Author: admin
ಕಾರ್ಕಳ: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ಇದರ ಸ್ವರ್ಣ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿಗುವ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ 19ನೇ “ಸ್ವಚ್ಚ ವಿಚಾರ್ ” ಸಂವಾದ ಕಾರ್ಯಕ್ರಮವು ಗುರುವಾರ ಕಾರ್ಕಳದ ಪ್ಲಾನೆಟ್ ಚಿತ್ರಮಂದಿರದಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಮುಖ್ಯ ಅತಿಥಿಗಳಾಗಿ ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ, ಸ್ವಚ್ಛ ಕಾರ್ಕಳ ಬ್ರಿಗೇಡ್ನ ಫೆಲಿಕ್ಸ್ ವಾಸ್, ಪತ್ರಕರ್ತ, ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಅಧ್ಯಕ್ಷ ರೊ.ಭಾಸ್ಕರ್ ರೈ ಕಟ್ಟ, ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್ ಭಾಗವಹಿಸಿದ್ದರು. ವಿಶ್ವಕರ್ಮ ಬ್ಯಾಂಕ್ ನ ಅಧ್ಯಕ್ಷ ಡಾ| ಎಸ್. ಆರ್. ಹರೀಶ್ ಆಚಾರ್ಯ ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಅಂಬಾಮಹೇಶ್ವರಿ ಟ್ರಸ್ಟ್ ಜೆಪ್ಪು ಇದರ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕಾರ್ಯಕರ್ತ ಉಮಾನಾಥ ಕೋಟೆಕಾರ್ “ಸ್ವಚ್ಛತೆ ಯಾಕೆ ಮತ್ತು ಹೇಗೆ…? ಸ್ವಚ್ಛತೆಯ ವಿಷಯದಲ್ಲಿ ಸಂಘ ಸಂಸ್ಥೆಗಳು ಪಾತ್ರ” ಎಂಬ ಬಗ್ಗೆ ವಿಷಯ ಮಂಡಿಸಿದರು. ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಜೊತೆ ಮೊಕ್ತೇಸರರಾದ ಪಿ.ರವಿ ಆಚಾರ್ಯ,…
ಸಹಕಾರಿ ಬ್ಯಾಂಕಿಂಗ್ ಜಾಲದ ಮೂಲಕ ಯೋಜನೆ ವ್ಯಾಪ್ತಿ ಮತ್ತಷ್ಟು ವಿಸ್ತರಣೆಗೆ ಸಜ್ಜು ನವದೆಹಲಿ: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ನೀಡುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಅಟಲ್ ಪಿಂಚಣಿ ಯೋಜನೆಯನ್ನು 2031ರವರೆಗೆ ವಿಸ್ತರಣೆ ಮಾಡಿರುವ ಕೇಂದ್ರ ಸರ್ಕಾರ ಸಹಕಾರಿ ಬ್ಯಾಂಕಿಂಗ್ ಜಾಲದ ಮೂಲಕ ಯೋಜನೆ ವ್ಯಾಪ್ತಿ ಮತ್ತಷ್ಟು ವಿಸ್ತರಣೆಗೆ ಸಜ್ಜಾಗಿದೆ. https://chat.whatsapp.com/FCEnlTkAKCC0MGPhXtX4i4 18 ರಿಂದ 40 ವರ್ಷ ವಯಸ್ಸಿನವರಿಗೆ ಅಟಲ್ ಪಿಂಚಣಿ ಯೋಜನೆಯನ್ನು ಮಾಡಬಹುದಾಗಿದ್ದು, 60 ವರ್ಷದ ನಂತರ ತಿಂಗಳಿಗೆ 1,000ದಿಂದ 5,000 ರೂ. ಪಿಂಚಣಿ ಸಿಗಲಿದೆ. ಈಗಾಗಲೇ 8.66 ಕೋಟಿಗೂ ಹೆಚ್ಚು ಜನ ನೋಂದಾಯಿಸಿಕೊಂಡಿದ್ದಾರೆ. ಇದು ಕುಟುಂಬಕ್ಕೆ ಆರ್ಥಿಕ ಭದ್ರತೆಯನ್ನು ನೀಡುತ್ತದೆ. ನಿರ್ದಿಷ್ಟವಾಗಿ ಸಹಕಾರಿ ಬ್ಯಾಂಕುಗಳು ಈ ಬೆಳವಣಿಗೆಯ ಪಥದಲ್ಲಿ ಪ್ರಮುಖ ಪಾಲುದಾರರಾಗಿ ಹೊರಹೊಮ್ಮಿವೆ. ಗ್ರಾಮೀಣ ಮತ್ತು ಅರೆ-ನಗರ ಮಾರುಕಟ್ಟೆಗಳಲ್ಲಿ ಅವರ ಆಳವಾದ ಉಪಸ್ಥಿತಿ, ಸ್ಥಳೀಯ ಸಮುದಾಯಗಳಲ್ಲಿನ ನಂಬಿಕೆ ಆಧಾರಿತ ಸಂಬಂಧಗಳೊಂದಿಗೆ ಸೇರಿ, ದೊಡ್ಡ ವಾಣಿಜ್ಯ ಬ್ಯಾಂಕುಗಳು ಹೆಚ್ಚಾಗಿ ಪರಿಹರಿಸಲಾಗದ ಪಿಂಚಣಿ ಸಾಕ್ಷರತಾ ಅಂತರವನ್ನು ಕಡಿಮೆ ಮಾಡಲು…
ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪ್ರಗತಿ ಕುರಿತ ಅಧ್ಯಯನಕ್ಕಾಗಿ ನಬಾರ್ಡ್ ಅಧಿಕಾರಿಗಳ ತಂಡ ಆಗಮಿಸಿ ವಿವಿಧ ಕಾರ್ಯಚಟುವಟಿಕೆಗಳ ಮಾಹಿತಿ ಪಡೆಯಿತು. ದೇಶದ ವಿವಿಧ ರಾಜ್ಯಗಳ 45 ಮಂದಿ ಸದಸ್ಯರ ತಂಡವು ಮಂಗಳವಾರ ಬಂಗಾಡಿಗೆ ಭೇಟಿ ನೀಡಿದ್ದು, PACS As MSC ಯೋಜನೆಯಡಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಕಡಿರುದ್ಯಾವರ ಶಾಖೆಗೆ ಭೇಟಿ ನೀಡಿತು. https://chat.whatsapp.com/FCEnlTkAKCC0MGPhXtX4i4 ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಹರೀಶ್ ಸಾಲ್ಯಾನ್ ಅವರು ಅಧಿಕಾರಿಗಳಿಗೆ ಸಂಘದ ಸಾಲ ವಿತರಣೆಯ ಯೋಜನೆಗಳು, ಸಂಘದ ಮೂಲಕ ನಡೆಯುತ್ತಿರುವ ಮಾರಾಟ ವ್ಯವಹಾರಗಳ ಸಮಗ್ರವಾದ ಮಾಹಿತಿ ನೀಡಿದರು. ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 1200 ಕೋಟಿ ರೂ. ವ್ಯವಹಾರ ನಡೆಸಿದ್ದು, 6720 ಸದಸ್ಯರನ್ನು ಹೊಂದಿದ್ದು 203 ಕೋಟಿಗೂ ಅಧಿಕ ಸಾಲ ನೀಡಲಾಗಿದೆ. ಇದರಲ್ಲಿ 75.28 ಕೋಟಿಗೂ ಮಿಕ್ಕಿ ಕೃಷಿ ಸಾಲ ವಿತರಿಸಲಾಗಿದೆ. 127.72 ಕೋಟಿ ರೂ. ಕೃಷಿಯೇತರ ಸಾಲ ವಿತರಿಸಲಾಗಿದೆ. 2024-25ನೇ ಸಾಲಿನಲ್ಲಿ 4.81 ಕೋಟಿ ರೂ. ಲಾಭ ಗಳಿಸಿದೆ. ಸಂಘವು ಪೂರ್ಣ ಪ್ರಮಾಣದ…
ಮಣಿಪಾಲ: ಸಾರಸ್ವತ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಮಣಿಪಾಲ, ಕೆ.ಎಂ.ಸಿ ಆಸ್ಪತ್ರೆಯ ಸಹಯೋಗ ಮತ್ತು ಮಾಹೆ-ಮಣಿಪಾಲ ಇವರ ಸಹಕಾರದೊಂದಿಗೆ ಅತ್ಯುನ್ನತ ಸೌಲಭ್ಯಗಳೊಂದಿಗೆ ರೂಪಿಸಲಾದ ಆಕರ್ಷಕ ಯೋಜನೆ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್ (ಕೊಂಕಣಿ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್) ನೋಂದಣಿ ಪಾರಂಭಗೊಂಡಿದ್ದು ಜನವರಿ 31 ನೋಂದಣಿ ಕೊನೆಯ ದಿನವಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ಸೌಲಭ್ಯವು ಮಣಿಪಾಲ ಸಮೂಹದ ಆಸ್ಪತ್ರೆಗಳಲ್ಲಿ ಮಾತ್ರ ಈ ಯೋಜನೆ ಸೀಮಿತವಾಗಿದ್ದು, ಈ ಸುರಕ್ಷಾ ಕಾರ್ಡ್ನ ಸೌಲಭ್ಯ ಪಡೆಯುವ ಅವಧಿ 15 ಫೆಬ್ರವರಿ 2026ರಿಂದ ಪ್ರಾರಂಭವಾಗಲಿದೆ. ಈ ಹಿಂದೆ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್ (ಕೊಂಕಣಿ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್) ಹೊಂದಿದ್ದವರು ಹಾಗೂ ಹೊಸತಾಗಿ ಕಾರ್ಡ್ ಮಾಡಲಿಚ್ಚಿಸುವ ಕುಟುಂಬದ ಪ್ರತಿ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಕುಟುಂಬದ ರೇಷನ್ ಕಾರ್ಡ್ ಪ್ರತಿಯೊಂದಿಗೆ ಸಾರಸ್ವತ ಸೌಹಾರ್ದ ಸಹಕಾರಿ ಸಂಘಕ್ಕೆ ಬಂದು ನೋಂದಣಿ ಮಾಡಬಹುದು. ಈ ಆರೋಗ್ಯ ಸುರಕ್ಷಾ ಯೋಜನೆಯು ಮಣಿಪಾಲದ ಸಮೂಹ ಸಂಸ್ಥೆಯ ಆಸ್ಪತ್ರೆಗಳಾದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇಲ್ಲಿ…
ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ವೈದ್ಯಕೀಯ ಶಿಬಿರ, ರಾಜ್ಯಮಟ್ಟದ ಸಾಧಕರಿಗೆ ಸನ್ಮಾನ
ಮಂಗಳೂರು: ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ಭಾನುವಾರ ತೋಟಬೆಂಗ್ರೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉಚಿತ ವೈದ್ಯಕೀಯ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರದಲ್ಲಿ ಸಾಧಾರಣ 200ಕ್ಕೂ ಅಧಿಕ ನಿವಾಸಿಗಳು ಪ್ರಯೋಜನ ಪಡೆದುಕೊಂಡರು. ಅಗತ್ಯ ಇದ್ದವರಿಗೆ ಉಚಿತ ಕನ್ನಡಕ ವಿತರಣೆ ಮತ್ತು ಔಷಧ ವಿತರಣೆ ಮಾಡಲಾಯಿತು. ಕೆ.ಎಸ್ ಹೆಗಡೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಬಿ ಶೆಟ್ಟಿ ದಂತ ಆಸ್ಪತ್ರೆಗಳ ನುರಿತ ವೈದ್ಯರು ವೈದ್ಯಕೀಯ ತಪಾಸಣೆ ನಡೆಸಿಕೊಟ್ಟರು. ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷರಾದ ಜಿ.ಆರ್ ಪ್ರಸಾದ್ ರವರು ಕಾರ್ಯಕ್ರಮದ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಪ್ರಶಾಂತ ಪೈ ಮತ್ತು ಇತರ ನಿರ್ದೇಶಕರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷ ಸಂಜಯ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಸಂಸ್ಥೆಯ ಇಬ್ಬರು ಸದಸ್ಯರನ್ನು ಗೌರವಿಸಲಾಯಿತು. ಉಮೇಶ ಪಂಬದ (ಜಾನಪದ…
ಮಂಗಳೂರು: ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ಭಾನುವಾರ ತೋಟಬೆಂಗ್ರೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. https://chat.whatsapp.com/FCEnlTkAKCC0MGPhXtX4i4 ಉಚಿತ ವೈದ್ಯಕೀಯ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರದಲ್ಲಿ ಸಾಧಾರಣ 200ಕ್ಕೂ ಅಧಿಕ ನಿವಾಸಿಗಳು ಪ್ರಯೋಜನ ಪಡೆದುಕೊಂಡರು. ಅಗತ್ಯ ಇದ್ದವರಿಗೆ ಉಚಿತ ಕನ್ನಡಕ ವಿತರಣೆ ಮತ್ತು ಔಷಧ ವಿತರಣೆ ಮಾಡಲಾಯಿತು. ಕೆ.ಎಸ್ ಹೆಗಡೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಬಿ ಶೆಟ್ಟಿ ದಂತ ಆಸ್ಪತ್ರೆಗಳ ನುರಿತ ವೈದ್ಯರು ವೈದ್ಯಕೀಯ ತಪಾಸಣೆ ನಡೆಸಿಕೊಟ್ಟರು. ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷರಾದ ಜಿ.ಆರ್ ಪ್ರಸಾದ್ ರವರು ಕಾರ್ಯಕ್ರಮದ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಪ್ರಶಾಂತ ಪೈ ಮತ್ತು ಇತರ ನಿರ್ದೇಶಕರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷ ಸಂಜಯ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಸಂಸ್ಥೆಯ ಇಬ್ಬರು ಸದಸ್ಯರನ್ನು ಗೌರವಿಸಲಾಯಿತು. ಉಮೇಶ ಪಂಬದ…
ಪುತ್ತೂರು: ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಜನವರಿ 25ರಂದು ನಿಗದಿಯಾಗಿದೆ. https://chat.whatsapp.com/FCEnlTkAKCC0MGPhXtX4i4 ಒಟ್ಟು 12 ಸ್ಥಾನಗಳ ಪೈಕಿ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಒಂದು ಸ್ಥಾನಕ್ಕೆ ಈಗಾಗಲೇ ಅವಿರೋಧ ಆಯ್ಕೆ ನಡೆದಿದೆ. ಪುತ್ತೂರಿನ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಚುನಾವಣೆ ನಡೆಯಲಿದ್ದು ತ್ರಿವೇಣಿ ರಾವ್ ಚುನಾವಣಾಧಿಕಾರಿಯಾಗಿದ್ದಾರೆ. 2001ರಲ್ಲಿ ಸ್ಥಾಪನೆಯಾಗಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಸದ್ಯ ಬೆಳ್ಳಿಹಬ್ಬ ಸಂಭ್ರಮದಲ್ಲಿದೆ. ಇದುವರೆಗೆ ಎಸ್.ಆರ್ ಸತೀಶ್ಚಂದ್ರ ಅವರು ಸಂಸ್ಥೆಯ ಅಧ್ಯಕ್ಷರಾಗಿದ್ದು ಇದೇ ಮೊದಲ ಬಾರಿ ಇಲ್ಲಿ ಚುನಾವಣೆ ನಿಗದಿಯಾಗಿದೆ. ಒಟ್ಟು 19 ಮಂದಿ ಕಣದಲ್ಲಿದ್ದು, ಈ ಪೈಕಿ ಉಮೇಶ್ ಪ್ರಭು ಕುಂಟಿಹಿತ್ಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಎಸ್.ಆರ್ ಸತೀಶ್ಚಂದ್ರ, ಹರೀಶ್ ಬೋರ್ಕರ್, ರಾಜಗೋಪಾಲ ಬಾಳೆಗುಳಿ, ರವೀಶ ಪೊಸವಳಿಕೆ, ಬಿ.ವಸಂತಶಂಕರ್, ವೇದವ್ಯಾಸ ಕಟ್ಟೆ, ಸಂಜೀವ ನಾಯಕ್ ಸುಳ್ಯ, ಚಂದ್ರಶೇಖರ್ ಮುಂಡುಗಾರು, ದಯಾನಂದ ನಾಯಕ್ ಕುಂಟಿಕಾನ, ದೇವಕಿ ಎಚ್.ನಾಯಕ್, ರಂಜಿತಾ ಆರ್ ಪ್ರಭು ಗೋಳಿತ್ತಡಿ,…
ರಾಮನಗರದಲ್ಲಿ ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆಯಲ್ಲಿ ಸಾಣೂರು ನರಸಿಂಹ ಕಾಮತ್ ಅಭಿಪ್ರಾಯ ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯ ರಾಮನಗರ ತಾಲೂಕಿನ ಸಹಕಾರ ಭಾರತಿಯ ನೂತನ ತಾಲೂಕು ಪದಾಧಿಕಾರಿಗಳ ಘೋಷಣೆ ಮತ್ತು ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಸೋಮವಾರ ಜರುಗಿತು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮವನ್ನು ಉದ್ಘಾಟಿಸಿದ ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಮಾತನಾಡಿ, ರಾಜಕೀಯರಹಿತ, ಸರಕಾರೇತರ ಸ್ವಯಂಸೇವಾ ಸಂಸ್ಥೆಯಾಗಿರುವ ಸಹಕಾರ ಭಾರತಿ ಕಳೆದ 46 ವರ್ಷಗಳಲ್ಲಿ ದೇಶದ 28 ರಾಜ್ಯಗಳ 650 ಜಿಲ್ಲೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಕಾರವಿಲ್ಲದೆ ಸಹಕಾರವಿಲ್ಲ ಮತ್ತು ಸಹಕಾರವಿಲ್ಲದೆ ಉದ್ಧಾರವಿಲ್ಲ ಎನ್ನುವ ಘೋಷವಾಕ್ಯದೊಂದಿಗೆ ಸಹಕಾರ ಕ್ಷೇತ್ರದ ಬಲವರ್ಧನೆಗಾಗಿ ಸಹಕಾರ ಭಾರತಿಯು ನಿರಂತರವಾಗಿ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಂಘಟನಾತ್ಮಕವಾಗಿ, ರಚನಾತ್ಮಕವಾಗಿ, ಆಂದೋಲನಾತ್ಮಕವಾಗಿ ಮತ್ತು ಪ್ರಾತಿನಿಧ್ಯಾತ್ಮಕವಾಗಿ ನಾಲ್ಕು ಆಯಾಮಗಳಲ್ಲಿ ಸೇವೆ, ಸಂಪರ್ಕ ಮತ್ತು ಸಮರ್ಪಣಾ ಭಾವದಿಂದ ಕಾರ್ಯತತ್ಪರವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಮನಗರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ವೈ.ಎಚ್ ಮಂಜು ಮಾತನಾಡಿ, ಕೇಂದ್ರ ಸರಕಾರ ಜಾರಿಗೆ…
ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ರಿಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆಇಲ್ಲಿನ ವೈದ್ಯರ ತಂಡದಿಂದ ಮಡಂತ್ಯಾರು ಮುಖ್ಯರಸ್ತೆಯ ಶ್ರೀ ದುರ್ಗಾ ಕಾಂಪ್ಲೆಕ್ಸ್ ಕಲಾ (ಆಶೀರ್ವಾದ್) ಸಭಾಂಗಣದಲ್ಲಿ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಭಾನುವಾರ ಜರುಗಿತು. https://chat.whatsapp.com/FCEnlTkAKCC0MGPhXtX4i4 ರೋಟರಿ ಕ್ಲಬ್ ಮಡಂತ್ಯಾರು ಇದರ ಅಧ್ಯಕ್ಷರಾದ ಮ್ಯಾಕ್ಸಿಮ್ ಆಲ್ಬುಕರ್ಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಣ್ಣಿನ ಹಾಗೂ ದಂತದ ಪರೀಕ್ಷೆ ಕಾಲಕಾಲಕ್ಕೆ ಮಾಡುವುದು ಅತ್ಯಗತ್ಯ. ಇನ್ನು ಮುಂದೆಯೂ ನಿರಂತರವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇಂತಹ ಕಾರ್ಯಕ್ರಮಗಳನ್ನು ನಡೆಸಲಿ, ಸಾರ್ವಜನಿಕರಿಗೂ ಇದರ ಉಪಯೋಗವಾಗಲಿ ಎಂದು ಹೇಳಿದರು. ಜೆಸಿಐ ಮಡಂತ್ಯಾರು ಇದರ ಅಧ್ಯಕ್ಷರಾದ ಸಾಯಿಸುಮ ಎಂ. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ…
ಮೈಸೂರು: ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ವತಿಯಿಂದ ಮೈಸೂರು ಕುವೆಂಪುನಗರದಲ್ಲಿರುವ ಪ್ರಮತಿ ಹಿಲ್ ವ್ಯೂ ಅಕಾಡೆಮಿ ಪಿ. ಯು ಕಾಲೇಜಿನಲ್ಲಿ ಭಾನುವಾರ ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಸದಸ್ಯರಿಗೆ ಹಾಗೂ ಸಿಬ್ಬಂದಿಗಳಿಗಾಗಿ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ಮಾಜಿ ಅಧ್ಯಕ್ಷರೂ, ಶಿಕ್ಷಣ ಸಲಹಾ ಸಮಿತಿಯ ಸದಸ್ಯರೂ ಆಗಿರುವ ಹೆಚ್.ವಿ. ರಾಜೀವ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತ್ತಿಪರ ನಿರ್ದೇಶಕರಾದ ಬಿ.ಮಹದೇವಸ್ವಾಮಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಎಸ್. ಆರ್. ನಾರಾಯಣ ರಾವ್ ವಹಿಸಿದ್ದರು. ಸಂಯುಕ್ತ ಸಹಕಾರಿಯ ಜಿಲ್ಲಾ ಸಂಯೋಜಕ ಆರ್. ಎಸ್. ಸುರೇಶ್ ಹಾಗೂ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಸಿ. ಭಗೀರಥ ಉಪಸ್ಥಿತರಿದ್ದರು. ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಸುಮಾರು ಹತ್ತು ವಿವಿಧ ಆಟೋಟ…
