಲಕ ಬ್ಯಾಂಕ್ ರಾಷ್ಟ್ರಮಟ್ಟದಲ್ಲಿ ಇಡೀ ದೇಶದ ಗಮನ ಸೆಳೆದಿದೆ.…

Read More

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ರಕ್ತದಾನ ಶಿಬಿರವು ಅಳದಂಗಡಿಯ ಶ್ರೀ ಗುರು ಸಭಾಭವನದಲ್ಲಿ ಜರುಗಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಬಳಂಜ ಇದರ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಸಮಾಜದಲ್ಲಿ ಶ್ರೀಮಂತ ವ್ಯಕ್ತಿ ಎಂದರೆ ಹಣ ಇರುವವನಲ್ಲ, ಒಳ್ಳೆಯ ಆರೋಗ್ಯ ಇರುವ ವ್ಯಕ್ತಿ ಶ್ರೀಮಂತ. ಈ ನಿಟ್ಟಿನಲ್ಲಿ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿ ಉತ್ತಮ ಆರೋಗ್ಯಪೂರ್ಣ ಸಮಾಜ ನಿರ್ಮಿಸುವಲ್ಲಿ ಆತ್ಮಶಕ್ತಿ ಸಹಕಾರ ಸಂಘದ ಪಾತ್ರ ಹೆಚ್ಚಿದೆ. ಸಂಘದ ಅಧ್ಯಕ್ಷರಾದಚಿತ್ತರಂಜನ್ ಬೋಳಾರ್ ಅವರ ಬದಲಾವಣೆಯ ದೃಷ್ಟಿಕೋನ ಹಾಗೂ ಮಹಿಳಾ ಸಬಲೀಕರಣದಿಂದ ಸಂಘವು ಅಭಿವೃದ್ಧಿ ಪಥದತ್ತ ಮುನ್ನುಗುತ್ತಿದೆ ಎಂದು ಶ್ಲಾಘಿಸಿದರು. https://chat.whatsapp.com/FCEnlTkAKCC0MGPhXtX4i4 ಸಂಘದ ಅಳದಂಗಡಿ ಶಾಖೆಯ ಕಟ್ಟಡದ ಮಾಲೀಕ ವಿಶ್ವನಾಥ ಕುದ್ಯಾಡಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಊರಿನ ಸಂಘ ಸಂಸ್ಥೆಗಳ ಜೊತೆಗೆ ಎಲ್ಲಾ ಹಿರಿಯರನ್ನು ಒಟ್ಟುಗೂಡಿಸಿ ಮಾಡುತ್ತಿರುವ ವೈದ್ಯಕೀಯ ಶಿಬಿರವು ಸಮಾಜಮುಖಿ ಚಟುವಟಿಕೆಯಾಗಿದ್ದು, ಇಂತಹ…

Read More

ಚಿಕ್ಕಮಗಳೂರು: ಸಹಕಾರ ಭಾರತಿಯ ಕರ್ನಾಟಕ ರಾಜ್ಯಮಟ್ಟದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳ ಪ್ರಶಿಕ್ಷಣ ವರ್ಗವು ಭಾನುವಾರ ಮತ್ತು ಸೋಮವಾರ ಶೃಂಗೇರಿಯ ಶಾರದಾ ಕಂಫರ್ಟ್ಸ್ ಸಭಾಭವನದಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಿ.ಟಿ .ರವಿ ಕಾರ್ಯಕ್ರಮ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಚಿಕ್ಕಮಗಳೂರು ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಕೆ.ಎಸ್ ನಯನ ವಹಿಸಿದ್ದರು. ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಕಾರ ಭಾರತಿ ಕರ್ನಾಟಕದ ಅಧ್ಯಕ್ಷ ಪ್ರಭುದೇವ ಆರ್ ಮಾಗನೂರ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳ ಪ್ರಶಿಕ್ಷಣ ವರ್ಗದ ಮಹತ್ವವನ್ನು ತಿಳಿಸಿದರು. ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ ಪಾಚ್ಪೊರೆ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು. ಅಭ್ಯಾಸ ವರ್ಗದ ಪ್ರಥಮ ಅವಧಿಯಲ್ಲಿ ಸಹಕಾರ ಭಾರತಿ ದಕ್ಷಿಣ ಮಧ್ಯ ಕ್ಷೇತ್ರಿಯ ಪ್ರಮುಖರಾದ ಎಸ್.ಆರ್. ಸತೀಶ್ಚಂದ್ರ ಸಂಘಟನಾ ಕಾರ್ಯದರ್ಶಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಪರಸ್ಪರ ಪರಿಚಯ ಮತ್ತು ಸಂವಾದದ ಮೂಲಕ ಅರಿವು ಮೂಡಿಸಿದರು. ಸಹಕಾರ ಭಾರತಿ…

Read More

ಕುಪ್ಪೆಪದವು: ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲೀಕರಣಗೊಳ್ಳಲು ಸ್ವಸಹಾಯ ಸಂಘಗಳು ಪ್ರಮುಖವಾದ ಪಾತ್ರ ವಹಿಸಿದೆ ಎಂದು ನೇಸರ ಕೇಂದ್ರ ಸಮಿತಿ ಇದರ ಉಪಾಧ್ಯಕ್ಷರಾದ ಅನುಸೂಯ ಕಾಜವ ಕುಪ್ಪೆಪದವು ಹೇಳಿದರು. https://chat.whatsapp.com/FCEnlTkAKCC0MGPhXtX4i4 ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೇತೃತ್ವದಲ್ಲಿ ಕುಪ್ಪೆಪದವು ರಾಮಕೃಷ್ಣ ಭಜನಾ ಮಂದಿರದಲ್ಲಿ ನಡೆದ ಕುಪ್ಪೆಪದವು ವಲಯದ 20 ಸ್ವಸಹಾಯ ಸಂಘಗಳ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳಿಗೆ ನಡೆದ ತರಬೇತಿ ಶಿಬಿರ ಉದ್ಫಾಟಿಸಿ ಅವರು ಮಾತನಾಡಿದರು. ಸಹಕಾರಿಯ ನಿರ್ದೇಶಕರಾದ ವಸಂತಿ ಕುಪ್ಪೆಪದವು ಅಧ್ಯಕ್ಷತೆ ವಹಿಸಿದ್ದರು. ಸ್ವಂದನ ಸ್ವಸಹಾಯ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಸಿಸಿಲಿಯ ಸಲ್ಡಾನ್ಹ ಮುಖ್ಯ ಅತಿಥಿಯಾಗಿದ್ದರು. ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನಡೆಸಿಕೊಟ್ಟರು. ಸಹಕಾರಿಯ ಸಿಬ್ಬಂದಿ ಸುಮಂಗಳ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹರಿಣಾಕ್ಷಿ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಅಭಿಪ್ರಾಯ ಮಂಗಳೂರು: ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಶ್ರೀಶಾ ಸೌಹಾರ್ದ ಸೊಸೈಟಿಯ ವತಿಯಿಂದ ಭಾನುವಾರ ಮಂಗಳಾದೇವಿಯ ರಾಮಕೃಷ್ಣ ಮಠದ ಸಭಾಂಗಣದಲ್ಲಿ ಮಂಗಳೂರು ತಾಲೂಕಿನ 2026ನೇ ಸಾಲಿನ ಸರಕಾರಿ/ಅನುದಾನಿತ ಕನ್ನಡ ಮಾಧ್ಯಮದ ಶಾಲೆಗಳ ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಯಲ್ಲಿ ಹಾಗೂ ಸರಕಾರಿ/ಅನುದಾನಿತ ಪದವಿಪೂರ್ವ ಕಾಲೇಜುಗಳ ಅಂತಿಮ ಪರೀಕ್ಷೆಯಲ್ಲಿ 90% ಹೆಚ್ಚಿನ ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಒಟ್ಟು 120 ವಿದ್ಯಾರ್ಥಿಗಳಿಗೆ ಸಹಾಯಧನ ನೀಡಿ ಶಾಲು ಹೊದಿಸಿ, ಹಾರ ಹಾಕಿ, ಫ್ರೇಮ್ ಹಾಕಿದ ಪ್ರಶಂಸನ ಪತ್ರಗಳನ್ನು ನೀಡಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂಗ್ಲಿಷ್ ಮಾಧ್ಯಮದ ಆರ್ಭಟದ ನಡುವೆ ಕನ್ನಡ ಮಾಧ್ಯಮವನ್ನು ಆಯ್ಕೆ ಮಾಡಿ ಸರಕಾರಿ ಶಾಲೆಗಳ ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡ.90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಈ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಶ್ರೀಶಾ ಸೊಸೈಟಿಯು ಅವರಿಗೆ ಸಹಾಯಧನದ…

Read More

ಶಂ.ನಾ.ಖಂಡಿಗೆ 1927 ಜೂನ್ 8 ಸಾಮಾನ್ಯ ದಿನವಲ್ಲ. ಭಾರತದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ಕೊಡುತ್ತಿರುವ, ಮುಖ್ಯವಾಗಿ ಕೇರಳ ಮತ್ತು ಕರ್ನಾಟಕದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಗೆ ಬಹುಪಾಲು ಕಾರಣವಾಗಿರುವ ಅಡಿಕೆ ಕೃಷಿಕರಿಗೆ ಹೊಸ ಬೆಳಕಾದ ಪ್ರತಿಷ್ಠಿತ ಕ್ಯಾಂಪ್ಕೊ ಸಂಸ್ಥೆಯನ್ನು ಸ್ಥಾಪಿಸಿದ ಕ್ಯಾಂಪ್ಕೊ ಬ್ರಹ್ಮ, ಯುಗಪುರುಷ, ವಾರಣಾಶಿ ಸುಬ್ರಾಯ ಭಟ್ಟರು ಜನ್ಮ ತಾಳಿದ ದಿನ. https://chat.whatsapp.com/FCEnlTkAKCC0MGPhXtX4i4 ಸುಬ್ರಾಯ ಭಟ್ಟರು ಹುಟ್ಟಿದ ಊರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಡಂಬೈಲು. ತಂದೆ ವಾರಣಾಶಿ ಕೃಷ್ಣಯ್ಯ, ತಾಯಿ ತಿರುಮಲೇಶ್ವರಿ ಅಮ್ಮ. ಸುಬ್ರಾಯ ಭಟ್ಟರ ಪ್ರಾಥಮಿಕ ವಿದ್ಯಾಭ್ಯಾಸ ಮೂಡಂಬೈಲು ಸರಕಾರಿ ಶಾಲೆಯಲ್ಲಿ. 6 ಮತ್ತು 8ನೇ ತರಗತಿ ಕಲಿಕೆ ಅಡ್ಯನಡ್ಕದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ಪ್ರೌಢಶಾಲಾ ವಿದ್ಯಾಭ್ಯಾಸ ನೀಲೇಶ್ವರದಲ್ಲಿ ಮಾಡಿದರು. ಹದಿನೈದನೇ ವರ್ಷದಲ್ಲಿ ಮೆಟ್ರಿಕ್ಯುಲೇಶನ್ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಮುಂದೆ ಶಿಕ್ಷಣ ಸಂಸ್ಥೆಯ ವಿದ್ಯಾಭ್ಯಾಸ ಅನಿವಾರ್ಯ ಕಾರಣಗಳಿಂದ ಮುಂದುವರಿಸಲಾಗಲಿಲ್ಲ. ಆದರೆ ಸಮಾಜದಲ್ಲಿ ನಿತ್ಯ ನಿರಂತರ ಓಡಾಟ, ಒಡನಾಟ, ಪಡೆದುಕೊಂಡ ಅನುಭವ, ತಂದೆಯವರ ಜೊತೆಗಿನ…

Read More

ಮಂಗಳೂರು: ನಮ್ಮ ನಮ್ಮ ಪರಿಸರದ ನಿರ್ವಹಣೆ, ಸ್ವಚ್ಛತೆ ಇದು ಕೇವಲ ಸರಕಾರ, ಸರಕಾರಿ ಯಂತ್ರಗಳು ಅಥವಾ ಸಾಮಾಜಿಕ ಸಂಘಟನೆಗಳು ಮಾಡುವ ಕಾರ್ಯವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯ. ಸಮಾಜದಲ್ಲಿ ನಾಗರಿಕ ಶಿಷ್ಟಾಚಾರದ ಅರಿವು ಮೂಡಿಸಿ ಜಾಗೃತಗೊಳಿಸಿದಾಗ ಇದು ಸಾಧ್ಯವಾಗುತ್ತದೆ ಎಂದು ಖ್ಯಾತ ಪರಿಸರವಾದಿ ಡಾ. ರಾಧಾಕೃಷ್ಣ ನಾಯರ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ ಸ್ಟ್ರೀಟ್ ಶಾಖೆಯ ವತಿಯಿಂದ ಭಾನುವಾರ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ನಡೆದ 50ನೇ ಸ್ವಚ್ಛತಾ ಶ್ರಮದಾನದ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಂದುವರಿದು ಮಾತನಾಡಿದ ಅವರು ಇಂತಹ ಸ್ವಚ್ಛತಾ ಕಾರ್ಯಕ್ರಮಗಳು ನಿತ್ಯ ನಿರಂತರವಾದರೆ ಮಾತ್ರ ನಮ್ಮ ಪರಿಸರ ಸುರಕ್ಷಿತವಾಗಿರುತ್ತದೆ, ಮತ್ತು ಈ ನಿಟ್ಟಿನಲ್ಲಿ ಸಮಾಜದಲ್ಲಿ ಸ್ವಚ್ಛತೆಯ ಅರಿವನ್ನು ಮೂಡಿಸುತ್ತಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ ನಂತಹ ಆರ್ಥಿಕ ವ್ಯವಹಾರದಿಂದ ಕೂಡಿದ ಸಮಾಜಮುಖಿ ಸಂಸ್ಥೆಗಳ ಪಾತ್ರ ಶ್ಲಾಘನೀಯ. ಸ್ವಚ್ಛತಾ ಶ್ರಮದಾನ ಹಾಗೂ ವನಮೋತ್ಸವ ಕಾರ್ಯಕ್ರಮಗಳಲ್ಲಿ ನಮ್ಮ ಮುಂದಿನ ಪೀಳಿಗೆಯನ್ನು ಭಾಗವಹಿಸುವಂತೆ ನೋಡಿಕೊಳ್ಳುವುದು ಅತ್ಯಂತ ಅಗತ್ಯ…

Read More

ಮಂಗಳೂರು: ಪ್ರಣವ ಸೌಹಾರ್ದ ಸೊಸೈಟಿಯ ಆಶ್ರಯದಲ್ಲಿ ಟೀಂ ಉಬಾರ್, ಸುಳ್ಯ ರೈತ ಉತ್ಪಾದಕ ಕಂಪನಿ, ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ, ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿ ಹಲಸು ಮತ್ತು ಮಾವು ಮೇಳವನ್ನು ಜೂನ್‌ 12ರಿಂದ 14ರ ತನಕ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ವಠಾರ, ಕೇರ್ಪಳ ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಜೂನ್‌ 12ರ ಶುಕ್ರವಾರ ಬೆಳಗ್ಗೆ 10ಕ್ಕೆಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ, ಹಲಸು-ಮಾವು ಮೇಳ-2026ರ ಗೌರವಾಧ್ಯಕ್ಷರಾದ ಜಿ.ಆರ್. ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಮೇಳವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ತಹಸೀಲ್ದಾರ್‌ ಮಂಜುಳಾ ಎಂ., ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ ಚಿದಾನಂದ, ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ ಎಸ್.ಆರ್., ಹಲಸು ಮಾವು ಮೇಳದ…

Read More