Author: admin

ಮಂಗಳೂರು; ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇವರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇವರ ಸಮನ್ವಯದಲ್ಲಿ ಮಂಗಳೂರು ಕೇಂದ್ರಿತವಾಗಿ ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ (ಎಚ್.ಡಿ.ಸಿ.ಎಂ) ಅಧಿವೇಶನ ದೂರ ಶಿಕ್ಷಣ ಕೋರ್ಸಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಮೂವರಿಗೆ ರ‍್ಯಾಂಕ್ ಲಭಿಸಿದೆ. https://chat.whatsapp.com/EbVKVnWB6rlHT1mWtsgbch ಪ್ರಥಮ ಸ್ಥಾನವನ್ನು ಕಳಂಜ- ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಗೀತಾಶ್ರೀ ಎಂ., ದ್ವಿತೀಯ ಸ್ಥಾನ ಭವ್ಯಶ್ರೀ ರೈ ಕೆ., ತೃತೀಯ ಸ್ಥಾನ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ಸೌಮ್ಯ ಡಿ. ಪಡೆದಿದ್ದಾರೆ. ಈ ಬ್ಯಾಚ್‌ನಲ್ಲಿ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ 127 ಶಿಕ್ಷಣಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 16 ಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ಮತ್ತು 90 ಶಿಕ್ಷಣಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 6 ಶಿಕ್ಷಣಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಪ್ರಾದೇಶಿಕ ಸಹಕಾರ ನಿರ್ವಹಣಾ ಕೇಂದ್ರ ಬೆಂಗಳೂರು, ಇವರು ನೀಡುತ್ತಿರುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ ದೂರ ಶಿಕ್ಷಣ…

Read More

ಮುಂದಿನ ದಿನಗಳಲ್ಲಿ ತೊಕ್ಕೊಟ್ಟು, ಉಳ್ಳಾಲದ ಪರಿಸರದಲ್ಲಿ ಆರೋಗ್ಯ ತಪಾಸಣೆ: ಚಿತ್ತರಂಜನ್‌ ಬೋಳಾರ್‌ ಮಾಹಿತಿ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಮಾಡೂರು ಹಾಗೂ ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರ ಇವರ ಜಂಟಿ ಸಹಯೋಗದಲ್ಲಿ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇಲ್ಲಿನ ತಜ್ಞ ವೈದ್ಯರಿಂದ ಉಚಿತ ದಂತ ತಪಾಸಣೆ ಮತ್ತು ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್, ಮಂಗಳೂರು ಇಲ್ಲಿನ ತಜ್ಞ ವೈದ್ಯರಿಂದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಭಾನುವಾರ ಮಾಡೂರಿನ ಮಾತೃಶ್ರೀ ಕಾಂಪ್ಲೆಕ್ಸ್‌ನ ಆವರಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರದ ಗುರುಸ್ವಾಮಿ ಭಾಸ್ಕರ್ ಕಾರ್ಯಕ್ರಮ ಉದ್ಘಾಟಿಸಿದರು. ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇಲ್ಲಿನ ವೈದ್ಯ ಡಾ|ಪ್ರಮಾದ ಪ್ರಭಾಕರ್ ಮಾತನಾಡಿ ಎಲ್ಲರೂ ಉದ್ಯೋಗದ ಜೊತೆಗೆ ಆರೋಗ್ಯದ…

Read More

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ನೂತನ ನಿರ್ದೇಶಕರ ಆಯ್ಕೆ ಸಂಬಂಧಿಸಿ ಶನಿವಾರ ನಡೆದ ಚುನಾವಣೆಯಲ್ಲಿ 16 ಮಂದಿ ಆಯ್ಕೆಯಾಗಿದ್ದು ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಬೆಂಬಲಿಗರ ಹೈನುಗಾರ ಸಹಕಾರಿಗಳ ಬಳಗ ವಿಜಯ ದಾಖಲಿಸಿದೆ. ಮೇ 6ರಂದು ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಟ್ಟು 16 ನಿರ್ದೇಶಕ ಸ್ಥಾನಗಳ ಪೈಕಿ 10 ಸ್ಥಾನಗಳನ್ನು ಡಾ|ಎಂ.ಎನ್‌ ರಾಜೇಂದ್ರ ಕುಮಾರ್‌ ಬೆಂಬಲಿತ ತಂಡದ ಅಭ್ಯರ್ಥಿಗಳು ಗೆದ್ದಿದ್ದಾರೆ. ನಿರ್ದೇಶಕರ ಚುನಾವಣೆಗೆ ಒಟ್ಟು 41 ಮಂದಿ ಅಂತಿಮ ಕಣದಲ್ಲಿದ್ದು, ಅವಿರೋಧ ಆಯ್ಕೆಗಾಗಿ ಮಾತುಕತೆ ನಡೆದರೂ ಫಲಕಾರಿಯಾಗದೆ ಚುನಾವಣೆ ನಡೆದಿತ್ತು. ಕುಂದಾಪುರ ಉಪವಿಭಾಗದಿಂದ ರವಿರಾಜ ಹೆಗ್ಡೆ, ಪ್ರಕಾಶ್ಚಂದ್ರ ಶೆಟ್ಟಿ ಉದಯ ಎಸ್.ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಸುಧಾಕರ ಶೆಟ್ಟಿ ಮುಡಾರು, ಎನ್.ಮಂಜಯ್ಯ ಶೆಟ್ಟಿ ಕೆ.ಶಿವಮೂರ್ತಿ ಆಯ್ಕೆಯಾಗಿದ್ದಾರೆ. ಮಂಗಳೂರು ಉಪವಿಭಾಗದಿಂದ ನಿಕಟಪೂರ್ವ ಅಧ್ಯಕ್ಷರಾಗಿದ್ದ ಸುಚರಿತ ಶೆಟ್ಟಿ, ಬಿ.ಸುಧಾಕರ ರೈ, ನಂದರಾಮ ರೈ, ಪುತ್ತೂರು ಉಪವಿಭಾಗದಿಂದ ಎಸ್.ಬಿ.ಜಯರಾಮ ರೈ ಭರತ್ ಎನ್., ಕೆ.ಚಂದ್ರಶೇಖರ ರಾವ್, ಎಚ್.ಪ್ರಭಾಕರ,…

Read More

ಇ-ಕಾಮರ್ಸ್‌ನಲ್ಲಿ ಸಹಕಾರಿಗಳ ಉತ್ಪನ್ನ ಮಾರಾಟಕ್ಕೆ ನೂತನ ಕೌಶಲ ನವದೆಹಲಿ: ಭಾರತದಲ್ಲಿ ಸಹಕಾರಿ ವಲಯದ ಉತ್ಪನ್ನಗಳ ಮಾರಾಟದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಸಹಕಾರ ಸಚಿವಾಲಯವು ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ಜೊತೆ ಒಪ್ಪಂದ(ಎಂಒಯು)ಕ್ಕೆ ಸಹಿ ಹಾಕಿದೆ. ಈ ಒಪ್ಪಂದವು ಸಹಕಾರಿ ಸಂಘಗಳ ಉತ್ಪನ್ನಗಳನ್ನು ಇ-ಕಾಮರ್ಸ್‌ ಮತ್ತು ಕ್ಯೂ -ಕಾಮರ್ಸ್‌ಗಳಲ್ಲಿ ಮಾರಾಟ ಮಾಡಲು ದಾರಿ ಮಾಡಿಕೊಡಲಿದೆ. https://chat.whatsapp.com/EbVKVnWB6rlHT1mWtsgbch ಏಪ್ರಿಲ್ 25ರಂದು ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಸಿಇಒ ಅಮಿತೇಶ್ ಝಾ ಮತ್ತು ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಿ.ಕೆ. ವರ್ಮಾ ಮಧ್ಯೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಒಪ್ಪಂದದ ನಂತರ, ಭಾರತ್ ಆರ್ಗಾನಿಕ್ಸ್ ಮತ್ತು ಇತರ ಸಹಕಾರಿ ಡೈರಿ ಬ್ರ್ಯಾಂಡ್‌ಗಳ ಅಡಿಯಲ್ಲಿ ಬರುವ ಉತ್ಪನ್ನಗಳು ಶೀಘ್ರದಲ್ಲೇ ಸ್ವಿಗ್ಗಿಯಲ್ಲಿ ಮಾರಾಟಕ್ಕೆ ಲಭ್ಯವಿರುತ್ತವೆ. ಇದು ಸಹಕಾರಿ ಸಂಸ್ಥೆಗಳ ಡಿಜಿಟಲ್ ವ್ಯಾಪ್ತಿಯನ್ನು ವಿಸ್ತರಿಸುವ ಜೊತೆಗೆ ಅವುಗಳ ಮಾರುಕಟ್ಟೆ ಉಪಸ್ಥಿತಿಯನ್ನೂ ಹೆಚ್ಚಿಸಲಿವೆ. ಸಹಕಾರ ಸಚಿವಾಲಯದ ಕಾರ್ಯದರ್ಶಿ ಆಶಿಶ್‌ ಕುಮಾರ್‌ ಭೂತಾನಿ ಕೂಡ ಉಪಸ್ಥಿತರಿದ್ದ ಈ ಸಹಿ ಒಪ್ಪಂದವು ಸಹಕಾರಿ ಉತ್ಪನ್ನಗಳನ್ನು ವಿಶಾಲವಾದ, ತಂತ್ರಜ್ಞಾನ ಆಧಾರಿತ ಗ್ರಾಹಕ…

Read More

ಸಹಕಾರ ಸಂಘಗಳ ಉಪನಿಬಂಧಕಿ ಗಗನ ಕೆ ಅಭಿಪ್ರಾಯ ಮಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ತಮ್ಮ ಅಧೀನದ ಸೌಹಾರ್ದ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ, ನಿರ್ದೇಶಕರುಗಳಿಗೆ ಕಾಲಕಾಲಕ್ಕೆ ತರಬೇತಿ ಶಿಬಿರಗಳನ್ನು ಆಯೋಜಿಸುತ್ತ ಸಹಕಾರಿಗಳ ಬಗ್ಗೆ ಜ್ಞಾನ ಹೆಚ್ಚಿಸುವ ಕೆಲಸ ಮಾಡುತ್ತಿದೆ. ಸಂಬಂಧಪಟ್ಟವರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಜ್ಞಾನ ಹೆಚ್ಚಿಸುವ ಕೆಲಸ ಮಾಡುತ್ತಿರಬೇಕು ಎಂದು ಸೌಹಾರ್ದ ಸಹಕಾರಿಗಳ ದಾವಾ ಪಂಚಾಯಿತಿ ನ್ಯಾಯಾಲಯದ ಸಹಕಾರ ಸಂಘಗಳ ಉಪನಿಬಂಧಕಿ, ಗಗನ ಕೆ ಅಭಿಪ್ರಾಯಪಟ್ಟರು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ಶನಿವಾರ ಮಂಗಳೂರಿನ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ನಡೆದ ಲೆಕ್ಕ ಪರಿಶೋಧನಾ ವರದಿಗಳ ಪೂರ್ವ ಸಿದ್ಧತೆಗಳು ಹಾಗೂ ದಾವಾ ದಾಖಲಾತಿ ಪ್ರಕ್ರಿಯೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿಗಳಲ್ಲಿ ಭಾಗವಹಿಸಿದಾಗ ಜ್ಞಾನ ಹೆಚ್ಚುತ್ತದೆ. ಹೆಚ್ಚಿನ ಜ್ಞಾನ ಸಂಪಾದನೆಯಿಂದ ಪ್ರಾಮಾಣಿಕತೆ ಹೆಚ್ಚುತ್ತದೆ. ಮನುಷ್ಯ ಜನ್ಮ ಎಂಬುದು ಬಹಳಷ್ಟು ಪುಣ್ಯ ಸಂಚಯದಿಂದ ಸಿಗುವಂಥದ್ದು. ಮನುಷ್ಯ ಜೀವನದಲ್ಲಿ ಸಿಗುವ ಪ್ರತಿಯೊಂದು ಕ್ಷಣವನ್ನೂ ಸದುಪಯೋಗ ಮಾಡಿಕೊಳ್ಳಬೇಕು.…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಡೂರು ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಮಾಡೂರು ಹಾಗೂ ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರ ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಏಪ್ರಿಲ್‌ 27ರ ಭಾನುವಾರ ಬೆಳಗ್ಗೆ 9.30ರಿಂದ ಮದ್ಯಾಹ್ನ 12.30ರವರೆಗೆ ಮಾಡೂರಿನ ಕೊರಗಜ್ಜನ ಕಟ್ಟೆಯ ಮುಂಭಾಗದ ಮಾತೃಶ್ರೀ ಕಾಂಪ್ಲೆಕ್ಸ್‌ನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆವರಣದಲ್ಲಿ ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಈ ಶಿಬಿರದಲ್ಲಿ ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್ ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ಕಣ್ಣಿನ ತಪಾಸಣೆ, ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಇತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ದಂತ ತಪಾಸಣೆ, ಹುಳುಕು ಹಲ್ಲುಗಳ…

Read More

ಸ್ವಾತಂತ್ರ್ಯ ಹೋರಾಟಗಾರ, ಸಮಾಜರತ್ನ ದಿ.ಡಾ.ಅಮ್ಮೆಂಬಳ ಬಾಳಪ್ಪರವರ ನೇತೃತ್ವ ಹಾಗೂ ಸಹಕಾರಿ ಧುರೀಣ ಬಿ.ಹೂವಯ್ಯ ಮೂಲ್ಯರವರ ಸಾರಥ್ಯದಲ್ಲಿ ಆರಂಭವಾದ ಬಂಟ್ವಾಳದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘವು ಪ್ರಸಕ್ತ 5.05 ಕೋಟಿ ರೂ.(ತಾತ್ಕಾಲಿಕ) ಲಾಭ ಗಳಿಸಿದೆ. https://chat.whatsapp.com/EbVKVnWB6rlHT1mWtsgbch ಕೇವಲ 131 ಸದಸ್ಯರನ್ನೊಳಗೊಂಡು ರೂ. 22,620 ಪಾಲು ಬಂಡವಾಳದೊಂದಿಗೆ ಸ್ಥಾಪಿಸಲ್ಪಟ್ಟ ಸಮಾಜ ಸೇವಾ ಸಹಕಾರಿ ಸಂಘವು ಪ್ರಸ್ತುತ 16 ಶಾಖೆಗಳನ್ನು ಹೊಂದಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಕಾರ್ಯ ವ್ಯಾಪ್ತಿಯನ್ನು ಹೊಂದಿದೆ. ಸಂಘದ ಪುಂಜಾಲಕಟ್ಟೆ, ಮುಡಿಪು ಮತ್ತು ಉಪ್ಪಿನಂಗಡಿ ಶಾಖೆಯು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ಸಂಘವು 2024-25ನೇ ಸಾಲಿನಲ್ಲಿ ರೂ.1159 ಕೋಟಿ ವ್ಯವಹಾರ ನಡೆಸಿದೆ. ಆರ್ಥಿಕ ವರ್ಷ 2024-25ರ ಅಂತ್ಯಕ್ಕೆ ಸಂಘದಲ್ಲಿ 9047 ‘ಎ’ ತರಗತಿ, 5556 ‘ಬಿ’ ತರಗತಿ ಸದಸ್ಯರಿದ್ದು ರೂ.8.09 ಕೋಟಿ ಪಾಲು ಬಂಡವಾಳ ಹೊಂದಿದೆ. 19.78 ಕೋಟಿ ರೂ. ನಿಧಿಗಳು, 55.35 ಕೋಟಿ ರೂ. ವಿನಿಯೋಗಗಳು, 229.47 ಕೋಟಿ ರೂ. ಠೇವಣಾತಿ ಇದ್ದು 215.21 ಕೋಟಿ…

Read More

ಬಂಗ್ರಕೂಳೂರು ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಮೇ 10ರಂದು ನಡೆಯಲಿದೆ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ದೇಶಕ್ಕೆ ಮಾದರಿ, ಸಂದೇಶ ಕೊಡುವ ಕಾರ್ಯಕ್ರಮ: ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಮಾಹಿತಿ ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ನವೋಧಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಅಂಗವಾಗಿ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಮೇ 10ರಂದು ಬಹೃತ್‌ ಮಹಿಳಾ ಸಮಾವೇಶ ನಡೆಯಲಿದೆ. ಒಂದೇ ರೀತಿಯ ಸಮವಸ್ತ್ರದಲ್ಲಿ ವಿವಿಧ ಜಿಲ್ಲೆಗಳ ಒಂದೂವರೆ ಲಕ್ಷ ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸಲಿದ್ದು ಇದೊಂದು ಐತಿಹಾಸಿಕ, ದೇಶಕ್ಕೆ ಸಂದೇಶ ಕೊಡುವ ಮಾದರಿ ಕಾರ್ಯಕ್ರಮವಾಗಿ ಮೂಡಿಬರಲಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್‌ ಸಂಸ್ಥಾಪಕ, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ತಿಳಿಸಿದರು. https://chat.whatsapp.com/EbVKVnWB6rlHT1mWtsgbch ಮಂಗಳವಾರ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಜತ ಸಂಭ್ರಮವನ್ನು ಮೇ 10ರ ಬೆಳಗ್ಗೆ 10ಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನವೋದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌…

Read More

ಏಪ್ರಿಲ್‌ 26ರಂದು ಚುನಾವಣೆ, ಅಂದೇ ಮತ ಎಣಿಕೆ, ಫಲಿತಾಂಶ ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುವುದು ಪಕ್ಕಾ ಆಗಿದೆ. ಏಪ್ರಿಲ್‌ 26ರಂದು ಚುನಾವಣೆ ನಡೆಯಲಿದ್ದು, ಒಟ್ಟು 16 ನಿರ್ದೇಶಕ ಸ್ಥಾನಕ್ಕೆ ಅಂತಿಮವಾಗಿ 41 ಅಭ್ಯರ್ಥಿಗಳು ಕಣದಲ್ಲಿದ್ದಾರೆ. https://chat.whatsapp.com/EbVKVnWB6rlHT1mWtsgbch 16 ನಿರ್ದೇಶಕ ಸ್ಥಾನಗಳಿದ್ದು ದ.ಕ. ಮತ್ತು ಉಡುಪಿ ಜಿಲ್ಲೆಗಳ ತಲಾ 8 ಸ್ಥಾನಗಳಂತೆ ಹಂಚಿಕೆ ಮಾಡಲಾಗಿದೆ. ಇದರಲ್ಲಿ ತಲಾ ಒಂದು ಸ್ಥಾನ ಮಹಿಳೆಯರಿಗೆ ಮೀಸಲು. ಅವಿಭಜಿತ ದ.ಕ. ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಒಟ್ಟು 60 ನಾಮಪತ್ರ ಸಿಂಧುವಾಗಿತ್ತು. ಹಾಲಿ 16 ನಿರ್ದೇಶಕರ ಪೈಕಿ 13 ಮಂದಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಇವರಲ್ಲಿ ಹಾಲಿ ಅಧ್ಯಕ್ಷ ಸುಚರಿತ ಶೆಟ್ಟಿ 4ನೇ ಬಾರಿ, ಮಾಜಿ ಅಧ್ಯಕ್ಷರಾದ ರವಿರಾಜ ಹೆಗ್ಡೆ ಹಾಗೂ ಕಾಪು ದಿವಾಕರ ಶೆಟ್ಟಿ5ನೇ ಬಾರಿ, ಪ್ರಕಾಶ್ಚಂದ್ರ ಶೆಟ್ಟಿ, ಮಂಜಯ್ಯ ಶೆಟ್ಟಿ, ಎಸ್ .ಬಿ.ಜಯರಾಮ ರೈ 3ನೇ ಬಾರಿ, ಸುಭದ್ರಾ ರಾವ್ 2ನೇ ಬಾರಿ ಕಣಕ್ಕೆ…

Read More

ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಹಕರ ಸೇವೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಮುಂಚೂಣಿಯಲ್ಲಿದೆ. ಬ್ಯಾಂಕ್ ತನ್ನ 113 ಶಾಖೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ್ದು, ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡಿ ‘ಗ್ರಾಹಕ ಸ್ನೇಹಿ ಬ್ಯಾಂಕ್ ‘ ಆಗಿ ಬೆಳೆದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಸಿಬ್ಬಂದಿಗಳಿಗೆ ಭಾನುವಾರ ಗಿಫ್ಟ್ ಕೂಪನ್ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಬ್ಬಂದಿಗಳಿಗೆ ಪೂರಕವಾಗಿರುವ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮೊದಲ ಬಾರಿ ಜಾರಿಗೆ ತಂದ ಹೆಗ್ಗಳಿಕೆ ಎಸ್‌ಸಿಡಿಸಿಸಿ ಬ್ಯಾಂಕಿನದ್ದು. ಮಾತ್ರವಲ್ಲ ಬ್ಯಾಂಕ್ ಕಾಲಕಾಲಕ್ಕೆ ವಿವಿಧ ಸವಲತ್ತುಗಳನ್ನು ಸಿಬ್ಬಂದಿಗಳಿಗೆ ನೀಡುತ್ತಿದೆ. ಹಾಗಾಗಿ ಸಿಬ್ಬಂದಿಗಳು ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಿ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು. ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಎಸ್‌ಸಿಡಿಸಿಸಿ ಬ್ಯಾಂಕ್ ಇಂದು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ದಕ್ಷ ನಾಯಕತ್ವ ಕಾರಣವಾಗಿದೆ.…

Read More