Author: admin
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ಗೆ ಪ್ರತಿಷ್ಠಿತ ರಾಮಜಾಲು ಗರಡಿ ಗೌರವ ಪ್ರಶಸ್ತಿ
ಮಂಗಳೂರು: ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿರುವ ಇತಿಹಾಸ ಪ್ರಸಿದ್ಧ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮಬೈದೇರುಗಳ ಜಾತ್ರೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಿಗೆ ಪ್ರತಿಷ್ಠಿತ “ರಾಮಜಾಲು ಗರಡಿ ಗೌರವ” ಪ್ರಶಸ್ತಿ ನೀಡಿ ಗೌರವಿಸಲಾಯಿತು. https://chat.whatsapp.com/Ge11n7QCiMj5QyPvCc0H19 ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಧರ್ಮದ ಅರಿವು ನಮ್ಮಲ್ಲಿ ಬರಬೇಕಾದರೆ ನಾವು ಧರ್ಮ ಗ್ರಂಥಗಳನ್ನು ಓದುವವರಾಗಬೇಕು, ಕೇವಲ ಭಾಷಣದಿಂದ ನಮ್ಮಲ್ಲಿ ಧರ್ಮದ ಅರಿವು ಮೂಡಲು ಅಸಾಧ್ಯ. ಪುಸ್ತಕ ಭಂಡಾರದಿಂದ ಹಾಗೂ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ನಮ್ಮಲ್ಲಿ ಧರ್ಮದ ಅರಿವು ಹೆಚ್ಚಾಗಲು ಸಾಧ್ಯವಿದೆ” ಎಂದರು. ರಾಮಜಾಲು ಗರಡಿಯ ಗೌರವವಾಗಿ “ರಾಮಜಾಲು ಗರಡಿ ಗೌರವ ಪ್ರಶಸ್ತಿʼʼಯನ್ನು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಚಿತ್ತರಂಜನ್…
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಬಂಧಿತ ಮೂವರು ಆರೋಪಿಗಳ ಪೈಕಿ ಒಬ್ಬನಿಗೆ ಪೊಲೀಸರು ಗುಂಡು ಹಾರಿಸಿದ್ದಾಗಿ ವರದಿಯಾಗಿದೆ. https://chat.whatsapp.com/Ge11n7QCiMj5QyPvCc0H19 ಮಂಗಳವಾರ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದ್ದಾಗಿ ತಿಳಿದು ಬಂದಿದೆ. ಮುಂಬೈ ಚೆಂಬೂರು ನಿವಾಸಿ ಮಣಿಕಣ್ಣನ್ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕರ್ನಾಟಕ ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಯತ್ನ ನಡೆಸಿದ್ದ ಎಂದು ವರದಿಯಾಗಿದೆ.
ಮಂಗಳೂರು: ಸ್ವಸ್ತಿಕ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಭಾನುವಾರ ರೋಟರಿ ಕ್ಲಬ್ ಮಂಗಳೂರು ದಕ್ಷಿಣ, ಶ್ರೀ ಶಾರದಾಂಬ ಸೇವಾ ಪ್ರತಿಷ್ಠಾನ ಅಳಪೆ ಕರ್ಮಾರ್, ಶ್ರೀ ನಾಗನಾಗಿಣಿ ನಾಗಬ್ರಹ್ಮ ಕ್ಷೇತ್ರ ವಳಚ್ಚಿಲ್ ಪದವು ಅರ್ಕುಳ ಇವುಗಳ ಸಹಯೋಗದೊಂದಿಗೆ ವಳಚ್ಚಿಲ್ ಪದವಿನಲ್ಲಿರುವ ಶ್ರೀ ನಾಗನಾಗಿಣಿ ಸಭಾಭವನದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಯಿತು. ದಂತ, ಕಣ್ಣು, ಇಎನ್ಟಿ ಹಾಗೂ ಮಹಿಳಾ ಮತ್ತು ಮೆಡಿಸಿನ್ ವಿಭಾಗದ ನುರಿತ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದರು. 150ಕ್ಕೂ ಅಧಿಕ ಜನ ಈ ಶಿಬಿರದ ಸದುಪಯೋಗ ಪಡೆದುಕೊಂಡರು. ಕಣ್ಣಿನ ಸಮಸ್ಯೆ ಇದ್ದವರಿಗೆ ಉಚಿತವಾಗಿ ಕನ್ನಡಕ ಹಾಗೂ ಎಲ್ಲಾ ಕಾಯಿಲೆಗಳಿಗೆ ಉಚಿತ ಔಷಧ ನೀಡಲಾಯಿತು. ಹೆಚ್ಚಿನ ಸಮಸ್ಯೆ ಇದ್ದವರಿಗೆ ಜಿ.ಆರ್ ಮೆಡಿಕಲ್ ಆಸ್ಪತ್ರೆ ನೀರುಮಾರ್ಗ ಇಲ್ಲಿ ಹೆಚ್ಚಿನ ಚಿಕಿತ್ಸೆ ವ್ಯವಸ್ಥೆ ಮಾಡಲಾಗುತ್ತದೆ. https://chat.whatsapp.com/Ge11n7QCiMj5QyPvCc0H19 ಶಿಬಿರವನ್ನು ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಉದ್ಘಾಟಿಸಿದರು. ನಿಯೋಜಿತ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್ ಹಾಗೂ ಸಹಾಯಕ ಜೋನ್ ಗವರ್ನರ್ ಅಶೋಕ್ ಕುಮಾರ್…
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪೊಲೀಸರನ್ನೇ ಯಾಮಾರಿಸಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದು ಹೀಗೆ! ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕಿನಲ್ಲಿ ಕಳೆದ ಶುಕ್ರವಾರ ಹಾಡಹಗಲೇ ನಡೆದಿದ್ದ ದರೋಡೆ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಮೂರೇ ದಿನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆ ನೋಡಿದರೆ ಮೇಲ್ನೋಟಕ್ಕೆ ಯಾವುದೇ ಸಾಕ್ಷ್ಯವನ್ನೂ ನೀಡದೆ ಪೊಲೀಸರನ್ನೇ ಯಾಮಾರಿಸಿ ಪರಾರಿಯಾಗಿದ್ದ ಆರೋಪಿಗಳು ಕೆಲವೊಂದು ಸಣ್ಣ ಪುಟ್ಟ ಸಾಕ್ಷ್ಯಗಳನ್ನು ತಾವು ಪರಾರಿಯಾಗಿದ್ದ ಹಾದಿಯಲ್ಲಿ ಬಿಟ್ಟುಹೋಗಿದ್ದರು. ಅದರ ಜಾಡನ್ನೇ ಹಿಡಿದು ಮುಂದುವರಿದ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಮುಂಬೈ ಮತ್ತು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಸುಮಾರು ಹತ್ತು ಆರೋಪಿಗಳಿದ್ದಾರೆ ಎನ್ನಲಾಗಿದ್ದು ಉಳಿದವರ ಪತ್ತೆ ಕಾರ್ಯ ಮುಂದುವರಿದಿದೆ. https://chat.whatsapp.com/Ge11n7QCiMj5QyPvCc0H19 ಶುಕ್ರವಾರ ನಡು ಮಧ್ಯಾಹ್ನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ದರೋಡೆ ಕೃತ್ಯ ನಡೆದ ಬಳಿಕ ಹೈ ಅಲರ್ಟ್ ಆಗಿದ್ದ ಪೊಲೀಸರು, ಸಿಎಂ ಸಿದ್ದರಾಮಯ್ಯ ಅವರಿಂದ ನೀವೆಲ್ಲ ಇದ್ದೂ ಹೀಗೇಕಾಯಿತು ಎಂದು ಹೇಳಿಸಿಕೊಂಡ ಬಳಿಕ ಪ್ರಕರಣವನ್ನು ಮತ್ತಷ್ಟು ಚಾಲೆಂಜಿಂಗ್ ಆಗಿ ಸ್ವೀಕರಿಸಿದ್ದರು. ಕೂಡಲೇ ಕಾರ್ಯತತ್ಪರರಾಗಿ ದರೋಡೆ…
ಮೂಡುಬಿದಿರೆ: ಗ್ರಾಮ ಸಮೃದ್ದಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಹೊಸಂಗಡಿ, ಶ್ರೀ ಜಗದ್ಗುರು ರಾಘವೇಂದ್ರ ಚಾರಿಟಬಲ್ ಟ್ರಸ್ಟ್ ಕರಿಂಜೆ, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಹಾಗೂ ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ ಇವುಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣ ಹೊಸಂಗಡಿ ಇಲ್ಲಿ ಉಚಿತ ಆರೋಗ್ಯ -ದಂತ -ಕಣ್ಣಿನ -ತಪಾಸಣಾ -ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು. https://chat.whatsapp.com/Ge11n7QCiMj5QyPvCc0H19 ಮಂಗಳೂರಿನ ಅತ್ತಾವರ ಕೆ.ಎಂ.ಸಿ. ಆಸ್ಪತ್ರೆ ಹಾಗೂ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇಲ್ಲಿನ ನುರಿತ, ಅನುಭವಿ ವೈದ್ಯರು ಈ ಶಿಬಿರದಲ್ಲಿ ಭಾಗವಹಿಸಿದ್ದರು. ಒಟ್ಟು 200ಕ್ಕೂ ಹೆಚ್ಚಿನ ರೋಗಿಗಳು ಈ ಶಿಬಿರದ ಸದುಪಯೋಗ ಪಡೆದುಕೊಂಡರು. ಕಣ್ಣಿನ ಸಮಸ್ಯೆ ಇದ್ದ 45 ಜನರಿಗೆ ಸ್ಥಳದಲ್ಲೇ ಉಚಿತವಾಗಿ ಕನ್ನಡಕಗಳನ್ನು ಹಾಗೂ ಎಲ್ಲಾ ಖಾಯಿಲೆಗಳಿಗೆ ಔಷಧಿಗಳನ್ನು ಉಚಿತವಾಗಿ ನೀಡಲಾಯಿತು. 50 ಜನರಿಗೆ ರಕ್ತ ತಪಾಸಣೆ ಮಾಡಲಾಗಿದ್ದು ಹೆಚ್ಚಿನ ಚಿಕಿತ್ಸೆ ಆವಶ್ಯಕತೆಯುಳ್ಳ 25 ಜನರನ್ನು ಬುಧವಾರ KMC ಅತ್ತಾವರ ಆಸ್ಪತ್ರೆಗೆ ಬರಲು ಸೂಚಿಸಲಾಗಿದೆ. ಅನೇಕರಿಗೆ…
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ ಮೂವರು ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಂಕ್ ಕಳ್ಳರ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅಧಿಕೃತ ಮಾಹಿತಿ ನೀಡಿದ್ದಾರೆ. https://chat.whatsapp.com/Ge11n7QCiMj5QyPvCc0H19 ಬ್ಯಾಂಕ್ನಲ್ಲಿ ಸುಮಾರು 10ರಿಂದ 12 ಕೋಟಿಯಷ್ಟು ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಖಚಿತಪಡಿಸಿದ್ದಾರೆ. ದರೋಡೆಕೋರರು ಮುಂಬೈನ ಧಾರಾವಿ ಮೂಲದವರು ಎನ್ನಲಾಗಿದೆ. ದರೋಡೆಕೋರರ ಬಂಧನದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು ಕೆ.ಸಿ.ರೋಡ್ನ ಶಾಖೆಯಲ್ಲಿ ಜನವರಿ 17ರಂದು ಕೋಟೆಕಾರು ಬ್ಯಾಂಕ್ನಲ್ಲಿ ದರೋಡೆ ಮಾಡಿದ್ದರು. ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು…
ಮಹಾಕುಂಭ ಮೇಳಕ್ಕೆ ತೆರಳುವ ಆಸಕ್ತ ಯಾತ್ರಿಕರಿಗೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಿಶೇಷ ರಿಯಾಯಿತಿ ಬಡ್ಡಿ ದರದಲ್ಲಿ ಸಾಲ
ಮಂಗಳೂರು: ಸಹಕಾರಿ ರಂಗದಲ್ಲಿ ತನ್ನದೇ ಆದ ವಿಶೇಷ ಛಾಪು ಮೂಡಿಸುತ್ತಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು, ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಲು ಬಯಸುವ ಆಸಕ್ತ ಯಾತ್ರಿಕರಿಗೆ ವಿಶೇಷ ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ನೀಡಲು ಯೋಜಿಸಿದೆ. https://chat.whatsapp.com/Ge11n7QCiMj5QyPvCc0H19 144 ವರ್ಷಗಳ ನಂತರ ನಡೆಯುತ್ತಿರುವ ಈ ಮಹಾಕುಂಭ ಮೇಳವು ಅತ್ಯಂತ ಅಪರೂಪದ್ದಾಗಿದೆ. ಈ ನಿಟ್ಟಿನಲ್ಲಿ ಆಸ್ತಿಕ ಬಂಧುಗಳಿಗೆ ಶ್ರೀಶಾ ಸೊಸೈಟಿ ವಿಶೇಷ ಕೊಡುಗೆ ನೀಡುತ್ತಿದೆ. ಸಾಲ ಸೌಲಭ್ಯಗಳು ಸೊಸೈಟಿಯ ಸಾಲದ ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.ಯಾತ್ರೆಯ ಒಟ್ಟು ಖರ್ಚಿನ ಶೇ20ರಷ್ಟು ಹಣವನ್ನು ಯಾತ್ರಿಕರೇ ಭರಿಸಬೇಕು ಮತ್ತು ಉಳಿದ ಶೇ.80ರಷ್ಟು ಸಾಲವನ್ನು ಮಿತಿಗೆ ಒಳಪಟ್ಟು ನೀಡಲಾಗುವುದು. ಸಾಲ ನೀಡುವುದು/ತಿರಸ್ಕರಿಸುವುದರಲ್ಲಿ ಸೊಸೈಟಿಯ ತೀರ್ಮಾನವೇ ಅಂತಿಮ. ಯಾತ್ರಿಕರಿಗೆ ಸಾಲ ನೀಡುವಲ್ಲಿ ಮಾತ್ರ ಸೊಸೈಟಿಯ ಜವಾಬ್ದಾರಿಯು ಸೀಮಿತವಾಗಿರುತ್ತದೆ. ನಂತರದ ಪ್ರಯಾಣ ಅಥವಾ ಯಾತ್ರೆಯ ಯಾವುದೇ ಆಗುಹೋಗುಗಳಿಗೆ ಸಂಸ್ಥೆ ಜವಾಬ್ದಾರಿಯಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ, ಪ್ರಬಂಧಕರು, 0824 – 2453598/2463598/ 2003598 ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ,…
ಮಂಗಳೂರು: 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5,000 ರೂ. ಗೌರವಧನ ಮತ್ತು ಉಚಿತ ವೈದ್ಯಕೀಯ ನೆರವು ನೀಡುವ ಮನವಿಯನ್ನು ಮಂಗಳೂರು ಸೌಹಾರ್ದ ಸಹಕಾರಿಯ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ನೇತೃತ್ವದಲ್ಲಿ ಶುಕ್ರವಾರ ಸಲ್ಲಿಸಲಾಯಿತು. https://chat.whatsapp.com/Ge11n7QCiMj5QyPvCc0H19 ಮಂಗಳೂರು ಸೌಹಾರ್ದ ಸಹಕಾರಿಯ ಅಧ್ಯಕ್ಷ, ಮಾಜಿ ಕಾರ್ಪೊರೇಟರ್ ಕೆ.ಭಾಸ್ಕರ ರಾವ್, ಶಾಸಕ ಅಶೋಕ್ ಕುಮಾರ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಮಾಜಿ ಕಾರ್ಪೊರೇಟರ್ ನಾಗೇಂದ್ರ ಕುಮಾರ್, ಪ್ರಮುಖರಾದ ವಿದ್ಯಾ ಬಾಬುಗುಡ್ಡ, ಶಾಲಿನಿ ಬೋಳಾರ್, ಇಮ್ರಾನ್, ಜಯಪ್ರಕಾಶ್, ವಿದ್ಯಾ ತೋರಸ್, ಬಬಿತಾ ಡಿಸೋಜ, ಮೀನಾ ಟೆಲ್ಲಿಸ್ ಮೊದಲಾದವರು ಹಾಜರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಬೆಂಗಳೂರು: ಸಹಕಾರ ಸಂಘಗಳಲ್ಲಿ ನೇಮಕಾತಿ ವೃಂದ ರಚನೆ, ನೇಮಕಾತಿ ಮಾಡುವುದು, ನೌಕರರ ವರ್ಗಾವಣೆ ಮತ್ತು ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎ ಸಂವಿಧಾನ ಬಾಹಿರವೆಂದು ಘೋಷಿಸಿರುವ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆಗೆ ಪರಿಗಣಿಸಿದ್ದು ಮಾರ್ಚ್ 3ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಲಾಗಿದೆ. https://chat.whatsapp.com/Ge11n7QCiMj5QyPvCc0H19 ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ, ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲಾಗುವುದು. ಆದರೆ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು ಎಂಬ ಸರಕಾರದ ಮನವಿಯನ್ನು ಈಗಲೇ ಪರಿಗಣಿಸುವುದಿಲ್ಲ. ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯ್ದೆ-2023ರ ಸೆಕ್ಷನ್ 128-ಎ ಅಡಿ ಕರಡು ನಿಯಮಗಳನ್ನು ರಚಿಸಲು ರಾಜ್ಯ ಸರಕಾರ ಸ್ವತಂತ್ರವಾಗಿದ್ದು, ಅವುಗಳನ್ನು ಮುಂದಿನ ವಿಚಾರಣೆ ವೇಳೆ…
ಹಾಡಹಗಲಲ್ಲೇ ಚಿನ್ನ, ನಗದು ಎಗರಿಸಿದ ದರೋಡೆಕೋರರು ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಕೆ.ಸಿ ರೋಡು ಬ್ರಾಂಚ್ನಲ್ಲಿ ಶುಕ್ರವಾರ ಹಾಡಹಗಲಲ್ಲೇ ದರೋಡೆ ಕೃತ್ಯ ನಡೆದಿದೆ. ಬಂದೂಕು ತೋರಿಸಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಭಾರೀ ಪ್ರಮಾಣದ ದರೋಡೆ ಮಾಡಲಾಗಿದೆ. https://chat.whatsapp.com/Ge11n7QCiMj5QyPvCc0H19 ಶುಕ್ರವಾರ ಹಾಡಹಗಲಲ್ಲೇ ಐದು ಮಂದಿ ಆಗಂತುಕರ ತಂಡ ಈ ಕೃತ್ಯ ಎಸಗಿದೆ. ಫಿಯಟ್ ಕಾರಿನಲ್ಲಿ ಬಂದ ತಂಡ ಬ್ಯಾಂಕ್ ಸಿಬ್ಬಂದಿಗಳಿಗೆ ಬಂದೂಕು ತೋರಿಸಿ ದರೋಡೆ ನಡೆಸಿದೆ. ಚಿನ್ನ, ಒಡವೆ, ನಗದುಗಳನ್ನು ಕಳವು ಮಾಡಿದ ತಂಡ ಮಂಗಳೂರು ಕಡೆಗೆ ಪರಾರಿಯಾಗಿದೆ. ಸ್ಥಳಕ್ಕೆ ಪೊಲೀಸರ ತಂಡ ದೌಡಾಯಿಸಿ ಪರಿಶೀಲಿಸುತ್ತಿದೆ. ಘಟನೆಯ ಬಳಿಕ ಸ್ಥಳೀಯ ಶಾಸಕರೂ ಆಗಿರುವ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಸ್ಥಳಕ್ಕೆ ಆಗಮಿಸಿ ಸಿಬ್ಬಂದಿ ಜೊತೆ ಚರ್ಚಿಸಿ ಧೈರ್ಯ ತುಂಬಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಘಟನೆಯ ಬಗ್ಗೆ ಇನ್ನಷ್ಟೆ ಹೆಚ್ಚಿನ ಮಾಹಿತಿ ದೊರೆಯಬೇಕಿದೆ.
