Author: admin

ಮಂಗಳೂರು: 71ನೇ ಅಖಿಲ ಭಾರತ ಸಹಕಾರ ಸಪ್ತಾಹವು ‘ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ’ ಎಂಬ ಧ್ಯೇಯದೊಂದಿಗೆ ನವಂಬರ್‌ 14ರಿಂದ 20ರವರೆಗೆ ದೇಶಾದ್ಯಂತ ನಡೆಯಲಿದ್ದು, ಮಂಗಳೂರಿನಲ್ಲಿ ನ.16ರಂದು ‘ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ವಿಷಯದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಸೋಮವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾ‌ರ್ ನೇತೃತ್ವದಲ್ಲಿ ನಡೆದ ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ತಯಾರಿ ನಡೆದಿದೆ. ಆ ಮೂಲಕ ಸಹಕಾರ ಕ್ಷೇತ್ರದ ಸಾಧನೆಗಳನ್ನು ಸಾರ್ವಜನಿಕರ ಗಮನಕ್ಕೆ ತರುವುದು ಅಗತ್ಯವಾಗಿದ್ದು ಇದರ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದರು. https://chat.whatsapp.com/Ge11n7QCiMj5QyPvCc0H19 ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಪಿ ಮಾತನಾಡಿ, ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ಇಡೀ ರಾಜ್ಯದಲ್ಲೇ ಮಾದರಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದು ಶ್ಲಾಘನೀಯ ಸಂಗತಿ ಎಂದರು.…

Read More

ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ – ಈ ಬಾರಿಯ ಧ್ಯೇಯವಾಕ್ಯ ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನೇತೃತ್ವದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆಯು ನವಂಬರ್‌ 14ರಿಂದ 20ರ ತನಕ ನಡೆಯಲಿದೆ. ರಾಜ್ಯಮಟ್ಟದಲ್ಲಿ ಏಳು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ವಿವಿಧ ಮಹಾಮಂಡಲಗಳ ನೇತೃತ್ವದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಈ ಬಾರಿ ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ  ಎಂಬ ಧ್ಯೇಯವಾಕ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ನವಂಬರ್‌ 14ರಂದು ಗುರುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕೆಎಂಎಫ್‌ ನೇತೃತ್ವದಲ್ಲಿ ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು ಎಂಬ ವಿಷಯದಲ್ಲಿ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ನವಂಬರ್‌ 15ರಂದು ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ಮತ್ತು ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು…

Read More

2024-25ನೇ ಸಾಲಿನ ಎರಡು ಲಕ್ಷ ರೂ.ಗಳ ವಿದ್ಯಾರ್ಥಿವೇತನಕ್ಕೆ ಮಾದರಿ ಪರೀಕ್ಷೆ ಸಿಂಧನೂರು: ಇಲ್ಲಿನ ಆಕ್ಸ್‌ಫರ್ಡ್‌ ಸೌಹಾರ್ದ ಸಂಘದ ವತಿಯಿಂದ ನೀಡಲಾಗುವ ಎರಡು ಲಕ್ಷ ರೂ.ಗಳ ವಿದ್ಯಾರ್ಥಿವೇತನದ ಪೋಸ್ಟರ್‌ ಬಡುಗಡೆ ಕಾರ್ಯಕ್ರಮ ಶುಕ್ರವಾರ ಸಂಘದ ಲಕ್ಷ್ಮೀಪೂಜೆ ಸಂದರ್ಭದಲ್ಲಿ ನಡೆಯಿತು.https://chat.whatsapp.com/Ge11n7QCiMj5QyPvCc0H19 ಶುಕ್ರವಾರ ಸಹಕಾರಿಯ ಕಚೇರಿಯಲ್ಲಿ ಲಕ್ಷ್ಮೀದೇವಿ ಪೂಜಾ ಕಾರ್ಯಕ್ರಮ ನಡೆದ ಬಳಿ, ದೀಪಾವಳಿಯು ವಿದ್ಯಾರ್ಥಿಗಳ ಜೀವನದಲ್ಲಿ ಹೊಸ ಭರವಸೆ ಮತ್ತು ನಾಳೆಯ ಹೊಸ ಕನಸುಗಳ ಈಡೇರಿಕೆಗೆ ನೆರವಾಗಲು 2024-25ನೇ ಸಾಲಿನ ಎರಡು ಲಕ್ಷ ರೂ.ಗಳ ಆಕ್ಸ್‌ಫರ್ಡ್ ವಿದ್ಯಾರ್ಥಿವೇತನದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಆಕ್ಸ್‌ಫರ್ಡ್‌ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎನ್.ಸತ್ಯನಾರಾಯಣ ಶ್ರೇಷ್ಠಿ, ನಿರ್ದೇಶಕರಾದ ಪ್ರವೀಣ ಸೋಲಂಕಿ, ನಾಗರಾಜ್ ಗುಪ್ತ, ಬಸವರಾಜ್ ಪಾಟೀಲ್, ಮುಖ್ಯ ಕಾರ್ಯನಿರ್ವಾಹಕ ವಿಶ್ವನಾಥ ಕುಲಕರ್ಣಿ, ಸಿಬ್ಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು. 2024-25ನೇ ಸಾಲಿನ ವಿದ್ಯಾರ್ಥಿವೇತನದ ವಿವರ:  ಆಕ್ಸ್‌ಫರ್ಡ್‌ ಸೌಹಾರ್ದ ಸಹಕಾರಿ ಸಂಘದಿಂದ ಪ್ರಸಕ್ತ ಎರಡನೇ ವರ್ಷ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಎರಡು ಸಾವಿರ ರೂ.ಗಳ ವಾರ್ಷಿಕ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಪಿಯುಸಿ, ಪದವಿ ಮತ್ತು…

Read More

ಮಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘದ ಐದನೇ ಶಾಖೆ ಮೆಲ್ಕಾರ್‌ನಲ್ಲಿ ನವಂಬರ್‌ 18ರಂದು ಸೋಮವಾರ ಕಾರ್ಯಾರಂಭಗೊಳ್ಳಲಿದೆ. ಮೆಲ್ಕಾರ್‌ನ ಆರ್‌.ಆರ್‌ ಕಮರ್ಷಿಯಲ್‌ ಸೆಂಟರ್‌ನ ನೆಲಮಹಡಿಯಲ್ಲಿ ಬೆಳಗ್ಗೆ 11ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣನವರು ದೀಪ ಬೆಳಗಿಸಿ ಶಾಖಾ ಕಚೇರಿ ಉದ್ಘಾಟಿಸುವರು. ಕಟ್ಟಡದ ಮಾಲೀಕ ಎಂ.ರಾಮರಾಜ್‌ ರಾವ್‌ ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ಸಹಕಾರ ರತ್ನ ರಾಜಶೇಖರ ಗಾಣಿಗ ಭದ್ರತಾ ಕೋಶ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಭಟ್‌ ಶಾಖಾಧಿಕಾರಿ ಕೊಠಡಿ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ವ್ಯವಸ್ಥಾಪಕ ಗುರುಪ್ರಸಾದ್‌ ಬಂಗೇರ ನಗದು ಕೊಠಡಿ ಉದ್ಘಾಟಿಸಲಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌ ಗಣಕಯಂತ್ರ ಉದ್ಘಾಟಿಸುವರು. 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಮುಂಬೈನ ಸಾಫಲ್ಯ ಸೇವಾ…

Read More

ಮಂಗಳೂರು: ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಕಚೇರಿಯಲ್ಲಿ ಗುರುವಾರ ದೀಪಾವಳಿ ಲಕ್ಷ್ಮೀಪೂಜೆ ನಡೆಯಿತು. ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ, ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎ.ಸುರೇಶ್‌ ರೈ, ಶ್ರೀದೇವಿ ಕಾಲೇಜು ಪ್ರಾಂಶುಪಾಲ ಸುಧೀಶ್‌ ಪೂಜಾರಿ, ಸ್ಪಂದನ ಕೋ ಆಪರೇಟಿವ್‌ ಸೊಸೈಟಿಯ ನಿರ್ದೇಶಕ ನವೀನ್‌ ಎಲ್.ಆರ್‌ ಕಾವೂರು, ಯುವ ಸ್ಪಂದನ ಸೊಸೈಟಿಯ ಅಧ್ಯಕ್ಷ ಜಿತಿನ್‌ ಜೀಜೊ, ಉಪಾಧ್ಯಕ್ಷೆ ದೀಕ್ಷಾ ಡಿ.ಎಂ, ನಿರ್ದೇಶಕರಾದ ಚೇತನ್‌ ಕೊಟ್ಟಾರಿ, ಶೆಲ್ಡನ್‌ ಹರ್ಮನ್‌ ತಾವ್ರೊ, ಗುರು ಆದಿತ್ಯ, ನಿಶ್ಮಾ ವಿ.ಕೆ, ನರಸಿಂಹ ಎಸ್‌.ಭಂಡಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್‌ ಎ.ಎಲ್‌, ಸಿಬ್ಬಂದಿ ಧನುಶ್ರೀ, ಸಹಕಾರ ಸ್ಪಂದನ ಸಂಪಾದಕ ಮೋಹನ್‌ದಾಸ್‌ ಮರಕಡ ಮೊದಲಾದವರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಹಬ್ಬದ ಆಚರಣೆಯಿಂದ ಸಹೋದರತ್ವ ಭಾವ: ಎಂಸಿಸಿ ಬ್ಯಾಂಕ್‌  ಅಧ್ಯಕ್ಷ ಅನಿಲ್‌ ಲೋಬೊ ಅಭಿಪ್ರಾಯ ಉಡುಪಿ: ಎಂ.ಸಿ.ಸಿ. ಬ್ಯಾಂಕ್‌ನ ಬ್ರಹ್ಮಾವರ, ಕುಂದಾಪುರ ಮತ್ತು ಉಡುಪಿ ಶಾಖೆಗಳ ಸಂಯುಕ್ತಾಶ್ರಯದಲ್ಲಿ ಬ್ರಹ್ಮಾವರ ಶಾಖೆಯ ಆವರಣದಲ್ಲಿ ಬುಧವಾರ ದೀಪಾವಳಿ ಹಬ್ಬ ಆಚರಿಸಲಾಯಿತು. ಎಂಸಿಸಿ ಬ್ಯಾಂಕ್ ಬ್ರಹ್ಮಾವರ ಶಾಖೆಯ ಸಿಬ್ಬಂದಿ ಪ್ರಾರ್ಥನಾ ಗೀತೆಯೊಂದಿಗೆ ಸಂಭ್ರಮಾಚರಣೆಗೆ ಮೆರುಗು ನೀಡಿದರು. ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅತಿಥಿಗಳೊಂದಿಗೆ ದೀಪ ಬೆಳಗಿಸಿದರು. https://chat.whatsapp.com/Ge11n7QCiMj5QyPvCc0H19 ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೀಪಾವಳಿ ಆಚರಣೆಯ ಮಹತ್ವದ ಬಗ್ಗೆ ಹೇಳಿದರು. ಹಬ್ಬವು ಜನರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿ ಬ್ಯಾಂಕಿಗೆ ನಿರಂತರ ಬೆಂಬಲ ನೀಡಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಈಶ್ವರ ಮಲ್ಪೆ ಅವರ ಸಾಧನೆ ಮತ್ತು ಸಮಾಜಸೇವೆಗೆ ನೀಡಿದ ಕೊಡುಗೆಗಳಿಗಾಗಿ ಅವರನ್ನು ಅನಿಲ್ ಲೋಬೊ ಸನ್ಮಾನಿಸಿದರು. ಇನ್ನೋರ್ವ ಅತಿಥಿ ಬಿ.ಎನ್.ಶಂಕರ್‌, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪಿ.ಎ. ಹೆಗ್ಡೆ ಶುಭ ಹಾರೈಸಿದರು. ಬ್ರಹ್ಮಾವರದ…

Read More

ಮಂಗಳೂರು: ಗುರುಪುರ ಕೈಕಂಬದ ಬೆನಕ ಸೌಧದ ಒಂದನೇ ಮಹಡಿಯಲ್ಲಿರುವ ಸಫಲ ಸೌಹಾರ್ದ ಸಹಕಾರಿ ಸಂಘದ ಪ್ರಧಾನ ಕಚೇರಿಯನ್ನು ಬೆನಕ ಸೌಧದ ಎರಡನೇ ಮಹಡಿಗೆ ಸ್ಥಳಾಂತರ ಮಾಡುವ ಕಾರ್ಯಕ್ರಮ ನವಂಬರ್‌ 1ರಂದು ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಮಧ್ಯಾಹ್ನ 12.05ಕ್ಕೆ ಕಾರ್ಯಕ್ರಮ ನಡೆಯಲಿದ್ದು ಉಳ್ಳಾಲ ಉಳಿಯದ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣನವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕಿ ಭಾರತಿ ಭಟ್‌, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ದ.ಕ. ಮತ್ತು ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಜಿಲ್ಲಾಧ್ಯಕ್ಷ ಭಾಸ್ಕರ ದೇವಸ್ಯ, ಗುರುಪುರ ಕೈಕಂಬ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ವಿನೋದ್‌ ಮಾಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು…

Read More

ಶಿಕಾರಿಪುರ: ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿ., ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಸಾಗರ ಉಪವಿಭಾಗದ ಪತ್ತಿನ ಮತ್ತು ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನವಂಬರ್‌ 6ರಂದು ಶಿಕಾರಿಪುರ ಶಾಂತಿನಗರದ ಶ್ರೀ ಕಂತೇಸಿದ್ಧೇಶ್ವರ ಸಭಾಂಗಣದಲ್ಲಿ ಬೆಳಗ್ಗೆ ಒಂದು ದಿನದ ತರಬೇತಿ ಶಿಬಿರ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷ ವಿ.ರಾಜು ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನಿರ್ದೇಶಕ ಡಿ.ಎಲ್‌.ಬಸವರಾಜ್‌, ಶಿವಮೊಗ್ಗ ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ್‌ ಕಲ್ಮನೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ನೇತ್ರಾ ದೇವರಾಜ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ…

Read More

ಮಂಗಳೂರು: 112 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಈ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ಕರಾವಳಿ ಭಾಗದ ಕುಂದಾಪುರ, ಬ್ರಹ್ಮಾವರ, ಉಡುಪಿ ಶಾಖೆಗಳ ವತಿಯಿಂದ ಸಾರ್ವಜನಿಕರಿಗೆ ದೀಪಗಳ ಜೊತೆ ಸಮೂಹ ಭಾವಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದೆ. https://chat.whatsapp.com/Ge11n7QCiMj5QyPvCc0H19 ಎಂ.ಸಿ.ಸಿ. ಬ್ಯಾಂಕ್‌ ತನ್ನ ವ್ಯಾಪ್ತಿಯನ್ನು ಕರ್ನಾಟಕ ರಾಜ್ಯಾದ್ಯಂತ ವ್ಯಾಪಿಸಿದ್ದು, ಇದೇ ವರ್ಷದ ಮಾರ್ಚ್ ತಿಂಗಳಲ್ಲಿ 17ನೇ ಹೊಸ ಶಾಖೆಯನ್ನು ಬ್ರಹ್ಮಾವರದಲ್ಲಿ ಪ್ರಾರಂಭಿಸಿದೆ. ಈ ಸ್ಪರ್ಧೆಯ ಪೋಸ್ಟರ್ ಅನಾವರಣ ಕಾರ್ಯಕ್ರಮ ಗುರುವಾರ ಎಂ.ಸಿ.ಸಿ. ಬ್ಯಾಂಕಿನ ಬ್ರಹ್ಮಾವರ ಶಾಖೆಯಲ್ಲಿ ಜರಗಿತು. ಬ್ರಹ್ಮಾವರ ಪರಿಸರದ ಖ್ಯಾತ ಉದ್ಯಮಿ ಅರುಣ್ ವಾರಂಬಳ್ಳಿ ಸ್ಪರ್ಧೆಗಳ ಪೋಸ್ಟರ್ ಅನಾವರಣಗೊಳಿಸಿದರು. ಸ್ಥಳೀಯ ಉದ್ಯಮಿಗಳಾದ ರೋಶನ್, ರವಿ, ಯೋಗೀಶ್, ಗಣೇಶ್ ಮತ್ತು ಗ್ರಾಹಕರಾದ ಆನಂದ್, ಪ್ರತಿಮಾ, ಪ್ರವೀಣ್ ಹಾಗೂ ಬ್ರಹ್ಮಾವರ ಶಾಖೆಯ ಸಿಬ್ಬಂದಿಗಳು ಹಾಜರಿದ್ದರು. ಎಂ.ಸಿ.ಸಿ. ಬ್ಯಾಂಕಿನ ನಿರ್ದೇಶಕ ಎಲ್ರಾಯ್ ಕಿರಣ್ ಕ್ರಾಸ್ಟೊ ಪ್ರಾಸ್ತಾವಿಕ ಮಾತನಾಡಿದರು. ಬ್ರಹ್ಮಾವರ ಶಾಖೆಯ ಪ್ರಬಂಧಕ ಒವಿನ್ ರೆಬೆಲ್ಲೊ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ದೀಪಗಳ ಜೊತೆಯಿರುವ ಭಾವಚಿತ್ರ ಹಾಗೂ 15 ಸೆಕೆಂಡುಗಳ…

Read More

ನವದೆಹಲಿ: ಭಾರತದ ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಖನ್ನಾ ಅವರನ್ನು ನೇಮಿಸಲಾಗಿದೆ. ಇವರು ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಹೆಸರು ಸೂಚಿಸಿದ್ದು ಇದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ವಿಚಾರವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ತಮ್ಮ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ. https://chat.whatsapp.com/Ge11n7QCiMj5QyPvCc0H19 ಹಾಲಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನವೆಂಬರ್ 8 ರಂದು ನಿವೃತ್ತಿ ಹೊಂದಲಿದ್ದಾರೆ. ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುವಂತೆ ಕಾನೂನು ಸಚಿವಾಲಯ ಕೋರಿದ ಹಿನ್ನೆಲೆಯಲ್ಲಿ ಚಂದ್ರಚೂಡ್, ಸಂಜೀವ್ ಖನ್ನಾ ಅವರ ಹೆಸರು ಶಿಫಾರಸು ಮಾಡಿದ್ದರು. ನವಂಬರ್‌ 11ರಂದು ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕರಿಸಲಿದ್ದು, 2025ರ ಮೇ 13ರಂದು ನಿವೃತ್ತಿಯಾಗಲಿದ್ದಾರೆ. ಅಂದರೆ ಆರು ತಿಂಗಳುಗಳ ಕಾಲ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ. ಸಂಜೀವ ಖನ್ನಾ ಅವರು, 1983ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ಗೆ ವಕೀಲರಾಗಿ ದಾಖಲಾಗಿದ್ದರು.…

Read More