Author: admin
ಬಂಟ್ವಾಳ: ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಭಾನುವಾರ ಚುನಾವಣೆ 17 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಾಮಾನ್ಯ ಕ್ಷೇತ್ರದಿಂದ ಅರುಣ್, ಅರುಣ್ ಕುಮಾರ್ ಕೆ., ಕಿರಣ್ ಕುಮಾರ್ ಎ, ಪ್ರೇಮನಾಥ ಬಂಟ್ವಾಳ, ಭೋಜ ಸಾಲಿಯಾನ್, ರಮೇಶ್ ಸಾಲಿಯಾನ್, ಸತೀಶ್, ರಮೇಶ್ ಸಾಲಿಯಾನ್, ಸುರೇಶ್ ಕುಲಾಲ್, ಸುರೇಶ್ ಕಲಾಲ್ ಎನ್, ಹರೀಶ್, ಮಹಿಳಾ ಕ್ಷೇತ್ರದಿಂದ ಮಾಲತಿ ಮಚ್ಚೇಂದ್ರ, ವಿದ್ಯಾ, ಹಿಂದುಳಿದ ವರ್ಗ ‘ಎ’ ಕ್ಷೇತ್ರದಿಂದ ಜನಾರ್ದನ ಬೊಂಡಾಲ, ಹಿಂದುಳಿದ ವರ್ಗ ‘ಬಿ’ ಕ್ಷೇತ್ರದಿಂದ ಜಗನ್ನಿವಾಸ ಸಮಗಾರ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಗಣೇಶ್, ಪರಿಶಿಷ್ಟ ಪಂಗಡದಿಂದ ರೇಖಾ ನಾಯ್ಕ ಗೆಲುವು ಸಾಧಿಸಿದ್ದಾರೆ. ಬ್ಯಾಂಕಿನ ಹಾಲಿ ಅಧ್ಯಕ್ಷ ಸುರೇಶ್ ಕುಲಾಲ್ ಬಂಟ್ವಾಳ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗಿತ್ತು. ಬಂಟ್ವಾಳ ಬೈಪಾಸ್ ನಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಚುನಾವಣೆ ನಡೆಯಿತು. ಪುತ್ತೂರು ತಾಲೂಕು ಸಹಕಾರಿ ಅಧಿಕಾರಿ ರಘು ಚುನಾವಣಾಧಿಕಾರಿಯಾಗಿದ್ದರು.…
ಮಂಗಳೂರು: ವಜ್ರಮಹೋತ್ಸವ ಸಂಭ್ರಮ ಆಚರಣೆಯಲ್ಲಿರುವ ಎಸ್.ಕೆ.ಗೋಲ್ಡ್ಸ್ಮಿತ್ಸ್ ಇಂಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ಇದರ ವಜ್ರಮಹೋತ್ಸವ ಪ್ರಯುಕ್ತ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ರಿ. ಸುರತ್ಕಲ್, ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ರಿ. ಕೃಷ್ಣಾಪುರ, ಶ್ರೀ ಕಾಳಿಕಾಂಬಾ ದೇವಸ್ಥಾನ ಕುಳಾಯಿ, ಶ್ರೀ ವಿಶ್ವಬ್ರಾಹ್ಮಣ ಯುವ ಬಳಗ ಕಾಟಿಪಳ್ಳ-ಕೃಷ್ಣಾಪುರ, ವಿಶ್ವಕರ್ಮ ಸಮಾಜ ಸೇವಾ ಸಂಘ ಕುಳಾಯಿ, ವಿಶ್ವಬ್ರಾಹ್ಮಣ ಯುವ ಸೇವಾದಳ ಕುಳಾಯಿ ಇವರ ಸಹಕಾರದೊಂದಿಗೆ ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರ ಮತ್ತು ಕೆ.ಎಂ.ಸಿ. ಆಸ್ಪತ್ರೆ, ಬಿ.ಆರ್.ಅಂಬೇಡ್ಕರ್ ವೃತ್ತ, ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಸುರತ್ಕಲ್ನ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದಲ್ಲಿ ಇತ್ತೀಚೆಗೆ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆಯಲ್ಲಿ ವೈದ್ಯಕೀಯ ಶಿಬಿರವನ್ನು ಡಾ| ಅಮಲ್ ಉದ್ಘಾಟಿಸಿದರು. ಸುರತ್ಕಲ್ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಶಾಂತ್ ಆಚಾರ್ಯ ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ರಿ., ಕೃಷ್ಣಾಪುರದ ಅಧ್ಯಕ್ಷ ಸುಧಾಕರ ಆಚಾರ್ಯ ಶುಭ ಹಾರೈಸಿದರು.…
ಮಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ ಬಳಿಯ ಗೋಕುಲ್ ಸಭಾಂಗಣದಲ್ಲಿ ಭಾನುವಾರ ತರಬೇತಿ ಕಾರ್ಯಕ್ರಮ ಜರುಗಿತು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಅಧ್ಯಕ್ಷ ಭಾಸ್ಕರ್ ದೇವಸ್ಯ ಕಾರ್ಯಕ್ರಮ ಉದ್ಘಾಟಿಸಿದರು. ಸಫಲ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್, ಉಪಾಧ್ಯಕ್ಷ ಪ್ರೇಮಾನಂದ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಎಸ್.ಡಿ.ಎಂ. ಸ್ನಾತಕೋತ್ತರ ಪದವಿ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾಕ್ಟರ್ ಪ್ರಮೀಳಾ ಎಸ್.ಶೆಟ್ಟಿ,ಅಸಿಸ್ಟೆಂಟ್ ಪ್ರೊಫೆಸರ್ ಡಾಕ್ಟರ್ ರಮ್ಯಾ ಶೆಟ್ಟಿ ಮತ್ತು ಕೊನ್ನಾರ್ ಅಸೋಸಿಯೇಟ್ಸ್ ಮಾಲಕಿ ಸಿ.ಎ. ವೃಂದಾ ಕೊನ್ನಾರ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಗೋಪಾಲ ಶೇಟ್ ಚಿನ್ನಾಭರಣ ಸಾಲ ನೀಡುವಾಗ ವಹಿಸಬೇಕಾದ ಎಚ್ಚರಿಕೆ, ಪರಿಶೀಲನೆ ಮತ್ತು ಮೌಲ್ಯಮಾಪನ ಮಾಡುವ ಬಗ್ಗೆ ಪ್ರಾತ್ಯಕ್ಷಿತ ಮಾಹಿತಿ ನೀಡಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಮಂಗಳೂರು: ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಎ.ಲೋಕೇಶ್ ಭಂಡಾರಿ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಎಸ.್ಧನಂಜಯ ಬಂಗೇರ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ಬಿ.ನಾಗೇಂದ್ರ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರತಿನಿಧಿ ನವೀನ್ ಕುಮಾರ್ ಶೆಟ್ಟಿ ಎಂ., ಬ್ಯಾಂಕಿನ ನಿರ್ದೇಶಕರಾದ ಸಿತೇಶ್ ಕೊಂಡೆ, ಬಿ.ವಿಠಲ್ ಶೆಟ್ಟಿ, ಸುಮಂತ್ ರಾವ್, ಗಣೇಶ್ ಶೆಟ್ಟಿ, ನೇಮಿರಾಜ್ ಶೆಟ್ಟಿ, ಶ್ರೀರಂಜಿನಿ, ಪ್ರೇಮ, ಶರ್ಮಿಳಾ, ಬ್ಯಾಂಕಿನ ಆಡಳಿತಾಧಿಕಾರಿ ಕಿರಣ್ ಕುಮಾರ್ ಶೆಟ್ಟಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಪ್ರೀತಮ್ ಪಿ. ಪೂಜಾರಿ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಮಂಗಳೂರು: ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿ ಚುನಾವಣೆ ಶನಿವಾರ ನಡೆದಿದ್ದು, ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷರಾಗಿ 20 ವರ್ಷ ಕಾಲ ಮುನ್ನಡೆಸಿದ ಕೆ.ಲವ ಶೆಟ್ಟಿ ನೇತೃತ್ವದ ತಂಡ ಚುನಾವಣೆಯಲ್ಲಿ ಗಳಿಸಿದೆ. ಸಾಲಗಾರರ ಕ್ಷೇತ್ರದ ಸಾಮಾನ್ಯ ಸ್ಥಾನಗಳಿಗೆ ಪುರಂದರ ಎಂ.ಶೆಟ್ಟಿ, ರಘುರಾಮ ಅಡ್ಯಂತಾಯ, ಡಾಲ್ಫಿ ಸಾಂತುಮಯೋರ್, ನಾರಾಯಣ ಕುಂದರ್ ಹಾಗೂ ಶೇಷರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಾಲಗಾರರ ಮಹಿಳಾ ಮೀಸಲಾತಿ ಸ್ಥಾನಗಳಿಗೆ ಸುನಂದಾ ಡಿ.ಶೆಟ್ಟಿ ಹಾಗೂ ಶಾಲಿನಿ ಡಿಸೋಜ ಆಯ್ಕೆಯಾಗಿದ್ದಾರೆ. ಸಾಲಗಾರಲ್ಲದ ಕ್ಷೇತ್ರದ ಸಾಮಾನ್ಯ ಸ್ಥಾನಕ್ಕೆ ಜೋಸೆಫ್ ಕ್ವಾಡ್ರಸ್ ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನದಲ್ಲಿ ಲೋಕಯ್ಯ ಸಾಲ್ಯಾನ್, ಪ್ರವರ್ಗ ಬಿ ಮೀಸಲು ಸ್ಥಾನದಲ್ಲಿ ಪ್ರವೀಣ್ ಮಾಡ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಲ್ಲಿ ರಘುರಾಮ ಹಾಗೂ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಲ್ಲಿ ಬೇಬಿ ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ವಿಲಾಸ್ ನಡೆಸಿಕೊಟ್ಟರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ…
ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಗೆ ಸತತ ಎರಡನೇ ಬಾರಿ ಅಧ್ಯಕ್ಷರಾಗಿ ಜೀವನ್ ಲಾಯ್ಡ್ ಪಿಂಟೊ, ಉಪಾಧ್ಯಕ್ಷರಾಗಿ ವಲೇರಿಯನ್ ಬರೆಟ್ರೊ ಪುನರಾಯ್ಕೆಯಾಗಿದ್ದಾರೆ. https://chat.whatsapp.com/HEBD1pVmyHz0E5Ycp5rC7h ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಗೆ 2ನೇ ಬಾರಿಗೆ ಅಧ್ಯಕ್ಷರಾಗಿ ಜೀವನ್ ಲಾಯ್ಡ್ ಪಿಂಟೊ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ. ಸಂಘದ ಪ್ರಧಾನ ಕಛೇರಿಯಲ್ಲಿ ಚುನಾವಣಾಧಿಕಾರಿ ಡಾ.ಜ್ಯೋತಿ ಡಿ(ಸಹಕಾರ ಅಭಿವೃದ್ಧಿ ಅಧಿಕಾರಿ, ಬಂಟ್ವಾಳ ತಾಲೂಕು) ಇವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಇತ್ತೀಚೆಗೆ ಸಾಮಾನ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಮೂವರು ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ನಿರ್ದೇಶಕರಾಗಿ ಅನಿಲ್ ಹೆರಾಲ್ಡ್ ಫ್ರಾಂಕ್, ಲಾದ್ರು ಮಿನೇಜಸ್, ರೊನಾಲ್ಡ್ ವಿಜಯ್ ಫರ್ನಾಂಡಿಸ್, ಗ್ಲೋರಿಯಾ ಪ್ರೇಮಾ ಕುಟಿನ್ಹ, ವಿನ್ಸೆಂಟ್ ಕ್ಲೋಡಿ ಕಾರ್ಲೊ, ಲಾರೆನ್ಸ್ ಕ್ಲಿಫರ್ಡ್ ಡಿಸೋಜ, ಫ್ರಾನ್ಸಿಸ್ ಮೆಂಡೊನ್ಸಾ, ಹಿಲರಿ ಕ್ರಾಸ್ತಾ, ಪ್ಯೂಬರ್ಟ್ ಲೋಬೊ, ಮಹಿಳಾ ಮೀಸಲಾತಿ ಸ್ಥಾನದಿಂದ ಅನಿತಾ ನೂರೊನ್ಹಾ, ಬೆನೆಡಿಕ್ಷಾ ಸಲ್ದಾನ್ಹ ಹಾಗೂ ಹಿಂದುಳಿದ ವರ್ಗ ಪ್ರವರ್ಗ ‘ಬಿ’ ಸ್ಥಾನದಿಂದ ವಿಶಾಲ್ ಡಿಸೋಜ…
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನ ಆರು ಸದಸ್ಯರ ಹಣಕಾಸು ನೀತಿ ಸಮಿತಿ (MPC), ವಾಣಿಜ್ಯ ಬ್ಯಾಂಕುಗಳಿಗೆ ಆರ್ ಬಿಐ ನೀಡುವ ಸಾಲದ ದರವಾದ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ನಷ್ಟು ಕಡಿತ ಮಾಡಿದ್ದು, ಇದರಿಂದ ರೆಪೋ ದರ ಶೇಕಡಾ 6.25ಕ್ಕೆ ಇಳಿದಿದೆ. ಈ ಹಿಂದಿನ ಐದು ವರ್ಷಗಳಲ್ಲಿ ಮೊದಲ ಬಾರಿ ಆರ್ಬಿಐ ರೆಪೋ ದರ ಕಡಿತ ಮಾಡಿದೆ. ಎರಡು ವರ್ಷಗಳ ಕಾಲ ರೆಪೋ ದರವನ್ನು ಸ್ಥಿರವಾಗಿ ಕಾಯ್ದಿರಿಸಲಾಗಿತ್ತು. ಈ ಹಿಂದೆ ಆರ್ಬಿಐ ರೆಪೋ ದರವನ್ನು ಕಡಿತಗೊಳಿಸಿದ್ದು 2020ರ ಮೇ ತಿಂಗಳಲ್ಲಿ. ರೆಪೋ ದರ ಶೇಕಡಾ 6.5ರಷ್ಟಿತ್ತು. ಕೋವಿಡ್ ಸಾಂಕ್ರಾಮಿಕ ರೋಗದಿಂದ ದೇಶದ ಆರ್ಥಿಕತೆ ಕನಿಷ್ಠ ಮಟ್ಟಕ್ಕೆ ಇಳಿದ ನಂತರ ಬಳಕೆಯನ್ನು ಹೆಚ್ಚಿಸಲು ಮಧ್ಯಮ ವರ್ಗಕ್ಕೆ ಇದುವರೆಗಿನ ಅತಿದೊಡ್ಡ ತೆರಿಗೆ ವಿನಾಯಿತಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್ನಲ್ಲಿ ಘೋಷಿಸಿದ್ದು ಅದಾದ ಒಂದೇ ವಾರದಲ್ಲಿ ಆರ್ಬಿಐ ರೆಪೋ ದರ ಕಡಿತದ ಕ್ರಮ ಕೈಗೊಂಡಿದೆ. ಹಣಕಾಸು ನೀತಿ ಚೌಕಟ್ಟನ್ನು…
ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ವಿಶ್ವದ ಅತಿದೊಡ್ಡ ಮೊಸರು ಉತ್ಪಾದನಾ ಘಟಕವನ್ನು ಅಮುಲ್ ನಿರ್ಮಿಸಲಿದೆ. ಅಮುಲ್ ಡೈರಿ ಉತ್ಪನ್ನಗಳ ತಯಾರಕ ಸಂಸ್ಥೆ ಜಿಸಿಎಂಎಂಎಫ್, ಕೊಲ್ಕತ್ತಾದ ಸಂಯೋಜಿತ ಘಟಕದಲ್ಲಿ ರೂ 600 ಕೋಟಿ ಹೂಡಿಕೆ ಮಾಡಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. https://chat.whatsapp.com/EbVKVnWB6rlHT1mWtsgbch ಇಲ್ಲಿ ವಿಶ್ವದ ಅತಿದೊಡ್ಡ ಮೊಸರು ಉತ್ಪಾದನಾ ಘಟಕ ತೆರೆಯಲಿದ್ದು, ಪ್ರತಿದಿನ 15 ಲಕ್ಷ ಲೀಟರ್ ಹಾಲು ಮತ್ತು 10 ಲಕ್ಷ ಕೆಜಿ ಮೊಸರನ್ನು ಸಂಸ್ಕರಿಸಲಾಗುತ್ತದೆ. ಹೆಚ್ಚುತ್ತಿರುವ ಪ್ರಾದೇಶಿಕ ಬೇಡಿಕೆಯ ಕಾರಣದಿಂದ ಕೊಲ್ಕತಾದಲ್ಲಿ ಈ ಘಟಕ ಸ್ಥಾಪನೆಯಾಗಲಿದೆ ಎಂದು ಅಮುಲ್ನ ವ್ಯವಸ್ಥಾಪಕ ನಿರ್ದೇಶಕ ಜಯೆನ್ ಮೆಹ್ತಾ ತಿಳಿಸಿದ್ದಾರೆ. 2023-24 ರಲ್ಲಿ ರೂ 59,445 ಕೋಟಿ ವಹಿವಾಟು ಮತ್ತು 36 ಲಕ್ಷ ರೈತರಿಗೆ ಕೊಡುಗೆ ನೀಡಿರುವ ಜಿಸಿಎಂಎಂಎಫ್, ಡಬಲ್ ಡಿಜಿಟ್ ಬೆಳವಣಿಗೆಯನ್ನು ಎದುರು ನೋಡುತ್ತಿದೆ. ಈಗಾಗಲೇ 50 ದೇಶಗಳಿಗೆ ಅಮುಲ್ನ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತಿದ್ದು, ಇತ್ತೀಚೆಗೆ ಯುಎಸ್ ಮಾರುಕಟ್ಟೆಯನ್ನೂ ಪ್ರವೇಶಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್:…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರ್ವೆಲ್ ಶಾಖೆಯ 13ನೇ ವಾರ್ಷಿಕೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಜಪ್ಪಿನಮೊಗರು ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ ಬೋಳೂರು, ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ , ಉಜ್ಜೋಡಿ, ಇಲ್ಲಿನ ನುರಿತ ವೈದ್ಯರ ತಂಡದೊಂದಿಗೆ ಉಚಿತ ಬೃಹತ್ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರ ಫೆಬ್ರವರಿ 9ರಂದು ಭಾನುವಾರ ಬೆಳಗ್ಗೆ ಸಮಯ 9ರಿಂದ ಮಧ್ಯಾಹ್ನ 12.30ರವರೆಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು, ಕಂರ್ಭಿಬೈದೇದಿ ಚಾವಡಿ ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಈ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ,…
ಉಡುಪಿ: ಸಹಕಾರ ಭಾರತಿ ರಾಜ್ಯ ಕಾರ್ಯಕಾರಣಿ ಮತ್ತು ಪ್ರಾಂತ ಅಭ್ಯಾಸ ವರ್ಗ ಫೆಬ್ರವರಿ 8 ಮತ್ತು 9ರಂದು ಮಣಿಪಾಲದಲ್ಲಿರುವ ಆರ್ಎಸ್ಬಿ ಸಭಾಭವನದ ಪ್ರಥಮ ಮಹಡಿಯಲ್ಲಿ ಜರುಗಲಿದೆ. https://chat.whatsapp.com/EbVKVnWB6rlHT1mWtsgbch ಫೆಬ್ರವರಿ 8ರ ಬೆಳಿಗ್ಗೆ 11ಕ್ಕೆ ಸಹಕಾರ ಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪ್ರಭುದೇವ ಆರ್.ಮಾಗನೂರು ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಕಾರಣಿ ಸಭೆ ಜರುಗಲಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದೀಪಕ್ ಚೌರಾಸಿಯಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಉಪಸ್ಥಿತರಿರುವರು. ರಾಜ್ಯದ ನಾಲ್ಕು ವಿಭಾಗಗಳಿಂದ 32 ಸಂಘಟನಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಸಂಘಟನಾ ಕಾರ್ಯದರ್ಶಿ, ಮಹಿಳಾ ಪ್ರಮುಖ್ ಹಾಗೂ ಸಹ ಪ್ರಮುಖ್ ಜೊತೆಗೆ ರಾಜ್ಯ ಸಮಿತಿಯ ವಿವಿಧ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು, ರಾಜ್ಯ ಮತ್ತು ಕರ್ನಾಟಕ ರಾಜ್ಯದಿಂದ ಆಯ್ಕೆಗೊಂಡಿರುವ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1ರ ತನಕ ಸಹಕಾರ ಭಾರತಿಯ ಸಂಘಟನಾತ್ಮಕ ವಿಚಾರಗಳು ಹಾಗೂ ಕಾರ್ಯ ವಿಸ್ತರಣೆಯ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ ಎಂದು ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು…
