Author: admin
ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ತನ್ನ 2025-26ನೇ ಹಣಕಾಸು ವರ್ಷದ (31-03-2026ಕ್ಕೆ ಕೊನೆಗೊಂಡಂತೆ) ವಾರ್ಷಿಕ ಫಲಿತಾಂಶವನ್ನು ಪ್ರಕಟಿಸಿದ್ದು, 117 ವರ್ಷ ಇತಿಹಾಸವಿರುವ ಬ್ಯಾಂಕ್ 2025-26ರಲ್ಲಿ ಬ್ಯಾಂಕಿನ ಇತಿಹಾಸದಲ್ಲೇ ಅತ್ಯಂತ ಗಮನಾರ್ಹ ಸಾಧನೆ ದಾಖಲಿಸಿದೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ. https://chat.whatsapp.com/FCEnlTkAKCC0MGPhXtX4i4 ಆರ್ಥಿಕ ಸಾಧನೆಯ ಮುಖ್ಯಾಂಶಗಳು: ಬ್ಯಾಂಕು ಕಳೆದ ಹಣಕಾಸು ವರ್ಷದಲ್ಲಿ ಒಟ್ಟು ರೂ. 149.00 ಕೋಟಿ ರೂ.ಗಳ ವ್ಯವಹಾರ ನಡೆಸುವ ಮೂಲಕ 18%ರಷ್ಟು ನಿವ್ವಳ ಪ್ರಗತಿ ದಾಖಲಿಸಿದೆ. ಬ್ಯಾಂಕಿನ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಏರಿಕೆ ಕಂಡುಬಂದಿರುವುದು ಇದೇ ಮೊದಲು ಎಂಬುದು ವಿಶೇಷ. ಒಟ್ಟು ಸಾಲ ಮತ್ತು ಮುಂಗಡಗಳು: ರೂ. 61.00 ಕೋಟಿ ಒಟ್ಟು ವ್ಯವಹಾರ: ರೂ. 149.00 ಕೋಟಿ ದಾಖಲೆಯ ಸಾಲ ವಸೂಲಾತಿ ಮತ್ತು ಕನಿಷ್ಠ ಎನ್.ಪಿ.ಎ (NPA): ಬ್ಯಾಂಕು ಸಾಲ ವಸೂಲಾತಿಯಲ್ಲಿ ಮೈಲಿಗಲ್ಲು ಸ್ಥಾಪಿಸಿದ್ದು, ಅತ್ಯಂತ ಶಿಸ್ತುಬದ್ಧ ಆಡಳಿತವನ್ನು ಪ್ರದರ್ಶಿಸಿದೆ. ಸಾಲ ವಸೂಲಾತಿ ಪ್ರಮಾಣ: 99.11% (Gross NPA): 0 0.89% * ನಿವ್ವಳ ವರಮಾನರಹಿತ ಆಸ್ತಿ…
ನಾಳೆ ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಬೆಳ್ಳಂಪಳ್ಳಿ ನವೀಕೃತ ಶಾಖೆ ಉದ್ಘಾಟನಾ ಸಮಾರಂಭ
ಮಂಗಳೂರು: ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಹವಾನಿಯಂತ್ರಿತವಾಗಿ ನವೀಕೃತಗೊಂಡ ಬೆಳ್ಳಂಪಳ್ಳಿ ಶಾಖೆಯ ಉದ್ಘಾಟನಾ ಸಮಾರಂಭ ಏಪ್ರಿಲ್ 8ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಬೆಳ್ಳಂಪಳ್ಳಿ ಶಾಖೆಯ ವಠಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪರಮಪೂಜ್ಯ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ, ಸರಸ್ವತೀ ಪೀಠ, ವೇಣುಗಿರಿ ಪಡುಕುತ್ಯಾರು ಇಲ್ಲಿಯ ಜಗದ್ಗುರು, ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಗಳವರು ಉದ್ಘಾಟನೆ ನೆರವೇರಿಸಿ ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿಗಳವರು ಶ್ರೀ ವಿಶ್ವಕರ್ಮ ಜಗದ್ಗುರು ಪೀಠ, ಅರೆಮಾದನಹಳ್ಳಿ, ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ, ಅರಕಲಗೂಡು, ಹಾಸನ ಜಿಲ್ಲೆ ಇವರು ಆಶೀರ್ವಚನ ನೀಡುವರು. ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಆರ್.ಕೆ, ರೈತರ ಸಹಕಾರಿ ಸಂಘ ನಿ.. ಹಿರಿಯಡ್ಕ…
ದೇರಳಕಟ್ಟೆಯಲ್ಲಿ 22ನೇ, ಕಟಪಾಡಿಯಲ್ಲಿ 23ನೇ ಶಾಖೆ ಆರಂಭಿಸಲು ಸಿದ್ಧತೆ: ಮುಂದಿನ ವರ್ಷಾಂತ್ಯಕ್ಕೆ ಶಾಖೆಗಳ ಸಂಖ್ಯೆ 25ಕ್ಕೆ ಎಂಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೋ ಮಾಹಿತಿ ಮಂಗಳೂರು: ಎಂಸಿಸಿ ಬ್ಯಾಂಕ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಆರ್ಥಿಕ ವರ್ಷದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಈ ಆರ್ಥಿಕ ವರ್ಷದಲ್ಲಿ ರೂ. 13 ಕೋಟಿ ಲಾಭ ದಾಖಲಿಸಿದೆ ಎಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಎಂಸಿಸಿ ಬ್ಯಾಂಕ್ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್ಪಿಎ (Net NPA) ಇಳಿಕೆಗೆ ನಿರಂತರ ಪ್ರಯತ್ನ ನಡೆಸಿ, ಅದನ್ನು ಒಟ್ಟು ಮುಂಗಡಗಳ 1.25% ಮಟ್ಟಕ್ಕೆ ತಗ್ಗಿಸಲು ಯಶಸ್ವಿಯಾಗಿದೆ. ಒಟ್ಟು ವ್ಯವಹಾರ ರೂ.1525 ಕೋಟಿಗೆ ತಲುಪಿದ್ದು, 23% ವೃದ್ಧಿ ಸಾಧಿಸಿದೆ. 2018ನೇ ವರ್ಷದಲ್ಲಿ ಬ್ಯಾಂಕಿನ ಚುಕ್ಕಾಣಿ ಹಿಡಿದ ಪ್ರಸ್ತುತ ಆಡಳಿತ ಮಂಡಳಿಯ ಅವಧಿಯಲ್ಲಿ ರೂ.500 ಕೋಟಿ ಇದ್ದ ಬ್ಯಾಂಕಿನ ಒಟ್ಟು ವ್ಯವಹಾರವು ಕಳೆದ ಏಳೂವರೆ ವರ್ಷದಲ್ಲಿ ಮೂರು…
ಮಂಗಳೂರು: ಶ್ರೀ ಭಗವತಿ ಸಹಕಾರ ಬ್ಯಾಂಕ್ ಕಳೆದ ಆರ್ಥಿಕ ವರ್ಷದಲ್ಲಿ (2025-26) ಅತ್ಯುತ್ತಮ ವ್ಯವಹಾರ ದಾಖಲಿಸಿದ್ದು, ಬ್ಯಾಂಕಿನ ಚರಿತ್ರೆಯಲ್ಲೇ ಅತ್ಯಧಿಕ ಲಾಭ 1,35,92,000 ರೂ. ಗಳಿಸಿದೆ. ಇದು ಹಿಂದಿನ ವರ್ಷಕ್ಕಿಂತ ಶೇ.85ರಷ್ಟು ಹೆಚ್ಚಾಗಿದೆ. https://chat.whatsapp.com/FCEnlTkAKCC0MGPhXtX4i4 ಶ್ರೀ ಭಗವತಿ ಸಹಕಾರ ಬ್ಯಾಂಕ್ ಮಂಗಳೂರು, ತೊಕ್ಕೊಟ್ಟು, ಬಿ.ಸಿ.ರೋಡ್, ಕೈಕಂಬ, ವಿಟ್ಲ ಮತ್ತು ಪುತ್ತೂರುಗಳಲ್ಲಿ ಎಂಟು ಶಾಖೆಗಳನ್ನು ಹೊಂದಿದ್ದು, ಜಪ್ಪು ಮೋರ್ಗನ್ಸ್ ಗೇಟ್ನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಬ್ಯಾಂಕಿನ ಕಳೆದ ಆರ್ಥಿಕ ವರ್ಷದಲ್ಲಿ ಒಟ್ಟು ಠೇವಣಿ 12,536.95 ಲಕ್ಷ ರೂ. ಆಗಿದ್ದು, ಹೊರಬಾಕಿ ಸಾಲ 10,545.87 ಲಕ್ಷ ರೂ. ಆಗಿರುತ್ತದೆ. ಒಟ್ಟು ವ್ಯವಹಾರವು 23,082.82 ಲಕ್ಷ ರೂ. ಆಗಿದೆ. ಬ್ಯಾಂಕಿನಲ್ಲಿ ಒಟ್ಟು 22,317 ಸದಸ್ಯರಿದ್ದು ಪಾಲು ಬಂಡವಾಳ ರೂ. 472.89 ಲಕ್ಷ ರೂ. ಇದ್ದು, 2,934.72 ಲಕ್ಷ ರೂ.ನಿಧಿಗಳಾಗಿ ಹಾಗೂ 13,589.16 ಲಕ್ಷ ರೂ. ದುಡಿಯುವ ಬಂಡವಾಳ ಹೊಂದಿರುತ್ತದೆ. ಬ್ಯಾಂಕಿನಲ್ಲಿ ಒಟ್ಟು 39 ಮಂದಿ ನೌಕರರಿದ್ದು, 12 ಮಂದಿ ಆಡಳಿತ ನಿರ್ದೇಶಕರು, 4 ಮಂದಿ ವ್ಯವಸ್ಥಾಪನಾ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಮಾಡೂರು, ಶ್ರೀ ಶಾಸ್ತಾರ ಬಳಗ, ಶ್ರೀ ಶಾಸ್ತಾರ ಮಹಿಳಾ ಮಂಡಳಿ ಮತ್ತು ಭಜಕ ವೃಂದ ಮಡ್ಯಾರ್ ಹಾಗೂ ಎನ್.ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿ೦ದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವು ಮಾತೃಶ್ರೀ ಕಾಂಪ್ಲೆಕ್ಸ್, ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷ ತೆಯಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ| ಇಮ್ರಾನ್ ಪಾಷಾ…
ಮಂಗಳೂರು: ಶ್ರೀ ಭಗವತಿ ಸಹಕಾರ ಬ್ಯಾಂಕ್ ಕಳೆದ ಆರ್ಥಿಕ ವರ್ಷದಲ್ಲಿ (2025-26) ಅತ್ಯುತ್ತಮ ವ್ಯವಹಾರ ದಾಖಲಿಸಿದ್ದು, ಬ್ಯಾಂಕಿನ ಚರಿತ್ರೆಯಲ್ಲೇ ಅತ್ಯಧಿಕ ಲಾಭ 1,35,92,000 ರೂ. ಗಳಿಸಿದೆ. ಇದು ಹಿಂದಿನ ವರ್ಷಕ್ಕಿಂತ ಶೇ.85ರಷ್ಟು ಹೆಚ್ಚಾಗಿದೆ. https://chat.whatsapp.com/FCEnlTkAKCC0MGPhXtX4i4 ಶ್ರೀ ಭಗವತಿ ಸಹಕಾರ ಬ್ಯಾಂಕ್ ಮಂಗಳೂರು, ತೊಕ್ಕೊಟ್ಟು, ಬಿ.ಸಿ.ರೋಡ್, ಕೈಕಂಬ, ವಿಟ್ಲ ಮತ್ತು ಪುತ್ತೂರುಗಳಲ್ಲಿ ಎಂಟು ಶಾಖೆಗಳನ್ನು ಹೊಂದಿದ್ದು, ಜಪ್ಪು ಮೋರ್ಗನ್ಸ್ ಗೇಟ್ನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಬ್ಯಾಂಕಿನ ಕಳೆದ ಆರ್ಥಿಕ ವರ್ಷದಲ್ಲಿ ಒಟ್ಟು ಠೇವಣಿ 12,536.95 ಲಕ್ಷ ರೂ. ಆಗಿದ್ದು, ಹೊರಬಾಕಿ ಸಾಲ 10,545.87 ಲಕ್ಷ ರೂ. ಆಗಿರುತ್ತದೆ. ಒಟ್ಟು ವ್ಯವಹಾರವು 23,082.82 ಲಕ್ಷ ರೂ. ಆಗಿದೆ. ಬ್ಯಾಂಕಿನಲ್ಲಿ ಒಟ್ಟು 22,317 ಸದಸ್ಯರಿದ್ದು ಪಾಲು ಬಂಡವಾಳ ರೂ. 472.89 ಲಕ್ಷ ರೂ. ಇದ್ದು, 2,934.72 ಲಕ್ಷ ರೂ.ನಿಧಿಗಳಾಗಿ ಹಾಗೂ 13,589.16 ಲಕ್ಷ ರೂ. ದುಡಿಯುವ ಬಂಡವಾಳ ಹೊಂದಿರುತ್ತದೆ. ಬ್ಯಾಂಕಿನಲ್ಲಿ ಒಟ್ಟು 39 ಮಂದಿ ನೌಕರರಿದ್ದು, 12 ಮಂದಿ ಆಡಳಿತ ನಿರ್ದೇಶಕರು, 4 ಮಂದಿ ವ್ಯವಸ್ಥಾಪನಾ…
ವಿಶ್ವಕರ್ಮ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಜಗದೀಶ್ ಪಡುಪಣಂಬೂರು ಅಭಿಪ್ರಾಯ ಉಡುಪಿ: ಸ್ವಚ್ಛ ಹಾಗೂ ಅರೋಗ್ಯಕರ ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಸ್ವಚ್ಛತೆಯ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವಕರ್ಮ ಬ್ಯಾಂಕ್ ನಿರಂತರವಾಗಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಗಳನ್ನು ನಡೆಸುತ್ತಿರುವುದಕ್ಕೆ ಮುಖ್ಯ ಪ್ರೇರಣೆ ಎಂದರೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಂದ ನಮಗೆ ದೊರೆತ ಉತ್ತಮ ಸ್ಪಂದನೆ ಕಾರಣ. ಈ ಜನಸ್ಪಂದನೆಯು ಇಂತಹ ಇನ್ನಷ್ಟು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಾಡಿದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಜಗದೀಶ್ ಪಡುಪಣಂಬೂರು ಹೇಳಿದರು. https://chat.whatsapp.com/FCEnlTkAKCC0MGPhXtX4i4 ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಡುಪಿಯಲ್ಲಿ ನಡೆದ 37ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತೆಂಕನಿಡಿಯೂರು ವಿಷ್ಣುಮೂರ್ತಿ ದೇವಸ್ಥಾನ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ದಯಾನಂದ ಆಚಾರ್ಯ ಹಾಗೂ ಗೆಳೆಯರ ಬಳಗ, ವಿಷ್ಣುನಗರ ಅಧ್ಯಕ್ಷ ಚರಣ್ ರಾಜ್ ಹಸಿರು ನಿಶಾನೆ ತೋರಿಸಿ ಶ್ರಮದಾನಕ್ಕೆ ಚಾಲನೆ ನೀಡಿದರು. ಉಡುಪಿಯ ಕೆಳಾರ್ಕಳಬೆಟ್ಟು, ತೆಂಕನಿಡಿಯೂರು ಪರಿಸರಗಳಲ್ಲಿ…
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 34 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ರೂ. 3.50 ಕೋಟಿಗೂ ಮಿಕ್ಕಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಸದಸ್ಯರಿಗೆ ಉತ್ತಮ ಸೇವೆ ನೀಡುವ ಮೂಲಕ ಉನ್ನತ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಸಂಘವು ತನ್ನ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ನಗರದ ಅಳಪೆ ಗ್ರಾಮದ ಪಡೀಲ್ನಲ್ಲಿ ತೆರೆದು ಹವಾನಿಯಂತ್ರಿತ ಅತ್ಯಾಧುನಿಕ ಸೇವಾ ಸೌಲಭ್ಯಗಳೊಂದಿಗೆ ಕಾರ್ಯಾಚರಿಸುತ್ತಿದೆ. 2012ರಲ್ಲಿ 1200 ಸದಸ್ಯರ ಪಾಲು ಬಂಡವಾಳದೊಂದಿಗೆ ಸ್ಥಾಪನೆಯಾದ ಸಂಸ್ಥೆಯು ಇಂದು 9079 ಸದಸ್ಯರನ್ನೊಳಗೊಂಡು, ರೂ 1.80 ಕೋಟಿಗೂ ಮಿಕ್ಕಿ ಪಾಲು ಬಂಡವಾಳ ಹೊಂದಿದೆ. ರೂ.22 ಲಕ್ಷ ಠೇವಣಿಯೊಂದಿಗೆ ಆರಂಭಗೊಂಡ ಸಂಘವು 2025-26ನೇ ಸಾಲಿನಲ್ಲಿ ರೂ. 305೩ ಕೋಟಿಗೂ ಮಿಕ್ಕಿ ಠೇವಣಾತಿ ಹೊಂದಿದೆ. ಸಂಘವು 2025-26ನೇ ಸಾಲಿನಲ್ಲಿ ರೂ. 278 ಕೋಟಿಗೂ ಮಿಕ್ಕಿ ಹೊರಬಾಕಿ ಸಾಲ…
ಹಳೆಯಂಗಡಿ: ಸದಸ್ಯರ ಪ್ರೋತ್ಸಾಹ, ಗ್ರಾಹಕರ ಸಹಕಾರ, ಆಡಳಿತ ವರ್ಗದವರ ಮಾರ್ಗದರ್ಶನ ಹಾಗೂ ಸಿಬ್ಬಂದಿಗಳ ಕಾರ್ಯಶ್ರಮತೆಯಿಂದಾಗಿ 2025-26ನೇ ಸಾಲಿನಲ್ಲಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಲಿ. ಹಳೆಯಂಗಡಿ 483 ಕೋಟಿ ರೂ. ವ್ಯವಹಾರ ನಡೆಸಿದೆ ಎಂದು ಸೊಸೈಟಿ ಅಧ್ಯಕ್ಷ ವಸಂತ್ ಬರ್ನಾರ್ಡ್ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಶನಿವಾರ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯ ಕೇಂದ್ರ ಕಚೇರಿಯಲ್ಲಿ ನಡೆದ ಅವಲೋಕನ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್ ಅವರ ಮಾರ್ಗದರ್ಶನ ಹಾಗೂ ಸಹಕಾರಿ ಭೀಷ್ಮ ದಿ.ಎಚ್. ನಾರಾಯಣ ಸನಿಲ್ ಮತ್ತು ದಿ.ಪಂಜದಗುತ್ತು ಶಾಂತಾರಾಮ ಶೆಟ್ಟಿ ಅವರ ಪ್ರೇರಣಾ ಶಕ್ತಿಯಿಂದ 2021ರಲ್ಲಿ ಪ್ರಾರಂಭವಾದ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯು, ವರದಿ ಸಾಲಿನಲ್ಲಿ 483 ಕೋಟಿ ರೂ. ವ್ಯವಹಾರ ದಾಖಲಿಸಿದೆ. ಕಳೆದ ಸಾಲಿನ ವ್ಯವಹಾರವನ್ನು ತುಲನೆ ಮಾಡಿದರೇ ಶೇ.72.86 ಏರಿಕೆ ದಾಖಲಿಸಿದೆ. ಪ್ರಸ್ತುತ 38.32 ಕೋಟಿ ರೂ. ಠೇವಣಿ, 32.48 ಕೋಟಿ ರೂ. ಸಾಲ ಮತ್ತು ಮುಂಗಡಗಳೊಂದಿಗೆ, ರೂ.76.57 ಲಕ್ಷ ಪಾಲು ಬಂಡವಾಳ, ರೂ.90.50 ಲಕ್ಷ…
ಮಂಗಳೂರು: ಜಿಲ್ಲೆಯ ಪ್ರತಿಷ್ಠಿತ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು 2025-26ನೇ ಆರ್ಥಿಕ ವರ್ಷದಲ್ಲಿ 2.16 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸೊಸೈಟಿಯ ಎಲ್ಲ ವಿಭಾಗಗಳಲ್ಲೂ ಅದ್ವಿತೀಯ ಸಾಧನೆ ಮಾಡಿದೆ ಎಂದು ಸೊಸೈಟಿಯ ಅಧ್ಯಕ್ಷ ಎಂ.ಎಸ್ ಗುರುರಾಜ್ ತಿಳುಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಬುಧವಾರ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ನ lಡೆದ ಅವಲೋಕನಾ ಸಭೆಯಲ್ಲಿ ಮಾತನಾಡಿದ ಅವರು, ಶ್ರೀಶಾ ಸೊಸೈಟಿ ಆರಂಭವಾಗಿ ಕೇವಲ ಆರು ವರ್ಷಗಳಷ್ಟೇ ಆಗಿದ್ದರೂ ಸಾಧನೆಯಲ್ಲಿ ಬಹುದೂರ ಕ್ರಮಿಸಿದೆ. ಈ ಆರ್ಥಿಕ ವರ್ಷದಲ್ಲಿ ಠೇವಣಿ ಸಂಗ್ರಹದಲ್ಲಿ ಶೇ.30ರಷ್ಟು ಏರಿಕೆಯೊಂದಿಗೆ 54.30 ಕೋಟಿ ರೂ., ಸಾಲ ವಿತರಣೆಯಲ್ಲಿ ಶೇ.25ರಷ್ಟು ಏರಿಕೆಯೊಂದಿಗೆ 44.88 ಕೋಟಿ ರೂ. ತಲುಪಿರುವುದು ವಿಶೇಷ. ಸೊಸೈಟಿಯು ಶೇ.98 ವಸೂಲಾತಿಯೊಂದಿಗೆ ಹಾಗೂ ಶೇ.27 ಏರಿಕೆಯ ನಿವ್ವಳ ಲಾಭ 2.16 ಕೋಟಿ ರೂ. ಗಳಿಸಿದ್ದು ಇದಕ್ಕೆ ಇದರ ಶಿಸ್ತುಬದ್ಧ ಆಡಳಿತ ಹಾಗೂ ಸಿಬ್ಬಂದಿ ವರ್ಗದ ಶ್ರಮವೇ ಕಾರಣ ಎಂದು ಹೇಳಿದರು. ಶ್ರೀಶಾ ಸೊಸೈಟಿಯು ಐದು ಸುಸಜ್ಜಿತ ಶಾಖೆಗಳನ್ನು ಹೊಂದಿದ್ದು, ಎಲ್ಲವೂ ಸಂಪೂರ್ಣ…
