Author: admin
ಮಾರ್ಚ್ 1ರಂದು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಕಾರ್ಯಕ್ರಮ
ಅಭಿನಂದನಾ ಸಮಿತಿ ಅಧ್ಯಕ್ಷರಾಗಿ ಎಸ್.ಬಿ ಜಯರಾಮ ರೈ, ಕಾರ್ಯದರ್ಶಿಯಾಗಿ ಜಯಪ್ರಕಾಶ್ ರೈ, ಕೋಶಾಧಿಕಾರಿಯಾಗಿ ಹರೀಶ್ ಪಿ ಆಯ್ಕೆ ಪುತ್ತೂರು: ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಸಹಕಾರ ಸಂಘ ಸಂಸ್ಥೆಗಳ ವತಿಯಿಂದ ಮಾ.1ರಂದು ಪುತ್ತೂರಿನಲ್ಲಿ ಬೃಹತ್ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು ಅದರ ಪೂರ್ವಭಾವಿ ಸಭೆ ಬುಧವಾರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪುತ್ತೂರು ಪ್ರಧಾನ ಕಚೇರಿಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಎಸ್.ಬಿ ಜಯರಾಮ ರೈ ಅಧ್ಯಕ್ಷತೆ ವಹಿಸಿದ್ದರು. ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲು ಸಮಿತಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಎಸ್.ಬಿ ಜಯರಾಮ ರೈ, ಕಾರ್ಯದರ್ಶಿಯಾಗಿ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಹಾಗೂ ಕೋಶಾಧಿಕಾರಿಯಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪುತ್ತೂರು…
ಉಡುಪಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಯ ಪ್ರೌಢಶಾಲೆ, ಪ್ದವಿಪೂರ್ವ ವಿಭಾಗ, ಕಾಲೇಜು ವಿಭಾಗ, ವೃತ್ತಿಪರ ಹಾಗೂ ತಾಂತ್ರಿಕ ವಿದ್ಯಾಸಂಸ್ಥೆಗಳ ವಿಭಾಗ ಹಾಗೂ ಠೇವಣಾತಿ ಸದಸ್ಯ ವಿಭಾಗದ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆದಿದ್ದು ನಿರ್ದೇಶಕರ ಆಯ್ಕೆ ನಡೆದಿದೆ. https://chat.whatsapp.com/Ge11n7QCiMj5QyPvCc0H19 ಆಡಳಿತ ಮಂಡಳಿಯ 19 ಸದಸ್ಯರ ಸ್ಥಾನಗಳ ಪೈಕಿ ಪ್ರೌಢಶಾಲೆ ಹಾಗೂ ಪದವಿಪೂರ್ವ ವಿದ್ಯಾಲಯಗಳ ವಿಭಾಗದಿಂದ ಧರಣೇಂದ್ರ ಕೆ., ರಾಜೀವ ಶೆಟ್ಟಿ, ಮನೋಹರ, ಮಹಿಳಾ ಮೀಸಲು ಸ್ಥಾನದಿಂದ ಕಸ್ತೂರಿ ಎಚ್. ಆರ್, ಕಾಲೇಜು ವಿಭಾಗದಿಂದ ವಿದ್ಯಾಧರ ಹೆಗ್ಡೆ ಎಸ್., ಶೇಷಪ್ಪಕೆ, ಇದೇ ಕ್ಷೇತ್ರದ ಹಿಂದುಳಿದ ವರ್ಗ ಮೀಸಲು ಸ್ಥಾನದಿಂದ ರಾಜೇಂದ್ರ ಕೆ., ವೃತ್ತಿಪರ ಹಾಗೂ ತಾಂತ್ರಿಕ ವಿದ್ಯಾಸಂಸ್ಥೆಗಳ ವಿಭಾಗದಿಂದ ಅವಿನ್ ಬಿ.ಆರ್. ಅಳ್ವ ಹಾಗೂ ಕುಮಾರ್ ನಾಯ್ಕ ಎ.ಎಸ್. ಮತ್ತು ಠೇವಣಾತಿ ಸದಸ್ಯ ವಿಭಾಗದಿಂದ ನಿತ್ಯಾನಂದ ಶೆಟ್ಟಿ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಹಿರಿಯ ಪ್ರಾಥಮಿಕ ಶಾಲೆಗಳ ಸಾಮಾನ್ಯ ವಿಭಾಗದಿಂದ ಮಂಜುನಾಥ, ಸೀತಾರಾಮ ಹೆಗಡೆ, ಕಿಶನ್ರಾಜ್ ಶೆಟ್ಟಿ, ಗಣೇಶ್ ಕುಮಾರ್ ಶೆಟ್ಟಿ, ಎಂ.ದಿನಕರ ಶೆಟ್ಟಿ…
ಉಡುಪಿ: ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಯೂನಿಯನ್ ನಿರ್ದೇಶಕ, ಶಾಸಕ ಯಶ್ಪಾಲ್ ಎ.ಸುವರ್ಣ, ನಿರ್ದೇಶಕರಾದ ಎಚ್.ಗಂಗಾಧರ ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಬಿ.ಕರುಣಾಕರ ಶೆಟ್ಟಿ, ಪ್ರಸಾದ್ ಎಸ್.ಶೆಟ್ಟಿ, ಸುಧೀರ್ ವೈ, ಬಿ.ಪ್ರದೀಪ್ ಯಡಿಯಾಳ್, ಅನಿಲ್ ಎಸ್.ಪೂಜಾರಿ, ಅಲೆವೂರು ಹರೀಶ್ ಕಿಣಿ, ಬಿ.ಅರುಣ್ ಕುಮಾರ್ ಹೆಗ್ಡೆ, ಶ್ರೀಧರ್ ಪಿ.ಎಸ್., ಸಹಕಾರ ಸಂಘಗಳ ಉಪನಿಬಂಧಕಿ ಕೆ.ಆರ್. ಲಾವಣ್ಯ, ಜಿಲ್ಲಾ ಸಹಕಾರ ಯೂನಿಯನ್ ಸಿಇಒ ಅನುಷಾ ಕೋಟ್ಯಾನ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನೂತನ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್ ಅವರನ್ನು ಯೂನಿಯನ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪರವಾಗಿ ಅಭಿನಂದಿಸಲಾಯಿತು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಪುತ್ತೂರು: ಪುತ್ತೂರಿನಲ್ಲಿ ಕೇಂದ್ರ ಕಚೇರಿ ಹೊಂದಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 20ನೇ ಶಾಖೆ ಫೆಬ್ರವರಿ 7ರಂದು ಕಲ್ಲಡ್ಕ ಮುಖ್ಯ ರಸ್ತೆಯ ಚೈತನ್ಯ ವ್ಯವಹಾರ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ. https://chat.whatsapp.com/Ge11n7QCiMj5QyPvCc0H19 ನೂತನ ಶಾಖೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಲಿದ್ದಾರೆ. ಶಾಸಕ ರಾಜೇಶ್ ನಾಯ್ಕ್, ಮಾಜಿ ಶಾಸಕ ರುಕ್ಮಯ ಪೂಜಾರಿ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ, ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ನಾಯಕ್, ಉದ್ಯಮಿ ವರದರಾಯ ಪ್ರಭು, ಚೈತನ್ಯ ವ್ಯವಹಾರ ಸಂಕೀರ್ಣದ ಮಾಲಕ ತಿರುಮಲೇಶ್ವರ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಖಾ ಶುಭಾರಂಭದ ಪ್ರಯುಕ್ತ ಹೆಚ್ಚುವರಿ ಬಡ್ಡಿ ಸಹಕಾರಿ ಸಂಘದಲ್ಲಿ ಆಕರ್ಷಕ ಬಡ್ಡಿದರದಲ್ಲಿ ಠೇವಣಿ ಸ್ವೀಕಾರ, ವಿವಿಧ ಉದ್ದೇಶದ ಸಾಲಗಳು, ಜೀವವಿಮೆ ಹಾಗೂ ಸಾಮಾನ್ಯ…
ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ನಲ್ಲಿ ಆದಾಯ ತೆರಿಗೆಯಲ್ಲಿ ಹಲವು ಬದಲಾವಣೆಗಳನ್ನು ಘೋಷಿಸಿದ್ದು, 12 ಲಕ್ಷ ರೂ.ವರೆಗೆ ಯಾವುದೇ ತೆರಿಗೆ ಇಲ್ಲ ಘೋಷಿಸಿದ್ದಾರೆ. ಇದರಿಂದ ಮಧ್ಯಮ ವರ್ಗದ ಜನರಿಗೆ ಮತ್ತು ವೇತನದಾರರಿಗೆ ನೆರವಾಗಲಿದೆ ಎಂದು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್ ಆರ್ ಹರೀಶ್ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಧ್ಯಮ ವರ್ಗದ ಜನರನ್ನು ವಿಶೇಷವಾಗಿ ಗಮನದಲ್ಲಿರಿಸಿ ಆದಾಯ ತೆರಿಗೆ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಮಧ್ಯಮ ವರ್ಗದವರ ತೆರಿಗೆ ಪಾವತಿಯ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಲು ಮತ್ತು ಅವರಿಗೆ ಸಿಗುವ ವೇತನದ ಹೆಚ್ಚಿನ ಹಣ ಅವರದೇ ಕೈಸೇರುವಂತೆ ಮಾಡುವುದಕ್ಕೆ ಒತ್ತು ಕೊಟ್ಟಿರುವುದು ನಿರ್ಮಲಾ ಸೀತಾರಾಮನ್ ಅವರ ಬಜೆಟ್ನಲ್ಲಿ ಕಂಡುಬರುತ್ತದೆ. ಈ ಕ್ರಮ ಉಳಿತಾಯ ಮತ್ತು ಹೂಡಿಕೆಯ ಪ್ರಮಾಣವನ್ನೂ ಹೆಚ್ಚಿಸಲಿದೆ. ಈ ಹಿಂದೆ 7 ಲಕ್ಷ ರೂ.ವರೆಗಿನ ಒಟ್ಟು ಆದಾಯ ಹೊಂದಿರುವ…
ನವದೆಹಲಿ: ಸಂಸತ್ನಲ್ಲಿ ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಮಧ್ಯಮ ವರ್ಗದ ಜನರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಮಧ್ಯಮ ವರ್ಗದ ಜನರ ನಿರೀಕ್ಷೆ ಪೂರೈಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. https://chat.whatsapp.com/Ge11n7QCiMj5QyPvCc0H19 ಹೊಸ ತೆರಿಗೆ ಪದ್ಧತಿಯಲ್ಲಿ 12 ಲಕ್ಷದವರೆಗಿನ ಆದಾಯ ತೆರಿಗೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹೊಸ ಆದಾಯ ತೆರಿಗೆ ಮಸೂದೆಯನ್ನು ಮುಂದಿನ ವಾರ ಪರಿಚಯಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಪ್ರಸ್ತುತ ದ್ವಿ ತೆರಿಗೆ ಪದ್ಧತಿ -ಹಳೆಯ ತೆರಿಗೆ ಪದ್ಧತಿ (OTR) ಮತ್ತು ಹೊಸ ತೆರಿಗೆ ಪದ್ಧತಿ (NTR) ಒಂದೇ ರೀತಿಯಾಗಿಲ್ಲ. ಹೊಸ ಪದ್ಧತಿಯು ಕಡಿಮೆ ದರ ಮತ್ತು ಸರಳ ರಚನೆಯನ್ನು ಹೊಂದಿದ್ದರೂ, ತೆರಿಗೆ ವಿಧಿಸಬಹುದಾದ ಆದಾಯ ಕಡಿಮೆ ಮಾಡಲು ಅನೇಕರು ಅವಲಂಬಿಸಿರುವ ಕಡಿತಗಳನ್ನು ಇದು ಹೊಂದಿಲ್ಲ ಎಂದು ಹೇಳಲಾಗುತ್ತಿದೆ. ಹೊಸ ಆದಾಯ ತೆರಿಗೆ ಪದ್ಧತಿಯಡಿಯಲ್ಲಿ, ಶೂನ್ಯ ತೆರಿಗೆ ಸ್ಲ್ಯಾಬ್ ಅನ್ನು ₹7 ಲಕ್ಷ ರೂಪಾಯಿಗಳಿಂದ ₹12…
ಹಿರಿಯೂರು: ಇಲ್ಲಿನ ವೀರಶೈವ ಪತ್ತಿನ ಸಹಕಾರ ಸಂಘದ 2025-30ನೇ ಸಾಲಿಗೆ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸಿ.ಸಿದ್ದರಾಮಣ್ಣ, ಉಪಾದ್ಯಕ್ಷರಾಗಿ ವಕೀಲ ಕೆ.ಮಹಂತೇಶ್ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಚುನಾವಣಾಧಿಕಾರಿ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಶಿವಮೂರ್ತಿ ಇದನ್ನು ಘೋಷಿಸಿದ್ದಾರೆ. ಚುನಾವಣೆ ಪ್ರಕ್ರಿಯೆ ಸಂದರ್ಭ ನಿರ್ದೇಶಕರಾದ ಎಸ್.ಬಿ.ಶಿವಕುಮಾರ್ ಸಿ.ಸಿದ್ದರಾಮಣ್ಣ, ಸಿದ್ದಗಂಗಯ್ಯ , ಜಿ.ಎಸ್ ಸೊಮಶೇಖರ್, ಡಿ.ಎಸ್.ಮಹೇಶ್, ಆರ್.ಟಿ.ನಾಗರಾಜ್, ವಿ.ಮಲ್ಲಿಕಾರ್ಜುನಪ್ಪ ಎಂ.ರಂಗಪ್ಪ, ವಿ.ಮಂಜುನಾಥ್, ಉಗ್ರನರಸಿಂಹಯ್ಯ, ಎ.ವಿ.ಸಿದ್ದರಾಮಣ್ಣ, ಸಿದ್ದಗಂಗಯ್ಯ, ಬಿ.ರತ್ನಮ್ಮ, ವಿ.ನಿರ್ಮಲ ಮಂಜುನಾಥ್ ಹಾಗೂ ವ್ಯವಸ್ಥಾಪಕರಾದ ವಿ.ಪ್ರಸನ್ನಕುಮಾರ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಬಜೆಟ್ ಮುನ್ನ ಆರ್ಥಿಕ ಸಮೀಕ್ಷೆಯಲ್ಲಿ ಪ್ರತಿಪಾದನೆ ನವದೆಹಲಿ: ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಬೆಳವಣಿಗೆ ದರ ಶೇಕಡಾ 6.3ರಿಂದ 6.8ರವರೆಗೆ ಇರಲಿದೆ ಎಂದು ಆರ್ಥಿಕ ಸಮೀಕ್ಷೆ ಅಂದಾಜಿಸಿದ್ದು, ಪ್ರಸಕ್ತ ಸಾಲಿನಲ್ಲಿ ನಿರುದ್ಯೋಗ ದರ ಇಳಿಮುಖವಾಗಿದ್ದು, ಸ್ಥಿರ ಹಣದುಬ್ಬರ ಮತ್ತು ಬೆಳವಣಿಗೆಯ ವೇಗ ಉಳಿಸಿಕೊಳ್ಳಲು ಹೆಚ್ಚಿನ ಸುಧಾರಣೆಗಳ ಅಗತ್ಯವಿದೆ ಎಂದು ಬಜೆಟ್ ಮುನ್ನ ಆರ್ಥಿಕ ಸಮೀಕ್ಷೆ ಪ್ರತಿಪಾದಿಸಲಾಗಿದೆ. ಸಮೀಕ್ಷೆಯ ಪ್ರಕಾರ 2025-26ರಲ್ಲಿ ಭಾರತದ ಆರ್ಥಿಕತೆಯು ಶೇ. 6.3ರಿಂದ 6.8ರಷ್ಟು ವೇಗದಲ್ಲಿ ಬೆಳೆಯುವ ನಿರೀಕ್ಷೆ ವ್ಯಕ್ತಪಡಿಸಲಾಗಿದೆ. https://chat.whatsapp.com/Ge11n7QCiMj5QyPvCc0H19 2025ನೇ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಆಹಾರ ಹಣದುಬ್ಬರ ಪ್ರಮಾಣ ಇಳಿಮುಖವಾಗುವ ಸಾಧ್ಯತೆಯಿದೆ. ತರಕಾರಿ ಬೆಲೆ ಕಡಿಮೆಯಾಗುವ ನಿರೀಕ್ಷೆ ಇದ್ದು, ಕೃಷಿ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಬರುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. 2026ರಲ್ಲಿ ಭಾರತದ ಆರ್ಥಿಕ ಭವಿಷ್ಯ ಸಮತೋಲಿತವಾಗಿದ್ದು, ಜಾಗತಿಕ ರಾಜಕೀಯ ಅನಿಶ್ಚಿತತೆಗಳು ಬೆಳವಣಿಗೆಗೆ ಅಡ್ಡಿಯಾಗಬಹುದು. ಇದನ್ನು ನಿಭಾಯಿಸಲು ತಂತ್ರಗಳು, ವಿವೇಚನಾಯುಕ್ತ ನೀತಿ ನಿರ್ವಹಣೆ ಮತ್ತು ದೇಶೀಯ ಮೂಲಭೂತ ಅಂಶಗಳನ್ನು ಬಲಪಡಿಸುವ ಅಗತ್ಯವಿದೆ ಎಂದು…
ಬಂಟ್ವಾಳ: ಸವಾಲುಗಳನ್ನು ಎದುರಿಸಲು ರೈತರು ಸರಿಯಾದ ಜ್ಞಾನ ಪಡೆಯಲು ತರಬೇತಿ ಪಡೆಯುವುದು ಬಹಳ ಅಗತ್ಯ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘ ನಿಯಮಿತ ಅಣ್ಣಳಿಕೆ ಬಂಟ್ವಾಳ, ನೇತ್ರಾವತಿ ಕೃಷಿಕರ ಅಭಿವೃದ್ಧಿ ಸಂಘಗಳ ಒಕ್ಕೂಟ ಬ೦ಟ್ವಾಳ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೋ ಹಿಲ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಬಂಟ್ವಾಳ ಅಣ್ಣಳಿಕೆ ಮಹಾಗಣಪತಿ ಸೌಧದ ಸಭಾಂಗಣದಲ್ಲಿ ಅಡಿಕೆ ತೋಟದಲ್ಲಿ ಸಮಗ್ರ ಪೋಷಕಾಂಶ ಹಾಗೂ ಕೀಟರೋಗ ನಿಯಂತ್ರಣ ಮತ್ತು ಅಂತರ ಬೆಳೆ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 ಸಂಪನ್ಮೂಲ ವ್ಯಕ್ತಿಗಳಾಗಿ ಬಂಟ್ವಾಳ ತೋಟಗಾರಿಕೆ ಇಲಾಖೆಯ ಹಿರಿಯ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ವಿಟ್ಲ ಇದರ ವಿಜ್ಞಾನಿ ಡಾ.ಭವಿಷ್ ಮಾಹಿತಿ ಕಾರ್ಯಾಗಾರ ನಡೆಸಿದರು. ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಅರಳ ಮಾವಂತೂರು ಪ್ರಗತಿಪರ ಕೃಷಿಕ ದುರ್ಗಾದಾಸ್ ಶೆಟ್ಟಿ,…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್ಭಾಗ್ ಶಾಖೆಯ ದಶಮಾನೋತ್ಸವ ಪ್ರಯುಕ್ತ ಕುದ್ರೋಳಿ ಯುವಕ ಸಂಘ ಕುದ್ರೋಳಿ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಇಲ್ಲಿನ ನುರಿತ ತಜ್ಞ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಚಿಕಿತ್ಸಾ ಶಿಬಿರವನ್ನು ಕುದ್ರೋಳಿ ಯುವಕ ಸಂಘದಲ್ಲಿ ನಡೆಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಘವ್ ಪಡೀಲ್ ಶಿಬಿರ ಉದ್ಘಾಟಿಸಿ ಮಾತನಾಡಿ, ಗಣರಾಜೋತ್ಸವದ ದಿನದಂದು ವೈದ್ಯಕೀಯ ಶಿಬಿರ ಹಮ್ಮಿಕೊಂಡಿರುವುದು ಬಹಳ ಸಂತೋಷದ ವಿಷಯ. ವೈದ್ಯಕೀಯ ಶಿಬಿರ ಏರ್ಪಡಿಸುವುದು ಅಷ್ಟು ಸುಲಭವಲ್ಲ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉತ್ತಮ ರೀತಿಯಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದು ಶ್ಲಾಘಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ ಮಾತನಾಡಿ ನಮ್ಮ ಸಂಘದ ಪ್ರತಿ ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ಆಯೋಜಿಸುತಿದ್ದು, ಪರಿಸರದ ಸುತ್ತಮುತ್ತಲಿನ ಬಡ ವರ್ಗದ ಜನರಿಗೆ ಇಂತಹ ಶಿಬಿರಗಳಿಂದ ತುಂಬ ಪ್ರಯೋಜನವಾಗುತ್ತಿದೆ…
