Author: admin

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅಧ್ಯಕ್ಷತೆಯಲ್ಲಿ “ಆತ್ಮಸಮ್ಮಾನ” ಕಾರ್ಯಕ್ರಮ ಆಯೋಜಿಸಲಾಗಿತ್ತು. https://chat.whatsapp.com/EbVKVnWB6rlHT1mWtsgbch ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕ ಮಹಿಳೆಯರಾದ ಶಿಕ್ಷಕರು ಮತ್ತು ಸಮಾಜ ಸೇವಕರಾದ ಕೆ.ಎ ರೋಹಿಣಿ ಹಾಗೂ ಪ್ರಾಧ್ಯಾಪಕರು ಮತ್ತು ಹಾಸ್ಯ ಸಾಹಿತಿಗಾರರಾದ ಭುವನೇಶ್ವರಿ ಹೆಗಡೆ ಇವರನ್ನು ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ಎ ರೋಹಿಣಿ, ಮಹಿಳಾ ದಿನವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಬಾರದು. ಹೆಣ್ಣು ಸಹನಾಮಯಿ. ಮನೆ, ಕುಟುಂಬ, ಕಚೇರಿ, ಮಕ್ಕಳು, ಕೆಲಸ ಹೀಗೆ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಹೆಣ್ಣಿನ ಶಕ್ತಿಗೆ ಅದರದ್ದೇ ಆದ ಮಹತ್ವವಿದೆ. ಹೆಣ್ಣು ಮಕ್ಕಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಹೆಚ್ಚಿನ ಕಡೆ ಕೆಲಸಕ್ಕೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಪ್ರಾಶಸ್ತ್ಯ ಸಿಗುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ ಬ್ಯಾಂಕಿಂಗ್ ಸೇವೆಗೆ ಸೀಮಿತವಾಗಿರದೇ ಇತರ ಸಮಾಜಮುಖಿ ಚಟುವಟಿಕೆಗಳನ್ನು ವರ್ಷಂಪ್ರತಿ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ” ಎಂದರು. ಭುವನೇಶ್ವರಿ ಹೆಗಡೆ ಮಾತನಾಡಿ,…

Read More

ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ ವಾರ್ಷಿಕೋತ್ಸವ ಅಂಗವಾಗಿ ಮಂಗಳೂರು ಸ್ಟೋರ್ (ಶಾಂತಿನಗರ ಜಪ್ಪು) ಸಭಾಂಗಣದಲ್ಲಿ ಭಾನುವಾರ ಉಚಿತ ಕಣ್ಣು ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು. ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಉದ್ಘಾಟಿಸಿದರು. ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. https://chat.whatsapp.com/EbVKVnWB6rlHT1mWtsgbch ಪ್ರಸಾದ್ ನೇತ್ರಾಲಯದ ಡಾ|ಸುಯೋಗ್ ಎಂ.ಎಸ್ ಶುಭ ಹಾರೈಸಿ ಮಾತನಾಡಿ, ಮಂಗಳೂರು ಸೌಹಾರ್ದ ಸಹಕಾರಿಯ ಜನಪರ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ, ಮಹಿಳಾ ತಜ್ಞೆ ಡಾ.ಕವಿತಾ ಡಿಸೋಜ ಭಾಗವಹಿಸಿ ಶುಭಹಾರೈಸಿದರು. ಧನ್ವೀ ರಾವ್ ಪ್ರಾರ್ಥನೆ ಮಾಡಿದರು. ಸಂಸ್ಥೆಯ ಅಧ್ಯಕ್ಷ ಕೆ.ಭಾಸ್ಕರ್‌ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಭವಾನಿಶಂಕರ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಚಂದ್ರಕಾ ಡಿ.ರಾವ್ ಮತ್ತು ವಸಂತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಎ.ಕೃಷ್ಣಭಟ್, ಲತಾ ಆಳ್ವ, ಸುಂದರ ಸಾಲ್ಯಾನ್, ರವೀಂದ್ರ ಬೇಕಲ್, ಪೂರ್ಣಿಮಾ ಬಿ.ರಾವ್, ಪ್ರದೀಪ ಬೇಕಲ್, ಸತೀಶ್…

Read More

ಸಹಕಾರಿ ಶಿಕ್ಷಣದ ಜತೆಗೆ ಅಪ್‌ಡೇಟ್ ತುಂಬಾ ಮುಖ್ಯ: ನನ್ಯ ಅಚ್ಚುತ ಮೂಡೆತ್ತಾಯ ಅಭಿಪ್ರಾಯ ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಹಕಾರ ಇಲಾಖೆ ದ.ಕ ಜಿಲ್ಲೆ ಇವರ ಸಹಕಾರದೊಂದಿಗೆ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ನೇತೃತ್ವದಲ್ಲಿ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಪುತ್ತೂರು ಮತ್ತು ಕಡಬ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಂಗಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮ ಉದ್ಘಾಟಿಸಿದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಮಾತನಾಡಿ, ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ ಹೆಚ್ಚಾಗಿ ಮಂಗಳೂರಿನಲ್ಲಿ ನಡೆಯುತ್ತಿತ್ತು. ಅದರೆ ಈ ಬಾರಿ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಯೂನಿಯನ್‌ನ ಜಿಲ್ಲಾಧ್ಯಕ್ಷರಾದ ಬಳಿಕ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಹಳ್ಳಿಗೆ ತರುವ…

Read More

ಜನರ ಪ್ರೀತಿ, ವಿಶ್ವಾಸ ಗಳಿಸಿ ವ್ಯವಹಾರ ಮಾಡಿದರೆ ಯಶಸ್ಸು: ಕಟೀಲು ವೆಂಕಟರಮಣ ಆಸ್ರಣ್ಣ ಬಂಟ್ವಾಳ: ಬಿ.ಸಿ.ರೋಡು ವಿವೇಕನಗರದ ಶಕ್ತಿ ಕಾಂಪೌಂಡ್‌ನ ಒಂದನೇ ಮಹಡಿಯಲ್ಲಿ ಗುರುವಾರ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಶುಭಾರಂಭಗೊಂಡಿತು. ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕ ವೆಂಕಟರಮಣ ಆಸ್ರಣ್ಣ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿ ಜನರ ಪ್ರೀತಿ, ವಿಶ್ವಾಸ ಗಳಿಸಿ ವ್ಯವಹಾರ ಮಾಡಿದರೆ ಯಶಸ್ಸು ಸಾಧ್ಯ ಎಂದು ಹೇಳಿದರು. https://chat.whatsapp.com/EbVKVnWB6rlHT1mWtsgbch ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಶುಭ ಹಾರೈಸಿದರು. ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್ ಮಾತನಾಡಿ, ಮಹಿಳೆಯೊಬ್ಬರು ಸೊಸೈಟಿ ಅಧ್ಯಕ್ಷೆಯಾಗಿರುವುದು ಸಂತಸದ ವಿಷಯ, ಸಹಕಾರ ಮನೋಭಾವನೆಯಿಂದ ಮುನ್ನಡೆಯಿರಿ ಎಂದು ಸಲಹೆ ನೀಡಿದರು. ಭದ್ರತಾ ಕೊಠಡಿ ಉದ್ಘಾಟಿಸಿ ಮಾತನಾಡಿದ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತ ಅಧಿಕಾರಿ ಗುರುಪ್ರಸಾದ್ ಬಂಗೇರ, ಸಹಕಾರ ಕ್ಷೇತ್ರದಲ್ಲಿ ಅನುಭವ ಹೊಂದಿದವರು ಮಾಡಿರುವ ಸಹಕಾರ ಸಂಸ್ಥೆ ಯಶಸ್ವಿಯಾಗಲಿ ಎಂದರು. ಸಹಕಾರಿ ನಾಮಫಲಕವನ್ನು ಪುತ್ತೂರು ಮಾಜಿ ಪುರಸಭಾಧ್ಯಕ್ಷ…

Read More

ಸಹಕಾರ  ಸಚಿವ ಅಮಿತ್‌ ಷಾ ಮುಂದಾಳತ್ವದಲ್ಲಿ ಉನ್ನತ ಮಟ್ಟದ ಸಭೆ ನವದೆಹಲಿ: ಸಹಕಾರದಿಂದ ಸಮೃದ್ಧಿ ಎಂಬ ಪರಿಕಲ್ಪನೆಯ ಮೂಲಕ ಸಹಕಾರಿ ಸಂಸ್ಥೆಗಳಲ್ಲಿ ಯುವಕರು ಮತ್ತು ಮಹಿಳೆಯರು ಭಾಗವಹಿಸುವುದನ್ನು ಹೆಚ್ಚಿಸಲು ಸಹಕಾರ ಸಚಿವಾಲಯವು ಮಹತ್ವದ ಉಪಕ್ರಮಗಳನ್ನು ತೆಗೆದುಕೊಂಡಿರುವ ಬಗ್ಗೆ ಪರಿಶೀಲಿಸಲು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಹಕಾರ ಸಚಿವ ಅಮಿತ್‌ ಷಾ ಮುಂದಾಳತ್ವದಲ್ಲಿ ಸಭೆ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಭೆಯಲ್ಲಿ ಸಹಕಾರ ಸಚಿವಾಲಯದ ಕಾರ್ಯದರ್ಶಿ ಡಾ.ಆಶಿಶ್ ಕುಮಾರ್ ಭೂತಾನಿ, ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ, ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ -2 ಶಕ್ತಿಕಾಂತ ದಾಸ್, ಪ್ರಧಾನಿಯವರ ಸಲಹೆಗಾರ ಅಮಿತ್ ಖರೆ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಭಾರತದ ಸಹಕಾರಿ ವಲಯವನ್ನು ವಿಸ್ತರಿಸಲು ಜಾಗತಿಕ ಸಹಕಾರಿ ಸಂಸ್ಥೆಗಳೊಂದಿಗೆ ಸಹಕರಿಸುವ ಮಹತ್ವದ ಬಗ್ಗೆ ಒತ್ತಿ ಹೇಳಿದರು. ಸಹಕಾರಿ ಜಾಲಗಳ ಮೂಲಕ ಸಾವಯವ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವುದು, ರಫ್ತು ಮಾರುಕಟ್ಟೆಗಳನ್ನು ಅನ್ವೇಷಿಸುವುದು ಮತ್ತು ಕೃಷಿ ಪದ್ಧತಿಗಳನ್ನು ಸುಧಾರಿಸಲು…

Read More

ಬೆಳ್ತಂಗಡಿ: ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ಒ, ಕುಕ್ಕಿನಡ್ಕ ಮನೆತನದ ಹಿರಿಯರಾದ ಎನ್.ಪದ್ಮನಾಭ ಮಾಣಿಂಜ (87) ವಯೋ ಸಹಜ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ನಿಧನ ಹೊಂದಿದರು. https://chat.whatsapp.com/EbVKVnWB6rlHT1mWtsgbch ಪದ್ಮನಾಭ ಮಾಣಿಂಜ ಅವರು ಮಾಜಿ ಶಾಸಕ ದಿ.ಕೆ.ವಸಂತ ಬಂಗೇರ ಅವರ ನಿಕಟವರ್ತಿಯಾಗಿದ್ದು, ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಬೆಳವಣಿಗೆಯಲ್ಲಿ ಇವರಿಬ್ಬರ ಪಾತ್ರ ಪ್ರಮುಖವಾಗಿತ್ತು. ಗುರುದೇವ ಸಹಕಾರ ಸಂಘವನ್ನು ಆರ್ಥಿಕವಾಗಿ ಬಲಿಷ್ಠ ಸಹಕಾರ ಸಂಘವಾಗಿಸುವ ಜತೆಗೆ ಜಿಲ್ಲೆ ಹೊರೆ ಜಿಲ್ಲೆಗಳಲ್ಲೂ ಶಾಖೆಗಳನ್ನು ತೆರೆಯುವ ಮೂಲಕ ಬಿಲ್ಲವ ಸಮುದಾಯದಲ್ಲಿ ಮೇರು ನಾಯಕರಾಗಿ ಬೆಳೆದಿದ್ದರು. ಕೆ.ವಸಂತ ಬಂಗೇರರೊಂದಿಗೆ ಉತ್ತಮ ಸಂಬಂಧ ಹೊಂದಿದ ಇವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು. ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಪ್ರಗತಿಯ ಹಿಂದೆ ಪದ್ಮನಾಭ ಮಾಣಿಂಜರವರ ದೂರದೃಷ್ಟಿ ಚಿಂತನೆ ಮಹತ್ತರವಾದದು. ಉಜಿರೆ ರಬ್ಬ‌ರ್ ಸೊಸೈಟಿಯ ಉಪಾಧ್ಯಕ್ಷ, ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಸರಳ,…

Read More

ಮಂಗಳೂರು: ಎಂಸಿಸಿ ಬ್ಯಾಂಕಿನ ಬ್ರಹ್ಮಾವರ ಶಾಖೆ ಆರಂಭವಾಗಿ ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, ೧೦ ಕೋಟಿ ರೂ. ವ್ಯವಹಾರದ ಸಾಧನೆ ಮತ್ತು ನೂತನ ಎಟಿಎಂ ಲೋಕಾರ್ಪಣಾ ಸಮಾರಂಭ ಸೋಮವಾರ ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. https://chat.whatsapp.com/EbVKVnWB6rlHT1mWtsgbch ಎಂಸಿಸಿ ಬ್ಯಾಂಕಿನ ೮ನೇ ಎಟಿಎಂ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಹೋಲಿ ಫ್ಯಾಮಿಲಿ ಚರ್ಚಿನ ಧರ್ಮಗುರು ಫಾ|ಜೋನ್ ಫೆರ್ನಾಂಡಿಸ್ ಆಶೀರ್ವದಿಸಿದರು. ಎಟಿಎಂ ಯಂತ್ರವನ್ನು ಎಎಸ್ ಯೂಸ್ಡ್ ಕಾರ‍್ಸ್ ಮಾಲೀಕ ಸೌರಬ್ ಶೆಟ್ಟಿ ಎಟಿಎಂನಿಂದ ಹಣ ತೆಗೆಯುವ ಮೂಲಕ ಉದ್ಘಾಟಿಸಿದರು. ಉದ್ಯಮಿ ಶಂಶುದ್ದಿನ್ ಮೊಯಿದಿನ್ ಮುಖ್ಯ ಅತಿಥಿಯಾಗಿದ್ದರು. ಶಾಖಾ ನಿರ್ದೇಶಕ ಎಲ್‌ರೋಯ್ ಕಿರಣ್ ಕ್ರಾಸ್ಟೊ ಹಾಜರಿದ್ದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ, ಬ್ರಹ್ಮಾವರದಲ್ಲಿ ಎಂಸಿಸಿ ಬ್ಯಾಂಕಿನ ಶಾಖೆ ಆರಂಭಗೊಳ್ಳಲು ಹಾಗೂ ರೂ. ೧೦ ಕೋಟಿ ವ್ಯವಹಾರ ದಾಖಲಿಸಲು ಸಹಕರಿಸಿದ ಬ್ರಹ್ಮಾವರದ ಗ್ರಾಹಕರಿಗೆ ವಂದನೆಗಳನ್ನು ಸಲ್ಲಿಸಿದರು. ಬ್ರಹ್ಮಾವರದ ಜನ…

Read More

ತುಮಕೂರು: ಇಲ್ಲಿನ ಪ್ರತಿಷ್ಠಿತ ಮರ್ಚಂಟ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಮಧುಗಿರಿಯಲ್ಲಿ ಎಟಿಎಂ ಸೇವೆ ಹಾಗೂ ಗ್ರಾಹಕ ಸೇವಾ ಕೇಂದ್ರವನ್ನು ಲೋಕಾರ್ಪಣೆ ಮಾಡಿದೆ. https://chat.whatsapp.com/EbVKVnWB6rlHT1mWtsgbch ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಎಟಿಎಂ ಸೆಂಟರ್‌ ಅನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಹಕಾರಿ ಮತ್ತು ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು, ಸಹಕಾರಿ ಮುಖಂಡರು ಮತ್ತು ಸ್ಥಳೀಯ ಸಮುದಾಯದ ಸದಸ್ಯರು ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸೊಸೈಟಿ ಅಧ್ಯಕ್ಷ ಎನ್.ಎಸ್. ಜಯಕುಮಾರ್, ತಮ್ಮ ಸಂಸ್ಥೆಯ ಸದಸ್ಯರು ಮತ್ತು ಸಾರ್ವಜನಿಕರಿಗೆ ಹಣಕಾಸು ಸೇವೆಗಳನ್ನು ವಿಸ್ತರಿಸುವ ಸಹಕಾರಿಯ ಬದ್ಧತೆಯ ಬಗ್ಗೆ ಮಾಹಿತಿ ನೀಡಿದರು. ಹೊಸದಾಗಿ ಪ್ರಾರಂಭಿಸಲಾದ ಎಟಿಎಂ ಮತ್ತು ಗ್ರಾಹಕ ಸೇವಾ ಕೇಂದ್ರ ಜನರಿಗೆ ಬ್ಯಾಂಕಿಂಗ್‌ ಸೇವೆಯಲ್ಲಿ ಸಹಾಯ ಮಾಡಲಿದೆ. ವಿಶೇಷವಾಗಿ ಈ ಪ್ರದೇಶದ ಸಣ್ಣ ವ್ಯವಹಾರಗಳು, ವ್ಯಾಪಾರಿಗಳು ಮತ್ತು ದಿನಗೂಲಿ ಪಡೆಯುವವರಿಗೆ ಪ್ರಯೋಜನ ನೀಡುತ್ತದೆ. ಹೊಸ ಸೌಲಭ್ಯವು ತಡೆರಹಿತ ಮತ್ತು ಸುರಕ್ಷಿತ ಹಣಕಾಸು ವಹಿವಾಟುಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದು, ನಗದು ಹಿಂಪಡೆಯುವಿಕೆ, ಖಾತೆ ವಿಚಾರಣೆ, ನಿಧಿ…

Read More

ಬಂಟ್ವಾಳ: ಶರ್ವಾಣಿ ಕ್ರೆಡಿಟ್‌ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಉದ್ಘಾಟನಾ ಸಮಾರಂಭ ಮಾರ್ಚ್‌ 6ರಂದು ಗುರುವಾರ ಬೆಳಗ್ಗೆ 9ಕ್ಕೆ ಬಿ.ಸಿ.ರೋಡ್‌ನ ವಿವೇಕನಗರ ಶಕ್ತಿ ಕಾಂಪೌಂಡ್‌ ಒಂದನೇ ಮಹಡಿಯಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಆಡಳಿತ ಕಚೇರಿ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ವೆಂಕಟರಮಣ ಆಸ್ರಣ್ಣ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್‌ ಆರಿಕೋಡಿ ಮತ್ತು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್‌ ಬಂಗೇರ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ಜೀವಂಧರ್‌ ಜೈನ್‌ ಸಹಕಾರಿಯ ನಾಮಫಲಕ ಅನಾವರಣ ಮಾಡುವರು. ಪುತ್ತೂರು ಶ್ರೀಮಾತಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ್‌ ಕುಲಾಲ್‌ ನಗದು ಕೌಂಟರ್‌ ಉದ್ಘಾಟನೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್‌…

Read More

ಉಪ್ಪಿನಂಗಡಿ: ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉಪ್ಪಿನಂಗಡಿ ಇದರ ಉಪ್ಪಿನಂಗಡಿ, ನೆಲ್ಯಾಡಿ ಹಾಗೂ ಕಡಬ ಶಾಖಾ ಸಿಬ್ಬಂದಿಗಳಿಗೆ ವೃತ್ತಿ ತರಬೇತಿ ಕಾರ್ಯಕ್ರಮ ನಡೆಯಿತು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ನಿಯಮಿತದ ಮೈಸೂರು ಪ್ರಾಂತ್ಯದ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್. ತರಬೇತಿ ನೀಡಿದರು. ಸಹಕಾರಿ ಸಂಸ್ಥೆಯಲ್ಲಿ ಸಿಬ್ಬಂದಿಯ ಕಾರ್ಯಚಟುವಟಿಕೆ, ಕಡತ ನಿರ್ವಹಣೆ, ಸಾಲ ವಸೂಲಾತಿಗೆ ತೆಗೆದುಕೊಳ್ಳಬೇಕಾದ ಕ್ರಮ ಹಾಗೂ ಇತರ ವಿಷಯಗಳಲ್ಲಿ ಮಾಹಿತಿ ನೀಡಿದರು. ಸಂಘದ ಎಲ್ಲಾ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಂಘದ ಅಧ್ಯಕ್ಷ ರೋಬರ್ಟ್ ಡಿಸೋಜ, ಉಪಾಧ್ಯಕ್ಷ ಜೆರೋಮ್ ಬ್ರಾಕ್ಸ್, ನಿರ್ದೇಶಕರಾದ ಹೆನ್ರಿ ಲೋಬೊ, ಸೆಬೆಸ್ಟಿಯನ್ ಲೋಬೊ, ವಿನ್ಸೆಂಟ್ ವೇಗಸ್, ಮ್ಯಾಕ್ಸಿಂ ಲೋಬೊ ಹಾಗೂ ಐರಿನ್ ಲೋಬೊ ಭಾಗವಹಿಸಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More