Author: admin

ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಸಲಹೆ ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿದಿನ ೩ ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಆದರೆ ಮಾರುಕಟ್ಟೆಯಲ್ಲಿ ೫ ಲಕ್ಷ ಲೀಟರ್ ಹಾಲು ಬೇಡಿಕೆ ಇದೆ. ಆದ್ದರಿಂದ ಹೆಚ್ಚುವರಿ ಹಾಲನ್ನು ಬೇರೆ ಜಿಲ್ಲೆಯಿಂದ ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ದ.ಕ. ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಇನ್ನೂ ಹೆಚ್ಚಿನ ಶ್ರಮ ವಹಿಸಿ, ಹೈನುಗಾರರನ್ನು ಉತ್ತೇಜಿಸಿ ಹೆಚ್ಚು ಹಾಲು ಸಂಗ್ರಹವಾಗುವಂತೆ ಮಾಡಿಕೊಳ್ಳಬೇಕು ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಅಧ್ಯಕ್ಷ ಡಾ.ಎಂ. ಎನ್.ರಾಜೇಂದ್ರ ಕುಮಾರ್ ಸಲಹೆ ನೀಡಿದರು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ. ಕ. ಜಿಲ್ಲಾ ಸಹಕಾರ ಯೂನಿಯನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಇದರ ಅಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದ.ಕ. ಸಹಕಾರಿ…

Read More

ಗುರುಪುರ: ಗುರುಪುರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ವಿನೋದಾ ಡಿ.ಅಂಚನ್‌ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಇತ್ತೀಚೆಗೆ ಕಾವ್ಯಾ ಪಿ.ಕೆ ಅವರ ಸಮ್ಮುಖದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ವಿನೋದಾ ಡಿ.ಅಂಚನ್‌ ಅವರನ್ನು ಸಂಘದ ಅಧ್ಯಕ್ಷರನ್ನಾಗಿ ಮೂರನೇ ಬಾರಿ ಪುನರಾಯ್ಕೆ ಮಾಡಲಾಯಿತು. ಉಪಾಧ್ಯಕ್ಷೆಯಾಗಿ ಸುನಂದಾ ಕೆ.ರೈ ಅವಿರೋಧವಾಗಿ ಆಯ್ಕೆಯಾದರು. ಮುಂದಿನ ಐದು ವರ್ಷ(2025-2030) ತನಕ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ. ನಿರ್ದೇಶಕರಾಗಿ ರತಿ ಶೆಟ್ಟಿ, ಮೋಹಿನಿ ಗೌಡ, ವೀಣಾ ಶೆಟ್ಟಿ,ಕಮಲಾ ಗೌಡ, ಜಯಲಕ್ಷ್ಮಿ, ಪ್ರೇಮಾ ಎಂ.ಶೆಟ್ಟಿ, ಜಯಂತಿ, ಪ್ರಮಿಳಾ ಶೆಟ್ಟಿ, ಪುಷ್ಪಾ, ವಿದ್ಯಾಲತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ವಸಂತಿ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಜನ್ಮದಿನ ಪ್ರಯುಕ್ತ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ  ಮಂಗಳೂರು: ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆಸಲು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿಗಳು ತೀರ್ಮಾನಿಸಿದ್ದು ಆ ಪ್ರಯುಕ್ತ ಮಂಗಳೂರಿನಲ್ಲಿ ಫೆ.24ರಂದು ಅಭಿವಂದನಾ ಸಮಾರಂಭ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಗುರುತಿಸಿಕೊಂಡಿದ್ದು, ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಾಮಾಣಿಕ ಸಾರ್ಥಕತೆ ಕಂಡ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ’ ರಾಜೇಂದ್ರ ಕುಮಾರ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ಅಂಗವಾಗಿ ಫೆ.24ರಂದು ಬೆಳಗ್ಗೆ 10.30ಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮದ…

Read More

ಸಹಕಾರ ಕ್ಷೇತ್ರದ ಚಟುವಟಿಕೆಗಳಿಗೆ ಬಲ ತುಂಬುವುದು, ಸರ್ಕಾರ ಮತ್ತು ಸಹಕಾರಿ ಸಂಸ್ಥೆಗಳ ಮಧ್ಯೆ ಕೊಂಡಿಯಾಗಿ ಕೆಲಸ ಮಾಡುವ ಇರಾದೆ ಶಿವಮೊಗ್ಗ: ರಾಜ್ಯದಲ್ಲಿ ಸಹಕಾರಿ ಕ್ಷೇತ್ರದ ಚಟುವಟಿಕೆಗಳನ್ನು ಬಲಪಡಿಸಲು ಮತ್ತು ಸರ್ಕಾರ ಮತ್ತು ಸಹಕಾರಿ ಸಂಸ್ಥೆಗಳ ಮಧ್ಯೆ ಕೊಂಡಿಯಾಗಿ ಕೆಲಸ ಮಾಡಲು “ಸಹಕಾರಿಗಳ ವೇಗವರ್ಧಕ ಸಮಿತಿ” ಎಂಬ ನೂತನ ಸಂಘಟನೆಯೊಂದನ್ನು ಸ್ಥಾಪಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಭದ್ರಾವತಿ ತಾಲೂಕಿನ ಬರಂದೂರು ಬಳಿಯ ಪಂಚಮವೇದ ಸಾವಯವ ಕೃಷಿ ಕೇಂದ್ರದಲ್ಲಿ ಭಾನುವಾರ ಈ ಸಮಿತಿಯ ಮೊದಲ ಸಭೆ ನಡೆದಿದ್ದು ಇದೇ ವೇಳೆ ಸಹಕಾರಿಗಳ ವೇಗವರ್ಧಕ ಸಮಿತಿ ರಚಿಸಲಾಗಿದೆ. ರಾಜ್ಯದ ಹಲವಾರು ಹಿರಿಯ ಸಹಕಾರಿ ಮುಖಂಡರು, ಸಹಕಾರಿ ವಲಯದಲ್ಲಿ ಕೆಲಸ ಮಾಡಿದ್ದ ಅಧಿಕಾರಿಗಳು ಮತ್ತು ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಹಿರಿಯರು ಸಭೆಯಲ್ಲಿ ಭಾಗವಹಿಸಿದ್ದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಮನೋಹರ ಮಸ್ಕಿ, ಸಭೆಯಲ್ಲಿ ಮಾತನಾಡಿ, ಈ ಸಮಿತಿಯು ಸಹಕಾರಿ ವಲಯದಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಮತ್ತು ಪ್ರಸ್ತುತ ಘಟನೆಗಳಿಗೆ ಪ್ರತಿಕ್ರಿಯಿಸಬೇಕು. ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಸರ್ಕಾರದಿಂದ ಸಿಗಬೇಕಾದ…

Read More

ಕಾರ್ಕಳ: ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಾಣೂರು ನರಸಿಂಹ ಕಾಮತ್, ಉಪಾಧ್ಯಕ್ಷರಾಗಿ ರಾಯಲ್‌ ನೊರೋನ್ಹಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಚುನಾವಣಾ ಅಧಿಕಾರಿ ಶಹನಾಜ್ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಶೆಟ್ಟಿ, ಹಾಲು ಪರೀಕ್ಷಕಿ ಪ್ರಮೀಳಾ ಸಹಕರಿಸಿದರು. ಆಡಳಿತ ಮಂಡಳಿಗೆ ನೂತನವಾಗಿ ಹೊಸ ನಿರ್ದೇಶಕರಾಗಿ ಆಯ್ಕೆಯಾದ ಪೂರ್ಣಿಮಾ ಕಿಣಿ ಮತ್ತು ದಿಲೀಪ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಹತ್ತು ವರ್ಷಗಳಿಂದ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಯಶೋದಾ ಸುವರ್ಣ ಅವರನ್ನು ಸನ್ಮಾನಿಸಲಾಯಿತು. ನೂತನ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್ ಮತ್ತು ನೂತನ ಉಪಾಧ್ಯಕ್ಷ ರಾಯಲ್ ನೊರೋನ್ಹಾ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಸಂಘದ ಸ್ಥಾಪಕ ಅಧ್ಯಕ್ಷ ಕೊರಗ ಶೆಟ್ಟಿ, ಸ್ಥಾಪಕ ಕಾರ್ಯದರ್ಶಿ ಜ್ಞಾನದೇವ್, ಹಿರಿಯ ನಿರ್ದೇಶಕರಾದ ಸೋಮಶೇಖರ್, ಸೈಮನ್ ಡಿಸೋಜ, ಜಯಾನಂದ ಶುಭಾಶಂಸನೆಗೈದರು. ನಿರ್ದೇಶಕ ಪ್ರವೀಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಜಯ ಶೆಟ್ಟಿಗಾರ್ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ:…

Read More

ಮಂಗಳೂರು: ಪ್ರತಿಷ್ಠಿತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಕೆ.ಜೈರಾಜ್‌ ಬಿ. ರೈ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಜಯಪಾಲ ಶೆಟ್ಟಿ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಮುಂದಿನ ಐದು ವರ್ಷ (2025ರಿಂದ 2030) ತನಕ ಇವರ ನೇತೃತ್ವದ ಆಡಳಿತ ಮಂಡಳಿ ಕಾರ್ಯ ನಿರ್ವಹಿಸಲಿದ್ದು, ಈ ಇಬ್ಬರೂ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನವೀನ್ ಕುಮಾರ್ ಎಂ.ಎಸ್‌ ಪ್ರಕಟಿಸಿದ್ದಾರೆ. ಸಂಘದ ಅಧ್ಯಕ್ಷರಾಗಿ ಸತತ ಮೂರನೇ ಅವಧಿಗೆ ಅವಿರೋಧವಾಗಿ ಪುನರಾಯ್ಕೆಯಾದ ಕೆ.ಜೈರಾಜ್ ಬಿ.ರೈಯವರು ಸಹಕಾರ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪಾರ ಅನುಭವವುಳ್ಳವರಾಗಿದ್ದು, ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರಾಗಿ ಎ.ರತ್ನಕಾಂತಿ ಶೆಟ್ಟಿ, ಕೆ.ಸೀತಾರಾಮ ರೈ ಸವಣೂರು, ಡಾ|ಕೆ.ಸುಭಾಶ್ಚಂದ್ರ ಶೆಟ್ಟಿ, ಪಿ.ಶಿವರಾಮ ಅಡ್ಯಂತಾಯ, ಸಿಎ ಎಚ್.ಆರ್.ಶೆಟ್ಟಿ, ವಿಠಲ ಪಿ.ಶೆಟ್ಟಿ, ಎಂ.ರಾಮಯ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಪಿ.ಬಿ.ದಿವಾಕರ ರೈ, ರವೀಂದ್ರನಾಥ ಜಿ.ಹೆಗ್ಡೆ, ಕುಂಬ್ರ ದಯಾಕರ ಆಳ್ವ, ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಎ.ಚಿಕ್ಕಪ್ಪ ನಾಯ್ಕ್‌ ಮತ್ತು ಡಾ|ಬಿ.ಸಂಜೀವ ರೈ ಆಯ್ಕೆಯಾಗಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ…

Read More

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿಕೆ ಉಡುಪಿ: ಮೈಕ್ರೋ ಫೈನಾನ್ಸ್‌ಗಳಿಗೆ ಸಂಬಂಧಿಸಿ ರಾಜ್ಯ ಸರಕಾರ ಹೊರಡಿಸಿರುವ ಸುಗ್ರೀವಾಜ್ಞೆಯು ಸಹಕಾರ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಸಹಕಾರ ಸಂಸ್ಥೆಗಳು ಸಾಲಗಾರರ ಮನೆಗೆ ಹೋಗಿ ಕಿರುಕುಳ ಕೊಡಬಾರದು. ಸಾಲ ವಸೂಲು ಮಾಡಲು ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿದ್ದು, ಅದರ ಪ್ರಕಾರವೇ ಸಾಲ ವಸೂಲು ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ಸೈಬರ್ ಕ್ರೈಮ್, ಕಳವು ಹಾಗೂ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದ ಸಾಕಷ್ಟು ಪ್ರಕರಣಗಳು ಸಹಕಾರಿ…

Read More

ಸರ್ಕಾರಿ/ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಉಪಯೋಗ ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಕನ್ನಡ ಮಾಧ್ಯಮದ ಆಯ್ದ 50 ಸರ್ಕಾರಿ ಅಥವಾ ಅನುದಾನಿತ ಪ್ರೌಢಶಾಲಾ ಗ್ರಂಥಾಲಯಗಳಿಗೆ ತಲಾ 100ರಂತೆ ಒಟ್ಟು 5000 ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತಿದೆ. https://chat.whatsapp.com/EbVKVnWB6rlHT1mWtsgbch ಗ್ರಂಥಾಲಯಗಳಿಗೆ ನೀಡಲಾಗುವ ಪುಸ್ತಕಗಳು ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದ್ದು ಸಾಮಾನ್ಯ ಜ್ಞಾನ, ಆರೋಗ್ಯ, ಸ್ವದೇಶಿ ಚಿಂತನೆ, ಸಾಧಕರ ಜೀವನ ಚರಿತ್ರೆ, ನೀತಿ ಕಥೆಗಳಿಗೆ ಸಂಬಂಧಿಸಿದ್ದಾಗಿವೆ. ಶಾಲಾ ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ತಮ್ಮ ಶಾಲೆಯ ಗ್ರಂಥಾಲಯದಿಂದ ಈ ಪುಸ್ತಕಗಳನ್ನು ಪಡೆದು ಓದುವಂತಾಗಿ ಅವರಲ್ಲಿ ಓದುವ ಹವ್ಯಾಸ ಬೆಳೆಯಲಿ ಎಂಬ ಸದುದ್ದೇಶದಿಂದ ಶಾಲೆಗಳ ಗ್ರಂಥಾಲಯಗಳಿಗೆ ಶ್ರೀಶಾ ಸೊಸೈಟಿ ಉಚಿತವಾಗಿ ಪುಸ್ತಕಗಳನ್ನು ನೀಡುತ್ತಿವೆ. ಆಸಕ್ತ ಶಾಲೆಗಳ ಮುಖ್ಯಸ್ಥರು ಶ್ರೀಶಾ ಸೊಸೈಟಿಯ ಯಾವುದೇ ಶಾಖೆಯನ್ನು ಬೆಳಗ್ಗೆ ಗಂಟೆ 10 ರಿಂದ ಸಂಜೆ 5 ರೊಳಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಮಾಹಿತಿಗೆ: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ರಘು ಬಿಲ್ಡಿಂಗ್, ಉರ್ವಸ್ಟೋರ್‌, ಮಂಗಳೂರು. ದೂರವಾಣಿ: 9845032598/9448254526/0824 2453598. ಮೊದಲು ಸಂಪರ್ಕಿಸಿದವರಿಗೆ…

Read More

ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘ ಜಪ್ಪು ಹಾಗೂ ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್‌ ಟ್ರಸ್ಟ್‌, ಉಡುಪಿ ಅಲೋಕ ವಿಶನ್‌ ಪ್ರೋಗ್ರಾಂ -ಕಾರ್ಲ್‌ಜೈಸ್‌ ಇಂಡಿಯಾ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ), ಡಾ.ಪಿ.ದಯಾನಂದ ಪೈ ಮತ್ತು ಸತೀಶ್‌ ಪೈ ಚಾರಿಟೇಬಲ್‌ ಟ್ರಸ್ಟ್‌ ಸೆಂಚುರಿ ಗ್ರೂಪ್ಸ್‌ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ಪರೀಕ್ಷೆ ಹಾಗೂ ಚಿಕಿತ್ಸಾ ಶಿಬಿರ ಮಾರ್ಚ್‌ 9ರಂದು ಭಾನುವಾರ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 9ರಿಂದ ಮಧ್ಯಾಹ್ನ 12ರ ತನಕ ಮಂಗಳೂರು ಸ್ಟೋರ್‌ ಸಭಾಂಗಣ(ಸಹಕಾರಿ ಕಚೇರಿ ಬಳಿ)ದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ಮಾಡಲಾಗುವುದು. ಅಗತ್ಯವುಳ್ಳವರಿಗೆ ಕನ್ನಡಕ/ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಜೆಪ್ಪು ಆರೋಗ್ಯ ಕೇಂದ್ರದಲ್ಲಿ ಬಿ.ಪಿ., ಮಧುಮೇಹ ತಪಾಸಣೆ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೆ.ಭಾಸ್ಕರ ರಾವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ…

Read More

ಸಣ್ಣ ಕಾರ್ಮಿಕ ಸಹಕಾರಿ ಸಂಸ್ಥೆಯಿಂದ ಅಭಿವೃದ್ಧಿ ಹೊಂದಿ ಉದ್ಯಮವಾಗಿ ರೂಪಾಂತರಗೊಂಡ ಸೊಸೈಟಿ ತಿರುವನಂತಪುರ: ಉರಾಲುಂಗಲ್ ಕಾರ್ಮಿಕ ಒಪ್ಪಂದ ಸಹಕಾರ ಸಂಘ(ಯುಎಲ್‌ಸಿಸಿಎಸ್‌) ಒಂದು ಸಣ್ಣ ಕಾರ್ಮಿಕ ಸಹಕಾರಿ ಸಂಸ್ಥೆಯಿಂದ ಆರಂಭವಾಗಿ ದೊಡ್ಡ ಉದ್ಯಮ ಸಂಸ್ಥೆಯಾಗಿ ಬೆಳೆದು 100 ವರ್ಷಗಳ ಅದ್ಭುತ ಪ್ರಯಾಣ ಮುಂದುವರಿಸಿದ್ದು ದೇಶದಲ್ಲಿ ಪ್ರಸಿದ್ಧಿ ಪಡೆದುಕೊಂಡ ಕೆಲವೇ ಕೆಲವು ಸಹಕಾರಿ ಸಂಸ್ಥೆಗಳಲ್ಲಿ ಒಂದಾಗಿ ಬೆಳೆದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶ್ಲಾಘಿಸಿದ್ದಾರೆ. ಭಾರತದ ಅತ್ಯಂತ ಯಶಸ್ವಿ ಕಾರ್ಮಿಕ ಸಹಕಾರಿ ಸಂಸ್ಥೆಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟ ಯುಎಲ್‌ಸಿಸಿಎಸ್‌ ಕೇರಳ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. https://chat.whatsapp.com/EbVKVnWB6rlHT1mWtsgbch ವಿಡಿಯೋ ಸಂದೇಶವೊಂದನ್ನು ನೀಡಿರುವ ನಿತಿನ್‌ ಗಡ್ಕರಿ, ಯುಎಲ್‌ಸಿಸಿಎಸ್‌ನ ಯಶೋಗಾಥೆಯನ್ನು ಅಭಿನಂದಿಸಿ, 100 ವರ್ಷ ಪೂರೈಸಿ ಮುನ್ನಡೆದಿರುವುದಕ್ಕೆ ಶುಭಾಶಯ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಯುಎಲ್‌ಸಿಸಿಎಸ್‌ ಸಹಕಾರಿ ವಲಯದೊಂದಿಗೆ ಸಂಬಂಧ ಹೊಂದಿದ್ದು, ಇದರ ಯಶಸ್ಸು ದೇಶದ ಸಹಕಾರಿ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಬೆಳವಣಿಗೆಗಳಲ್ಲಿ ಒಂದಾಗಿದೆ. ಇದರ ಬೆಳವಣಿಗೆಗೆ ಕೇಂದ್ರ ರಸ್ತೆ…

Read More