Author: admin

ಮಂಗಳೂರು: ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್‌ ಆಯ್ಕೆಯಾಗಿದ್ದಾರೆ. ದಾವಣಗೆರೆಯ ಶ್ರೀ ಶಾಮನೂರು ಶಿವಶಂಕರಪ್ಪ ಸಭಾಭವನದಲ್ಲಿ ನವೆಂಬರ್ 22ರದು ಜರುಗಿದ ಸಹಕಾರ ಭಾರತಿಯ 7ನೇ ರಾಜ್ಯ ಅಧಿವೇಶನದಲ್ಲಿ ಸಾಣೂರು ನರಸಿಂಹ ಕಾಮತ್ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆರಿಸಲಾಯಿತು. ಚುನಾವಣಾ ಅಧಿಕಾರಿಯಾಗಿದ್ದ ಹಿರಿಯ ಸಹಕಾರಿ ಬಾಗಲಕೋಟೆಯ ಜಿ.ಎನ್ ಪಾಟೀಲ್ ಈ ಆಯ್ಕೆಯನ್ನು ಘೋಷಿಸಿದರು. https://chat.whatsapp.com/Ge11n7QCiMj5QyPvCc0H19 ನಿರ್ಗಮನ ಪ್ರಧಾನ ಕಾರ್ಯದರ್ಶಿ ಉತ್ತರ ಕನ್ನಡ ಜಿಲ್ಲಾ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನ್‌ದಾಸ್ ನಾಯಕ್‌ ಸಹಕಾರಿ ಧ್ವಜ ಹಸ್ತಾಂತರಿಸುವುದರ ಮೂಲಕ ಜವಾಬ್ದಾರಿಯ ವರ್ಗಾವಣೆ ಮಾಡಿದರು. ಈ ಸಂದರ್ಭ ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ ಪಾಚ್ಪುರೆ, ರಾಷ್ಟ್ರೀಯ ಸಂರಕ್ಷಕ ಕೊಪ್ಪಳದ ರಮೇಶ್ ವೈದ್ಯ, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಮತ್ತೂರು, ಉತ್ತರ ಪ್ರಾಂತ ಸಂಘದ ಹಿರಿಯರಾದ ಅರವಿಂದ ದೇಶಪಾಂಡೆ ಹುಬ್ಬಳ್ಳಿ ನಿರ್ಗಮನ ಅಧ್ಯಕ್ಷ ಬಾಗಲಕೋಟೆಯ ರಾಜಶೇಖರ ಶೀಲವಂತ, ನೂತನ…

Read More

ಬೆಳ್ತಂಗಡಿ: ಎಂ.ಸಿ.ಸಿ. ಬ್ಯಾಂಕಿನ 18 ಶಾಖೆಯು ಬೆಳ್ತಂಗಡಿ ಚರ್ಚ್ ರಸ್ತೆಯ ಹತ್ತಿರ, ವೈಭವ್ ಆರ್ಕೇಡ್‌ನ ನೆಲಮಹಡಿಯಲ್ಲಿ ಭಾನುವಾರ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್‌ ಧರ್ಮಗುರು ಫಾ| ವಾಲ್ಟರ್ ಡಿಮೆಲ್ಲೊ ಆಶೀರ್ವಚಿಸಿದರು. https://chat.whatsapp.com/Ge11n7QCiMj5QyPvCc0H19 ಭದ್ರತಾ ಕೊಠಡಿಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರೊಕ್ಯೂರೇಟರ್ ಅಬ್ರಹಾಂ ಪಟ್ಟೆರಿಲ್ ಉದ್ಘಾಟಿಸಿದರು. ಇ-ಸ್ಟ್ಯಾಂಪಿಂಗ್ ವ್ಯವಸ್ಥೆಯನ್ನು ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹೆನ್ರಿ ಲೋಬೊ ಉದ್ಘಾಟಿಸಿದರು. ಸಿರಿಯನ್ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಎ.ಜೆ. ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರ ರತ್ನ ಅನಿಲ್ ಲೋಬೊ, ಬ್ಯಾಂಕಿನ ಸೇವೆ ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಬೆಳ್ತಂಗಡಿ ಪರಿಸರದಲ್ಲಿ ಬ್ಯಾಂಕಿನ ಸಿಬ್ಬಂದಿಗಳು ಭೇಟಿ ಮಾಡಿದ ಸಂದರ್ಭದಲ್ಲಿ ಬೆಳ್ತಂಗಡಿ ಪರಿಸರದ ಜನರು ನೀಡಿದ ಸಹಕಾರ ಮತ್ತು ಬೆಂಬಲಕ್ಕಾಗಿ ವಂದನೆ ಸಲ್ಲಿಸಿದರು. ಶಾಖೆ ಪ್ರಾರಂಭವಾದ ಒಂದು ವರ್ಷದೊಳಗೆ ಲಾಭ ಗಳಿಸಲು ಮತ್ತು ಸಮಾಜಕ್ಕೆ ಸೇವೆ…

Read More

ಮಂಗಳೂರು: ಸಹಕಾರ ಭಾರತಿಯ ರಾಜ್ಯ ಸಹಕಾರಿ ಸಮಾವೇಶ ನವೆಂಬರ್ 22ನೇ ಶುಕ್ರವಾರ ದಾವಣಗೆರೆಯ ಮಾಗನೂರು ಬಸಪ್ಪ ರಸ್ತೆ (ಹದಡಿ ರಸ್ತೆ) ರಸ್ತೆಯಲ್ಲಿರುವ ಶ್ರೀ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11ರಿಂದ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಹಾಸನ ಜಿಲ್ಲೆಯ ಬೇಲೂರು ಶ್ರೀ ಪುಷ್ಪಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಸಹಕಾರಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸಹಕಾರ ಭಾರತಿಯ ರಾಷ್ಟ್ರೀಯ ಅಧ್ಯಕ್ಷ ದಿನನಾಥ ಠಾಕೂರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ, ಡಾಕ್ಟರ್ ಉದಯ್ ವಾಸುದೇವ ಜೋಶಿ, ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಪಾಲ್ಗೊಳ್ಳಲಿದ್ದಾರೆ. ಸಹಕಾರ ಭಾರತಿ ರಾಜ್ಯಾಧ್ಯಕ್ಷ ರಾಜಶೇಖರ್ ಶೀಲವಂತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ, ಪಂಚ ಪರಿವರ್ತನೆ, ಸಹಕಾರಿ ಸಂಘಗಳಲ್ಲಿ ಆಡಳಿತ ಮಂಡಳಿ ಜವಾಬ್ದಾರಿ ಸೇರಿದಂತೆ ಅನೇಕ ವಿಚಾರಗೋಷ್ಠಿಗಳು…

Read More

ಸಹಕಾರ ಸಪ್ತಾಹ ಸಮಾರೋಪದಲ್ಲಿ ಸಚಿವ ರಾಜಣ್ಣ ಪ್ರತಿಪಾದನೆ ಬೆಳಗಾವಿ: ‘ಈ ಹಿಂದೆ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸದ ಕಾರಣ, ರೈತರು ತಾವು ಬೆಳೆದ ಬೆಳೆಗೆ ಬೆಂಕಿ ಹಚ್ಚಬೇಕಾದ ಪರಿಸ್ಥಿತಿ ಇತ್ತು. ಆದರೆ ಅಪೆಕ್ಸ್ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳು ಸಕ್ಕರೆ ಕಾರ್ಖಾನೆಗಳ ಸ್ಥಾಪನೆಗೆ ಸಾಲ ಸೌಲಭ್ಯ ಒದಗಿಸಿದ ನಂತರ, ಅನೇಕ ಸಹಕಾರ ಮತ್ತು ಖಾಸಗಿ ಕಾರ್ಖಾನೆ ಆರಂಭವಾದವು. ಹಾಗಾಗಿ ಇಂದು ಕಬ್ಬು ಬೆಳೆಗಾರರು ನೆಮ್ಮದಿಯಿಂದ ಇದ್ದಾರೆ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಬೆಳಗಾವಿಯಲ್ಲಿ ಬುಧವಾರ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘ಸಹಕಾರ ಸಂಘಗಳಲ್ಲಿ ಕೆಲವರು ಮಾಡಿದ ತಪ್ಪುಗಳು ಇಡೀ ಕ್ಷೇತ್ರಕ್ಕೆ ಕಳಂಕ ತರುತ್ತಿರುವುದು ಸರಿಯಲ್ಲ, ವಂಚಕರು ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರು ಬಳಸಿಕೊಂಡು ಜನರನ್ನು ವಂಚಿಸಿದ ಘಟನೆಗಳೂ ನಮ್ಮ ಗಮನಕ್ಕೆ ಬಂದಿವೆ’ ಎಂದು ಹೇಳಿದರು. https://chat.whatsapp.com/Ge11n7QCiMj5QyPvCc0H19 ‘ನಿರ್ದೇಶಕ ಮಂಡಳಿಯ ವಿಶ್ವಾಸಾರ್ಹತೆ ಆಧರಿಸಿ, ಜನ ಸಹಕಾರ ಸಂಸ್ಥೆಗಳಲ್ಲಿ ಠೇವಣಿ ಇರಿಸುತ್ತಾರೆ. ಉತ್ತಮರಲ್ಲದವರು…

Read More

ಬೆಳಗಾವಿ: ರಾಜ್ಯದ ಸಹಕಾರ ಕ್ಷೇತ್ರದಲ್ಲಿ ವಿಶಿಷ್ಠ, ವಿಶೇಷ ಸೇವಾ ಕಾರ್ಯಗಳು ಮತ್ತು ಶಿಸ್ತುಬದ್ಧ ಆಡಳಿತದಿಂದ ತನ್ನದೇ ಛಾಪು ಮೂಡಿಸಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಬೆಳಗಾವಿಯಲ್ಲಿ ಗುರುವಾರ ಸಮಾಪನಗೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ “ಶ್ರೇಷ್ಠ ಸಹಕಾರಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎಸ್.ಗುರುರಾಜ್ ಅವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಮತ್ತು ಅನೇಕ ಸಂಸ್ಥೆಗಳು ಜಂಟಿಯಾಗಿ ಬೆಳಗಾವಿಯ ಕೆಎಲ್‌ಇ ವಿದ್ಯಾಸಂಸ್ಥೆಯ ಜೆ.ಎನ್.ಎಂ.ಸಿ. ಆವರಣದಲ್ಲಿ ಆಯೋಜಿಸಿದ್ದ ವರ್ಣರಂಜಿತ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಯಿತು. https://chat.whatsapp.com/Ge11n7QCiMj5QyPvCc0H19 ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಎಂಟು ಜಿಲ್ಲೆಗಳನ್ನೊಳಗೊಂಡ ಮೈಸೂರು ಪ್ರಾಂತದ ಒಬ್ಬರಿಗೆ ಮಾತ್ರ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿದೆ. ಸೊಸೈಟಿಯ ಸರ್ವತೋಮುಖ ಏಳಿಗೆ ಹಾಗೂ ಗಳಿಸಿದ ಲಾಭಾಂಶದಲ್ಲಿ ಒಂದು ಪಾಲನ್ನು ಸಮಾಜಮುಖಿ ಕಾರ್ಯಗಳಿಗೆ ಮುಖ್ಯವಾಗಿ ಆರೋಗ್ಯ, ಸಾಹಿತ್ಯ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡಿ…

Read More

ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ, ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಗೌರವ ತಂದುಕೊಟ್ಟ ಸಾಧಕ ಮಂಗಳೂರು: ಕರ್ನಾಟಕ ರಾಜ್ಯ ಏಕೀಕರಣಕ್ಕೆ 69 ವರ್ಷ ತುಂಬಿದ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ​​ಆಫ್ ಕರ್ನಾಟಕ ವತಿಯಿಂದ ನೀಡಲಾಗುವ ಪ್ರತಿಷ್ಠಿತ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತ್ರಿಕೋದ್ಯಮದ ಇತಿಹಾಸದಲ್ಲಿ ಮೊದಲ ಬಾರಿ ನೀಡುವ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ತಿಳಿಸಿದ್ದಾರೆ. ಸಹಕಾರಿ ರಂಗದಲ್ಲಿ ಹೊಸ ಹೊಸ ಅವಿಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆ ನೀಡುತ್ತಾ…

Read More

ಮಂಗಳೂರು: ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಕಾವೂರು ಇದರ ಕೋಡಿಕಲ್ ಶಾಖೆ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಮಂದಿರ ಕೋಡಿಕಲ್ ಹಾಗೂ ಗಿರಿಜಾ ಸರ್ಜಿಕಲ್ ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಕೋಡಿಕಲ್ ಶಾಖೆಯ ಆವರಣದಲ್ಲಿ ಇತ್ತೀಚೆಗೆ ನಡೆಸಲಾಯಿತು. https://chat.whatsapp.com/Ge11n7QCiMj5QyPvCc0H19 ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುರುಅಂಬಾ ದೇವಸ್ಥಾನದ ಮುಖ್ಯ ಅರ್ಚಕ ರವೀಶ ರಾವ್‌ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಎಸ್.ಎನ್.ಡಿ.ಪಿ ಸಂಘ ಕೋಡಿಕಲ್ ಇದರ ಅಧ್ಯಕ್ಷ ಪದ್ಮನಾಭ ಕಾರ್ನಾಡ್, ಗಿರಿಜಾ ಸರ್ಜಿಕಲ್ ಪಾಲುದಾರರಾದ ಹರೀಶ್ ಕುಮಾರ್ ಯು, ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್‌, ಕೆಸಿ ಎಂಟರ್‌ಪ್ರೈಸರ್ಸ್‌ ಮಾಲೀಕ ಕೆ.ಚೆನ್ನಯ್ಯ , ಎಸ್.ಎನ್.ಡಿ.ಪಿ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ದಯಾಮಣಿ…

Read More

ಮಂಗಳೂರು: ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. https://chat.whatsapp.com/Ge11n7QCiMj5QyPvCc0H19 ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ. ಎನ್.ರಾಜೇಂದ್ರ ಕುಮಾರ್ ಇವರು ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅವರಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಯಶ್‌ಪಾಲ್ ಎ.ಸುವರ್ಣ, ಮಂಗಳೂರು ಕಾರ್ಪೊರೇಟರ್‌ ಮನೋಜ್ ಕುಮಾರ್ ಕೋಡಿಕಲ್, ದಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.…

Read More

ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ಮಡಂತ್ಯಾರಿನಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರ ಸಂಘದ 22ನೇ ಶಾಖೆ ಕಾರ್ಯಾರಂಭ ಬೆಳ್ತಂಗಡಿ: ಯಾವುದೇ ಒಂದು ಸಂಸ್ಥೆ ಪಾರದರ್ಶಕವಾಗಿ ವ್ಯವಹಾರ ನಡೆಸಿದಾಗ ಯಶಸ್ಸು ಸಾಧ್ಯ. ಸಮಾಜದ ಉನ್ನತಿಗೆ ಸಹಕಾರ ತತ್ವದ ಪಾತ್ರ ಮಹತ್ವದ್ದು, ಮಾನವೀಯ ಮೌಲ್ಯವನ್ನು ಗಟ್ಟಿಗೊಳಿಸುವ ಕೆಲಸ ಆಗಬೇಕಿದೆ. ಬದುಕು ಗಟ್ಟಿಯಾಗಲು ಸಂಸ್ಕಾರ, ಸಹಕಾರ, ಸಂಘಟನೆ, ಸಮೃದ್ಧಿ ಅಗತ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆಯನ್ನು ಸೋಮವಾರ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಡಂತ್ಯಾರು ‘ಆಲ್ಫಾ ಕಾಂಪ್ಲೆಕ್ಸ್’ ನ ಮೊದಲನೇ ಮಹಡಿಯಲ್ಲಿ ಉದ್ಘಾಟನೆ ಮಾಡಿ ಆಶೀರ್ವಚನ ನೀಡಿದರು. https://chat.whatsapp.com/Ge11n7QCiMj5QyPvCc0H19 ಅರ್ಹತೆ ನೋಡಿ ಸಹಕಾರ ನೀಡುವ ಕೆಲಸವಾಗಬೇಕು. ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಅಗತ್ಯ. ಸಾಮಾನ್ಯ ಜನರಿಗೆ ಸೇವೆ ಸಿಗಬೇಕೆಂಬ ನಿಟ್ಟಿನಲ್ಲಿ ಸಂಸ್ಥೆಯ ಹುಟ್ಟಾಗಿದೆ. ಕೊಡು -ಕೊಳ್ಳುವಿಕೆಯ ಗುಣ ಇಲ್ಲಿ ಅಗತ್ಯ. ಒಗ್ಗಟ್ಟಿನಿಂದ…

Read More

ಸಹಕಾರ ಸಂಘ ಸ್ವಾಭಿಮಾನದ ಜೀವನಕ್ಕೆ ಸಹಕಾರಿ: ಉಳಿಯ ದೇವು ಮೂಲ್ಯಣ್ಣ ಅಭಿಪ್ರಾಯ ಬಂಟ್ವಾಳ: ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಯುವಜನರಿಗೆ ಉದ್ಯೋಗ ನೀಡುವುದರ ಜೊತೆಗೆ ಬಡ ಮತ್ತು ಮಧ್ಯಮ ವರ್ಗದ ಜನರಲ್ಲಿ ಉಳಿತಾಯ ಮನೋಭಾವದಿಂದ ಸ್ವಾಭಿಮಾನದ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ ಹೇಳಿದರು. ಮೆಲ್ಕಾರ್‌ನಲ್ಲಿ ಸೋಮವಾರ ಸಫಲ ಸೌಹಾರ್ದ ಸಹಕಾರಿ ಸಂಘದ ಐದನೇ ಶಾಖೆ ಉದ್ಘಾಟಿಸಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 https://chat.whatsapp.com/Ge11n7QCiMj5QyPvCc0H19 ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್ ಮಾತನಾಡಿ, ‘ಮುಂದಿನ ದಿನಗಳಲ್ಲಿ ಎರಡು ಶಾಖೆಗಳ ಜೊತೆಗೆ ಗಾಣದ ಎಣ್ಣೆ ಉದ್ಯಮ ಆರಂಭಿಸಲು ಚಿಂತನೆ ನಡೆಸಲಾಗಿದೆ’ ಎಂದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಶುಭ ಹಾರೈಸಿದರು. ಕಟ್ಟಡ ಮಾಲೀಕ ಎಂ.ರಾಮರಾಜ್ ರಾವ್ ಭದ್ರತಾ ಕೊಠಡಿ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರರ್ದೇಶಕಿ ಭಾರತಿ ಭಟ್ ಶಾಖಾಧಿಕಾರಿ ಕೊಠಡಿ, ಮೈಸೂರು ಪ್ರಾಂತೀಯ ವ್ಯವಸ್ಥಾಪಕ ಗುರುಪ್ರಸಾದ್…

Read More