Author: admin

ಮಂಗಳೂರು: 100 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷರಾಗಿ ಚಂದ್ರಶೇಖರ್‌ ಕುಮಾರ್‌ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಶನಿವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚಂದ್ರಶೇಖರ್‌ ಕುಮಾರ್‌ ಅವರನ್ನು ಅವಿರೋಧವಾಗಿ ಅಧ್ಯಕ್ಷ ಪದವಿಗೆ ಆರಿಸಲಾಯಿತು. ಕಾವೂರು ಪಳನೀರು ನಿವಾಸಿಯಾಗಿರುವ ಚಂದ್ರಶೇಖರ್‌ ಅವರು, ಕಾವೂರು ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿಯೂ, ಕಾವೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಜಯರಾಮ್‌ ಪೂಜಾರಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಯೋಗೀಶ್‌ ಕೋಟ್ಯಾನ್‌, ಅನಿಲ್‌ ಕುಮಾರ್‌, ಪ್ರಕಾಶ್‌, ಜಗದೀಶ್‌ ಎನ್‌, ರಮೇಶ್‌ ಬಂಗೇರ, ಜಯರಾಮ್‌ ಕಾರಂದೂರು, ರಾಜೇಶ್‌ ಕುಮಾರ್‌ ಜಿ.ಸುವರ್ಣ, ಹರೀಶ್‌ ಪೂಜಾರಿ ಕೆ, ಕುಪ್ಪ ಪೂಜಾರಿ, ಕೇಶವ ಪುತ್ತೂರು, ಚಂದ್ರಾವತಿ, ಶಂಕರ ನಾಯ್ಕ್‌, ಚಂದ್ರಶೇಖರ್‌ ಕುಮಾರ್‌, ನಾಗರಾಜ, ಆಶಾಲತಾ ಮತ್ತು ಗಾಯತ್ರಿ ಗಣೇಶ್‌ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ:…

Read More

ಹಿರೇಕೆರೂರು ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎಸ್‌.ಬಿ ತಿಪ್ಪಣ್ಣ ಪ್ರತಿಪಾದನೆ ಹಿರೇಕೆರೂರು: 26 ರಾಜ್ಯಪ್ರಭುತ್ವವು ಅಂತ್ಯವಾಗಿ ಭಾರತದಲ್ಲಿ ಸಂವಿಧಾನವನ್ನು ಸ್ಥಾಪಿಸಿದ ದಿನವೇ ಭಾರತೀಯರೆಲ್ಲರೂ ಹೆಮ್ಮೆಪಡುವಂತಹ ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. 75 ವರ್ಷಗಳ ಭಾರತದ ಇತಿಹಾಸ ನೋಡಿದಾಗ ಆಡಳಿತ ಮಾಡಿದ ಎಲ್ಲ ಸರಕಾರಗಳು ಭಾರತದ ಐಕ್ಯತೆ ಹಾಗೂ ಸೌಹಾರ್ದಕ್ಕೆ ಶ್ರಮಿಸಿರುವುದನ್ನು ನಾವೆಲ್ಲ ಅರ್ಥ ಮಾಡಿಕೊಂಡು ದೇಶ ನಮಗೇನು ಕೊಟ್ಟಿದೆ ಎಂಬುದು ಮುಖ್ಯವಲ್ಲ ನಾವು ದೇಶಕ್ಕೆ ಏನು ಕೊಟ್ಟಿರುತ್ತೇವೆ ಎಂದು ಆತ್ಮಾವಲೋಕನ ಮಾಡಿಕೊಂಡು ಮುನ್ನಡೆಯಬೇಕು ಎಂದು ಹಿರೇಕೆರೂರು ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಎಸ್.ಬಿ.ತಿಪ್ಪಣ್ಣ ಹೇಳಿದರು. https://chat.whatsapp.com/Ge11n7QCiMj5QyPvCc0H19 ಹಿರೇಕೆರೂರು ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಅಧೀನ ಶಾಲಾ-ಕಾಲೇಜುಗಳ ಸಹಯೋಗದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಂದೇಶ ನೀಡಿದರು. ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶ್ರೀಧರ ಮಾತನಾಡಿ ಭಾರತ ದೇಶ ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯದ ಮೂಲ ತತ್ವಗಳನ್ನು ಪಾಲಿಸಿಕೊಂಡು ವಿಶ್ವದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿ ಬೆಳೆಯುತ್ತಿರುವುದು ದೇಶದ ಪ್ರಗತಿಯ ಸಂಕೇತವಾಗಿದೆ.…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಬಾಗ್ ಶಾಖೆಯ 10ನೇ ವಾರ್ಷಿಕೋತ್ಸವ ಪ್ರಯುಕ್ತ ಕುದ್ರೋಳಿ ಯುವಕ ಸಂಘ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸ್, ಇಲ್ಲಿನ ನುರಿತ ವೈದರ ತಂಡದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಜನವರಿ 26ರಂದು ಭಾನುವಾರ ಪೂರ್ವಾಹ್ನ 9.30ರಿಂದ ಮಧ್ಯಾಹ್ನ 12.30ರವರೆಗೆ ಕುದ್ರೋಳಿ ಯುವಕ ಸಂಘದಲ್ಲಿ ಆಯೋಜಿಸಲಾಗಿದೆ. https://chat.whatsapp.com/Ge11n7QCiMj5QyPvCc0H19 ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ.ಪಿ.ತಪಾಸಣೆ , ಜನರಲ್ ವೈದ್ಯಕೀಯ ಸಮಾಲೋಚನೆ, ಇ.ಸಿ.ಜಿ , ಕಿವಿ, ಮೂಗು, ಗಂಟಲು ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಹಲ್ಲುಗಳನ್ನು ಶುಚಿ ಮಾಡುವುದು, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಸಂಘದ ಸದಸ್ಯರು…

Read More

ಮಂಗಳೂರು: ಭಾರತಕ್ಕೆ ಹುರಿದ(Roasted) ಅಡಿಕೆಯ ಆಮದಿನಿಂದ ದೇಶೀಯ ಅಡಿಕೆ ಬೆಳೆಗಾರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿರುವ ಕ್ಯಾಂಪ್ಕೋ ಈ ಕುರಿತು ತಕ್ಷಣ ಮಧ್ಯಪ್ರವೇಶ ಮಾಡುವಂತೆ ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದೆ. https://chat.whatsapp.com/Ge11n7QCiMj5QyPvCc0H19 ಹುರಿದ ಅಡಿಕೆ HSN ಕೋಡ್ 20081920 ಅಡಿಯಲ್ಲಿ ಮೌಲ್ಯವರ್ಧಿತ ಉತ್ಪನ್ನದ ರೂಪದಲ್ಲಿ ಆಮದು ಮಾಡಲಾಗುತ್ತಿದ್ದು, ಕಸ್ಟಮ್ಸ್ ಡ್ಯೂಟಿ ತಪ್ಪಿಸಲು ತಪ್ಪು ವರ್ಗೀಕರಣದ ಮೂಲಕ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ. ಈ ರೀತಿಯ ಅಕ್ರಮಗಳು ಮಾರುಕಟ್ಟೆಯ ಸಮತೋಲನ ಹಾಳು ಮಾಡುವುದಲ್ಲದೇ ಸರಬರಾಜು ಕೊರತೆಯಿದ್ದರೂ ಬೆಲೆ ಏರಿಕೆಗೆ ಅವಕಾಶ ನೀಡದೆ ದೇಶೀಯ ಬೆಳೆಗಾರರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವಲ್ಲಿ ತಡೆಯಾಗಿದೆ. CAMPCO ಮಾಹಿತಿಯ ಪ್ರಕಾರ, ಈ ಆಮದು ಅಡ್ವಾನ್ಸ್ ರೂಲಿಂಗ್ ಲೈಸೆನ್ಸ್‌ಗಳ ಮೂಲಕ ಕೇವಲ 12% GST ನಿಗದಿಯಾಗಿದ್ದು, ಈ ಅಡಿಕೆಯನ್ನು ಸ್ಥಳೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಉತ್ಪನ್ನದ ಗುಣಮಟ್ಟ ಹಾಳಾಗುತ್ತಿದೆ ಮತ್ತು ಖರೀದಿದಾರರಿಂದ ಸಗಟಾಗಿ ತಿರಸ್ಕಾರವಾಗುವ ಸಾಧ್ಯತೆ ಇದೆ. ಇದಲ್ಲದೆ…

Read More

ಬೆಳ್ತಂಗಡಿ: ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಆಶಾಕಿರಣ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಗುರುವಾರ ನಡೆಯಿತು. https://chat.whatsapp.com/Ge11n7QCiMj5QyPvCc0H19 ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್‌ನ ಪ್ರಧಾನ ಗುರು ಫಾ.ವಾಲ್ಟರ್ ಡಿಮೆಲ್ಲೊ ಆಶೀರ್ವಚನ ನೀಡಿದರು. ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್‌ ಪೂಂಜ ಆಶಾಕಿರಣ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಮಾಡಿದರು. ಆಡಳಿತ ಮಂಡಳಿ ಸಭಾಭವನದ ಉದ್ಘಾಟನೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ನೆರವೇರಿಸಿದರು. ಗೌರವ ಅತಿಥಿಗಳಾಗಿ ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಪಟ್ಟಣ ಪಂಚಾಯತ್‌ ಅಧ್ಯಕ್ಷ ಜಯಾನಂದ ಗೌಡ, ಆಲ್ ಇಂಡಿಯಾ ಕ್ಯಾಥೋಲಿಕ್ ಯೂನಿಯನ್‌ ನಿಕಟಪೂರ್ವಾಧ್ಯಕ್ಷ ನೋಟರಿ ವಕೀಲ ಸೇವಿಯರ್ ಪಾಲೇಲಿ ಭಾಗವಹಿಸಿದ್ದರು. ಹೋಲಿ ರೆಡೀಮರ್ ಚಚ್೯ ಸಂಚಾಲಕ ಕ್ಲಿಫರ್ಡ್‌ ಪಿಂಟೋ, ಆಡಳಿತ ಮಂಡಳಿ ಉಪಾಧ್ಯಕ್ಷ ಡೆನಿಸ್ ಸಿಕ್ವೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐವನ್ ಗೊನ್ಸಾಲ್ವಿಸ್, ಆಡಳಿತ ಮಂಡಳಿ ನಿರ್ದೇಶಕರಾದ ಜೇಮ್ಸ್ ಡಿಸೋಜ, ಜೋಸೆಫ್ ಪೀಟರ್ ಸಲ್ಡಾನ್ಹಾ, ಹೆರಾಲ್ಡ್ ಪಿಂಟೊ, ಅಲ್ಫೋನ್ಸ್‌…

Read More

ಮಂಗಳೂರು: ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಪುಷ್ಪಾ ಶೇಟ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಭಾರತಿ ಜಿ.ಭಟ್‌ ಅವರು ಸಹಕಾರ ಭಾರತಿಯ ರಾಷ್ಟ್ರೀಯ ಗ್ರಾಹಕ ಪ್ರಕೋಷ್ಠ (consumer cell) ಇದರ ರಾಷ್ಟ್ರೀಯ ಪ್ರಮುಖ್‌ ಆಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳಾ ಬ್ಯಾಂಕ್‌ ನಿರ್ದೇಶಕರಾಗಿ ಶೈಲಜಾ ವಿ.ಕರ್ಕೇರ(ಮಂಗಳೂರು), ಸುಜಿತಾ ವಿ.ಬಂಗೇರ(ಬೆಳ್ತಂಗಡಿ), ಶಾಂತಾ ಪಿ.ಭಟ್‌(ಉಡುಪಿ), ಶಾರಿಕಾ ತಾರಾನಾಥ ರೈ(ಪುತ್ತೂರು), ಚಂದ್ರಾಕ್ಷಿ ಜೆ ರೈ(ಸುಳ್ಯ), ಪದ್ಮಾವತಿ ಕೆ.ಪಿ(ಕಾರ್ಕಳ), ಸೌಮ್ಯತಾ ಬಿ.ಎಸ್‌(ಬಂಟ್ವಾಳ), ಸರಳಾ ಬಿ.ಕಾಂಚನ್‌(ಹಿಂದುಳಿದ ಪ್ರವರ್ಗ ಎ), ಯಮುನಾ ಎ.ಕಾವ(ಹಿಂದುಳಿದ ಪ್ರವರ್ಗ ಬಿ), ಪ್ರಫುಲ್ಲ ಟಿ(ಪರಿಶಿಷ್ಟ ಜಾತಿ) ಆಯ್ಕೆಯಾಗಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಸುಬ್ರಹ್ಮಣ್ಯ ಕೆಎಸ್‌ಎಸ್‌ ಕಾಲೇಜಿನ ಬಿಬಿಎ ವಿದ್ಯಾರ್ಥಿನಿ ಸ್ವಾತಿ ರೈ ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕಿಯಾಗಿ ಅವಿರೋಧ ಆಯ್ಕೆ ಪುತ್ತೂರು: ಸಹಕಾರ ಕ್ಷೇತ್ರಕ್ಕೆ ಹೆಚ್ಚೆಚ್ಚು ಯುವಕರ ಪ್ರವೇಶವಾಗಬೇಕು ಎಂಬ ಕೂಗಿನ ಮಧ್ಯೆಯೇ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು(ಕೆಎಸ್‌ಎಸ್‌) ವಿದ್ಯಾರ್ಥಿನಿಯೊಬ್ಬರು ಪ್ರತಿಷ್ಠಿತ ಸಹಕಾರ ಬ್ಯಾಂಕೊಂದರ ಆಡಳಿತ ಮಂಡಳಿ ನಿರ್ದೇಶಕಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುಬ್ರಹ್ಮಣ್ಯದ ಕೆಎಸ್‌ಎಸ್‌ ಕಾಲೇಜಿನ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ, ಕಡಬ ಗ್ರಾಮದ ಅರ್ತಿಲದ ಸ್ವಾತಿ ರೈ ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈಕೆ ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಬ್ಯಾಂಕ್‌ಗೆ ಆಯ್ಕೆಯಾಗಿದ್ದು, ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ. https://chat.whatsapp.com/Ge11n7QCiMj5QyPvCc0H19 ಕಡಬ ಗ್ರಾಮದ ಅರ್ತಿಲ ದಿ.ಆನಂದ ರೈ ಮತ್ತು ತಾರಾ ರೈ ದಂಪತಿಯ ಪುತ್ರಿಯಾಗಿರುವ ಸ್ವಾತಿ ರೈ ಸದ್ಯ ತಾಯಿ ಹಾಗೂ ಅಣ್ಣನ ಜೊತೆ ವಾಸವಾಗಿದ್ದು, ನಿರ್ದೇಶಕಿಯಾಗುವ ಅವಕಾಶ ಮೊದಲಿಗೆ ತಾಯಿ ತಾರಾ ರೈ ಅವರಿಗೆ ಬಂದಿತ್ತು.…

Read More

ಹಿರಿಯೂರು: ಹಿರಿಯೂರು ವೀರಶೈವ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. https://chat.whatsapp.com/Ge11n7QCiMj5QyPvCc0H19 ಸಾಮಾನ್ಯ ಸ್ಥಾನದಿಂದ ಎಸ್‌.ಬಿ.ಶಿವಕುಮಾರ್‌(ಹಿರಿಯೂರು), ಆರ್‌.ಟಿ ನಾಗರಾಜ(ರಂಗೇನಹಳ್ಳಿ), ವಿ.ಮಲ್ಲಿಕಾರ್ಜುನಪ್ಪ(ಶಿಡ್ಲಯ್ಯನಕೋಟೆ), ಡಿ.ಎಸ್‌ ಮಹೇಶ್‌(ಹಿರಿಯೂರು), ವಿ.ಮಂಜುನಾಥ (ಆಲೂರು), ಸಿದ್ದಗಂಗಯ್ಯ(ಖಂಡೇನಹಳ್ಳಿ), ಸಿ.ಸಿದ್ದರಾಮಣ್ಣ(ಹಿರಿಯೂರು), ಎ.ವಿ.ಸಿದ್ದರಾಮಣ್ಣ(ಆಲೂರು), ಜಿ.ಎಸ್‌.ಸೋಮಶೇಖರ್‌(ಗನ್ನಾಯಕನಹಳ್ಳಿ), ಹಿಂದುಳಿದ ವರ್ಗ ಎ ಮೀಸಲು ಸ್ಥಾನದಿಂದ ಕೆ.ಮಹಾಂತೇಶ್‌(ಹಿರಿಯೂರು), ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಸಿ.ಸಿದ್ದರಾಮಣ್ಣ(ಹಿರಿಯೂರು), ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಎಂ.ರಂಗಪ್ಪ(ಹಿರಿಯೂರು), ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಡಿ.ಉಗ್ರನರಸಿಂಹಯ್ಯ(ಹಿರಿಯೂರು), ಮಹಿಳಾ ಮೀಸಲು ಸ್ಥಾನದಿಂದ ವಿ.ನಿರ್ಮಲ(ಹಿರಿಯೂರು) ಮತ್ತು ಬಿ.ರತ್ನಮ್ಮ(ವದ್ದಿಕೆರೆ) ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಮಂಗಳೂರು: ಇಲ್ಲಿನ ದೈವಜ್ಞ ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ, ಶ್ವೇತಾ ಜ್ಯುವೆಲ್ಲರ್ಸ್‌ನ ಮಾಲೀಕ, ಮಂಗಳೂರು ವಿ.ಟಿ ರೋಡ್‌ ನಿವಾಸಿ ಎಂ.ಅಶೋಕ್‌ ಶೇಟ್‌ (64) ಬುಧವಾರ ಬೆಳಗ್ಗೆ ನಿಧನ ಹೊಂದಿದರು. https://chat.whatsapp.com/Ge11n7QCiMj5QyPvCc0H19 ಲಯನ್ಸ್‌ ಕ್ಲಬ್‌ ಪಡೀಲ್‌ -ಕಂಕನಾಡಿಯಲ್ಲಿ ಕ್ರಿಯಾಶೀಲ ಸದಸ್ಯರಾಗಿದ್ದ ಅವರು, ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ವಿಶ್ವಕರ್ಮ ಸಹಕಾರ ಬ್ಯಾಂಕ್‌ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿಯೂ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ. ಇವರು ಪತ್ನಿ ಸಂಧ್ಯಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಶೋಕ್‌ ಶೇಟ್‌ ಅವರ ನಿಧನಕ್ಕೆ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಹರೀಶ್‌ ಆಚಾರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಬೆಳ್ತಂಗಡಿ: ಇಲ್ಲಿನ ಕಥೋಲಿಕ್‌ ಕ್ರೆಡಿಟ್‌ ಸಹಕಾರ ಸಂಘದ ಆಶಾಕಿರಣ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಸಂಘದ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಜನವರಿ 23ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಬೆಳ್ತಂಗಡಿಯ ಹೋಲಿ ರೆಡಿಮೀರ್‌ ಚರ್ಚ್‌ನ ಫಾ.ವಾಲ್ಟರ್‌ ಡಿಮೆಲ್ಲೊ ಆಶೀರ್ವಚನ ನೀಡಲಿದ್ದಾರೆ. ಕಥೋಲಿಕ್‌ ಕ್ರೆಡಿಟ್‌ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೋ ಅಧ್ಯಕ್ಷತೆಯಲ್ಲಿ ಶಾಸಕ ಹರೀಶ್‌ ಪೂಂಜ ಆಶಾಕಿರಣ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮಾಡಲಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಮ್‌ ಸಂಘದ ಪ್ರಧಾನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಆಡಳಿತ ಮಂಡಳಿಯ ಸಭಾಂಗಣ ಉದ್ಘಾಟನೆ ಮಾಡುವರು. ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್‌.ಎನ್‌.ರಮೇಶ್‌ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಸಹಕಾರ ಸಂಘಗಳ ಪುತ್ತೂರು ಉಪವಿಭಾಗದ ಸಹಾಯಕ ನಿಬಂಧಕ ಎಸ್‌.ಎಂ ರಘು, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಅಧ್ಯಕ್ಷ ಜಯಾನಂದ ಗೌಡ, ನೋಟರಿ ವಕೀಲರು ಸೇವಿಯರ್‌ ಪಾಲೇಲಿ…

Read More