Author: admin
ಕಾರ್ಕಳ: ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಾಣೂರು ನರಸಿಂಹ ಕಾಮತ್, ಉಪಾಧ್ಯಕ್ಷರಾಗಿ ರಾಯಲ್ ನೊರೋನ್ಹಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಚುನಾವಣಾ ಅಧಿಕಾರಿ ಶಹನಾಜ್ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಶೆಟ್ಟಿ, ಹಾಲು ಪರೀಕ್ಷಕಿ ಪ್ರಮೀಳಾ ಸಹಕರಿಸಿದರು. ಆಡಳಿತ ಮಂಡಳಿಗೆ ನೂತನವಾಗಿ ಹೊಸ ನಿರ್ದೇಶಕರಾಗಿ ಆಯ್ಕೆಯಾದ ಪೂರ್ಣಿಮಾ ಕಿಣಿ ಮತ್ತು ದಿಲೀಪ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಹತ್ತು ವರ್ಷಗಳಿಂದ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಯಶೋದಾ ಸುವರ್ಣ ಅವರನ್ನು ಸನ್ಮಾನಿಸಲಾಯಿತು. ನೂತನ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್ ಮತ್ತು ನೂತನ ಉಪಾಧ್ಯಕ್ಷ ರಾಯಲ್ ನೊರೋನ್ಹಾ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಸಂಘದ ಸ್ಥಾಪಕ ಅಧ್ಯಕ್ಷ ಕೊರಗ ಶೆಟ್ಟಿ, ಸ್ಥಾಪಕ ಕಾರ್ಯದರ್ಶಿ ಜ್ಞಾನದೇವ್, ಹಿರಿಯ ನಿರ್ದೇಶಕರಾದ ಸೋಮಶೇಖರ್, ಸೈಮನ್ ಡಿಸೋಜ, ಜಯಾನಂದ ಶುಭಾಶಂಸನೆಗೈದರು. ನಿರ್ದೇಶಕ ಪ್ರವೀಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಜಯ ಶೆಟ್ಟಿಗಾರ್ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ:…
ಮಂಗಳೂರು: ಪ್ರತಿಷ್ಠಿತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಕೆ.ಜೈರಾಜ್ ಬಿ. ರೈ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಜಯಪಾಲ ಶೆಟ್ಟಿ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಮುಂದಿನ ಐದು ವರ್ಷ (2025ರಿಂದ 2030) ತನಕ ಇವರ ನೇತೃತ್ವದ ಆಡಳಿತ ಮಂಡಳಿ ಕಾರ್ಯ ನಿರ್ವಹಿಸಲಿದ್ದು, ಈ ಇಬ್ಬರೂ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನವೀನ್ ಕುಮಾರ್ ಎಂ.ಎಸ್ ಪ್ರಕಟಿಸಿದ್ದಾರೆ. ಸಂಘದ ಅಧ್ಯಕ್ಷರಾಗಿ ಸತತ ಮೂರನೇ ಅವಧಿಗೆ ಅವಿರೋಧವಾಗಿ ಪುನರಾಯ್ಕೆಯಾದ ಕೆ.ಜೈರಾಜ್ ಬಿ.ರೈಯವರು ಸಹಕಾರ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪಾರ ಅನುಭವವುಳ್ಳವರಾಗಿದ್ದು, ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರಾಗಿ ಎ.ರತ್ನಕಾಂತಿ ಶೆಟ್ಟಿ, ಕೆ.ಸೀತಾರಾಮ ರೈ ಸವಣೂರು, ಡಾ|ಕೆ.ಸುಭಾಶ್ಚಂದ್ರ ಶೆಟ್ಟಿ, ಪಿ.ಶಿವರಾಮ ಅಡ್ಯಂತಾಯ, ಸಿಎ ಎಚ್.ಆರ್.ಶೆಟ್ಟಿ, ವಿಠಲ ಪಿ.ಶೆಟ್ಟಿ, ಎಂ.ರಾಮಯ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಪಿ.ಬಿ.ದಿವಾಕರ ರೈ, ರವೀಂದ್ರನಾಥ ಜಿ.ಹೆಗ್ಡೆ, ಕುಂಬ್ರ ದಯಾಕರ ಆಳ್ವ, ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಎ.ಚಿಕ್ಕಪ್ಪ ನಾಯ್ಕ್ ಮತ್ತು ಡಾ|ಬಿ.ಸಂಜೀವ ರೈ ಆಯ್ಕೆಯಾಗಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ…
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿಕೆ ಉಡುಪಿ: ಮೈಕ್ರೋ ಫೈನಾನ್ಸ್ಗಳಿಗೆ ಸಂಬಂಧಿಸಿ ರಾಜ್ಯ ಸರಕಾರ ಹೊರಡಿಸಿರುವ ಸುಗ್ರೀವಾಜ್ಞೆಯು ಸಹಕಾರ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಸಹಕಾರ ಸಂಸ್ಥೆಗಳು ಸಾಲಗಾರರ ಮನೆಗೆ ಹೋಗಿ ಕಿರುಕುಳ ಕೊಡಬಾರದು. ಸಾಲ ವಸೂಲು ಮಾಡಲು ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿದ್ದು, ಅದರ ಪ್ರಕಾರವೇ ಸಾಲ ವಸೂಲು ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ಸೈಬರ್ ಕ್ರೈಮ್, ಕಳವು ಹಾಗೂ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದ ಸಾಕಷ್ಟು ಪ್ರಕರಣಗಳು ಸಹಕಾರಿ…
ಸರ್ಕಾರಿ/ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಉಪಯೋಗ ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಕನ್ನಡ ಮಾಧ್ಯಮದ ಆಯ್ದ 50 ಸರ್ಕಾರಿ ಅಥವಾ ಅನುದಾನಿತ ಪ್ರೌಢಶಾಲಾ ಗ್ರಂಥಾಲಯಗಳಿಗೆ ತಲಾ 100ರಂತೆ ಒಟ್ಟು 5000 ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತಿದೆ. https://chat.whatsapp.com/EbVKVnWB6rlHT1mWtsgbch ಗ್ರಂಥಾಲಯಗಳಿಗೆ ನೀಡಲಾಗುವ ಪುಸ್ತಕಗಳು ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದ್ದು ಸಾಮಾನ್ಯ ಜ್ಞಾನ, ಆರೋಗ್ಯ, ಸ್ವದೇಶಿ ಚಿಂತನೆ, ಸಾಧಕರ ಜೀವನ ಚರಿತ್ರೆ, ನೀತಿ ಕಥೆಗಳಿಗೆ ಸಂಬಂಧಿಸಿದ್ದಾಗಿವೆ. ಶಾಲಾ ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ತಮ್ಮ ಶಾಲೆಯ ಗ್ರಂಥಾಲಯದಿಂದ ಈ ಪುಸ್ತಕಗಳನ್ನು ಪಡೆದು ಓದುವಂತಾಗಿ ಅವರಲ್ಲಿ ಓದುವ ಹವ್ಯಾಸ ಬೆಳೆಯಲಿ ಎಂಬ ಸದುದ್ದೇಶದಿಂದ ಶಾಲೆಗಳ ಗ್ರಂಥಾಲಯಗಳಿಗೆ ಶ್ರೀಶಾ ಸೊಸೈಟಿ ಉಚಿತವಾಗಿ ಪುಸ್ತಕಗಳನ್ನು ನೀಡುತ್ತಿವೆ. ಆಸಕ್ತ ಶಾಲೆಗಳ ಮುಖ್ಯಸ್ಥರು ಶ್ರೀಶಾ ಸೊಸೈಟಿಯ ಯಾವುದೇ ಶಾಖೆಯನ್ನು ಬೆಳಗ್ಗೆ ಗಂಟೆ 10 ರಿಂದ ಸಂಜೆ 5 ರೊಳಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಮಾಹಿತಿಗೆ: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ರಘು ಬಿಲ್ಡಿಂಗ್, ಉರ್ವಸ್ಟೋರ್, ಮಂಗಳೂರು. ದೂರವಾಣಿ: 9845032598/9448254526/0824 2453598. ಮೊದಲು ಸಂಪರ್ಕಿಸಿದವರಿಗೆ…
ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘ ಜಪ್ಪು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಅಲೋಕ ವಿಶನ್ ಪ್ರೋಗ್ರಾಂ -ಕಾರ್ಲ್ಜೈಸ್ ಇಂಡಿಯಾ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ), ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಸೆಂಚುರಿ ಗ್ರೂಪ್ಸ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ಪರೀಕ್ಷೆ ಹಾಗೂ ಚಿಕಿತ್ಸಾ ಶಿಬಿರ ಮಾರ್ಚ್ 9ರಂದು ಭಾನುವಾರ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 9ರಿಂದ ಮಧ್ಯಾಹ್ನ 12ರ ತನಕ ಮಂಗಳೂರು ಸ್ಟೋರ್ ಸಭಾಂಗಣ(ಸಹಕಾರಿ ಕಚೇರಿ ಬಳಿ)ದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ಮಾಡಲಾಗುವುದು. ಅಗತ್ಯವುಳ್ಳವರಿಗೆ ಕನ್ನಡಕ/ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಜೆಪ್ಪು ಆರೋಗ್ಯ ಕೇಂದ್ರದಲ್ಲಿ ಬಿ.ಪಿ., ಮಧುಮೇಹ ತಪಾಸಣೆ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೆ.ಭಾಸ್ಕರ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ…
ಸಣ್ಣ ಕಾರ್ಮಿಕ ಸಹಕಾರಿ ಸಂಸ್ಥೆಯಿಂದ ಅಭಿವೃದ್ಧಿ ಹೊಂದಿ ಉದ್ಯಮವಾಗಿ ರೂಪಾಂತರಗೊಂಡ ಸೊಸೈಟಿ ತಿರುವನಂತಪುರ: ಉರಾಲುಂಗಲ್ ಕಾರ್ಮಿಕ ಒಪ್ಪಂದ ಸಹಕಾರ ಸಂಘ(ಯುಎಲ್ಸಿಸಿಎಸ್) ಒಂದು ಸಣ್ಣ ಕಾರ್ಮಿಕ ಸಹಕಾರಿ ಸಂಸ್ಥೆಯಿಂದ ಆರಂಭವಾಗಿ ದೊಡ್ಡ ಉದ್ಯಮ ಸಂಸ್ಥೆಯಾಗಿ ಬೆಳೆದು 100 ವರ್ಷಗಳ ಅದ್ಭುತ ಪ್ರಯಾಣ ಮುಂದುವರಿಸಿದ್ದು ದೇಶದಲ್ಲಿ ಪ್ರಸಿದ್ಧಿ ಪಡೆದುಕೊಂಡ ಕೆಲವೇ ಕೆಲವು ಸಹಕಾರಿ ಸಂಸ್ಥೆಗಳಲ್ಲಿ ಒಂದಾಗಿ ಬೆಳೆದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶ್ಲಾಘಿಸಿದ್ದಾರೆ. ಭಾರತದ ಅತ್ಯಂತ ಯಶಸ್ವಿ ಕಾರ್ಮಿಕ ಸಹಕಾರಿ ಸಂಸ್ಥೆಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟ ಯುಎಲ್ಸಿಸಿಎಸ್ ಕೇರಳ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. https://chat.whatsapp.com/EbVKVnWB6rlHT1mWtsgbch ವಿಡಿಯೋ ಸಂದೇಶವೊಂದನ್ನು ನೀಡಿರುವ ನಿತಿನ್ ಗಡ್ಕರಿ, ಯುಎಲ್ಸಿಸಿಎಸ್ನ ಯಶೋಗಾಥೆಯನ್ನು ಅಭಿನಂದಿಸಿ, 100 ವರ್ಷ ಪೂರೈಸಿ ಮುನ್ನಡೆದಿರುವುದಕ್ಕೆ ಶುಭಾಶಯ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಯುಎಲ್ಸಿಸಿಎಸ್ ಸಹಕಾರಿ ವಲಯದೊಂದಿಗೆ ಸಂಬಂಧ ಹೊಂದಿದ್ದು, ಇದರ ಯಶಸ್ಸು ದೇಶದ ಸಹಕಾರಿ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಬೆಳವಣಿಗೆಗಳಲ್ಲಿ ಒಂದಾಗಿದೆ. ಇದರ ಬೆಳವಣಿಗೆಗೆ ಕೇಂದ್ರ ರಸ್ತೆ…
ಫೆ.17ರಂದು ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಸಿಇಒಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಸಹಕಾರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 17ರಂದು ಬೆಳಗ್ಗೆ 10.30ರಿಂದ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂಎನ್.ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್.ನವೀನ್, ಸಹಕಾರ ಸಂಘಗಳ…
ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಹಾಸನದ ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಮಂಡಳಿ ಭೇಟಿ
ಮಂಗಳೂರು: ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಸದಸ್ಯರು ಸಹಕಾರಿಯ ಆಡಳಿತಕ್ಕೆ ಸಂಬಂಧಿಸಿದ ವಿಷಯಗಳ ಅಧ್ಯಯನಕ್ಕಾಗಿ ಮಂಗಳವಾರ ಭೇಟಿ ನೀಡಿದರು. https://chat.whatsapp.com/EbVKVnWB6rlHT1mWtsgbch ಶ್ರೀಶಾ ಸೌಹಾರ್ದ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ತಮ್ಮ ಸೊಸೈಟಿ ನಡೆದು ಬಂದ ದಾರಿ ಮತ್ತು ಸುಗಮ ಹಾಗೂ ಪಾರದರ್ಶಕ ಆಡಳಿತದ ಬಗ್ಗೆ ವಿವರಣೆ ನೀಡಿದರು. ಸಹಕಾರಿಯ ಎಲ್ಲಾ ವಿಭಾಗಗಳಲ್ಲೂ ಅಂದರೆ ಠೇವಣಿ ಸಂಗ್ರಹ, ಅದರ ವಸ್ತುನಿಷ್ಠ ವಿನಿಯೋಗ, ಸಾಲ ಮರುಪಾವತಿ, ಲಾಭ ಗಳಿಕೆ ಮುಂತಾದ ವಿಷಯಗಳ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರಣೆ ನೀಡಿದರು. ಗಳಿಸಿದ ಲಾಭಾಂಶವನ್ನು ಸ್ಥಳೀಯವಾಗಿ ಜನೋಪಯೋಗಿ ಕಾರ್ಯಗಳಿಗೆ ಹೇಗೆ ವಿನಿಯೋಗಿಸಬಹುದು ಎಂಬುದರ ಬಗ್ಗೆಯೂ ಆಡಳಿತ ಮಂಡಳಿಯವರು ಚರ್ಚಿಸಿದರು. ಶ್ರೀಶಾ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜ ಮತ್ತು ಹಿರಿಯ ಶಾಖಾ ಪ್ರಬಂಧಕಿ ಲಕ್ಷ್ಮೀ ಉಪಸ್ಥಿತರಿದ್ದರು. ವೀರಶೈವ ಲಿಂಗಾಯತ ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರು ಶ್ರೀಶಾ ಸೊಸೈಟಿಯ ಶಿಸ್ತುಬದ್ಧ ಹಾಗೂ ವಸ್ತುನಿಷ್ಠ…
ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದಿಂದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣಾ ಕಾರ್ಯಕ್ರಮ
ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಜೋಡುರಸ್ತೆ ಕಾರ್ಕಳ ಇದರ ವತಿಯಿಂದ ಕಾರ್ಕಳದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ರೆಫ್ರಿಜರೇಟರ್ ಕೊಡುಗೆ ಹಾಗೂ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. https://chat.whatsapp.com/EbVKVnWB6rlHT1mWtsgbch ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ ಸಂಘ ಸಂಸ್ಥೆಗಳು ಇಂಥ ಕೊಡುಗೆಗಳನ್ನು ನೀಡುವುದರಿಂದ ಹಲವಾರು ಬಡವರಿಗೆ ಉಪಯೋಗವಾಗುತ್ತದೆ. ಎಲ್ಲವನ್ನೂ ಸರಕಾರದಿಂದ ಭರಿಸುವುದು ಕಷ್ಟ. ಇಂಥ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ನೀಡುವ ಕೊಡುಗೆಗಳಿಂದ ನೆರವಾಗುತ್ತದೆ ಎಂದು ತಿಳಿಸಿ ಸಂಘಕ್ಕೆ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಸಂತೋಷ್ ರಾವ್ ಮಾತನಾಡಿ ಸಂಘವು ಈ ಹಿಂದೆಯೂ ಸರಕಾರಿ ಆಸ್ಪತ್ರೆಗೆ ಕೊರೋನ ಸಂದರ್ಭದಲ್ಲಿ ಆಮ್ಲಜನಕ ಘಟಕಕ್ಕೆ ಧನಸಹಾಯ ನೀಡಿದೆ. ಇದರ ಜೊತೆಗೆ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ. ಹಾಗೆಯೇ ಶಾಸಕರ ಸಹಕಾರ ಸಂಘಕ್ಕೂ ಇರಲಿ ಎಂದು ಆಶಿಸಿದರು. ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಶಶಿಕಲಾ, ಸಹ ವೈದ್ಯರಾದ ಡಾ| ಅನಂತ್ ಕಾಮತ್, ಡಾI ಉದಯ ಕುಮಾರ್ ಹಾಗೂ ಸಂಘದ ಉಪಾಧ್ಯಕ್ಷ ವೃಷಭರಾಜ್ ಕಡಂಬ, ಮುಖ್ಯ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರ್ವೆಲ್ ಶಾಖೆಯ ಹದಿಮೂರನೇ ವಾರ್ಷಿಕೋತ್ಸವ ಪ್ರಯುಕ್ತ ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಜಂಟಿ ಸಹಯೋಗದೊಂದಿಗೆ ಬೋಳೂರು ಮಾತಾ ಅಮೃತಾನಂದಮಯಿ ಮಠ, ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು, ಇವರುಗಳ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು, ಕಂರ್ಬಿಬೈದೇದಿ ಚಾವಡಿಯಲ್ಲಿ ಇತ್ತೀಚೆಗೆ ಜರುಗಿತು. https://chat.whatsapp.com/EbVKVnWB6rlHT1mWtsgbch ಉದ್ಯಮಿ ಶ್ರೀ ಲಕ್ಷ್ಮೀನಾರಾಯಣ ಉದ್ಘಾಟಿಸಿದರು. ಲಯನ್ಸ್ ಕ್ಲಬ್, ಎಂಜೆಎಫ್ ಅಧ್ಯಕ್ಷ ಲಯನ್ ಜಯರಾಜ್ ಪ್ರಕಾಶ್ ಮಾತನಾಡಿ “ಇಂದಿನ ಜನರ ಜೀವನಶೈಲಿಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಇಂತಹ ಶಿಬಿರಗಳಿಂದ ಜನರು ಆರೋಗ್ಯದ ತಪಾಸಣೆ ಮಾಡಿಸುವುದು ಉತ್ತಮ” ಎಂದರು. ಯೆನೆಪೋಯ ದಂತ…
