Author: admin
ಮೂಡುಬಿದಿರೆಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 35ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಐ. ತಾರಾನಾಥ ಪೂಜಾರಿ ಅಭಿಪ್ರಾಯ ಮೂಡುಬಿದಿರೆ: ಆರ್ಥಿಕ ಸೇವೆಗಳ ಜೊತೆಗೆ ಸಾಮಾಜಿಕ ಬದ್ಧತೆ ಹೊಂದಿರುವ ಯೋಜನೆಗಳನ್ನು ಜಾರಿಗೆ ತರುವುದೇ ಆತ್ಮಶಕ್ತಿ ಸಹಕಾರಿ ಸಂಘದ ಶಕ್ತಿ ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಐ. ತಾರಾನಾಥ ಪೂಜಾರಿ ಹೇಳಿದರು. ಮೂಡುಬಿದಿರೆ ಅಂಚೆ ಕಚೇರಿ ಎದುರಿನ ರಾಮಯ್ಯ ಕಾಂಪ್ಲೆಕ್ಸ್ನಲ್ಲಿ ಭಾನುವಾರ ಆತ್ಮಶಕ್ತಿ ಸಹಕಾರಿ ಸಂಘದ 35ನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಗುರುತು ಮೂಡಿಸಿರುವ ಈ ಸಂಸ್ಥೆಯು ಮುಂದಿನ ದಿನಗಳಲ್ಲಿ 100ನೇ ಶಾಖೆ ತಲುಪಲಿ ಎಂದು ಆಶಯ ವ್ಯಕ್ತಪಡಿಸಿದರು. ವ್ಯವಹಾರಗಳಲ್ಲಿ ಜನರು ಅನವಶ್ಯಕ ವ್ಯಾಜ್ಯಗಳಿಂದ ದೂರವಿರಬೇಕು ಎಂದು ಅವರು ಸಲಹೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಖೆಯ ಉದ್ಘಾಟನೆಯ ಅಂಗವಾಗಿ ಗ್ರಾಹಕರಿಗೆ ವಿಶೇಷ ಯೋಜನೆಗಳನ್ನು ಘೋಷಿಸಿದರು.…
ಮಂಗಳೂರು: ದಿ ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ ಗರಿಷ್ಠ 11.80 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸೊಸೈಟಿಯ ಅಧ್ಯಕ್ಷ ಎ.ಎಸ್. ವೆಂಕಟೇಶ್ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮಾರ್ಚ್ ಅಂತ್ಯಕ್ಕೆ ಸೊಸೈಟಿಯು ಒಟ್ಟು 15.90 ಕೋಟಿ ರೂ. ಪಾಲು ಬಂಡವಾಳ, 274.55 ಕೋಟಿ ರೂ. ಠೇವಣಿ, 42.02 ಕೋಟಿ ರೂ. ನಿಧಿ, 332.47 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿ ಪ್ರಗತಿ ಪಥದಲ್ಲಿ ಸಾಗುತ್ತಿದೆ. ಸಂಘದ ಒಟ್ಟು 15 ಶಾಖೆಗಳಲ್ಲಿ 5 ಶಾಖೆಗಳು ಸ್ವಂತ ಕಚೇರಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಗ್ರಾಹಕರಿಗೆ ಉತ್ತಮ, ಉತ್ಕೃಷ್ಟ ಮಟ್ಟದ ತ್ವರಿತ ಸೇವೆ ನೀಡುವ ಉದ್ದೇಶದಿಂದ ಕೋರ್ಬ್ಯಾಂಕಿಂಗ್ ವ್ಯವಸ್ಥೆ ಅಳವಡಿಸಲಾಗಿದೆ. ಎಲ್ಲ ಶಾಖೆಗಳಲ್ಲಿಯೂ ನೆಫ್ಟ್/ಆರ್ಟಿಜಿಎಸ್ ಸೌಲಭ್ಯ ಇದೆ. ಯಶಸ್ವಿನಿ ಆರೋಗ್ಯ ವಿಮೆ ಸೌಲಭ್ಯವನ್ನು ಸದಸ್ಯರಿಗೆ ನೀಡಲಾಗುತ್ತಿದೆ. ಅಲ್ಲದೆ ಸಂಘವು 2024-25ನೇ ಸಾಲಿನಲ್ಲಿ ಶೇ.25 ಡಿವಿಡೆಂಡ್ ಘೋಷಿಸಿದೆ. ಲೆಕ್ಕಪರಿಶೋಧನೆಯಲ್ಲಿ ಕಳೆದ 30 ವರ್ಷಗಳಿಂದ ಎ ವರ್ಗ ಮಾನ್ಯತೆ ಪಡೆದಿದೆ. ಪ್ರಸ್ತುತ ಸಹಕಾರ ವರ್ಷದಲ್ಲಿ ಸಂಘದ 16ನೇ…
ಶ್ರೀ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿ.ಎನ್ ಶಂಕರ ಪೂಜಾರಿ ಬ್ರಹ್ಮಾವರ, ಉಪಾಧ್ಯಕ್ಷರಾಗಿ ರಾಜು ಪೂಜಾರಿ ಉಪ್ಪೂರು ಅವಿರೋಧ ಆಯ್ಕೆ
ಉಡುಪಿ: ರಾಜ್ಯಮಟ್ಟದ ಕಾರ್ಯವ್ಯಾಪ್ತಿ ಹೊಂದಿರುವ ಉಡುಪಿ ಸಂತೆಕಟ್ಟೆಯ ಶ್ರೀ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿಯ 2025-26ರಿಂದ 2030-31ನೇ ಸಾಲಿನ ಅವಧಿಗೆ ಅಧ್ಯಕ್ಷರಾಗಿ ಬಿ.ಎನ್ ಶಂಕರ ಪೂಜಾರಿ ಬ್ರಹ್ಮಾವರ ಹಾಗೂ ಉಪಾಧ್ಯಕ್ಷರಾಗಿ ರಾಜು ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸೊಸೈಟಿಯ ನಿರ್ದೇಶಕರಾಗಿ ಗೋವಿಂದ ಬಾಬು ಪೂಜಾರಿ ಬೈಂದೂರು, ಪ್ರಕಾಶ್ ಕೆ ಕೋಟ್ಯಾನ್ ಮಣಿಪುರ, ಸುರೇಶ್ ಎನ್ ಪೂಜಾರಿ ಬೆಂಗಳೂರು, ವಿ.ಗಂಗಾಧರಪ್ಪ ಬೆಂಗಳೂರು, ಎಂ.ಎಸ್ ಶಿವರಾಜ್ ಬೆಂಗಳೂರು, ಕೆ.ವೀರೇಶ್ ಸುವರ್ಣ ಕಟಪಾಡಿ, ಶಿಲ್ಪಾ ಗಂಗಾಧರ ಸುವರ್ಣ ಕಟಪಾಡಿ, ಧೀರಜ್ ಕುಂದಾಪುರ, ಕಾಮರಾಜ್ ಸುವರ್ಣ ಕುಂಜಿಬೆಟ್ಟು, ರಿತೇಶ್ ಕುಮಾರ್ ಬ್ರಹ್ಮಾವರ, ಆದರ್ಶ ಎಂ.ಮುದ್ರಾಡಿ, ಶಿವಮೊಗ್ಗ, ಮೀರಾ ಸದಾನಂದ ಬ್ರಹ್ಮಾವರ, ವಿನಯ್ ಕುಮಾರ್ ಕೆ ಶಿವಮೊಗ್ಗ, ಆದರ್ಶ ಕೆ ಶಿವಮೊಗ್ಗ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸುನಿಲ್ ಕುಮಾರ್ ಸಿ.ಎಂ ಚುನಾವಣಾ ಪ್ರಕ್ರಿಯೆ ನೆರವೇರಿಸಿದರು ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮೂಲ್ಕಿ: ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಕಿನ್ನಿಗೋಳಿ ಶಾಖೆಯ ಎರಡನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ನ ವಿದ್ಯಾರ್ಥಿಗಳಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ಕಿನ್ನಿಗೋಳಿ ಶಾಖೆಯ ಆವರಣದಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿ ಬಡವರಿಗೆ ಸಹಕಾರಿ ಬ್ಯಾಂಕುಗಳು ಜನಸ್ನೇಹಿಯಾಗಿದ್ದು, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್ ಅವರ ನೇತೃತ್ವದಲ್ಲಿ ಅಸಹಾಯಕರಿಗೆ ಸಹಾಯ ಹಸ್ತ ನೀಡುವ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಸುತ್ತಿರುವುದು ಶ್ಲಾಘನೀಯವಾಗಿದ್ದು ನಿರಂತರವಾಗಿ ನಡೆಯಲಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್ ವಸಂತ್ ಬೆರ್ನಾಡ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಕಳೆದ ಐದು ವರ್ಷಗಳಿಂದ ಸಹಕಾರಿ ಧುರೀಣ ದಿ.ನಾರಾಯಣ ಸನಿಲ್ ಹಾಗೂ ಪಂಜದಗುತ್ತು ದಿ.ಶಾಂತಾರಾಮ ಶೆಟ್ಟಿಯವರ ಪ್ರೇರಣೆಯಿಂದ ಆರಂಭಗೊಂಡಿದ್ದು 38…
ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 35ನೇ ಶಾಖೆಯನ್ನು ಮೂಡುಬಿದಿರೆ ಮುಖ್ಯ ರಸ್ತೆಯ ಅಂಚೆ ಕಚೇರಿಯ ಮುಂಭಾಗದ ರಾಮಯ್ಯ ಕಾಂಪ್ಲೆಕ್ಸ್ನಲ್ಲಿ ಏಪ್ರಿಲ್ 19ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಾಗುವುದು ಎಂದು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. https://chat.whatsapp.com/FCEnlTkAKCC0MGPhXtX4i4 ಮೂಡುಬಿದಿರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆ 11ಕ್ಕೆ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಉಮಾನಾಥ ಕೋಟ್ಯಾನ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಐ. ತಾರಾನಾಥ ಪೂಜಾರಿ ಭದ್ರತಾ ಕೋಶ ಉದ್ಘಾಟಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಗಣಕೀಕೃತ ಬ್ಯಾಂಕಿಂಗ್ಗೆ ಚಾಲನೆ ನೀಡಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಭಾಸ್ಕರ್ ಎಸ್ ಕೋಟ್ಯಾನ್ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮಾಜಿ ಸಚಿವ ಅಭಯಚಂದ್ರ ಜೈನ್ ಮೈಕ್ರೋ…
ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅಭಿಪ್ರಾಯ ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನವೀನ ಹೆಜ್ಜೆ ಇಟ್ಟಿರುವ ಎಸ್ಸಿಡಿಸಿಸಿ ಬ್ಯಾಂಕ್, ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳನ್ನು ಪರಿಚಯಿಸುವ ಮೂಲಕ ಗ್ರಾಹಕರಿಗೆ ಆಧುನಿಕ ಹಾಗೂ ವೇಗವಾದ ಹಣಕಾಸು ಸೇವೆಗಳನ್ನು ಒದಗಿಸುತ್ತಿದೆ. ಈ ಹೊಸ ಯೋಜನೆಗಳಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಬ್ಯಾಂಕ್ನಲ್ಲಿ ಬುಧವಾರ ಆಯೋಜಿಸಲಾದ ಡಿಜಿಟಲ್ ಬ್ಯಾಂಕಿಂಗ್ ಹಾಗೂ ಸೈಬರ್ ಭದ್ರತೆ ಕುರಿತ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತ್ವರಿತ ಮತ್ತು ಸುರಕ್ಷಿತ ಸೇವೆಗಳು ಅತ್ಯಗತ್ಯವಾಗಿದ್ದು, ಗ್ರಾಹಕರ ನಿರೀಕ್ಷೆಗಳಿಗೆ ತಕ್ಕಂತೆ ಸೇವೆಗಳನ್ನು ವಿಸ್ತರಿಸುವುದು ಬ್ಯಾಂಕಿನ ಪ್ರಮುಖ ಗುರಿಯಾಗಿದೆ ಎಂದರು. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಆರ್ಟಿಜಿಎಸ್, ನೆಫ್ಟ್, ಸಿಟಿಎಸ್, ಎಸ್ಎಂಎಸ್ ಅಲರ್ಟ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್ ಮತ್ತು ಪಿಒಎಸ್ ಸೇರಿದಂತೆ ಹಲವು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ. ಇತ್ತೀಚಿನ ತಾಂತ್ರಿಕ ಅಭಿವೃದ್ಧಿಗಳ…
4.05 ಕೋಟಿ ರೂಪಾಯಿ ಲಾಭ, ಐತಿಹಾಸಿಕ ಮೈಲಿಗಲ್ಲು ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಸಂಘವು 2025-26ನೇ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯಾದ ರೂ. 1090 ಕೋಟಿಯ ವ್ಯವಹಾರ ನಡೆಸಿದ್ದು, 4.05 ಕೋಟಿ ರೂಪಾಯಿ ಲಾಭ ಗಳಿಸಿ, ಹೊಸ ಇತಿಹಾಸ ನಿರ್ಮಿಸಿದೆ. https://chat.whatsapp.com/FCEnlTkAKCC0MGPhXtX4i4 ವಿಟ್ಲದಲ್ಲಿ ಪ್ರಧಾನ ಕಛೇರಿ ಮತ್ತು ಕನ್ಯಾನ, ಕಲ್ಲಡ್ಕ, ಬಿ.ಸಿ.ರೋಡು ಹಾಗೂ ಪುತ್ತೂರಿನಲ್ಲಿ ಶಾಖೆಗಳನ್ನು ಹೊಂದಿರುವ ವಿಟ್ಲ ಸಹಕಾರಿ ಗ್ರಾಮೀಣ ಸಂಘವು, ಒಟ್ಟು 9189 ಮಂದಿ ಸದಸ್ಯರನ್ನು ಹೊಂದಿದ್ದು, 3.04 ಕೋಟಿ ರೂಪಾಯಿ ಪಾಲು ಬಂಡವಾಳ ಹೊಂದಿರುತ್ತದೆ ಹಾಗೂ ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ 226 ಕೋಟಿ ರೂಪಾಯಿಗಳ ಹೆಚ್ಚಿನ ವ್ಯವಹಾರ ದಾಖಲಿಸಿ ಅದ್ಭುತ ಸಾಧನೆ ಪ್ರದರ್ಶಿಸಿದೆ. ಆಧುನಿಕ ಯುಗದ ಪೈಪೋಟಿಯ ಮಧ್ಯೆಯೂ 149.84 ಕೋಟಿ ರೂಪಾಯಿಗಳ ಠೇವಣಿ ಸಂಗ್ರಹಿಸಿದ್ದು, ಕಳೆದ ಸಾಲಿಗಿಂತ ಶೇಕಡಾ 11.22ರಷ್ಟು ಹೆಚ್ಚಳವಾಗಿದೆ. ಅಲ್ಲದೆ 125.63 ಕೋಟಿ ರೂಪಾಯಿಗಳ ಹೊರಬಾಕಿ ಸಾಲಗಳಿದ್ದು ಸಾಲ ವಸೂಲಾತಿಯೂ ಕಳೆದ ಸಾಲಿಗಿಂತ ಹೆಚ್ಚಾಗಿದ್ದು ಶೇಕಡಾ 95.11 ಆಗಿರುತ್ತದೆ.…
ಮಂಗಳೂರು: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸಂಘದ ಸದಸ್ಯರಿಗೆ ಮಾಡಿರುವ ಉಚಿತ ಅಪಘಾತ ವಿಮೆ ಸೌಲಭ್ಯವನ್ನು ಶುಕ್ರವಾರ ವಿತರಿಸಲಾಯಿತು. https://chat.whatsapp.com/FCEnlTkAKCC0MGPhXtX4i4 2025ರ ಏಪ್ರಿಲ್ 1ರಂದು ಈ ವಿಮಾ ಸೌಲಭ್ಯ ಜಾರಿಗೊಳಿಸಿದ್ದು, ಇತ್ತೀಚೆಗೆ ಅಪಘಾತದಲ್ಲಿ ಮೃತರಾಗಿರುವ ಕೊಟ್ಟಾರ ಚೌಕಿ ಶಾಖೆಯ ಮಾಜಿ ಜನತಾ ನಿಧಿ ಸಂಗ್ರಾಹಕ ಹಾಗೂ ಸದಸ್ಯರಾದ ಅಶೋಕ್ ಆಚಾರ್ಯ ಬಿ ಇವರ ಪತ್ನಿ ಜಯಂತಿ ಅಶೋಕ್ ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯರು ವಿಮಾ ಮೊತ್ತ ರೂ.2 ಲಕ್ಷದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಎ.ಆನಂದ ಆಚಾರ್ಯ, ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ಕೆ. ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು., ಕೆ.ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ ಎ.ಎಸ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಸೊಸೈಟಿಯ ನವೀಕೃತ ಬೆಳ್ಳಂಪಳ್ಳಿ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಳಹಸ್ತೇoದ್ರ ಸ್ವಾಮೀಜಿ ಆಶೀರ್ವಚನ ಉಡುಪಿ: ಸಹಕಾರಿ ಸಂಘಗಳು ಸವಾಜಮುಖಿಯಾಗಿ ಬೆಳವಣಿಗೆ ಹೊಂದಬೇಕು. ಆ ಕೆಲಸವನ್ನು ಎಸ್.ಕೆ. ಗೋಲ್ಡ್ ಸ್ಮಿತ್ಸ್ ಸೊಸೈಟಿ ಮಾಡುತ್ತಿದೆ. ಸವಾಜದ ಜೊತೆಗೆ ಬೆರೆತುಕೊಂಡು ನಮ್ಮ ಸಂಸ್ಥೆ ಎನ್ನುವ ಭಾವನೆ ಜನರಲ್ಲಿ ಮೂಡಿಸಿದೆ ಎಂದು ಆನೆಗುಂದಿ ಮಹಾಸಂಸ್ಥಾನದ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಬುಧವಾರ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಹವಾನಿಯಂತ್ರಿತ ನವೀಕತ ಬೆಳ್ಳಂಪಳ್ಳಿ ಶಾಖೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಜಗದ್ಗುರು ಅನಂತ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಎಸ್ ಕೆ ಗೋಲ್ಡ್ ಸ್ಮಿತ್ಸ್ ಸೊಸೈಟಿಯು ಸಾರ್ವಜನಿಕ ರಂಗಕ್ಕೆ ಅತ್ಯದ್ಬುತವಾದ ಸೇವೆಯನ್ನು ನೀಡಿದೆ. ಆಡಳಿತ ಮಂಡಳಿ, ಸಿಬ್ಬಂದಿ, ಗ್ರಾಹಕರು ಎಲ್ಲರೂ ಸೇರಿ ಈ ಸಂಸ್ಥೆಯನ್ನು ಬೆಳೆಸಿದ್ದಾರೆ. ಎಲ್ಲರ ಸಂಯೋಜನೆಯ ಪ್ರತಿಫಲವೇ ಸಂಸ್ಥೆಯ ಸಾಧನೆಗೆ ಕಾರಣವಾಗಿದೆ. ಈ ಸಂಸ್ಥೆ ಹಲವಾರು ವಷರ್ಗಳಿಂದ…
ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ ಒಟ್ಟು ರೂ.1400 ಕೋಟಿ ವ್ಯವಹಾರ ನಡೆಸಿದ್ದು ರೂ.3.40 ಕೋಟಿ ಲಾಭ ಗಳಿಸಿ, ಅತ್ಯುತ್ತಮ ಸಾಧನೆ ಮಾಡಿದೆ ಎಂದು ಸಂಘದ ಅಧ್ಯಕ್ಷರಾದ ಜೀವನ್ ಲಾಯ್ಡ್ ಪಿಂಟೋ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 28 ವರ್ಷಗಳ ಇತಿಹಾಸವಿರುವ ಸಂಘವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನಲ್ಲಿ ಒಟ್ಟು 10 ಶಾಖೆಗಳನ್ನು ಒಳಗೊಂಡು ಕಾರ್ಯಾಚರಿಸುತ್ತಿದೆ. 2026ರ ಮಾರ್ಚ್ ಅಂತ್ಯಕ್ಕೆ ಒಟ್ಟು 17,177 ಸದಸ್ಯರಿಂದ ರೂ.3.94 ಕೋಟಿ ಪಾಲು ಬಂಡವಾಳ, ರೂ.150 ಕೋಟಿ ಠೇವಣಿ ಸಂಗ್ರಹದೊಂದಿಗೆ ಹೊರಬಾಕಿ ಸಾಲ ರೂ.137 ಕೋಟಿ ಇರುವುದು. ಸಂಘದ ಒಟ್ಟು ವ್ಯವಹಾರ 1400 ಕೋಟಿ ಆಗಿದ್ದು, ಕಳೆದ ಸಾಲಿಗೆ ಹೋಲಿಸಿದಲ್ಲಿ ಶೇ. 40ರಷ್ಟು ಪ್ರಗತಿ ಸಾಧಿಸಿದೆ. ಸಂಘವು ರೂ.164 ಕೋಟಿ ದುಡಿಯುವ ಬಂಡವಾಳದೊಂದಿಗೆ, ಕ್ಷೇಮ ನಿಧಿ ಹಾಗೂ ಇತರ ನಿಧಿಗಳನ್ನು ಸೇರಿ ರೂ.11.46 ಕೋಟಿ ನಿಧಿಗಳನ್ನು, ರೂ. 32.71 ಕೋಟಿ ಧನವಿನಿಯೋಗಗಳನ್ನು ಹೊಂದಿದೆ.…
