Author: admin

ಹಿರಿಯೂರು: ಇಲ್ಲಿನ ವೀರಶೈವ ಪತ್ತಿನ ಸಹಕಾರ ಸಂಘದ 2025-30ನೇ ಸಾಲಿಗೆ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸಿ.ಸಿದ್ದರಾಮಣ್ಣ, ಉಪಾದ್ಯಕ್ಷರಾಗಿ ವಕೀಲ ಕೆ.ಮಹಂತೇಶ್ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಚುನಾವಣಾಧಿಕಾರಿ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಶಿವಮೂರ್ತಿ ಇದನ್ನು ಘೋಷಿಸಿದ್ದಾರೆ. ಚುನಾವಣೆ ಪ್ರಕ್ರಿಯೆ ಸಂದರ್ಭ ನಿರ್ದೇಶಕರಾದ ಎಸ್.ಬಿ.ಶಿವಕುಮಾರ್ ಸಿ.ಸಿದ್ದರಾಮಣ್ಣ, ಸಿದ್ದಗಂಗಯ್ಯ , ಜಿ.ಎಸ್ ಸೊಮಶೇಖ‌ರ್, ಡಿ.ಎಸ್.ಮಹೇಶ್, ಆರ್.ಟಿ.ನಾಗರಾಜ್, ವಿ.ಮಲ್ಲಿಕಾರ್ಜುನಪ್ಪ ಎಂ.ರಂಗಪ್ಪ, ವಿ.ಮಂಜುನಾಥ್, ಉಗ್ರನರಸಿಂಹಯ್ಯ, ಎ.ವಿ.ಸಿದ್ದರಾಮಣ್ಣ, ಸಿದ್ದಗಂಗಯ್ಯ, ಬಿ.ರತ್ನಮ್ಮ, ವಿ.ನಿರ್ಮಲ ಮಂಜುನಾಥ್ ಹಾಗೂ ವ್ಯವಸ್ಥಾಪಕರಾದ ವಿ.ಪ್ರಸನ್ನಕುಮಾರ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಬಜೆಟ್‌ ಮುನ್ನ ಆರ್ಥಿಕ ಸಮೀಕ್ಷೆಯಲ್ಲಿ ಪ್ರತಿಪಾದನೆ ನವದೆಹಲಿ: ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಬೆಳವಣಿಗೆ ದರ ಶೇಕಡಾ 6.3ರಿಂದ 6.8ರವರೆಗೆ ಇರಲಿದೆ ಎಂದು ಆರ್ಥಿಕ ಸಮೀಕ್ಷೆ ಅಂದಾಜಿಸಿದ್ದು, ಪ್ರಸಕ್ತ ಸಾಲಿನಲ್ಲಿ ನಿರುದ್ಯೋಗ ದರ ಇಳಿಮುಖವಾಗಿದ್ದು, ಸ್ಥಿರ ಹಣದುಬ್ಬರ ಮತ್ತು ಬೆಳವಣಿಗೆಯ ವೇಗ ಉಳಿಸಿಕೊಳ್ಳಲು ಹೆಚ್ಚಿನ ಸುಧಾರಣೆಗಳ ಅಗತ್ಯವಿದೆ ಎಂದು ಬಜೆಟ್‌ ಮುನ್ನ ಆರ್ಥಿಕ ಸಮೀಕ್ಷೆ ಪ್ರತಿಪಾದಿಸಲಾಗಿದೆ. ಸಮೀಕ್ಷೆಯ ಪ್ರಕಾರ 2025-26ರಲ್ಲಿ ಭಾರತದ ಆರ್ಥಿಕತೆಯು ಶೇ. 6.3ರಿಂದ 6.8ರಷ್ಟು ವೇಗದಲ್ಲಿ ಬೆಳೆಯುವ ನಿರೀಕ್ಷೆ ವ್ಯಕ್ತಪಡಿಸಲಾಗಿದೆ. https://chat.whatsapp.com/Ge11n7QCiMj5QyPvCc0H19 2025ನೇ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಆಹಾರ ಹಣದುಬ್ಬರ ಪ್ರಮಾಣ ಇಳಿಮುಖವಾಗುವ ಸಾಧ್ಯತೆಯಿದೆ. ತರಕಾರಿ ಬೆಲೆ ಕಡಿಮೆಯಾಗುವ ನಿರೀಕ್ಷೆ ಇದ್ದು, ಕೃಷಿ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಬರುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. 2026ರಲ್ಲಿ ಭಾರತದ ಆರ್ಥಿಕ ಭವಿಷ್ಯ ಸಮತೋಲಿತವಾಗಿದ್ದು, ಜಾಗತಿಕ ರಾಜಕೀಯ ಅನಿಶ್ಚಿತತೆಗಳು ಬೆಳವಣಿಗೆಗೆ ಅಡ್ಡಿಯಾಗಬಹುದು. ಇದನ್ನು ನಿಭಾಯಿಸಲು ತಂತ್ರಗಳು, ವಿವೇಚನಾಯುಕ್ತ ನೀತಿ ನಿರ್ವಹಣೆ ಮತ್ತು ದೇಶೀಯ ಮೂಲಭೂತ ಅಂಶಗಳನ್ನು ಬಲಪಡಿಸುವ ಅಗತ್ಯವಿದೆ ಎಂದು…

Read More

ಬಂಟ್ವಾಳ: ಸವಾಲುಗಳನ್ನು ಎದುರಿಸಲು ರೈತರು ಸರಿಯಾದ ಜ್ಞಾನ ಪಡೆಯಲು ತರಬೇತಿ ಪಡೆಯುವುದು ಬಹಳ ಅಗತ್ಯ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘ ನಿಯಮಿತ ಅಣ್ಣಳಿಕೆ ಬಂಟ್ವಾಳ, ನೇತ್ರಾವತಿ ಕೃಷಿಕರ ಅಭಿವೃದ್ಧಿ ಸಂಘಗಳ ಒಕ್ಕೂಟ ಬ೦ಟ್ವಾಳ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೋ ಹಿಲ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಬಂಟ್ವಾಳ ಅಣ್ಣಳಿಕೆ ಮಹಾಗಣಪತಿ ಸೌಧದ ಸಭಾಂಗಣದಲ್ಲಿ ಅಡಿಕೆ ತೋಟದಲ್ಲಿ ಸಮಗ್ರ ಪೋಷಕಾಂಶ ಹಾಗೂ ಕೀಟರೋಗ ನಿಯಂತ್ರಣ ಮತ್ತು ಅಂತರ ಬೆಳೆ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 ಸಂಪನ್ಮೂಲ ವ್ಯಕ್ತಿಗಳಾಗಿ ಬಂಟ್ವಾಳ ತೋಟಗಾರಿಕೆ ಇಲಾಖೆಯ ಹಿರಿಯ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ವಿಟ್ಲ ಇದರ ವಿಜ್ಞಾನಿ ಡಾ.ಭವಿಷ್ ಮಾಹಿತಿ ಕಾರ್ಯಾಗಾರ ನಡೆಸಿದರು. ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಅರಳ ಮಾವಂತೂರು ಪ್ರಗತಿಪರ ಕೃಷಿಕ ದುರ್ಗಾದಾಸ್ ಶೆಟ್ಟಿ,…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಭಾಗ್ ಶಾಖೆಯ ದಶಮಾನೋತ್ಸವ ಪ್ರಯುಕ್ತ ಕುದ್ರೋಳಿ ಯುವಕ ಸಂಘ ಕುದ್ರೋಳಿ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಇಲ್ಲಿನ ನುರಿತ ತಜ್ಞ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಚಿಕಿತ್ಸಾ ಶಿಬಿರವನ್ನು ಕುದ್ರೋಳಿ ಯುವಕ ಸಂಘದಲ್ಲಿ ನಡೆಸಲಾಯಿತು. ಲಯನ್ಸ್ ಕ್ಲಬ್‌ ಅಧ್ಯಕ್ಷ ಲಯನ್ ರಾಘವ್ ಪಡೀಲ್ ಶಿಬಿರ ಉದ್ಘಾಟಿಸಿ ಮಾತನಾಡಿ, ಗಣರಾಜೋತ್ಸವದ ದಿನದಂದು ವೈದ್ಯಕೀಯ ಶಿಬಿರ ಹಮ್ಮಿಕೊಂಡಿರುವುದು ಬಹಳ ಸಂತೋಷದ ವಿಷಯ. ವೈದ್ಯಕೀಯ ಶಿಬಿರ ಏರ್ಪಡಿಸುವುದು ಅಷ್ಟು ಸುಲಭವಲ್ಲ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉತ್ತಮ ರೀತಿಯಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದು ಶ್ಲಾಘಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ ಮಾತನಾಡಿ ನಮ್ಮ ಸಂಘದ ಪ್ರತಿ ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ಆಯೋಜಿಸುತಿದ್ದು, ಪರಿಸರದ ಸುತ್ತಮುತ್ತಲಿನ ಬಡ ವರ್ಗದ ಜನರಿಗೆ ಇಂತಹ ಶಿಬಿರಗಳಿಂದ ತುಂಬ ಪ್ರಯೋಜನವಾಗುತ್ತಿದೆ…

Read More

1947ರಿಂದ 2024: ಆಯವ್ಯಯ ಮಂಡಿಸಿದ ಭಾರತದ ಹಣಕಾಸು ಸಚಿವರುಗಳ ಬಗ್ಗೆ ನೋಟ ಮಂಗಳೂರು: ನರೇಂದ್ರ ಮೋದಿ ಸರ್ಕಾರ ತಮ್ಮ ಮೂರನೇ ಅವಧಿಯ ಪೂರ್ಣಾವಧಿ ಬಜೆಟ್‌ ಮಂಡಿಸಲು ರೆಡಿಯಾಗಿದೆ. ಕಳೆದ ಜೂನ್‌ನಲ್ಲಿ ಅಧಿಕಾರ ಹಿಡಿದ ಬಳಿಕ ಜುಲೈ 24ರಂದು ಮಧ್ಯಂತರ ಬಜೆಟ್‌ ಮಂಡಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪೂರ್ಣ ಬಜೆಟ್‌ ಅನ್ನು ಫೆಬ್ರವರಿ 1ರಂದು ಮಂಡಿಸಲಿದ್ದಾರೆ. ಸಂವಿಧಾನದ 112ನೇ ವಿಧಿಯ ಪ್ರಕಾರ, ಕೇಂದ್ರ ಬಜೆಟ್ ಎಂಬುದು ಒಂದು ನಿರ್ದಿಷ್ಟ ವರ್ಷದ ಸರ್ಕಾರದ ಅಂದಾಜು ಆದಾಯ ಮತ್ತು ವೆಚ್ಚದ ಹಣಕಾಸು ಹೇಳಿಕೆ. ದೇಶ ಸ್ವಾತಂತ್ರ್ಯಗೊಂಡ ಬಳಿಕ ಮೊದಲ ಬಜೆಟ್‌ ಮಂಡನೆಯಾದದ್ದು 1947ರ ನವಂಬರ್‌ನಲ್ಲಿ. ಆರ್‌.ಕೆ ಷಣ್ಮುಖಂ ಚೆಟ್ಟಿ ದೇಶದ ಮೊದಲ ಹಣಕಾಸು ಸಚಿವರಾಗಿ 1947ರ ನವಂಬರ್‌ 26ರಂದು ಮೊದಲ ಕೇಂದ್ರ ಬಜೆಟ್‌ ಮಂಡಿಸಿದರು. ಸ್ವತಂತ್ರ ಭಾರತದ ಮೊದಲ ಬಜೆಟ್ ಮಂಡನೆ ವೇಳೆ ಚೆಟ್ಟಿ ಅವರು ಈ ಬಜೆಟ್‌ ಏಳೂವರೆ ತಿಂಗಳಿಗೆ ಮೀಸಲಾಗಿದೆ ಎಂದು ಹೇಳಿ, ₹171.15 ಕೋಟಿ ಆದಾಯ ಮತ್ತು ₹197.39 ಕೋಟಿ…

Read More

ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷರಾಗಿ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅವಿರೋಧವಾಗಿ ನಾಲ್ಕನೇ ಬಾರಿ ಪುನರಾಯ್ಕೆಯಾಗಿದ್ದಾರೆ. ಮಂಗಳವಾರ ಕಾರ್‌ಸ್ಟ್ರೀಟ್‌ನ ಪ್ರಧಾನ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. https://chat.whatsapp.com/Ge11n7QCiMj5QyPvCc0H19 ಬ್ಯಾಂಕಿನ ಉಪಾಧ್ಯಕ್ಷರಾಗಿ ಜಗದೀಶ್‌ ಆಚಾರ್ಯ ಪಿ ಪಡುಪಣಂಬೂರು ಅವರು ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಜಗದೀಶ್‌ ಆಚಾರ್ಯ ಉಡುಪಿ, ಶರತ್‌ ಕೆ.ಆಚಾರ್ಯ ಮಂಗಳೂರು, ಸೀತಾರಾಮ ಆಚಾರ್ಯ ಮೂಡುಬಿದಿರೆ, ಭರತ್‌ ಲೋಕೇಶ್‌ ಆಚಾರ್ಯ ಮಂಗಳೂರು, ಭಾಸ್ಕರ ಆಚಾರ್ಯ ಡಿ. ಅಡಿಂಜೆ, ಹರಿಪ್ರಸಾದ್‌ ಮಂಗಳೂರು, ಗುರುಪ್ರಸಾದ್‌ ಶೆಟ್ಟಿ ಬಿ. ಮಂಗಳೂರು, ರೇಷ್ಮಾ ಮಂಗಳೂರು ಹಾಗೂ ಜಯಶ್ರೀ ವಿ.ಆಚಾರ್‌ ಎಸ್‌ ಮಂಗಳೂರು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ಮಂಗಳೂರು ಉಪವಿಭಾಗದ ಸಹಾಯಕ ನಿಬಂಧಕ ಸುಧೀರ್‌ ಕುಮಾರ್‌ ಜೆ ಚುನಾವಣಾಧಿಕಾರಿಯಾಗಿದ್ದು ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಬಿ.ನಾಗೇಂದ್ರ ಪರಿಶೀಲನಾಧಿಕಾರಿಯಾಗಿದ್ದರು. ಬ್ಯಾಂಕಿನ ಎಂ.ಡಿ ವಸಂತ ಅಡ್ಯಂತಾಯ, ಹಿರಿಯ ನಿರ್ದೇಶಕ ಎ.ಲೋಕೇಶ್‌ ಆಚಾರ್ಯ ಪುಂಜಾಲಕಟ್ಟೆ, ಜಯಪ್ರಕಾಶ್‌ ಭಂಡಾರಿಬೆಟ್ಟು, ಮಾಜಿ ಉಪಾಧ್ಯಕ್ಷ ಯಶವಂತ…

Read More

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್‌ಸಿಡಿಸಿಸಿ ಬ್ಯಾಂಕಿನ ಬ್ಯಾಂಕ್ ನಿರೀಕ್ಷಕ ಎಸ್. ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷರಾಗಿ ಶ್ರೀ ಭಗವತಿ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ರಾಘವ ಆರ್.ಉಚ್ಚಿಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಕಚೇರಿಯಲ್ಲಿ ಶನಿವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಅಧ್ಯಕ್ಷರಾಗಿ ಎರಡನೇ ಅವಧಿಗೆ ಪುನರಾಯ್ಕೆಯಾದರು. ರಾಘವ ಆರ್. ಉಚ್ಚಿಲ್ ಮೊದಲ ಬಾರಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ಚುನಾವಣಾ ಪ್ರಕ್ರಿಯೆ ನಡೆಸಿದರು. ಜಗದೀಶ್ಚಂದ್ರ ಅಂಚನ್ 20 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 2007ರಲ್ಲಿ ಉಪಾಧ್ಯಕ್ಷರಾಗಿ, 2020-25ನೇ ಸಾಲಿನಲ್ಲಿ ಅಧ್ಯಕ್ಷರಾಗಿ, ಇದೀಗ ಮುಂದಿನ ಅವಧಿಗೂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ರಾಘವ ಆರ್.ಉಚ್ಚಿಲ್ ಹತ್ತು ವರ್ಷಗಳಿಂದ…

Read More

ಮಂಗಳೂರು: 100 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷರಾಗಿ ಚಂದ್ರಶೇಖರ್‌ ಕುಮಾರ್‌ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಶನಿವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚಂದ್ರಶೇಖರ್‌ ಕುಮಾರ್‌ ಅವರನ್ನು ಅವಿರೋಧವಾಗಿ ಅಧ್ಯಕ್ಷ ಪದವಿಗೆ ಆರಿಸಲಾಯಿತು. ಕಾವೂರು ಪಳನೀರು ನಿವಾಸಿಯಾಗಿರುವ ಚಂದ್ರಶೇಖರ್‌ ಅವರು, ಕಾವೂರು ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿಯೂ, ಕಾವೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಜಯರಾಮ್‌ ಪೂಜಾರಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಯೋಗೀಶ್‌ ಕೋಟ್ಯಾನ್‌, ಅನಿಲ್‌ ಕುಮಾರ್‌, ಪ್ರಕಾಶ್‌, ಜಗದೀಶ್‌ ಎನ್‌, ರಮೇಶ್‌ ಬಂಗೇರ, ಜಯರಾಮ್‌ ಕಾರಂದೂರು, ರಾಜೇಶ್‌ ಕುಮಾರ್‌ ಜಿ.ಸುವರ್ಣ, ಹರೀಶ್‌ ಪೂಜಾರಿ ಕೆ, ಕುಪ್ಪ ಪೂಜಾರಿ, ಕೇಶವ ಪುತ್ತೂರು, ಚಂದ್ರಾವತಿ, ಶಂಕರ ನಾಯ್ಕ್‌, ಚಂದ್ರಶೇಖರ್‌ ಕುಮಾರ್‌, ನಾಗರಾಜ, ಆಶಾಲತಾ ಮತ್ತು ಗಾಯತ್ರಿ ಗಣೇಶ್‌ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ:…

Read More

ಹಿರೇಕೆರೂರು ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎಸ್‌.ಬಿ ತಿಪ್ಪಣ್ಣ ಪ್ರತಿಪಾದನೆ ಹಿರೇಕೆರೂರು: 26 ರಾಜ್ಯಪ್ರಭುತ್ವವು ಅಂತ್ಯವಾಗಿ ಭಾರತದಲ್ಲಿ ಸಂವಿಧಾನವನ್ನು ಸ್ಥಾಪಿಸಿದ ದಿನವೇ ಭಾರತೀಯರೆಲ್ಲರೂ ಹೆಮ್ಮೆಪಡುವಂತಹ ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. 75 ವರ್ಷಗಳ ಭಾರತದ ಇತಿಹಾಸ ನೋಡಿದಾಗ ಆಡಳಿತ ಮಾಡಿದ ಎಲ್ಲ ಸರಕಾರಗಳು ಭಾರತದ ಐಕ್ಯತೆ ಹಾಗೂ ಸೌಹಾರ್ದಕ್ಕೆ ಶ್ರಮಿಸಿರುವುದನ್ನು ನಾವೆಲ್ಲ ಅರ್ಥ ಮಾಡಿಕೊಂಡು ದೇಶ ನಮಗೇನು ಕೊಟ್ಟಿದೆ ಎಂಬುದು ಮುಖ್ಯವಲ್ಲ ನಾವು ದೇಶಕ್ಕೆ ಏನು ಕೊಟ್ಟಿರುತ್ತೇವೆ ಎಂದು ಆತ್ಮಾವಲೋಕನ ಮಾಡಿಕೊಂಡು ಮುನ್ನಡೆಯಬೇಕು ಎಂದು ಹಿರೇಕೆರೂರು ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಎಸ್.ಬಿ.ತಿಪ್ಪಣ್ಣ ಹೇಳಿದರು. https://chat.whatsapp.com/Ge11n7QCiMj5QyPvCc0H19 ಹಿರೇಕೆರೂರು ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಅಧೀನ ಶಾಲಾ-ಕಾಲೇಜುಗಳ ಸಹಯೋಗದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಂದೇಶ ನೀಡಿದರು. ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶ್ರೀಧರ ಮಾತನಾಡಿ ಭಾರತ ದೇಶ ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯದ ಮೂಲ ತತ್ವಗಳನ್ನು ಪಾಲಿಸಿಕೊಂಡು ವಿಶ್ವದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿ ಬೆಳೆಯುತ್ತಿರುವುದು ದೇಶದ ಪ್ರಗತಿಯ ಸಂಕೇತವಾಗಿದೆ.…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಬಾಗ್ ಶಾಖೆಯ 10ನೇ ವಾರ್ಷಿಕೋತ್ಸವ ಪ್ರಯುಕ್ತ ಕುದ್ರೋಳಿ ಯುವಕ ಸಂಘ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸ್, ಇಲ್ಲಿನ ನುರಿತ ವೈದರ ತಂಡದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಜನವರಿ 26ರಂದು ಭಾನುವಾರ ಪೂರ್ವಾಹ್ನ 9.30ರಿಂದ ಮಧ್ಯಾಹ್ನ 12.30ರವರೆಗೆ ಕುದ್ರೋಳಿ ಯುವಕ ಸಂಘದಲ್ಲಿ ಆಯೋಜಿಸಲಾಗಿದೆ. https://chat.whatsapp.com/Ge11n7QCiMj5QyPvCc0H19 ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ.ಪಿ.ತಪಾಸಣೆ , ಜನರಲ್ ವೈದ್ಯಕೀಯ ಸಮಾಲೋಚನೆ, ಇ.ಸಿ.ಜಿ , ಕಿವಿ, ಮೂಗು, ಗಂಟಲು ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಹಲ್ಲುಗಳನ್ನು ಶುಚಿ ಮಾಡುವುದು, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಸಂಘದ ಸದಸ್ಯರು…

Read More