Author: admin

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಎನ್.ಜಿ ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇವುಗಳ ಸಹಯೋಗದಲ್ಲಿ ಭಾನುವಾರ ಕುದ್ಮಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಶಾಸಕಿ ಭಾಗಿರಥಿ ಮುರುಳ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಒಳ್ಳೆಯ ಆರೋಗ್ಯ ಕಾಪಾಡಿಕೊಂಡು ಬರುವುದು ಪ್ರತಿಯೊಬ್ಬರ ಕರ್ತವ್ಯ. ಆರೋಗ್ಯವೇ ಅಮೂಲ್ಯವಾದ ಸಂಪತ್ತು. ಯಾವುದೇ ಕ್ಷಣದಲ್ಲಿ ಅನಾರೋಗ್ಯ ಕಾಡಿದರೆ ತಕ್ಷಣವೇ ವೈದ್ಯರನ್ನು ಸಂಪರ್ಕ ಮಾಡಿ ಸೂಕ್ತ ಚಿಕಿತ್ಸೆ ಪಡೆಯುವುದು ನಮ್ಮ ಮುಖ್ಯ ಕೆಲಸವಾಗಬೇಕು. ಕುದ್ಮಾರಿನಂತ ಸಣ್ಣ ಗ್ರಾಮದಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರವನ್ನು ಸಂಘಟಿಸಿದ ಆಯೋಜಕರ ಶ್ರಮ ಶ್ಲಾಘನೀಯ ಎಂದು ಹೇಳಿದರು. ಶ್ರೀ ಪೂರ್ಣಾನಂದ ಸೇವಾ…

Read More

ಬಂಟ್ವಾಳ: ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸೇವಾ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾದ ಸಮಾಜ ಸೇವಾ ರತ್ನ ಡಾ| ಅಮ್ಮೆಂಬಳ ಬಾಳಪ್ಪರವರ ಜನ್ಮದಿನದ ಪ್ರಯುಕ್ತ ಭಾನುವಾರ ಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಸಮಾಜ ಸೇವಾ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸಮಾಜ ಸಹಕಾರಿ ಭವನದ ಡಾ| ಬಾಳಪ್ಪ ವೇದಿಕೆಯಲ್ಲಿ ಏರ್ಪಡಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಸ್ಥಾಪಕರ ದಿನಾಚರಣೆಯ ಪ್ರಯುಕ್ತ ಉನ್ನತ ಶಿಕ್ಷಣ ಪಡೆಯುತ್ತಿರುವ ಸಂಘದ 204 ಸದಸ್ಯರ ಮಕ್ಕಳಿಗೆ ಸಂಘದ ವಿದ್ಯಾನಿಧಿಯಿಂದ ಒಟ್ಟು ರೂ.8,80,000 ವಿದ್ಯಾರ್ಥಿವೇತನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಐಸಿಐಸಿಐ ಬ್ಯಾಂಕ್ ಸಹಯೋಗದೊಂದಿಗೆ ಸಂಘದ ಐ.ಎಫ್.ಎಸ್.ಸಿ ಕೋಡ್ ಮತ್ತು ಸಂಘದ ಸದಸ್ಯರ ಖಾತೆಗೆ ಯುಪಿಐ, ಐಎಂಪಿ ಮತ್ತು ನೆಫ್ಟ್ ಮೂಲಕ ನೇರವಾಗಿ ಜಮೆ ಮಾಡುವ ಇ-ಕಲೆಕ್ಷನ್ ಸೌಲಭ್ಯವನ್ನು ಬಿಡುಗಡೆ ಮಾಡಲಾಯಿತು. ಈ ಮೂಲಕ ಬಂಟ್ವಾಳ ತಾಲೂಕಿನಲ್ಲಿ ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಮೊದಲ ಸಹಕಾರಿ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಐ.ಸಿ.ಐ.ಸಿ.ಐ. ಬ್ಯಾಂಕ್ ರೀಜನಲ್…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಭಾಗ್ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಕುದ್ರೋಳಿ ಯುವಕ ಸಂಘ ಕುದ್ರೋಳಿ, ಮಂಗಳೂರು ಹಾಗೂ ಎನ್.ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಕುದ್ರೋಳಿ ಯುವಕ ಸಂಘದಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಶಿಬಿರವನ್ನು ಉದ್ಯಮಿ ಸುಕುಮಾರ್ ಶೆಟ್ಟಿ ಉದ್ಘಾಟಿಸಿ, ಮಾತನಾಡಿ ಆಧುನಿಕ ಕಾಲದಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡುವುದು ಅಗತ್ಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಬಡ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜನೆ ಮಾಡಿ, ಹೆಚ್ಚು ಜನರು ಇದರ ಪ್ರಯೋಜನ ಪಡೆಯುವಂತಾಗಲಿ ಎಂದು ತಿಳಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು…

Read More

ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ಹೇಳಿಕೆ ಮೂಡುಬಿದಿರೆ: ವಿಶ್ವಕರ್ಮ ಬ್ಯಾಂಕ್ ಬ್ಯಾಂಕಿಂಗ್ ಚಟುವಟಿಕೆಗಳೊಂದಿಗೆ ಸಮಾಜಮುಖಿಯಾಗಿ ಸ್ವಚ್ಛತೆಯಂತಹ ಪರಿಸರ ಜಾಗೃತಿಯ ಗುರುತರವಾದ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಕೃಷ್ಣ ಆಚಾರ್ಯ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದಂತೆ ಭಾನುವಾರ ನಡೆದ 30ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಬಾಲಕೃಷ್ಣ ಆಚಾರ್ಯ ಅವರ ಜೊತೆ ವಿಶ್ವಕರ್ಮ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಸೀತಾರಾಮ ಆಚಾರ್ಯ ಬೆಳುವಾಯಿ ಹಾಗೂ ರೋಟರಿ ಕ್ಲಬ್ ಟೆಂಪಲ್ ಟೌನ್ ಮೂಡುಬಿದಿರೆ ಇದರ ಅಧ್ಯಕ್ಷ ಹರೀಶ್ ಎಂ.ಕೆ. ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನ ಪರಿಸರ, ಜೈನಪೇಟೆ ಹಾಗೂ ಆಲಂಗಾರು ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ…

Read More

ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ಹೇಳಿಕೆ ಮೂಡುಬಿದಿರೆ: ವಿಶ್ವಕರ್ಮ ಬ್ಯಾಂಕ್ ಬ್ಯಾಂಕಿಂಗ್ ಚಟುವಟಿಕೆಗಳೊಂದಿಗೆ ಸಮಾಜಮುಖಿಯಾಗಿ ಸ್ವಚ್ಛತೆಯಂತಹ ಪರಿಸರ ಜಾಗೃತಿಯ ಗುರುತರವಾದ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಕೃಷ್ಣ ಆಚಾರ್ಯ ಹೇಳಿದರು. https://news.sahakaraspandana.in/archives/15217 ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದಂತೆ ಭಾನುವಾರ ನಡೆದ 30ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂಸೇವಕರನ್ನು ಉದ್ದೇಶಿಸಿ ಹೇಳಿದರು. ವಿಶ್ವಕರ್ಮ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಸೀತಾರಾಮ ಆಚಾರ್ಯ ಬೆಳುವಾಯಿ ಹಾಗೂ ರೋಟರಿ ಕ್ಲಬ್ ಟೆಂಪಲ್ ಟೌನ್ ಮೂಡುಬಿದಿರೆ ಇದರ ಅಧ್ಯಕ್ಷ ಹರೀಶ್ ಎಂ.ಕೆ. ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನ ಪರಿಸರ, ಜೈನಪೇಟೆ ಹಾಗೂ ಆಲಂಗಾರು ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಬ್ಯಾಂಕಿನ…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಸ್. ಆರ್. ಹರೀಶ್ ಆಚಾರ್ಯ ಅಭಿಪ್ರಾಯ ಬಂಟ್ವಾಳ: ಸ್ವಚ್ಛ ಸಮಾಜದ ನಿರ್ಮಾಣವು ಜನರ ಸಾಮೂಹಿಕ ಭಾಗವಹಿಸುವಿಕೆಯಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಉಂಟು ಮಾಡುವಲ್ಲಿ ಸ್ವಯಂಸೇವಾ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವಪೂರ್ಣದ್ದಾಗಿದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಹೇಳಿದರು. https://chat.whatsapp.com/FCEnlTkAKCC0MGPhXtX4i4 ವಿಶ್ವಕರ್ಮ ಸಹಕಾರ ಬ್ಯಾಂಕಿನ ಮೆಲ್ಕಾರ್ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 29ನೇ ಸ್ವಚ್ಛ ಭಾರತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಕೊಡಿಮಜಲು, ಪ್ರೇರಣಾ ಮಹಿಳಾ ಮಂಡಳಿ ಅಧ್ಯಕ್ಷೆ ವನಿತಾ ಹಸಿರು ನಿಶಾನೆ ತೋರಿಸುವ ಮೂಲಕ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೊಗರ್ನಾಡು ಹಾಗೂ ಮಾರುತಿನಗರ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಶ್ರಮದಾನವು ನಡೆಯಿತು. ವಿಶ್ವಕರ್ಮ ಬ್ಯಾಂಕಿನ ನಿರ್ದೇಶಕರಾದ ಜಯಪ್ರಕಾಶ್ ಭಂಡಾರಿಬೆಟ್ಟು, ಯುವ ಸಂಗಮ ಮೆಲ್ಕಾರ್ ಇದರ ಗೌರವಾಧ್ಯಕ್ಷ ಎಂ.ಎನ್. ಕುಮಾರ್, ವೀರಮಾರುತಿ ವ್ಯಾಯಾಮ…

Read More

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಜಿಲ್ಲಾಮಟ್ಟದ ತರಬೇತಿ ಶಿಬಿರ ಉದ್ಘಾಟಿಸಿ ಸಂಜೀವ ಪೂಜಾರಿ ಅಭಿಪ್ರಾಯ ಬಂಟ್ವಾಳ: ಸಹಕಾರಿ ಕ್ಷೇತ್ರವೂ ಸೇರಿದಂತೆ ಎಲ್ಲ ವಿಷಯಗಳಲ್ಲೂ ಕಾನೂನುಗಳು ಬದಲಾಗುತ್ತಿದ್ದಂತೆಯೇ ಸಹಕಾರಿ ಕ್ಷೇತ್ರದಲ್ಲಿ ಸಿಬ್ಬಂದಿಗಳಿಗೆ ಅನೇಕ ಸವಾಲುಗಳು ಎದುರಾಗುತ್ತಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಅರಿವು ಮೂಡಿಸುವುದರ ಜೊತೆಗೆ ಗ್ರಾಹಕರೊಂದಿಗೆ ಉತ್ತಮ ವ್ಯವಹಾರ ಮಾಡಲು ಇಂತಹ ತರಬೇತಿ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರೂ, ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷರೂ ಆಗಿರುವ ಕೆ. ಸಂಜೀವ ಪೂಜಾರಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ನಿ., ಬಿ.ಸಿ. ರೋಡ್, ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ…

Read More

ಮಂಗಳೂರು: ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ಪ್ರಧಾನ ಕಚೇರಿಯಲ್ಲಿ ಗುರುವಾರ “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು. https://chat.whatsapp.com/FCEnlTkAKCC0MGPhXtX4i4 ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಅವರು ಸ್ವಾಗತಿಸಿದರು. ಅತಿಥಿ ಭಾಷಣಕಾರರಾಗಿ ಮಸ್ಕತ್‌ನ ಬ್ಯಾಂಕಿಂಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ ತರಬೇತಿ ನಿರ್ದೇಶಕ ಡಾ| ಕೆ. ರಾಜೇಶ್ ನಾಯಕ್ ಮತ್ತು ಪ್ರಸಿದ್ಧ ಚಾರ್ಟರ್ಡ್ ಅಕೌಂಟೆಂಟ್ ಮತ್ತು ತೆರಿಗೆ, ಉದ್ಯಮಶೀಲತೆ ಮತ್ತು ವ್ಯವಹಾರ ಸಲಹಾ ಸೇವೆಗಳಲ್ಲಿ ತಜ್ಞ ಸಿಎ ಎಸ್. ಎಸ್. ನಾಯಕ್ ಭಾಗವಹಿಸಿದ್ದರು. ಸಿ.ಎ. ಎಸ್. ಎಸ್. ನಾಯಕ್ ತಮ್ಮ ಉಪನ್ಯಾಸದಲ್ಲಿ ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿ, ಅದರ ಸ್ಥೈರ್ಯ, ನಿಯಂತ್ರಣದ ಬಲ ಹಾಗೂ ವೇಗವಾಗಿ ಬದಲಾಗುತ್ತಿರುವ ಆರ್ಥಿಕ ಪರಿಸ್ಥಿತಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಪ್ರಶಂಸಿಸಿದರು. ಹೊಸ ವ್ಯವಹಾರ ಅವಕಾಶಗಳನ್ನು ಹುಡುಕುವುದಕ್ಕಿಂತ ಮೊದಲು ಗ್ರಾಹಕರ ದೂರಗಳನ್ನು ಪರಿಹರಿಸುವುದು ಅತ್ಯಂತ ಮುಖ್ಯವೆಂದು ಅವರು…

Read More

ಬೆಳಗಾವಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಆಶಯ ವಿಜಯಪುರ: ಸಹಕಾರ ಸಂಘಗಳು ದೇಶವ್ಯಾಪಿ ಬೆಳೆಯಬೇಕು, ದೇಶದ ಆರ್ಥಿಕತೆಗೆ ಬಹುದೊಡ್ಡ ಪಾಲು ಸಹಕಾರ ಕ್ಷೇತ್ರ ನೀಡುವಂತಾಗಬೇಕು. ಕರ್ನಾಟಕದ ಗದಗ್ ಜಿಲ್ಲೆಯ ಕಣಗಿನಾಳದಲ್ಲಿ ಸಿದ್ದನಗೌಡ ಪಾಟೀಲರು ಪ್ರಥಮ ಸಹಕಾರಿ ಸಂಘ ಪ್ರಾರಂಭಿಸಿದರು ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. https://chat.whatsapp.com/FCEnlTkAKCC0MGPhXtX4i4 ವಿಜಯಪುರದ ಭಾವಸಾರ ಸಾಂಸ್ಕೃತಿಕ ಭವನದಲ್ಲಿ ನಡೆದ ವಿಜಯಪುರ ಜಿಲ್ಲಾ ಸೌಹಾರ್ದ ಸಹಕಾರಿಗಳ ಸಮಾವೇಶ ಹಾಗೂ ಷೇರು ಸರ್ಟಿಫಿಕೇಟ್‌ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳ ಕಾರ್ಯದಲ್ಲಿ ಸರ್ಕಾರದ ಹಸ್ತಕ್ಷೇಪ ಇರಬಾರದು. ಸಹಕಾರ ಸಂಘಗಳು ದೇಶವ್ಯಾಪಿಯಾಗಿ ಬೆಳೆಯಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ನಂಜನ ಗೌಡ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ 1990ರ ದಶಕದಲ್ಲಿ ಅಧಿಕಾರಶಾಹಿ ಪ್ರಾರಂಭವಾಗಿತ್ತು. ಇದರಿಂದಲೇ 1997 ಸೌಹಾರ್ದ ಕಾಯಿದೆ ಬರಲು ಕಾರಣವಾಯಿತು. ಈ ಕಾಯ್ದೆ 2001ರಲ್ಲಿ ಪ್ರಾರಂಭಗೊಂಡು ರಾಜ್ಯಾದ್ಯಂತ ವಿಸ್ತರಿಸಲ್ಪಟ್ಟಿತು. ಸಹಕಾರಿಗಳು…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಲಾಲ್‌ಭಾಗ್ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಫೆ.22ರಂದು ಆದಿತ್ಯವಾರ ಪೂರ್ವಾಹ್ನ 9.30ರಿಂದ ಅಪರಾಹ್ನ 12.30ರವರೆಗೆ ಕುದ್ರೋಳಿ ಯುವಕ ಸಂಘದಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ವೈದ್ಯಕೀಯ ಶಿಬಿರದಲ್ಲಿ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಪೌಂಡೇಶನ್, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಇ.ಸಿ.ಜಿ, ಕಿವಿ, ಮೂಗು, ಗಂಟಲು ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಚರ್ಮರೋಗ ತಪಾಸಣೆ ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ…

Read More