Author: admin

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ 10 ಗ್ರಾಮ್‌ಗೆ 32 ರೂ. ಇದ್ದ ಚಿನ್ನಕ್ಕೆ ಈಗ 91,000 ರೂ.!   ನವದೆಹಲಿ: ದಿನೇದಿನೆ ಏರುಗತಿಯಲ್ಲಿ ಸಾಗುತ್ತಿರುವ ಬಂಗಾರದ ದರ ಸಾರ್ವಕಾಲಿಕ ದಾಖಲೆಯ ದರಕ್ಕೆ ಏರಿಕೆಯಾಗಿದೆ. ಅಖಿಲ ಭಾರತ ಸರಾಫ ಆಸೋಸಿಯೇಶನ್‌ ಪ್ರಕಾರ ದೆಹಲಿಯಲ್ಲಿ ಸೋಮವಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,300 ರೂ. ಏರಿಕೆಯಾಗಿ, 90,750 ರೂ.ಗೆ ತಲುಪಿದೆ. ಇದು ಚಿನ್ನದ ಬೆಲೆಯಲ್ಲಿ ಇದುವರೆಗಿನ ಸಾರ್ವಕಾಲಿಕ ದಾಖಲೆ. https://chat.whatsapp.com/EbVKVnWB6rlHT1mWtsgbch ಸತತ ಏರುಗತಿಯಲ್ಲಿ ಸಾಗುತ್ತಿರುವ ಬಂಗಾರದ ಬೆಲೆ ಮತ್ತೆ ಮತ್ತೆ ಏರಿಕೆಯಾಗಲು ಅಮೆರಿಕ ಅನುಸರಿಸುತ್ತಿರುವ ಸುಂಕ ನೀತಿ ಪ್ರಮುಖ ಕಾರಣ ಎನ್ನುತ್ತಾರೆ ತಜ್ಞರು. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರಸಕ್ತ ವರ್ಷವೇ ಅಂದರೆ ಎರಡೂವರೆ ತಿಂಗಳಲ್ಲೇ 11,360 ರೂ. ಹೆಚ್ಚಳವಾಗಿದೆ. ಜನವರಿ 1ರಂದು 79,390 ರೂ. ಇದ್ದ ಚಿನ್ನದ ಬೆಲೆ ಮಾ.17ಕ್ಕೆ 90,750 ರೂ.ಗೆ ಏರಿಕೆ ಕಂಡಿದೆ! ಅಮೆರಿಕ ಅನುಸರಿಸುತ್ತಿರುವ ಸುಂಕ ನೀತಿ, ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ, ಜಾಗತಿಕ ಆರ್ಥಿಕ ಬೆಳವಣಿಗೆ ದರ ಕುಸಿತ ಕಾಣುತ್ತಿರುವುದು ಇತ್ಯಾದಿ…

Read More

ನವದೆಹಲಿ: ಲಂಡನ್‌ನ ಸೆಂಟ್ರಲ್ ಬ್ಯಾಂಕಿಂಗ್ ಡಿಜಿಟಲ್ ಉಪಕ್ರಮಗಳಿಗಾಗಿ ಕೊಡಮಾಡುವ ಡಿಜಿಟಲ್ ಟ್ರಾನ್ಸ್‌ಫಾರ್ಮೇಷನ್ ಪ್ರಶಸ್ತಿ 2025 ಅನ್ನು ಭಾರತೀಯ ರಿಸರ್ವ್ ಬ್ಯಾಂಕ್ ಗೆದ್ದಿಕೊಂಡಿದೆ. https://chat.whatsapp.com/EbVKVnWB6rlHT1mWtsgbch ಜನವರಿ 2023ರಲ್ಲಿ ಆರ್‌ಬಿಐ ಪ್ರಾರಂಭಿಸಿದ ಸಾರಥಿ ಮತ್ತು ಪ್ರವಾಹ್‌ ಎಂಬ ಡಿಜಿಟಲ್‌ ವ್ಯವಸ್ಥೆಯು ಆರ್‌ಬಿಐನ ಆಂತರಿಕ ಕಾರ್ಯಪ್ರವಾಹಗಳನ್ನು ಡಿಜಿಟಲೀಕರಣಗೊಳಿಸಿತು. ದಾಖಲೆ ಸಂಗ್ರಹ, ದಾಖಲೆ ನಿರ್ವಹಣೆ ಮತ್ತು ಡೇಟಾ ವಿಶ್ಲೇಷಣೆಯನ್ನು ಈ ವ್ಯವಸ್ಥೆಗಳ ಮೂಲಕ ಹೆಚ್ಚಿಸಿತು. 2024ರ ಮೇ ತಿಂಗಳಲ್ಲಿ ಇದು ಬಾಹ್ಯ ಬಳಕೆದಾರರಿಗಾಗಿ ನಿಯಂತ್ರಕ ಅಪ್ಲಿಕೇಶನ್‌ಗಳನ್ನು ವ್ಯವಸ್ಥಿತಗೊಳಿಸಿತು. ಸಲ್ಲಿಕೆಗಳನ್ನು ಸಾರಥಿ ವ್ಯವಸ್ಥೆಯಲ್ಲಿ ಸಂಯೋಜಿಸಿತು. ಈ ಪ್ರಶಸ್ತಿಯು ಸಾರಥಿ ವ್ಯವಸ್ಥೆಯ ಮೂಲಕ ವ್ಯಾಪಕ ತರಬೇತಿ ಮತ್ತು ಹಿರಿಯ ನೋಡಲ್ ಅಧಿಕಾರಿಗಳು ಮತ್ತು ಸಾರಥಿ ಮಿತ್ರರಿಂದ ಬೆಂಬಲ ಒಳಗೊಂಡಂತೆ ಆರ್‌ಬಿಐನ ಸಹಯೋಗದ ಪ್ರಯತ್ನಗಳನ್ನು ಗುರುತಿಸಿ ಡಿಜಿಟಲ್ ಕಾರ್ಯಾಚರಣೆಗಳಿಗೆ ಸುಗಮ ಪರಿವರ್ತನೆಯನ್ನು ಖಚಿತಪಡಿಸುತ್ತದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಶೂನ್ಯ ಕಸದ ಅಡುಗೆ ಮನೆ ನಿರ್ವಹಣೆಯ ಬಗ್ಗೆ ಅನುಭವ ಹಂಚಿಕೊಂಡ ಡಾ.ತೇಜಸ್ವಿನಿ ಅನಂತ್‌ ಕುಮಾರ್‌ ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಕೋಆಪರೇಟಿವ್ ಲಿಮಿಟೆಡ್ (ಕೆಎಸ್‌ಎಸ್‌ಎಫ್‌ಸಿಎಲ್‌) ವತಿಯಿಂದ ಅಂತಾರಾಷ್ಟ್ರೀಯ ಇತ್ತೀಚೆಗೆ ಮಹಿಳಾ ದಿನ ಆಚರಿಸಲಾಯಿತು. ವಿವಿಧ ಸೌಹಾರ್ದ ಸಹಕಾರಿ ಸಂಸ್ಥೆಗಳ 135 ಮಹಿಳೆಯರು ಭಾಗವಹಿಸಿದ್ದರು. https://chat.whatsapp.com/EbVKVnWB6rlHT1mWtsgbch ಅದಮ್ಯ ಚೇತನ ಫೌಂಡೇಶನ್‌ ವ್ಯವಸ್ಥಾಪಕ ಟ್ರಸ್ಟಿ ಮತ್ತು ಅಧ್ಯಕ್ಷೆ ಡಾ.ತೇಜಸ್ವಿನಿ ಅನಂತ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಒಂದು ದಶಕಕ್ಕೂ ಹೆಚ್ಚು ಕಾಲ ತ್ಯಾಜ್ಯವನ್ನು ಪರ್ಯಾಯ ಇಂಧನದ ಮೂಲವಾಗಿ ಬ್ರಿಕೆಟ್‌ ಆಗಿ ಪರಿವರ್ತಿಸುವ ಮೂಲಕ ಶೂನ್ಯ-ಕಸ ಅಡುಗೆ ಮನೆಯನ್ನು ನಿರ್ವಹಿಸುವ ರೀತಿಯ ಅನುಭವ ಹಂಚಿಕೊಂಡರು. ಬದಲಾವಣೆಯು ಮನೆಯಿಂದಲೇ ಪ್ರಾರಂಭವಾಗಬೇಕು ಎಂಬ ಅಂಶವನ್ನು ವಿವರಿಸಿ ಅದರ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಕೋಆಪರೇಟಿವ್ ಲಿಮಿಟೆಡ್ ಅಧ್ಯಕ್ಷ ಜಿ.ನಂಜನ ಗೌಡ ಅಧ್ಯಕ್ಷತೆ ವಹಿಸಿದ್ದರು. ರೇಷ್ಮೆ ಕೃಷಿ ನಿರ್ದೇಶಕಿ ಮತ್ತು ಪಶುಸಂಗೋಪನಾ ಆಯುಕ್ತೆ ಶ್ರೀರೂಪಾ ಮುಖ್ಯ ಅತಿಥಿಯಾಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ನೀಡಿದ ಕೊಡುಗೆಗಳಿಗಾಗಿ ಐವರು…

Read More

ಕೊಚ್ಚಿ: ಕೇರಳದ ಕರುವನ್ನೂರ್ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 15ರಂದು ವಿಚಾರಣೆಗೆ ಬರುವಂತೆ ಸಿಪಿಐ(ಎಂ) ಸಂಸದ ಕೆ.ರಾಧಾಕೃಷ್ಣನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕಳುಹಿಸಿದೆ. https://chat.whatsapp.com/EbVKVnWB6rlHT1mWtsgbch ಅಲತ್ತೂರು ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಕೆ.ರಾಧಾಕೃಷ್ಣನ್‌ ಅವರು, ಮನಿ ಲ್ಯಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆ ದಾಖಲಿಸಲು ಸಮನ್ಸ್‌ ನೀಡಲಾಗಿದೆ ಎಂದು ತಿಳಿದುಬಂದಿದೆ. ಕರುವನ್ನೂರ್ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ 150 ಕೋಟಿ ರೂ. ಮೌಲ್ಯದ ಅಕ್ರಮಗಳು ನಡೆದಿದೆ ಎಂಬ ಆರೋಪದ ಮೇಲೆ 2021ರ ಜುಲೈನಲ್ಲಿ ತ್ರಿಶೂರ್‌ನಲ್ಲಿ ಕೇರಳ ಪೊಲೀಸ್ ಅಪರಾಧ ವಿಭಾಗವು 16 ಎಫ್‌ಐಆರ್‌ ದಾಖಲಿಸಿತ್ತು. ಈ ಬಗ್ಗೆ ಇಡಿ ತನಿಖೆ ಕೈಗೊಂಡಿದ್ದು, ಈ ಸಹಕಾರಿ ಸಂಘದ ಸದಸ್ಯರ ಅರಿವಿಲ್ಲದೆ ಒಂದೇ ಆಸ್ತಿಯ ಬಗ್ಗೆ ಹಲವು ಬಾರಿ ಈ ಸಹಕಾರಿ ಬ್ಯಾಂಕ್‌ನಿಂದ ನಕಲಿ ಸಾಲಗಳನ್ನು ಮಂಜೂರು ಮಾಡಲಾಗಿದೆ ಎಂದು ಇಡಿ ತನಿಖೆಯಲ್ಲಿ ಕಂಡುಬಂದಿದೆ. ಸದಸ್ಯರಲ್ಲದವರಿಗೆ ಇತರ ಸದಸ್ಯರ ಹೆಸರಿನಲ್ಲಿ ಬೇನಾಮಿ ಸಾಲಗಳನ್ನು ಮಂಜೂರು…

Read More

ನವದೆಹಲಿ: ಸಹಕಾರ ಸಂಘಗಳನ್ನು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆ, 2005ರ ಅಡಿಯಲ್ಲಿ ತರುವ ಯಾವುದೇ ಯೋಜನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್‌ ಶಾ ರಾಜ್ಯಸಭೆಯಲ್ಲಿ ಗುರುವಾರ ಸ್ಪಷ್ಟಪಡಿಸಿದ್ದಾರೆ. ಆರ್‌ಐಟಿ ಕಾನೂನು ಸಾರ್ವಜನಿಕ ಅಧಿಕಾರಿಗಳಿಗೆ ಮಾತ್ರ ಅನ್ವಯಿಸುತ್ತದೆ, ಆದ ಕಾರಣ ಕೋ ಆಪರೇಟಿವ್‌ ಸೊಸೈಟಿಗಳನ್ನು ಇದರಿಂದ ಹೊರಗಿಡಲಾಗಿದೆ ಎಂದು ಅಮಿತ್ ಶಾ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಆದಾಗ್ಯೂ, 2023ರಲ್ಲಿ ಪರಿಷ್ಕರಿಸಲಾದ ಬಹು-ರಾಜ್ಯ ಸಹಕಾರ ಸಂಘಗಳ ಕಾಯ್ದೆ, 2002ರ ತಿದ್ದುಪಡಿ ಮಾಡಿದ ಸೆಕ್ಷನ್ 106ರ ಅಡಿಯಲ್ಲಿ, ಎಲ್ಲಾ ಬಹು-ರಾಜ್ಯ ಸಹಕಾರ ಸಂಘಗಳು ಸಹಕಾರಿ ಮಾಹಿತಿ ಅಧಿಕಾರಿಯನ್ನು ನೇಮಿಸುವ ನಿಬಂಧನೆಯನ್ನು ಪರಿಚಯಿಸಲಾಗಿದೆ ಎಂದು ಅಮಿತ್‌ ಶಾ ಹೇಳಿದರು. ಈ ಅಧಿಕಾರಿಗಳು ಸಂಘದ ಸದಸ್ಯರಿಗೆ ಅದರ ವ್ಯವಹಾರಗಳು ಮತ್ತು ನಿರ್ವಹಣೆಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಜವಾಬ್ದಾರಿ ಹೊಂದಿರುತ್ತಾರೆ. ಸಹಕಾರಿ ಸಂಘಗಳ ಸದಸ್ಯರು ತಮ್ಮ ಸಂಸ್ಥೆಗಳ ಬಗ್ಗೆ ನಿರ್ಣಾಯಕ ಮಾಹಿತಿ ಪಡೆಯುವ ಅವಕಾಶ ಹೊಂದಿರುತ್ತಾರೆ ಎಂದು ಖಚಿತಪಡಿಸಿಕೊಳ್ಳುವಾಗ ಬಹು-ರಾಜ್ಯ ಸಹಕಾರಿ…

Read More

ನವದೆಹಲಿ: ರಾಷ್ಟ್ರೀಯ ಸಹಕಾರಿ ದತ್ತಾಂಶಗಳ (NCD) ಪ್ರಕಾರ, ಜನವರಿ 1, 2025ರಿಂದ ಮಾರ್ಚ್ 1, 2025ರವರೆಗೆ ಅಂತಾರಾಷ್ಟ್ರೀಯ ಸಹಕಾರಿ ವರ್ಷದಡಿ ದೇಶಾದ್ಯಂತ 1,349 ಸಹಕಾರಿ ಸಂಘಗಳನ್ನು ನೋಂದಾಯಿಸಲಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಹೊಸದಾಗಿ ನೋಂದಾಯಿಸಲಾದ ಸಹಕಾರಿ ಸಂಘಗಳಲ್ಲಿ, ಬಿಹಾರ 523 ಸಂಘಗಳ ನೋಂದಣಿಯೊಂದಿಗೆ ಮುಂಚೂಣಿಯಲ್ಲಿದೆ, 179 ಸಂಘಗಳೊಂದಿಗೆ ಛತ್ತೀಸ್‌ಗಢ ಮತ್ತು 79 ಸಂಘಗಳೊಂದಿಗೆ ಅಸ್ಸಾಂ ನಂತರದ ಸ್ಥಾನಗಳಲ್ಲಿವೆ. NCD ಸಾರ್ವಜನಿಕವಾಗಿ https://cooperatives.gov.in ನಲ್ಲಿ ಲಭ್ಯವಿದೆ ಮತ್ತು ಸಹಕಾರಿ ಚಳವಳಿಯನ್ನು ಬಲಪಡಿಸಲು ನೀತಿ ನಿರೂಪಕರಿಗೆ ಅಮೂಲ್ಯ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುತ್ತವೆ. ಡೇಟಾಬೇಸ್ ಸ್ಥಳ, ಸದಸ್ಯತ್ವ, ಆರ್ಥಿಕ ಚಟುವಟಿಕೆಗಳು ಮತ್ತು ಸಂಪರ್ಕಗಳಂತಹ ಪ್ರಮುಖ ವಿವರಗಳನ್ನು ಸೆರೆಹಿಡಿಯುತ್ತದೆ, ಅಧಿಕಾರಿಗಳು ವ್ಯಾಪ್ತಿಗೆ ಒಳಪಡದ ಗ್ರಾಮ ಪಂಚಾಯತ್‌ಗಳು ಸೇರಿದಂತೆ ಸಹಕಾರಿ ವ್ಯಾಪ್ತಿಯಲ್ಲಿನ ಅಂತರವನ್ನು ಗುರುತಿಸಲು ಅನುವು ಮಾಡಿಕೊಡುತ್ತದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ರಾಜ್ಯಸಭೆಯಲ್ಲಿ ಸಹಕಾರ ಸಚಿವ ಅಮಿತ್‌ ಶಾ ಮಾಹಿತಿ ನವದೆಹಲಿ: ಪ್ರಸ್ತಾಪಿತ ರಾಷ್ಟ್ರೀಯ ಸಹಕಾರಿ ನೀತಿಯ ಕರಡು ಸಿದ್ಧಪಡಿಸಲಾಗಿದ್ದು ಅದು ಅಂತಿಮ ಹಂತದಲ್ಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. “ಸಹಕಾರ್ ಸೇ ಸಮೃದ್ಧಿ” (ಸಹಕಾರದಿಂದ ಸಮೃದ್ಧಿ) ಎಂಬ ದೃಷ್ಟಿಕೋನದಲ್ಲಿ ಸಹಕಾರಿ ವಲಯವನ್ನು ಬಲಪಡಿಸುವ ಗುರಿಯನ್ನು ಈ ನೀತಿ ಹೊಂದಿರಲಿದೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ರಾಷ್ಟ್ರೀಯ ಸಹಕಾರಿ ನೀತಿಯ ಕರಡು ಸಿದ್ಧಪಡಿಸಲು ಅಧ್ಯಯನ ನಡೆಸಲು ಸರ್ಕಾರವು ಸೆಪ್ಟೆಂಬರ್ 2, 2022ರಂದು ಸುರೇಶ್ ಪ್ರಭು ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ಸಮಿತಿಯನ್ನು ರಚಿಸಿತ್ತು. ಸಮಿತಿಯು ಸಹಕಾರಿ ವಲಯದ ತಜ್ಞರು, ರಾಷ್ಟ್ರೀಯ, ರಾಜ್ಯ, ಜಿಲ್ಲಾ ಮತ್ತು ಪ್ರಾಥಮಿಕ ಹಂತದ ಸಹಕಾರಿ ಸಂಘಗಳ ಪ್ರತಿನಿಧಿಗಳು ಹಾಗೂ ಸಹಕಾರ ಸಚಿವಾಲಯ ಮತ್ತು ವಿವಿಧ ಕೇಂದ್ರ ಸಚಿವಾಲಯಗಳ ಅಧಿಕಾರಿಗಳನ್ನು ಒಳಗೊಂಡಿದೆ. ನೀತಿ ನಿರೂಪಣಾ ಪ್ರಕ್ರಿಯೆಯ ಭಾಗವಾಗಿ, ಸಮಿತಿಯು 17 ಸಭೆಗಳನ್ನು ನಡೆಸಿ ದೇಶಾದ್ಯಂತ ನಾಲ್ಕು ಪ್ರಾದೇಶಿಕ ಕಾರ್ಯಾಗಾರಗಳನ್ನು ನಡೆಸಿ ಪಾಲುದಾರರಿಂದ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯ ಪ್ರದೀಪ್ ಕುಮಾರ್ ಸುವರ್ಣ ಹಾಗೂ ಗೋಪಾಲ್ ಅಮೀನ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರದೀಪ್ ಕುಮಾರ್ ಸುವರ್ಣ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಸಿಬ್ಬಂದಿಗಳ ಕೊರತೆ ಇರುವುದರಿಂದ ನಾವು ಅಲ್ಲಿ ತೆರಳದೆ ಸಹಕಾರಿ ಸಂಸ್ಥೆಗಳತ್ತ ಆಕರ್ಷಿತರಾಗುತ್ತಿದ್ದೇವೆ. ಅದರಲ್ಲೂ ಆತ್ಮಶಕ್ತಿಯ ಸಿಬ್ಬಂದಿಗಳು ಎಟಿಎಂಗಿಂತಲೂ ಅತಿ ವೇಗದಲ್ಲಿ ಸೇವೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆತ್ಮಶಕ್ತಿಯ ಸಹಕಾರಿ ತನ್ನ ಸ್ವಂತ ಅಪ್ಲಿಕೇಶನ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಗುಣಮಟ್ಟದ ಸೇವೆ ನೀಡುವಂತಾಗಲಿ” ಎಂದು ಶುಭ ಹಾರೈಸಿದರು. https://chat.whatsapp.com/EbVKVnWB6rlHT1mWtsgbch ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ “ಬಜ್ಪೆ ಶಾಖೆ ಆರಂಭಗೊಂಡು ೧೧ ವರ್ಷಗಳ ಈ ಸಂದರ್ಭ ಗ್ರಾಹಕರ ಸಭೆ ಆಯೋಜಿಸಿದ್ದೇವೆ. ೧೧ ವರ್ಷಗಳಿಂದ ಎಲ್ಲಾ ವರ್ಗದ ಗ್ರಾಹಕರು ಸಹಕರಿಸುತ್ತ ಶಾಖೆಯು ಉತ್ತಮ…

Read More

ಮುಂದಿನ ವಾರ್ಷಿಕ ಮಹಾಸಭೆಯಲ್ಲಿ ನಿರ್ಧಾರ: ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಹೇಳಿಕೆ ಮಂಗಳೂರು: ಜಿಲ್ಲಾ ಸಹಕಾರಿ ಯೂನಿಯನ್‌ ಸದಸ್ಯತ್ವ ಪಡೆದ ಸಂಘಗಳಿಗೆ ಡಿವಿಡೆಂಡ್‌ ನೀಡುವ ಬಗ್ಗೆ ಜಿಲ್ಲಾ ಸಹಕಾರಿ ಯೂನಿಯನ್‌ನ ಮುಂದಿನ ವಾರ್ಷಿಕ ಮಹಾಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಸಹಕಾರ ಯೂನಿಯನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಹಕಾರ ಇಲಾಖೆ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಂಜ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳಿಗೆ ಜರುಗಿದ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಪ್ರಗತಿಪಥದಲ್ಲಿ ಮುನ್ನಡೆಯಲು ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿರುತ್ತದೆ. ಸಹಕಾರ ಕಾಯ್ದೆ ನಿಯಮಗಳ…

Read More

ಸಹಕಾರ ಸಂಘಗಳು, ಸೌಹಾರ್ದ ಸಹಕಾರ ಸಂಘಗಳಿಗೆ ವಿನಾಯಿತಿ ಬೆಂಗಳೂರು: ದುಬಾರಿ ಬಡ್ಡಿಗೆ ಸಾಲ ನೀಡಿ ಜನರನ್ನು ಶೋಷಿಸುತ್ತಿದೆ ಎಂಬ ಆರೋಪ ಹೊತ್ತಿರುವ ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾನೂನು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಅನಧಿಕೃತ ಫೈನಾನ್ಸ್ ಸಂಸ್ಥೆಗಳಿಗೆ 10 ವರ್ಷ ಕಠಿಣ ಜೈಲು, 5 ಲಕ್ಷ ರೂ. ದಂಡ, ಕಪ್ಪುಹಣಕ್ಕೆ ಕಡಿವಾಣ ಹಾಗೂ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸುವ ನಿಟ್ಟಿನಲ್ಲಿ ಈ ವಿಧೇಯಕ ಅಂಗೀಕರಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ ಈ ವಿಧೇಯಕಕ್ಕೆ ಸುದೀರ್ಘ ಚರ್ಚೆಯ ಬಳಿಕ ಪ್ರತಿಪಕ್ಷಗಳ ಸಲಹೆ ಹಾಗೂ ಸಹಮತದಿಂದ ಅನುಮೋದನೆ ಸಿಕ್ಕಿದೆ. ವಿಧೇಯಕ ಮಂಡಿಸಿ ಮಾತನಾಡಿದ ಎಚ್.ಕೆ ಪಾಟೀಲ್, ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿದಾರರಿಂದ ಸಾಲ ಪಡೆದವರಿಗೆ ಉಂಟಾಗುವ…

Read More