Author: admin

ಶಿಕಾರಿಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮತ್ತು ಮಾರಾಟ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಕಾರ್ಯಕ್ರಮ ಶಿವಮೊಗ್ಗ: ನ್ಯಾಶನಲ್‌ ಸೆಂಟರ್‌ ಫಾರ್‌ ಕೋ ಆಪರೇಟಿವ್‌ ಎಜುಕೇಶನ್‌(ಎನ್‌ಸಿಸಿಇ), ತೋಟಗಾರಿಕಾ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮತ್ತು ಮಾರಾಟ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಎರಡು ದಿನಗಳ ನಾಯಕತ್ವ ಅಭಿವೃದ್ದಿ ತರಬೇತಿ ಹಾಗೂ ಒಂದು ದಿನದ ಅಧ್ಯಯನ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. https://chat.whatsapp.com/EbVKVnWB6rlHT1mWtsgbch ಶಿಕಾರಿಪುರ ಅರ್ಬನ್‌ ಬ್ಯಾಂಕ್‌ನ ರಜತ ಭವನದಲ್ಲಿ ಹಮ್ಮಿಕೊಂಡ ತರಬೇತಿ ಶಿಬಿರವನ್ನು ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ ಅಧ್ಯಕ್ಷ, ಸಹಕಾರ ರತ್ನ ಡಾ.ಬಿ.ಡಿ.ಭೂಕಾಂತ್‌ ಉದ್ಘಾಟಿಸಿದರು. ತೋಟಗಾರಿಕಾ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ ಅಧ್ಯಕ್ಷ ಸಂಗಪ್ಪ ಎಚ್‌ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ಸಹಕಾರ…

Read More

ಮಂಗಳೂರು: ಬಡವರ ಬ್ಯಾಂಕ್ ಖಾತೆಗಳನ್ನು ಗುರಿಯಾಗಿಸಿಕೊಂಡು ಖಾತೆಯ ವಿವರಗಳನ್ನು ವಂಚಕರಿಗೆ ನೀಡಿ ಆನ್‌ಲೈನ್ ವಂಚನೆ ಎಸಗುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ತಹಶೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್ (28) ಮತ್ತು ರಾಮದೇವ್ ಗಲ್ಲಿಯ ಅನೂಪ್ ಕಾರೇಕರ್ (42) ಬಂಧಿತರು. https://chat.whatsapp.com/EbVKVnWB6rlHT1mWtsgbch ಸೈಬರ್ ಅಪರಾಧ ಪ್ರಕರಣದ ತನಿಖೆಯ ಸಮಯದಲ್ಲಿ, ಪೊಲೀಸರು ಅಮಾಯಕರ ಬ್ಯಾಂಕ್ ಖಾತೆಗಳನ್ನು ದುರುಪಯೋಗಪಡಿಸಿಕೊಳ್ಳುವ ಇಬ್ಬರ ಯೋಜನೆಯನ್ನು ಬಹಿರಂಗಪಡಿಸಿದರು. ಆರೋಪಿಗಳು ಬಡ ವ್ಯಕ್ತಿಗಳಿಗೆ ಸಣ್ಣ ಪ್ರಮಾಣದ ಹಣ ನೀಡುವ ಮೂಲಕ ಬ್ಯಾಂಕ್ ಖಾತೆ ತೆರೆಯಲು ಮನವೊಲಿಸಿ, ನಂತರ ಆನ್‌ಲೈನ್ ವ್ಯವಹಾರದ ನೆಪದಲ್ಲಿ ಖಾತೆಯ ವಿವರಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಹಸ್ತಾಂತರಿಸುತ್ತಿದ್ದರು. ವಂಚಕರು ಈ ಖಾತೆಗಳನ್ನು ಬಳಸಿಕೊಂಡು ವೀಡಿಯೊ ಕರೆಗಳು ಮತ್ತು ಡಿಜಿಟಲ್ ಬಂಧನಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ಒಮ್ಮೆ ಅವರ ಬಲೆಗೆ ಬಿದ್ದ ನಂತರ, ಅವರನ್ನು ಈ ಅನುಮಾನಾಸ್ಪದ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಒತ್ತಾಯಿಸಲಾಯಿತು. ಪುತ್ತೂರಿನ ರಾಧಾಕೃಷ್ಣ ನಾಯಕ್ ಎಂಬವರಿಗೆ ಸೈಬರ್ ವಂಚಕರು ವೀಡಿಯೊ ಕರೆ ಮಾಡಿ ಹಣ…

Read More

ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್‌ ಮ್ಯಾನೇಜಿಂಗ್ ಟ್ರಸ್ಟಿ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಹೇಳಿಕೆ ಮಂಗಳೂರು: ನವೋದಯ ಸ್ವಸಹಾಯ ಗುಂಪುಗಳು ದೇಶಕ್ಕೇ ಮಾದರಿಯಾಗಿ ರಚನೆಯಾಗಿ ಕೆಲಸ ಮಾಡುತ್ತಿದ್ದು ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ‘ಸಹಕಾರ ರತ್ನ’ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್‌ ವತಿಯಿಂದ ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ, ನವೋದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ಹಿಂದಿನ ಕಾಲದಲ್ಲಿ ಹೊರಗಿನ ಕಾರ್ಯಕ್ರಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಅತ್ಯಂತ ಕಡಿಮೆಯಾಗಿತ್ತು. ಮಹಿಳೆಯರನ್ನು ಪುರುಷರಿಗೆ ಸಮಾನವಾಗಿ ಬೆಳೆಸುವ ಚಿಂತನೆ 25 ವರ್ಷಗಳ ಹಿಂದೆ ಮೂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನವೋದಯ ಸ್ವಸಹಾಯ ಗುಂಪಿನ ಉಗಮವಾಯಿತು. 2000ರಲ್ಲಿ ಕಾರ್ಕಳದಲ್ಲಿ…

Read More

ಗ್ರಾಮೀಣ ಸಾಲ ವಿತರಣೆಗೆ ಮಾದರಿಯಾಗಿ ಕಾರ್ಯ: ಆರ್‌ಬಿಐ ಕೇಂದ್ರ ಮಂಡಳಿಯ ನಿರ್ದೇಶಕ ಸತೀಶ್ ಮರಾಠೆ ಅಭಿಪ್ರಾಯ ನವದೆಹಲಿ: ಕೇರಳದ ಜಿಲ್ಲಾ ಸಹಕಾರಿ ಬ್ಯಾಂಕ್‌ಗಳನ್ನು ರಾಜ್ಯ ಸಹಕಾರಿ ಬ್ಯಾಂಕ್‌ನಲ್ಲಿ ವಿಲೀನಗೊಳಿಸುವ ಮೂಲಕ ರೂಪುಗೊಂಡ ಕೇರಳ ಬ್ಯಾಂಕಿನ ಯಶಸ್ಸನ್ನು ಸಹಕಾರಿ ವಲಯದಲ್ಲಿ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಈ ಪ್ರಯೋಗ ಯಶಸ್ವಿಯಾದರೆ, ಅದು ಗ್ರಾಮೀಣ ಸಾಲ ವಿತರಣೆಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಕೇಂದ್ರ ಮಂಡಳಿ ನಿರ್ದೇಶಕ ಸತೀಶ್ ಮರಾಠೆ ಹೇಳಿದರು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಕೇರಳ ಬ್ಯಾಂಕಿನ ನಿರ್ದೇಶಕ ಮಂಡಳಿ ಮತ್ತು ನಿರ್ವಹಣಾ ಮಂಡಳಿಯ ಜಂಟಿ ಸಭೆಯಲ್ಲಿ ಮಾತನಾಡಿದ ಅವರು, ಕೇರಳ ಬ್ಯಾಂಕ್ ಒಂದು ಲಕ್ಷಕ್ಕೂ ಹೆಚ್ಚು ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳಿಗೆ ಸಾಲಗಳನ್ನು ವಿತರಿಸಿದೆ. ಗ್ರಾಮೀಣ ಆರ್ಥಿಕ ಬೆಳವಣಿಗೆಯನ್ನು ಬೆಂಬಲಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ. ಕೃಷಿ ಸಾಲಗಳು ಬ್ಯಾಂಕಿನ ಒಟ್ಟು ಸಾಲ ಬಂಡವಾಳದ 27% ರಷ್ಟಿದ್ದು, ಕೃಷಿ ವಲಯಕ್ಕೆ ಅದರ ಬದ್ಧತೆಯನ್ನು ಪ್ರದರ್ಶಿಸುತ್ತವೆ. ಕೃಷಿ ಮತ್ತು ಕೃಷಿಯೇತರ ವಲಯಗಳಲ್ಲಿ ಗ್ರಾಮೀಣ…

Read More

ಬ್ಯಾಂಕ್‌ ಕೇವಲ ವ್ಯಾವಹಾರಿಕ ಕ್ಷೇತ್ರವಾಗದೆ ಸಾಮಾಜಿಕ ಕಾರ್ಯದಲ್ಲೂ ಭಾಗಿಯಾಗಿರುವುದು ಶ್ಲಾಘನೀಯ: ಲಕ್ಷ್ಮೀನಾರಾಯಣ ಆಸ್ರಣ್ಣ ಅಭಿಪ್ರಾಯ ಮಂಗಳೂರು: ತಾನು ಬದುಕುವುದರ ಜೊತೆಗೆ ಮತ್ತೊಬ್ಬರಿಗೂ ಬದುಕು ಕಲ್ಪಿಸುವ ವ್ಯವಸ್ಥೆ ಸಮಾಜದಲ್ಲಿ ಬರಬೇಕು. ಬ್ಯಾಂಕ್‌ಗಳು ಕೇವಲ ವ್ಯಾವಹಾರಿಕ ಕ್ಷೇತ್ರಕ್ಕಷ್ಟೇ ಸೀಮಿತವಾಗದೆ ಸಾಮಾಜಿಕ ಕಾರ್ಯದಲ್ಲೂ ತೊಡಗಿಕೊಳ್ಳಬೇಕು. ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯು ಈ ಧ್ಯೇಯದಂತೆ ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟು ಬದುಕು ಕಲ್ಪಿಸಿಕೊಟ್ಟಿದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು. https://chat.whatsapp.com/EbVKVnWB6rlHT1mWtsgbch ಕಿನ್ನಿಗೋಳಿ ಉಲ್ಲಂಜೆಯ ವೀಣಾ ಆಚಾರ್ಯ ಎಂಬುವವರಿಗೆ ಎಸ್.ಕೆ.ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಹಮ್ಮಿಕೊಂಡ ಗೃಹ ನಿರ್ಮಾಣ ಯೋಜನೆಯಡಿಯಲ್ಲಿ ನಿರ್ಮಾಣವಾದ ನೂತನ ಮನೆಯನ್ನು ಮನೆಯವರಿಗೆ ಸ್ತಾಂತರಿಸಿ ಮಾತನಾಡಿದರು. ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಫಾಲ್ಕೆ ಬಾಬುರಾಯ ಆಚಾರ್ಯ ಅವರು ಅಂದು ಬ್ಯಾಂಕ್ ಸ್ಟಾಪಿಸಿ ದೊಡ್ಡ ಸಾಧನೆ ಮಾಡಿದ್ದು, ಇಂದು ಪ್ರತಿಷ್ಠಿತ ಬ್ಯಾಂಕ್ ಆಗಿ ಮುಂದುವರಿಯುತ್ತಿದೆ ಎಂದು ಹೇಳಿದರು. ಸೊಸೈಟಿಯ ಅಧ್ಯಕ್ಷ ಉಪೇಂದ್ರ ಆಚಾರ್ಯ…

Read More

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಕಾರ್ಯಕ್ರಮ ಮಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ಮಂಗಳೂರಿನ ಶ್ರೀನಿವಾಸ ಹೋಟೆಲ್‌ನಲ್ಲಿ ಶನಿವಾರ ಆಯೋಜಿಸಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಂಗಳೂರಿನ ಸಹಾಯಕ ಪೊಲೀಸ್‌ ಆಯುಕ್ತೆ ಗೀತಾ ಕುಲಕರ್ಣಿಯವರು ಸೈಬರ್‌ ಕ್ರೈಂ ಬಗ್ಗೆ ಜಾಗೃತಿ ಮೂಡಿಸಿದರು. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಗೀತಾ ಕುಲಕರ್ಣಿ, ಮೂರು ರೀತಿಯಲ್ಲಿ ಸೈಬರ್‌ ಕ್ರೈಂ ಜಾಲಕ್ಕೆ ಸಿಲುಕಬಹುದು. ಇದರಿಂದ ಹೊರಬರಲು ನಮ್ಮಲ್ಲಿ ಸ್ವಯಂ ಜಾಗೃತಿಯಾಗಬೇಕು ಎಂದು ಎಚ್ಚರಿಕೆ ನೀಡಿದರು. ಮೊದಲನೆಯದಾಗಿ ನಮಗೆ ಪರಿಚಯವಿಲ್ಲದ ನಂಬರ್‌ನಿಂದ ಬರುವ ಯಾವುದೇ ವಿಡಿಯೋ ಕಾಲ್‌ಗೆ ಉತ್ತರಿಸುವ ಅಥವಾ ಅದನ್ನು ಅಟೆಂಡ್‌ ಮಾಡುವ ಕಾರ್ಯಕ್ಕೆ ನಾವು ಸಿಲುಕಬಾರದು. ಅಪರಿಚಿತರಿಂದ ಬರುವ ಯಾವುದೇ ವಿಡಿಯೋ ಕಾಲ್‌ ನಮ್ಮನ್ನು ಮೋಸದ ಜಾಲಕ್ಕೆ ಸಿಲುಕಿಸಬಹುದು ಎಂದು ಎಚ್ಚರಿಕೆ ನೀಡಿದ ಗೀತಾ ಕುಲಕರ್ಣಿಯವರು ಎರಡನೆಯದಾಗಿ ಬ್ಯಾಂಕ್‌ನಿಂದ ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ಬರುವ ಕಾಲ್‌ಗಳಿಗೆ ಉತ್ತರಿಸಲು ಹೋಗಬೇಡಿ ಎಂದು ಎಚ್ಚರಿಸಿದರು. ಬ್ಯಾಂಕ್‌ನಿಂದ ಕೆವೈಸಿ ಅಪ್‌ಡೇಟ್‌ಗಾಗಿ ಯಾರೂ ಕರೆ…

Read More

ಸಂಸ್ಥೆಯ ವಜ್ರಮಹೋತ್ಸವ ಆಚರಣೆಗೆ ವಿಶೇಷ ಕಳೆ ಕಟೀಲು ಸಮೀಪದ ಉಲ್ಲಂಜೆಯಲ್ಲಿ ನಿರ್ಮಾಣ ಮಂಗಳೂರು: ಠೇವಣಿ ಸಂಗ್ರಹಿಸುವುದು, ಸಾಲ ವಿತರಿಸುವುದು, ಸಾಲ ಮರುಪಾವತಿಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಆರೋಗ್ಯ, ರಕ್ತದಾನ ಶಿಬಿರಗಳಂತಹ ಆರ್ಥಿಕ ಚಟುವಟಿಕೆಗಳಲ್ಲೇ ನಿರತರಾಗಿರುವ ಕೋ-ಆಪರೇಟಿವ್‌ ಸೊಸೈಟಿಗಳು ಕೂಡ ತಮ್ಮ ವಿಶೇಷ ಕಾರ್ಯಕ್ರಮಗಳಿಗೆ ಮಾನವೀಯ ಸ್ಪರ್ಶ ಹೇಗೆ ಕೊಡಬಲ್ಲವು ಎಂಬುದಕ್ಕೆ ಮಂಗಳೂರಿನ ಎಸ್‌.ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ- ಆಪರೇಟಿವ್‌ ಸೊಸೈಟಿ ನಿದರ್ಶನ ಕೊಟ್ಟಿದೆ. ವಿಭಿನ್ನ ಯೋಚನೆ, ಯೋಜನೆಗಳನ್ನು ಕಾರ್ಯಗತಗೊಳಿಸಿದರೆ ಜನರು ಗುರುತಿಸುವ ಕೆಲಸ ಮಾಡಬಹುದು ಎಂಬುದನ್ನು ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿ ಸಾಧಿಸಿ ತೋರಿಸಿದ್ದು, ತಮ್ಮ ಸಂಸ್ಥೆಯ ವಜ್ರ ಮಹೋತ್ಸವ ಆಚರಣೆಯ ಶುಭ ಸಂದರ್ಭದಲ್ಲಿ ಬಡ ಮಹಿಳೆಯೊಬ್ಬರಿಗೆ ಕಿನ್ನಿಗೋಳಿ ಸಮೀಪದ ಮೆನ್ನಬೆಟ್ಟು ಉಲ್ಲಂಜೆಯಲ್ಲಿ ಮನೆ ನಿರ್ಮಾಣ ಮಾಡಿಕೊಟ್ಟಿದೆ. https://chat.whatsapp.com/EbVKVnWB6rlHT1mWtsgbch ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ- ಆಪರೇಟಿವ್‌ ಸೊಸೈಟಿಯು ಕ್ರಿಯಾಶೀಲ ವ್ಯವಸ್ಥಾಪನೆ, ದಕ್ಷ ಆಡಳಿತ ನಿರ್ವಹಣೆಯಿಂದ ಹೆಸರು ವಾಸಿಯಾಗಿದೆ. ಎರಡು ಬಾರಿ ರಾಜ್ಯದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ, ನಾಲ್ಕು ಬಾರಿ ಜಿಲ್ಲೆಯ…

Read More

ನವದೆಹಲಿ: ಕೇರಳ ರಾಜ್ಯವನ್ನು ಹೊರತುಪಡಿಸಿ ದೇಶದ 35 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಸಹಕಾರ ಸಂಘಗಳ ನೋಂದಣಿ ಕಚೇರಿ (ಆರ್‌ಒಸಿ) ಗಣಕೀಕರಣಕ್ಕೆ ಆಸಕ್ತಿ ತೋರಿಸಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್‌ ಷಾ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಈ ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಂದ ಸಚಿವಾಲಯವು ಪ್ರಸ್ತಾವನೆಗಳನ್ನು ಪಡೆದುಕೊಂಡಿವೆ ಮತ್ತು ಯೋಜನೆಯನ್ನು ಸುಗಮಗೊಳಿಸಲು 18.22 ಕೋಟಿ ರೂ. (ಅಂದಾಜು) ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಸಹಕಾರ ಸಂಘಗಳ ಕೇಂದ್ರ ನೋಂದಣಿ (ಸಿಆರ್‌ಸಿಎಸ್‌) ಕಚೇರಿಯ ಡಿಜಿಟಲ್ ರೂಪಾಂತರದೊಂದಿಗೆ, ನೋಂದಣಿ, ಉಪ-ಕಾನೂನುಗಳ ತಿದ್ದುಪಡಿ, ವಾರ್ಷಿಕ ರಿಟರ್ನ್ಸ್ ಸಲ್ಲಿಕೆ, ಶಾಖೆ ತೆರೆಯುವುದು, ಮಾರಾಟ ಅಧಿಕಾರಿಗಳ ನೇಮಕಾತಿ ಮತ್ತು ಸಹಕಾರಿ ಶಿಕ್ಷಣ ನಿಧಿ (ಸಿಇಎಫ್‌) ಮತ್ತು ಸಹಕಾರಿ ಪುನರ್ವಸತಿ, ಪುನರ್ನಿರ್ಮಾಣ ಮತ್ತು ಅಭಿವೃದ್ಧಿ ನಿಧಿ (ಸಿಆರ್‌ಆರ್‌ಡಿಎಫ್‌)ಗೆ ಆನ್‌ಲೈನ್ ಪಾವತಿಗಳಂತಹ ಪ್ರಮುಖ ಕಾರ್ಯಗಳನ್ನು ಈಗ ಸುಧಾರಿತ ಆನ್‌ಲೈನ್ ಪೋರ್ಟಲ್ ಮೂಲಕ ಸರಾಗವಾಗಿ ನಿರ್ವಹಿಸಲಾಗುತ್ತಿದೆ. ಸಿಆರ್‌ಸಿಎಸ್‌ ಕಚೇರಿಯ ಗಣಕೀಕರಣವು ಯಶಸ್ವಿಯಾಗಿ ಪೂರ್ಣಗೊಂಡಿದೆ ಮತ್ತು ಅಧಿಕೃತ ಸಿಆರ್‌ಸಿಎಸ್‌ ಪೋರ್ಟಲ್ (www.crcs.gov.in) ಅನ್ನು ಆಗಸ್ಟ್ 6, 2023ರಂದು ಪ್ರಾರಂಭಿಸಲಾಗಿದೆ. ನಿಮ್ಮ…

Read More

ನವೋದಯ ಟ್ರಸ್ಟ್‌ ರಜತ ಸಂಭ್ರಮ ಮಂಗಳೂರು: ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆ ಮೂಡಿಸುತ್ತಿರುವ ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ನಿರಂತರ ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿದೆ. ಮಹಿಳೆಯರಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಉನ್ನತಿಗೆ ಪ್ರೇರಕ ಶಕ್ತಿಯಾಗಿರುವ ನವೋದಯ ಟ್ರಸ್ಟ್ 25 ವರ್ಷ ಯಶಸ್ವಿಯಾಗಿ ಪೂರೈಸಿ, ರಜತ ಸಂಭ್ರಮದಲ್ಲಿದೆ. https://chat.whatsapp.com/EbVKVnWB6rlHT1mWtsgbch ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭ ಮಾರ್ಚ್ 24ರ ಸೋಮವಾರ ಬೆಳಗ್ಗೆ 11ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿರುವರು. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಿಸಲಿರುವರು. ವಿಧಾನ ಪರಿಷತ್ ಸದಸ್ಯ ಐವನ್…

Read More

ಮಾರ್ಚ್ 24, 25ಕ್ಕೆ ರಾಷ್ಟ್ರವ್ಯಾಪಿ ಬ್ಯಾಂಕ್‌ ಮುಷ್ಕರ ನವದೆಹಲಿ: ಬ್ಯಾಂಕ್‌ ಉದ್ಯೋಗಿಗಳು ಮಾರ್ಚ್ 24 ಮತ್ತು 25ರಂದು ರಾಷ್ಟ್ರವ್ಯಾಪಿ ಮುಷ್ಕರ ಹಮ್ಮಿಕೊಂಡಿರುವ ಕಾರಣ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್‌ ಬಂದ್‌ ಆಗಲಿದ್ದು, ಹಣಕಾಸು ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಮಾರ್ಚ್ 22, 23ರಂದು ನಾಲ್ಕನೇ ಶನಿವಾರ ಮತ್ತು ಭಾನುವಾರದ ರಜೆ ಇರಲಿದ್ದು, 24 ಮತ್ತು 25ರಂದು ನೌಕರರು ಮುಷ್ಕರ ಹೂಡಿದರೆ ಸತತ ನಾಲ್ಕು ರಜೆಗಳಿಂದಾಗಿ ಸೇವೆಯಲ್ಲಿ ವ್ಯತ್ಯಯವಾಗಲಿದೆ. https://chat.whatsapp.com/EbVKVnWB6rlHT1mWtsgbch ಬ್ಯಾಂಕ್ ಉದ್ಯೋಗಿಗಳ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಮಾರ್ಚ್ 24, 25ರಂದು ಮುಷ್ಕರ ನಡೆಯುವ ಸಾಧ್ಯತೆ ದಟ್ಟವಾಗಿದೆ. ಭಾರತೀಯ ಬ್ಯಾಂಕ್‌ಗಳ ಸಂಘಟನೆ ಐಬಿಎ ಜೊತೆ ನಡೆದ ಮಾತುಕತೆಯಲ್ಲಿ ಯಾವುದೇ ಭರವಸೆ ಮೂಡದ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್​​ಗಳ ಸಂಯುಕ್ತ ವೇದಿಕೆಯು (UFBU- United Forum for Bank Unions) ರಾಷ್ಟ್ರವ್ಯಾಪಿ ಮುಷ್ಕರದ ನಿರ್ಧಾರವನ್ನು ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಒಂಬತ್ತು ಸರ್ಕಾರಿ ಬ್ಯಾಂಕ್ ಕಾರ್ಮಿಕರ ಒಕ್ಕೂಟಗಳು ಸೇರಿ ರಚಿಸಲಾಗಿರುವ ಯುನೈಟೆಡ್ ಫೋರಂ ಮುಷ್ಕರದ ನಿರ್ಧಾರ ಹಿಂಪಡೆಯುವುದಿಲ್ಲ…

Read More