Author: admin
ಉತ್ತರ ಪ್ರದೇಶ ಬಜೆಟ್ನಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಘೋಷಣೆ ಲಖ್ನೋ: ಉತ್ತರ ಪ್ರದೇಶ ಹಣಕಾಸು ಸಚಿವ ಸುರೇಶ್ ಖನ್ನಾ ಮಂಡಿಸಿರುವ ರಾಜ್ಯ ಬಜೆಟ್ ಸಹಕಾರಿ ವಲಯವನ್ನು ಬಲಪಡಿಸುವ ಇರಾದೆ ವ್ಯಕ್ತಪಡಿಸಿದ್ದು 2025ರ ವರ್ಷವನ್ನು ಸಹಕಾರಿ ಮಹಾಕುಂಭ ವರ್ಷವೆಂದು ಘೋಷಿಸಿದೆ. https://chat.whatsapp.com/EbVKVnWB6rlHT1mWtsgbch ಸಹಕಾರಿ ವಲಯಕ್ಕೆ ಒಟ್ಟು 16 ಕೋಟಿ ರೂ. ವೆಚ್ಚದ ಮೂರು ಹೊಸ ಯೋಜನೆಗಳನ್ನು ರಾಜ್ಯ ಬಜೆಟ್ನಲ್ಲಿ ಪರಿಚಯಿಸಲಾಗಿದೆ. ಅಂತಾರಾಷ್ಟ್ರೀಯ ಸಹಕಾರಿ ವರ್ಷ (ಐವೈಸಿ) 2025 ಕಾರ್ಯಕ್ರಮಗಳಿಗೆ 5 ಕೋಟಿ ರೂ., ಯುಪಿ ರಾಜ್ಯ ಸಹಕಾರಿ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳಿಗೆ ತಂತ್ರಜ್ಞಾನ ನವೀಕರಣ ಮತ್ತು ಸೈಬರ್ ಭದ್ರತೆಗಾಗಿ 10 ಕೋಟಿ ರೂ. ಮತ್ತು ಬಲರಾಂಪುರ ಮತ್ತು ಗೊಂಡಾದಲ್ಲಿ ಎರಡು ಹೊಸ ಜಿಲ್ಲಾ ಸಹಕಾರಿ ಬ್ಯಾಂಕ್ಗಳನ್ನು ನಿರ್ಮಿಸಲು 1 ಕೋಟಿ ರೂ. ಘೋಷಿಸಲಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಗಣಕೀಕರಣ ಮತ್ತು ಆರ್ಥಿಕ ಬೆಂಬಲಕ್ಕಾಗಿ 647.27 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನ್ಯಾನೊ ಯೂರಿಯಾ ಸೇರಿದಂತೆ ಕೃಷಿ…
ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಭಾನುವಾರ ಹಿಂದೂ ಯುವ ಸೇನೆ ಕಾವುಬೈಲ್, ಬಜಾಲ್ ಶಾಖೆ ಹಾಗೂ ಶ್ರೀಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ ಇವುಗಳ ಸಹಯೋಗದೊಂದಿಗೆ ಕಾವುಬೈಲ್, ಬಜಾಲ್ನಲ್ಲಿನ ಹಿಂದೂ ಯುವಸೇನೆಯ ಸಭಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ -ದಂತ -ಕಣ್ಣಿನ ತಪಾಸಣಾ ಚಿಕಿತ್ಸಾ ಶಿಬಿರ ಆಯೋಜಿಸಿತ್ತು. https://chat.whatsapp.com/EbVKVnWB6rlHT1mWtsgbch ಮಂಗಳೂರಿನ ಅತ್ತಾವರ ಕೆ.ಎಂ.ಸಿ. ಆಸ್ಪತ್ರೆ ಹಾಗೂ ದೇರಳಕಟ್ಟೆ ಯೇನಪೊಯ ದಂತ ಕಾಲೇಜಿನ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದರು. 365 ರೋಗಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಂಡರು. ಕಣ್ಣಿನ ಸಮಸ್ಯೆ ಇದ್ದ 65 ಜನರಿಗೆ ಸ್ಥಳದಲ್ಲೇ ಉಚಿತವಾಗಿ ಕನ್ನಡಕ ಹಾಗೂ ಎಲ್ಲಾ ಖಾಯಿಲೆಗಳಿಗೆ ಉಚಿತವಾಗಿ ಔಷಧ ನೀಡಲಾಯಿತು. ಹೆಚ್ಚಿನ ಚಿಕಿತ್ಸೆ ಅವಶ್ಯಕತೆಯುಳ್ಳ 76 ಜನರಿಗೆ ಬುಧವಾರ KMC ಅತ್ತಾವರ ಆಸ್ಪತ್ರೆಗೆ ಹಾಗೂ ಹಲ್ಲಿನ ಸಮಸ್ಯೆಯುಳ್ಳವರಿಗೆ ದೇರಳಕಟ್ಟೆ ಯೆನೆಪೋಯ ದಂತ ಆಸ್ಪತ್ರೆಗೆ ಬರಲು ಸೂಚಿಸಲಾಗಿದೆ. ಅನೇಕರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ಅವಶ್ಯಕತೆಯಿದ್ದು ಅವರಿಗೆ ಸಂಪೂರ್ಣ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಶ್ರೀಶಾ ಸೊಸೈಟಿಯು ಪ್ರತಿ ತಿಂಗಳೂ ಮಂಗಳೂರು…
ಮುಂದಿನ ದಿನಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಹೇಳಿಕೆ ಬೆಳ್ಮಣ್: ಎಂಸಿಸಿ ಬ್ಯಾಂಕಿನ ೧೯ನೇ ಶಾಖೆಯು ಬೆಳ್ಮಣ್ ಮುಖ್ಯರಸ್ತೆಯ ಎಲ್ವಿನ್ ಟವರ್ಸ್ನ ನೆಲಮಹಡಿಯಲ್ಲಿ ಭಾನುವಾರ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನುವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಉದ್ಘಾಟಿಸಿದರು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ದೀಪ ಬೆಳಗಿಸಿದರು. ಬೆಳ್ಮಣ್ ಸಂತ ಜೋಸೆಫ್ ಚರ್ಚ್ನ ಧರ್ಮಗುರು ವಂ.ಫಾ| ಫ್ರೆಡ್ರಿಕ್ ಮಸ್ಕರೇನ್ಹಸ್ ಆಶೀರ್ವದಿಸಿದರು. ಭದ್ರತಾ ಕೊಠಡಿಯನ್ನು ದಾಯ್ಜಿವಲ್ದ್ ಮೀಡಿಯಾ ಸಂಸ್ಥಾಪಕ ವಾಲ್ಟರ್ ನಂದಳಿಕೆ ಉದ್ಘಾಟಿಸಿದರು. ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಬೆಳ್ಮಣ್ ಗ್ರಾಮ ಪಂಚಾಯತ್ ಅಧಕ್ಷೆ ರಾಮೇಶ್ವರಿ ಎಮ್. ಶೆಟ್ಟಿ ಉದ್ಘಾಟಿಸಿದರು. ಅನಿವಾಸಿ ಭಾರತೀಯ ಉದ್ಯಮಿ ಶ್ರೀ ರೋನ್ ರೊಡ್ರಿಗಸ್ ಉಪಸ್ಥಿತರಿದ್ದರು. https://chat.whatsapp.com/EbVKVnWB6rlHT1mWtsgbch ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅನಿಲ್ ಲೋಬೊ, ಬ್ಯಾಂಕಿನ ಸೇವೆ ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಬೆಳ್ಮಣ್ ಪರಿಸರದಲ್ಲಿ ಬ್ಯಾಂಕಿನ ಸಿಬ್ಬಂದಿಗಳು ಭೇಟಿ ಮಾಡಿದ ಸಂದರ್ಭ ಪರಿಸರದ ಜನ ನೀಡಿದ ಸ್ವಾಗತ, ಸಹಕಾರ ಮತ್ತು ಬೆಂಬಲಕ್ಕಾಗಿ ವಂದನೆ ಸಲ್ಲಿಸಿ,…
ಮಂಗಳೂರು: 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಮಾರ್ಚ್ 2ರಂದು ಬೆಳ್ಮಣ್ ಮುಖ್ಯರಸ್ತೆಯ ಎಲ್ವಿನ್ ಟವರ್ಸ್ನ ನೆಲಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಶಾಖೆಯ ಉದ್ಘಾಟನೆಯ ಕಾರ್ಯಕ್ರಮ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಶಾಖೆಯ ಉದ್ಘಾಟನೆ ಮಾಡಲಿದ್ದಾರೆ. ಸಂತ ಜೋಸೆಫ್ ಚರ್ಚ್, ಬೆಳ್ಮಣ್ ಇದರ ಧರ್ಮಗುರು ವಂ. ಫಾ| ಫ್ರೆಡ್ರಿಕ್ ಮಸ್ಕರೇನ್ಹಸ್ ಆಶಿರ್ವಚನ ನೀಡುವರು. ದಾಯ್ಜಿವಲ್ಡ್ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮುಖ್ಯ ಅತಿಥಿಯಾಗಿದ್ದು, ಬೆಳ್ಮಣ್ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಮೇಶ್ವರಿ ಎಮ್. ಶೆಟ್ಟಿ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. https://chat.whatsapp.com/EbVKVnWB6rlHT1mWtsgbch ಪ್ರಸ್ತುತ ಎಂ.ಸಿ.ಸಿ ಬ್ಯಾಂಕ್ ಸುಸಜ್ಜಿತ ಆಡಳಿತ ಕಛೇರಿ ಮತ್ತು ಸಂಸ್ಥಾಪಕರ ಶಾಖೆ ಹಂಪನಕಟ್ಟ, ಅಶೋಕನಗರ, ಕಂಕನಾಡಿ, ಕುಲಶೇಕರ, ಮೋರ್ಗನ್ಸ್ಗೇಟ್, ಮೂಡಬಿದ್ರಿ, ಶಿರ್ವ, ಬಜಪೆ, ಕಿನ್ನಿಗೋಳಿ, ಸುರತ್ಕಲ್, ಉಳ್ಳಾಲ, ಉಡುಪಿ, ಕುಂದಾಪುರ, ಪುತ್ತೂರು, ಬಿ.ಸಿ.ರೋಡ್, ಕಾರ್ಕಳ, ಬ್ರಹ್ಮಾವರ ಮತ್ತು ಬೆಳ್ತಂಗಡಿ ಹೀಗೆ 18 ಶಾಖೆಗಳನ್ನು ಹೊಂದಿರುತ್ತದೆ. ಬ್ಯಾಂಕಿನ ಆಡಳಿತ ಮಂಡಳಿ…
ನಾಮನಿರ್ದೇಶಿತರಿಗೆ ಮತದಾನದ ಹಕ್ಕು ನೀಡಿದರೆ ಸಂಘದ ನಿಯಂತ್ರಣಕ್ಕೆ ಅವಕಾಶ ಕೊಟ್ಟಂತೆ ಎಂದ ಗೆಹ್ಲೋತ್ ಬೆಂಗಳೂರು: ಸಹಕಾರ ವಲಯದಲ್ಲಿ ಮಹತ್ವದ ಬದಲಾವಣೆ ತರಬಲ್ಲ ಎರಡು ಪ್ರಮುಖ ಕಾನೂನು ತಿದ್ದುಪಡಿ ವಿಧೇಯಕಗಳನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಎರಡನೇ ಬಾರಿ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಸದನದಲ್ಲಿ ಪಾಸ್ ಆಗಿ ರಾಜ್ಯಪಾಲರ ಅಂಕಿತಕ್ಕೆ ಬಂದಿದ್ದ ‘ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ-2024’ ಮತ್ತು ‘ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ- 2024’ ಈ ಎರಡನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಹಿ ಹಾಕದೆ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದು, ಈ ವಿಷಯದಲ್ಲಿ ಕೆಲವೊಂದು ಸ್ಪಷ್ಟನೆಯನ್ನೂ ಕೇಳಿದ್ದಾರೆ. https://chat.whatsapp.com/EbVKVnWB6rlHT1mWtsgbch ಕೆಲವು ದಿನಗಳ ಹಿಂದಷ್ಟೇ ‘ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ 2024’ಯನ್ನು ಸಹಿ ಹಾಕದೆ ವಾಪಸ್ ಕಳುಹಿಸಿದ್ದ ರಾಜ್ಯಪಾಲರು ಇದೀಗ ಮತ್ತೆರಡು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ. ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಹಲವು ಆಕ್ಷೇಪಗಳನ್ನು ಮಾಡಿದ್ದಾರೆ. ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ…
ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ನೂತನ ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಮುಂದಿನ 3 ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. https://chat.whatsapp.com/EbVKVnWB6rlHT1mWtsgbch ಹಣಕಾಸು ಕಾರ್ಯದರ್ಶಿ ಆಗಿದ್ದ ತುಹಿನ್ ಕಾಂತ ಪಾಂಡೆ ಅವರು ಮೂರು ವರ್ಷಗಳ ಅವಧಿಗೆ ಸೆಬಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ ಈ ನೇಮಕ ನಡೆದಿದೆ. ಸೆಬಿ ಹಾಲಿ ಮುಖ್ಯಸ್ಥ ಮಾಧಬಿ ಪುರಿ ಬುಚ್ ಅವರ ಅಧಿಕಾರಾವಧಿ ಮಾ.1 ರಂದು ಕೊನೆಗೊಳ್ಳಲಿದೆ. ಇವರು 2022ರ ಮಾ.2ರಂದು ಸೆಬಿಯ ಮೊದಲ ಮಹಿಳಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು. ತುಹಿನ್ ಕಾಂತ ಪಾಂಡೆ ಅವರು ಪ್ರಸ್ತುತ ಹಣಕಾಸು ಸಚಿವಾಲಯದಲ್ಲಿ ಹಿರಿಯ ಅಧಿಕಾರಿಗಳಲ್ಲಿ ಒಬ್ಬರಾಗಿದ್ದು, ತೆರಿಗೆ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಇವರು ಏರ್ ಇಂಡಿಯಾ ಖಾಸಗೀಕರಣ ಹಾಗೂ ಎಲ್ಐಸಿ ಸಂಸ್ಥೆ ಸಾರ್ವಜನಿಕ ಹೂಡಿಕೆಯಲ್ಲಿ ಸೇರಲು ಪ್ರಮುಖ ಪಾತ್ರ…
ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ 19 ಒಪ್ಪಂದಗಳಿಗೆ ಸಹಿ ಭೋಪಾಲ್: ದೇಶದ ಪ್ರಮುಖ ಕಂಪನಿಗಳಲ್ಲೊಂದಾದ ರಿಲಯನ್ಸ್ ಸಹಕಾರಿ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿದ್ದು ಹಲವು ಪ್ರಮುಖ ಯೋಜನೆಗಳನ್ನು ಘೋಷಿಸಿದೆ. ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ (GIS) ಈ ಯೋಜನೆಗಳನ್ನು ಘೋಷಿಸಲಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಸಹಕಾರಿ ಸಚಿವ ವಿಶ್ವಾಸ್ ಸಾರಂಗ್ ಸಹಕಾರಿ ವಲಯದಲ್ಲಿ 2,305 ಕೋಟಿ ರೂ. ಮೌಲ್ಯದ 19 ಒಪ್ಪಂದಗಳಿಗೆ (MoU) ಸಹಿ ಹಾಕಿದ್ದಾರೆ. ಪ್ರಮುಖ ಹೂಡಿಕೆದಾರರ ಸಮ್ಮುಖದಲ್ಲಿ ಹಲವು ಉಪಕ್ರಮಗಳಿಗೆ ಸಹಿ ಹಾಕಲಾಗಿದ್ದು ಈ ಒಪ್ಪಂದಗಳು ಆರ್ಥಿಕ ಅಭಿವೃದ್ಧಿಯಲ್ಲಿ ಪರಿವರ್ತನಾತ್ಮಕ ಹೆಜ್ಜೆಯನ್ನು ಇಡಲಿದೆ ಮತ್ತು ಸಹಕಾರಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (CPPP) ಮಾದರಿಗೆ ಇದು ಹೊಸ ದಿಕ್ಕು ತೋರಿಸಲಿದೆ. https://chat.whatsapp.com/EbVKVnWB6rlHT1mWtsgbch ಸಹಕಾರಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (CPPP) ಮಾದರಿಯನ್ನು ಪರಚಯಿಸಿದ ಸಚಿವ ವಿಶ್ವಾಸ್ ಸಾರಂಗ್, ಈ ಉಪಕ್ರಮವು ದೇಶಾದ್ಯಂತ ಸಹಕಾರಿ ವಲಯದ ಕಾರ್ಯಚಟುವಟಿಕೆಗಳನ್ನು ಪುನಃರ್ರಚಿಸಲಿದೆ ಎಂದು ಹೇಳಿದರು. ಕೇಂದ್ರ ಸಹಕಾರಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಿದ್ಧಾರ್ಥ್…
ಶಿವಮೊಗ್ಗ: ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ ನಿ., ಶಿಕಾರಿಪುರ, ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘ ನಿ., ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ನಿ., ಶಿಕಾರಿಪುರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕಾರಿಪುರ ಹಾಗೂ ಕುಶ್ವಿತ ಮಿನರಲ್ಸ್, (ಜನಸಿರಿ ವಾಟರ್ ಬಾದಲ್) ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. https://chat.whatsapp.com/EbVKVnWB6rlHT1mWtsgbch ಶಿಕಾರಿಪುರ ಎಸ್.ಎಸ್ ರಸ್ತೆಯ ಸಾಂಸ್ಕೃತಿಕ ಭವನದಲ್ಲಿ ಬೆಳಗ್ಗೆ 10ರಿಂದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಹಿಳಾ ಜಾನಪದ ಕಲಾಮೇಳ, ಮಹಿಳಾ ಸಾಧಕರಿಗೆ ಸನ್ಮಾನ, ಮಹಿಳಾ ಸಹಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಮತ್ತು ಪುಷ್ಪಗಿರಿ ಮಹಿಳಾ ಸ್ವಸಹಾಯ ಸಂಘಗಳ ಸಮಾವೇಶ ನಡೆಯಲಿದೆ. ಬೆಳಗ್ಗೆ 10ಕ್ಕೆ ಜಾನಪದ ಕಲಾಮೇಳ ನಡೆಯಲಿದ್ದು ಶಿಕಾರಿಪುರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಕ್ಕ ದಿವ್ಯ ಸಾನ್ನಿಧ್ಯದಲ್ಲಿ ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘದ ಅಧ್ಯಕ್ಷ…
ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿಕೆ ಗುವಾಹಟಿ: ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯಲ್ಲಿ ಸ್ವಾವಲಂಬನೆ ಸಾಧಿಸುವತ್ತ ದಿಟ್ಟ ಹೆಜ್ಜೆ ಇಟ್ಟಿರುವ ಭಾರತ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯತತ್ಪರವಾಗಿದೆ. ಈ ವಿಷಯದಲ್ಲಿ ಪೆಟ್ರೋಲ್ನೊಂದಿಗೆ ಶೇ.20ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಸಂಬಂಧ ನೀತಿ ಆಯೋಗದ ಅಧೀನದಲ್ಲಿ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಅಸ್ಸಾಂನಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, 2026ರೊಳಗೆ ಶೇ.20ರಷ್ಟು ಎಥೆನಾಲ್ ಮಿಶ್ರಣದ ಗುರಿ ನಿಗದಿಯಾಗಿತ್ತು. ಈಗಾಗಲೇ ಶೇ.19.6ರಷ್ಟು ಗುರಿ ಸಾಧನೆಯಾಗಿದೆ. ಮುಂದಿನ ತಿಂಗಳು ನಿಗದಿತ ಗುರಿ ಪೂರ್ಣಗೊಳ್ಳಲಿದೆ. ಹೀಗಾಗಿ ಈಗ ನಮ್ಮ ಗುರಿ ಶೇ.20ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುವ ಕಡೆಗಿದೆ. ಪೆಟ್ರೋಲ್ ಜೊತೆ ಹೆಚ್ಚಿನ ಪ್ರಮಾಣದಲ್ಲಿ ಜೈವಿಕ ಇಂಧನ ಮಿಶ್ರಣ ಮಾಡುವುದರ ಬಗ್ಗೆ ನಾವು ಕಾರ್ಯತತ್ಪರವಾಗಿದ್ದೇವೆ. ಈ ನಿಟ್ಟಿನಲ್ಲಿ ಸಮಿತಿ ಗಮನ ಹರಿಸಲಿದೆ ಎಂದು ಹೇಳಿದರು. ದೇಶದ ಎಥೆನಾಲ್ ಮಿಶ್ರಣ ಸಾಮರ್ಥ್ಯ 1,700 ಕೋಟಿ…
ಶಿವಮೊಗ್ಗ: ಸಿರಿಗಂಧ ಮಹಿಳಾ ಪತ್ತಿನ ಸಹಕಾರ ಸಂಘ ಶಿಕಾರಿಪುರ ಇದರ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಇತ್ತೀಚೆಗೆ ನಡೆದಿದೆ. https://chat.whatsapp.com/EbVKVnWB6rlHT1mWtsgbch ಸಾಮಾನ್ಯ ಕ್ಷೇತ್ರದಿಂದ ಲೋಲಾಕ್ಷಮ್ಮ (ಕಲ್ಮನೆ ಶಿಕಾರಿಪುರ), ಶಾಂತಲಾ ಬಿ(ಶಿಕಾರಿಪುರ), ಅಕ್ಕಮಹಾದೇವಿ(ಬೆಲವಂತನಕೊಪ್ಪ, ಸೊರಬ), ಶಶಿಕಲಾ (ಈಸೂರು), ಲಲಿತಮ್ಮ(ಈಸೂರು), ಮೀನಾಕ್ಷಿ (ಶಿವಮೊಗ್ಗ), ಲಲಿತಾ(ಗೌತಮಪುರ, ಸಾಗರ), ಗಂಗಮ್ಮ(ಗೌತಮಪುರ), ಗೀತಾ(ಅಂಜನಾಪುರ), ಶಶಿಕಲಾ(ಕಾಗಿನಲ್ಲಿ ಶಿಕಾರಿಪುರ), ಲತಾ(ಶಿಕಾರಿಪುರ), ಮಂಜುಳಾ(ಚಿನ್ನಿಕಟ್ಟಿ, ಹೊನ್ನಾಳಿ), ಪದ್ಮಾವತಿ(ಈಸೂರು) ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗ ಪ್ರವರ್ಗ ಎಯಿಂದ ಶಾಂತಮ್ಮ(ಕಲ್ಮನೆ), ಹಿಂದುಳಿದ ವರ್ಗ ಪ್ರವರ್ಗ ಬಿಯಿಂದ ರತ್ನಮ್ಮ(ಅರಿಶಿಣಗೆರೆ, ಶಿಕಾರಿಪುರ), ಪರಿಶಿಷ್ಟ ಪಂಗಡದಿಂದ ಸುಭದ್ರಮ್ಮ(ಕಲ್ಮನೆ) ಆಯ್ಕೆಯಾಗಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
