Author: admin
ಮಂಗಳೂರು: ಮಂಗಳೂರಿನ ಬೆಂದೂರ್ವೆಲ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಮುಂದಿನ ನವರಾತ್ರಿ ದಸರಾ ಸಂದರ್ಭದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. https://chat.whatsapp.com/EbVKVnWB6rlHT1mWtsgbch ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭ ಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಆಡಿಟ್ ವರ್ಗೀಕರಣದಲ್ಲಿ ಸತತ ‘ಎ’ ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್ಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ. ಎಲ್ಲಾ ಶಾಖೆಗಳು ಕಂಪ್ಯೂಟರೀಕೃತ ಲೆಕ್ಕಪತ್ರ ವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸ್ಥೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ 1 ವರ್ಷಕ್ಕೆ 8.50%, 2…
40 ಲಕ್ಷ ರೂ. ನಿವ್ವಳ ಲಾಭ: ಅಧ್ಯಕ್ಷ ಲಿಂಗದೇವರು ಹೇಳಿಕೆ ತುಮಕೂರು: ತಿಪಟೂರಿನ ಶ್ರೀ ಕಲ್ಪತರು ವೀರಶೈವ ಲಿಂಗಾಯಿತ ಸೌಹಾರ್ದ ಪತ್ತಿನ ಸಹಕಾರಿ ಸಂಘದ 6ನೇ ವಾರ್ಷಿಕ ಮಹಾಸಭೆ ಶನಿವಾರ ನಡೆಯಿತು. ರಾಜ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಶಾಸಕ, ಸಹಕಾರಿ ರತ್ನ ಪುರಸ್ಕೃತ ಕೆ.ಷಡಾಕ್ಷರಿ ಸಭೆ ಉದ್ಘಾಟಿಸಿ ಮಾತನಾಡಿ, ಶ್ರೀ ಕಲ್ಪತರು ವೀರಶೈವ ಲಿಂಗಾಯಿತ ಸೌಹಾರ್ದ ಪತ್ತಿನ ಸಹಕಾರಿ ಸಂಘವು ಪ್ರಾರಂಭದಿಂದಲೂ ಉತ್ತಮ ಸೇವೆ ಸಲ್ಲಿಸುತ್ತ ಬಂದಿದೆ. ಮುಂದೆಯೂ ಸಂಘವು ಚೆನ್ನಾಗಿ ಕಾರ್ಯನಿರ್ವಹಿಸಿ, ಸಹಕಾರಿಯ ಸದಸ್ಯರಿಗೆ ಉತ್ತಮ ಸೇವೆ ಒದಗಿಸಲಿ ಎಂದು ಹಾರೈಸಿದರು. https://chat.whatsapp.com/EbVKVnWB6rlHT1mWtsgbch ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಲಿಂಗದೇವರು ವಹಿಸಿದ್ದರು. ನಗರ ಸಭೆ ಅಧ್ಯಕ್ಷರಾದ ಯಮುನಾ ಧರಣೇಶ್ ಉಪಸ್ಥಿತರಿದ್ದರು. ಮುಖ್ಯಅತಿಥಿ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿಯ ನಿರ್ದೇಶಕ ಸಿ.ಪಿ.ವಿಜಯ್ ಮಾತನಾಡಿ ಸಂಘದ, ರಾಜ್ಯಮಟ್ಟದ ಮತ್ತು ರಾಷ್ಟ್ರಮಟ್ಟದ ವಿಚಾರಗಳನ್ನು ಮಂಡಿಸಿದರು. ಎಸ್ಸೆಸ್ಸೆಲ್ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಉಪಾಧ್ಯಕ್ಷರಾದ ಜಗದೀಶಪ್ಪ, ನಿರ್ದೇಶಕರಾದ ತೇಜಮೂರ್ತಿ,…
ಸಹಕಾರಿಯ ಅಧ್ಯಕ್ಷ ವೆಂಕೋಬ ಜಿಬಾಳಿ ಮಾಹಿತಿ ಸಿಂಧನೂರು: ಇಲ್ಲಿನ ಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿ ಸಂಘವು 46.40 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಹಕಾರಿಯ ಅಧ್ಯಕ್ಷ ವೆಂಕೋಬ ಜಿಬಾಳಿ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಹಕಾರಿಯ ಕಚೇರಿಯಲ್ಲಿ ಇತ್ತೀಚೆಗೆ ನಡೆದ 9ನೇ ಸರ್ವ ಸದಸ್ಯರ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿಯು ಪ್ರಸಕ್ತ ವರ್ಷ 10 ಕೋಟಿ ರೂ.ಗಳ ವಹಿವಾಟು ನಡೆಸಿದೆ. ಸದಸ್ಯರಿಗೆ ಶೇ.12ರಷ್ಟು ಲಾಭಾಂಶ ಘೋಷಣೆ ಮಾಡಲಾಗುತ್ತಿದೆ. ಸದಸ್ಯರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬರದಂತೆ ನಡೆದುಕೊಂಡಿದ್ದೇವೆ. ಆಡಳಿತ ಮಂಡಳಿ ಪರಿಶ್ರಮ, ಸದಸ್ಯರ ಸಹಕಾರ ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಯಿಂದ ಕಡಿಮೆ ಅವಧಿಯಲ್ಲಿ ನಮ್ಮ ಸಹಕಾರಿಯು ವೇಗವಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಸದಸ್ಯರಿಗಾಗಿ ವಿನೂತನ ಯೋಜನೆಗಳನ್ನು ಜಾರಿ ಮಾಡುವ ಉದ್ದೇಶವಿದೆ ಎಂದರು. ಸಂಘದ ಉಪಾಧ್ಯಕ್ಷ ಅಮರೇಶ ಹುಡಾ, ಕಾನೂನು ಸಲಹೆಗಾರ ಜೆ.ರಾಯಪ್ಪ ವಕೀಲ, ಸಹಕಾರಿ ಇಲಾಖೆಯ ಮಲ್ಲಿಕಾರ್ಜುನ ಕಮತಗಿ, ಚೈತನ್ಯ…
ಷೇರುದಾರರಿಗೆ ಶೇ. 14 ಡಿವಿಡೆಂಡ್: ಅಧ್ಯಕ್ಷ ನಾಗೇಶ್ ಕಲ್ಲಡ್ಕ ಮಾಹಿತಿ ಬಂಟ್ವಾಳ: ಪಾಣೆಮಂಗಳೂರಿನ ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 446.68 ಕೋಟಿ ರೂ. ವ್ಯವಹಾರ ನಡೆಸಿ 1.65 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ನಾಗೇಶ್ ಕಲ್ಲಡ್ಕ ತಿಳಿಸಿದರು. https://chat.whatsapp.com/EbVKVnWB6rlHT1mWtsgbch ಭಾನುವಾರ ಪಾಣೆಮಂಗಳೂರಿನ ಸುಮಂಗಲಾ ಸಭಾಂಗಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2025ರ ಮಾರ್ಚ್ ಅಂತ್ಯಕ್ಕೆ 2843 ಎ ತರಗತಿ ಸದಸ್ಯರಿದ್ದು, 5.55 ಕೋಟಿ ರೂ. ಪಾಲು ಬಂಡವಾಳ ಹೊಂದಿದೆ. 2025ರ ಮಾರ್ಚ್ ಅಂತ್ಯಕ್ಕೆ 70.51 ಕೋಟಿ ರೂ. ಠೇವಣಾತಿ, 5.95 ಕೋಟಿ ರೂ. ವಿವಿಧ ನಿಧಿಗಳಲ್ಲಿ ಇದ್ದು 68.32 ಕೋಟಿ ರೂ. ಸಾಲ ಹೊರಬಾಕಿ ಇರುತ್ತದೆ. 2024-25ನೇ ಸಾಲಿನಲ್ಲಿ 104.71 ಕೋಟಿ ರೂ. ಸಾಲ ವಿತರಿಸಿದ್ದು, 91.01 ಕೋ.ಟಿ ರೂ. ಸಾಲವನ್ನುವಸೂಲಿ ಮಾಡಲಾಗಿದೆ. ವರದಿ ವರ್ಷದಲ್ಲಿ ಷೇರುದಾರರಿಗೆ ಶೇ.14 ಡಿವಿಡೆಂಡ್ ಘೋಷಿಸಲಾಗಿದೆ. ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ…
ನಿವ್ವಳ ಲಾಭಾಂಶ ಗಳಿಕೆಯಲ್ಲಿ ಉನ್ನತ ಸಾಧನೆ, ಸದಸ್ಯರಿಗೆ ಶೇ.11 ಡಿವಿಡೆಂಡ್ : ಅಧ್ಯಕ್ಷ ಜನಾರ್ದನ ಭಟ್ ಅಮೈ ಘೋಷಣೆ ಬಂಟ್ವಾಳ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘವು 327,05,95,558.63 ರೂ. ವ್ಯವಹಾರ ನಡೆಸಿದ್ದು 2024-25ನೇ ವಾರ್ಷಿಕ ಸಾಲಿನಲ್ಲಿ 3,27,40,185.70 ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.11 ಡಿವಿಡೆಂಡ್ ನೀಡಲಾಗುವುದು. ನಿವ್ವಳ ಲಾಭಾಂಶ ಗಳಿಕೆಯಲ್ಲಿ ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘವು ತಾಲೂಕಿನಲ್ಲೇ ಪ್ರಥಮ ಸ್ಥಾನ ಪಡೆದಿದೆ ಎಂದು ಸಂಘದ ಅಧ್ಯಕ್ಷ ಜನಾರ್ದನ ಭಟ್ ಅಮೈ ಹೇಳಿದ್ದಾರೆ. https://chat.whatsapp.com/EbVKVnWB6rlHT1mWtsgbch ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿಯ ಶ್ರೀದೇವಿ ಭವನದಲ್ಲಿ ಭಾನುವಾರ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಅವರು ಈ ವಿಷಯ ತಿಳಿಸಿದರು. ವರದಿ ವರ್ಷಾಂತ್ಯಕ್ಕೆ ಸಂಘವು 5,672 ಸದಸ್ಯರಿಂದ ರೂ.5,62,55,500 ಪಾಲು ಬಂಡವಾಳ, ರೂ.62,93,49,978.21 ವಿವಿಧ ರೂಪದ ಠೇವಣಾತಿಗಳನ್ನು ಹೊಂದಿದೆ. ಸದಸ್ಯರಿಗೆ ವಿವಿಧ ರೀತಿಯ 61,02,59,130 ರೂ. ಸಾಲ ನೀಡಲಾಗಿದೆ. ಸಾಲ ವಸೂಲಾತಿಯಲ್ಲಿ ಶೇ.98.51ರಷ್ಟು ಪ್ರಗತಿ…
12% ಡಿವಿಡೆಂಡ್ ವಿತರಣೆ: ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್ ಘೋಷಣೆ ಮಂಗಳೂರು: ಗುರುಪುರ ಕೈಕಂಬದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಫಲ ಸೌಹಾರ್ದ ಸಹಕಾರಿ ಸಂಘವು 82.85 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ 12% ಡಿವಿಡೆಂಡ್ ವಿತರಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್ ಹೇಳಿದರು. https://chat.whatsapp.com/EbVKVnWB6rlHT1mWtsgbch ಗುರುಪುರ ಕೈಕಂಬದ ಮಾತೃಭೂಮಿ ಗ್ರ್ಯಾಂಡ್ ಗ್ಯಾಲಕ್ಸಿಯಲ್ಲಿ ಭಾನುವಾರ ಜರುಗಿದ ಸಂಘದ ಆರನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘವು ಐದು ವರ್ಷಗಳ ಅವಧಿಯಲ್ಲಿ ಐದು ಶಾಖೆಗಳನ್ನು ಹೊಂದಿ ಕಾರ್ಯನಿರ್ವಹಿಸುತ್ತಿದೆ. ಸಂಘದಲ್ಲಿ 3.08 ಕೋಟಿ ಪಾಲು ಬಂಡವಾಳವಿದ್ದು, 29.42 ಕೋಟಿ ರೂ. ಡೆಪಾಸಿಟ್ ಇದೆ. 26.13 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಹೇಳಿದರು. ಕಾರ್ಯಕ್ರಮವನ್ನು ಆನೇಕಲ್ ಗೋಪಾಲ್ ಮತ್ತು ಪುಷ್ಪಾ ಗೋಪಾಲ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಸಿಬ್ಬಂದಿಗಳಾದ ಸುಕೇಶ್, ಹರ್ಷಿತಾ, ಹಿತಾಕ್ಷಿ, ನಿಶಾ ಪ್ರಾರ್ಥಿಸಿದರು. ನಿರ್ದೇಶಕರಾದ ಮಹಾಬಲ ಅಡ್ಯಾರ್ ಸ್ವಾಗತಿಸಿದರು. ಸಂಘದ ಸಿಇಒ ಪ್ರಮೋದ್ ವಾರ್ಷಿಕ…
ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ 6.09 ಕೋಟಿ ರೂ. ಲಾಭ: ಶೇ.20 ಡಿವಿಡೆಂಡ್ ಘೋಷಣೆ
ಎಸ್ಕೆಜಿಐ ಪ್ರಶಸ್ತಿ ಪ್ರದಾನ, ಪಂಚ ಸಾಧಕರಿಗೆ ಗೌರವಾರ್ಪಣೆ ಮಂಗಳೂರು: ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2024-2025ನೇ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ನಡೆದಿದ್ದು, ಸೊಸೈಟಿಗೆ 6.09 ಕೋಟಿ ರೂ. ಲಾಭ ಬಂದಿದ್ದು, ಶೇ.20 ಡಿವಿಡೆಂಡ್ ಘೋಷಣೆ ಮಾಡಲಾಯಿತು. https://chat.whatsapp.com/EbVKVnWB6rlHT1mWtsgbch ಉರ್ವಸ್ಟೋರ್ನ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆಯಲ್ಲಿನಡೆದ ಕಾರ್ಯಕ್ರಮದಲ್ಲಿ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ವಾರ್ಷಿಕ ವರದಿ ಮಂಡಿಸಿದರು. ವಜ್ರಮಹೋತ್ಸವ ವರ್ಷಾಚರಣೆ ಪ್ರಯುಕ್ತ ಸದಸ್ಯರಿಗೆ ಶೇ.20ರಷ್ಟು ಡಿವಿಡೆಂಡ್ ಪಾವತಿಗೆ ಮಂಜೂರಾತಿ ಪಡೆಯಲಾಯಿತು. ಪಂಚ ಕಸುಬುಗಳಲ್ಲಿ ಸಾಧನೆ ಮಾಡಿದ ಐವರು ಶಿಲ್ಪಿಗಳಾದ ಸ್ವರ್ಣ ಶಿಲ್ಪಿ ಎನ್.ರಾಮಚಂದ್ರ ಆಚಾರ್ಯ ಕಾರ್ಕಳ, ಕಾಷ್ಠ ಶಿಲ್ಪಿ ಬಳ್ಕೂರು ಗೋಪಾಲ ಆಚಾರ್ಯ ಮಣಿಪಾಲ, ಅಯಸ್ ಶಿಲ್ಪಿ ಲೀಲಾವತಿ ಆಚಾರ್ಯ ಸುಳ್ಯ, ಎರಕ ಶಿಲ್ಪಿ ಹರೀಶ್ಚಂದ್ರ ಆಚಾರ್ಯ ಬೆಳ್ತಂಗಡಿ, ಶಿಲಾ ಶಿಲ್ಪಿ ಜನಾರ್ಧನ ಆಚಾರ್ಯ ಕಾರ್ಕಳ ಇವರಿಗೆ ಎಸ್.ಕೆ.ಜಿ.ಐ ಪುರಸ್ಕಾರ ಪ್ರದಾನ ಮಾಡಲಾಯಿತು. ಸಂಗೀತ ಕ್ಷೇತ್ರದ ಸಾಧಕ ಯಶವಂತ ಎಸ್.ಟಿ ಮೂಡುಬಿದಿರೆ, ವಾಗ್ಮಿ ಎಸ್.ಆರ್ ದಾಮೋದರ…
ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ತಾರಾನಾಥ ಕಾಯರ್ಗ ಘೋಷಣೆ ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ 412.92 ಕೋಟಿ ರೂ. ವ್ಯವಹಾರ ಮಾಡಿದ್ದು, 1.67 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.14 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಹೇಳಿದರು. https://chat.whatsapp.com/EbVKVnWB6rlHT1mWtsgbch ಸಂಘದ ಸಭಾಂಗಣದಲ್ಲಿ ಭಾನುವಾರ ಜರಗಿದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಸ್ಯರ ಸಹಕಾರದಿಂದ ಸಂಘವು ಸತತವಾಗಿ 23ನೇ ಬಾರಿ ಎ ತರಗತಿ ಆಡಿಟ್ ವರ್ಗೀಕರಣದೊಂದಿಗೆ ಶೇ.99.25 ಸಾಲವಸೂಲಾತಿ ಸಾಧನೆ ಮಾಡಿದೆ. ವರದಿ ವರ್ಷದಲ್ಲಿ 3,525 ಸದಸ್ಯರಿದ್ದು, ರೂ. 5.72 ಕೋಟಿ ಪಾಲು ಬಂಡವಾಳ ಮತ್ತು ರೂ. 40.34 ಕೋಟಿ ಠೇವಣಿ ಸಂಗ್ರಹಿಸಲಾಗಿದೆ. ಸದಸ್ಯರಿಗೆ ರೂ. 66.10. ಕೋಟಿ ಸಾಲ ವಿತರಿಸಿ, ವರ್ಷಾಂತ್ಯಕ್ಕೆ ರೂ. 58.07 ಕೋಟಿ ಹೊರಬಾಕಿ ಸಾಲ ಇರುತ್ತದೆ ಎಂದು ತಾರಾನಾಥ ಕಾಯರ್ಗ ತಿಳಿಸಿದರು. ಪ್ರತಿದಿನ ಮಾಸ್ ಸಂಸ್ಥೆಯ ಮೂಲಕ ಸಂಘದಲ್ಲಿ ಅಡಿಕೆ…
ನವದೆಹಲಿ: ಕನಿಷ್ಠ ಸಿಬಿಲ್ ಸ್ಕೋರ್ ಇಲ್ಲ ಎಂಬ ಒಂದೇ ಕಾರಣಕ್ಕೆ ಮೊದಲ ಬಾರಿ ಸಾಲಕ್ಕೆ ಅರ್ಜಿ ಹಾಕಿದವರಿಗೆ ಬ್ಯಾಂಕ್ಗಳು ಸಾಲ ನಿರಾಕರಿಸುವಂತಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. https://chat.whatsapp.com/EbVKVnWB6rlHT1mWtsgbch ಸಂಸತ್ ಅಧಿವೇಶನದ ಸಂದರ್ಭದಲ್ಲಿ ಲೋಕಸಭೆಯಲ್ಲಿ ಈ ಬಗ್ಗೆ ಉತ್ತರ ನೀಡಿರುವ ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್ ಚೌಧರಿ, ‘ಹೊಸ ಸಾಲಗಾರರ ಅರ್ಜಿಗಳನ್ನು ಹಿಂದಿನ ಸಾಲದ ಇತಿಹಾಸವಿಲ್ಲ ಎಂಬ ಕಾರಣಕ್ಕೆ ತಿರಸ್ಕರಿಸುವಂತಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿದೆ ಎಂದು ಮಾಹಿತಿ ನೀಡಿದರು. ಮೊದಲ ಬಾರಿ ಸಾಲ ಪಡೆಯುವವರಿಗೆ ಸಿಬಿಲ್ ಸ್ಕೋರ್ ಇಂತಿಷ್ಟೇ ಇರಬೇಕು ಎಂದು ಆರ್ಬಿಐ ನಿಗದಿಪಡಿಸಿಲ್ಲ. ಸಾಲ ನೀಡುವ ಹಣಕಾಸು ಸಂಸ್ಥೆಗಳು ಅನುಮೋದಿತ ನೀತಿಗಳು ಮತ್ತು ಮಾರ್ಗಸೂಚಿಗಳ ಆಧಾರದ ಮೇಲೆ ತಮ್ಮ ನಿರ್ಧಾರ ತೆಗೆದುಕೊಳ್ಳುತ್ತವೆ. ಕ್ರೆಡಿಟ್ ಮಾಹಿತಿ ವರದಿಯು ಹಲವಾರು ಅಂಶಗಳಲ್ಲಿ ಒಂದು ಅಂಶ ಮಾತ್ರ ಎಂದು ಚೌಧರಿ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ:…
ನಿರಂತರ “ಎ” ಗ್ರೇಡ್ ಮಾನ್ಯತೆ, 1.70 ಕೋಟಿ ರೂ.ಗಳ ನಿವ್ವಳ ಲಾಭ ಮಂಗಳೂರು: ನಗರದ ಪ್ರತಿಷ್ಠಿತ, ಗ್ರಾಹಕ ಸ್ನೇಹಿ ಸೊಸೈಟಿ ಎಂದೇ ಜನಾನುರಾಗಿಯಾಗಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ 2024-25ನೇ ಆರ್ಥಿಕ ವರ್ಷದ ಸರ್ವಸದಸ್ಯರ ಮಹಾಸಭೆ ಭಾನುವಾರ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಸದಸ್ಯರಿಗೆ ಶೇ.25 ಡಿವಿಡೆಂಡ್ ಘೋಷಿಸಲಾಯಿತು. https://chat.whatsapp.com/EbVKVnWB6rlHT1mWtsgbch ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷರಾದ ಎಂ.ಎಸ್.ಗುರುರಾಜ್, ಕಳೆದ ವರ್ಷದ ವರದಿ ಮಂಡಿಸುತ್ತ, ಶ್ರೀಶಾ ಸೌಹಾರ್ದ ಸೊಸೈಟಿಯು ತನ್ನ ವಸ್ತುನಿಷ್ಠ ಮತ್ತು ವೃತ್ತಿಪರತೆ ಆಡಳಿತದ ಮೂಲಕ ವರ್ಷದಿಂದ ವರ್ಷಕ್ಕೆ ಉತ್ತರೋತ್ತರ ಅಭಿವೃದ್ಧಿ ಕಾಣುತ್ತಿದೆ. 2024 -25ನೇ ಸಾಲಿನಲ್ಲಿ 1.70 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿ ದಾಖಲೆ ನಿರ್ಮಿಸಿ ಸದಸ್ಯರಿಗೆ ಈ ವರ್ಷವೂ ಶೇಕಡಾ.25 ಡಿವಿಡೆಂಡ್ ನೀಡಿದೆ. ಸಾಲ ವಸೂಲಾತಿಯು 98.3% ಇದ್ದು, ಇದು ಹೆಚ್ಚಿನ ಲಾಭ ಗಳಿಕೆಯಲ್ಲಿ ಮುಖ್ಯ ಪಾತ್ರ ವಹಿಸಿದೆ. ಠೇವಣಿ ಸಂಗ್ರಹದಲ್ಲಿ 25% ಹೆಚ್ಚಳದೊಂದಿಗೆ 41 ಕೋಟಿಗೆ ತಲುಪಿದೆ. ಸಾಲ ನೀಡಿಕೆಯಲ್ಲಿ 23% ಹೆಚ್ಚಳದೊಂದಿಗೆ 32…
