Author: admin
ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ನಿಯಮಿತ ಅಧ್ಯಕ್ಷರಾಗಿ ರವೀಂದ್ರನಾಥ್ ಶೆಟ್ಟಿ, ಉಪಾಧ್ಯಕ್ಷರಾಗಿ ದಿನಕರ ಪೂಂಜ ಆಯ್ಕೆ
ಮಂಗಳೂರು: ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ನಿಯಮಿತ, ಶೇಡಿಗುರಿ, ಮಂಗಳೂರು ಇದರ ಆಡಳಿತ ಮಂಡಳಿಯ 2024-2029ರ ಅವಧಿಗೆ ಚುನಾವಣೆ ನಡೆದು 13 ಸದಸ್ಯರು ಅವಿರೋಧವಾಗಿ ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಈ ಪೈಕಿ ಗುರುವಾರ ನಡೆದ ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ರವೀಂದ್ರನಾಥ್ ಶೆಟ್ಟಿ ಅಧ್ಯಕ್ಷರಾಗಿ, ದಿನಕರ ಪೂಂಜ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವೀಂದ್ರನಾಥ್ ಶೆಟ್ಟಿ, ದಿನಕರ ಪೂಂಜ ಜೊತೆಗೆ, ಕೆ.ಟಿ. ರೈ, ಉದಯ ಕುಮಾರ, ಟಿ.ವಿ. ರೈ, ಕೆ.ನರೇಂದ್ರನಾಥ ಕಾಮತ್, ಶಾಲಿನಿ ಶೆಟ್ಟಿ, ಪ್ರೇಮನಾಥ ಜಿ, ಶಾಮಸುಂದರ ರಾವ್, ಶೋಭಾ ರಾವ್, ಜೆ.ವಿ ಶೆಟ್ಟಿ, ಸದಾಶಿವ ವಿ.ಎಸ್, ದಿನಕರ್ ರೈ ನಿರ್ದೇಶಕರಾಗಿ ಇರಲಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಜೋಡುರಸ್ತೆ ಕುಕ್ಕುಂದೂರು ಕಾರ್ಕಳ ಇದರ 2025ರ ಕ್ಯಾಲೆಂಡರ್ ಅನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. https://chat.whatsapp.com/Ge11n7QCiMj5QyPvCc0H19 ಸಂಘದ ಅಧ್ಯಕ್ಷ ಸಂತೋಷ್ ರಾವ್. ಉಪಾಧ್ಯಕ್ಷ ವೃಷಭರಾಜ್ ಕಡಂಬ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಶ್ರೀ, ನಿರ್ದೇಶಕರಾದ ತ್ರಿವಿಕ್ರಮ ಕಿಣಿ, ಯೋಗೀಶ್ ಸಾಲಿಯಾನ್, ಸಂದೀಪ್ ನಾಯಕ್, ದಿನೇಶ್ ಕುಮಾರ್ ವೈ, ಪಾಂಡುರಂಗ ನಾಯಕ್, ಸಂಜೀವ ನಾಯ್ಕ ಹಾಗೂ ಅನಿಲ್ ಕುಮಾರ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
25 ರಾಜ್ಯಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಅರ್ಜಿ ನವದೆಹಲಿ: ದೇಶದ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 286 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ತೈಲ ಮಾರುಕಟ್ಟೆ ಕಂಪನಿ(ಒಎಂಸಿ)ಗಳ ಸಹಯೋಗದೊಂದಿಗೆ ಚಿಲ್ಲರೆ ಪೆಟ್ರೋಲ್ ಮತ್ತು ಡೀಸೆಲ್ ಔಟ್ಲೆಟ್ಗಳನ್ನು ಸ್ಥಾಪಿಸಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ. https://chat.whatsapp.com/Ge11n7QCiMj5QyPvCc0H19 ಸಂಸತ್ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಮಿತ್ ಷಾ, ಚಿಲ್ಲರೆ ಪೆಟ್ರೋಲ್ ಮತ್ತು ಡೀಸೆಲ್ ಔಟ್ಲೆಟ್ಗಳನ್ನು ಸ್ಥಾಪಿಸಲು ನಾಲ್ಕು ರಾಜ್ಯಗಳ 109 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅರ್ಜಿ ಸಲ್ಲಿಸಿದ ಬಳಿಕದ ಕೆಲವೊಂದು ವಿಧಿವಿಧಾನಗಳನ್ನೂ ಪೂರೈಸಿದ್ದು 45 ಸೊಸೈಟಿಗಳಿಗೆ ಈಗಾಗಲೇ ಉದ್ದೇಶ ಪತ್ರಗಳನ್ನೂ ವಿತರಿಸಲಾಗಿದೆ ಎಂದು ಹೇಳಿದರು. ಸಹಕಾರ ಸಂಘಗಳನ್ನು ಇನ್ನಷ್ಟು ಬಲಪಡಿಸುವ, ಗ್ರಾಮೀಣ ಜೀವನಮಟ್ಟವನ್ನು ಸುಧಾರಿಸುವ ಮತ್ತು ಅಗತ್ಯ ಸೇವೆಗಳಿಗೆ ಸೊಸೈಟಿಗಳ ಪ್ರವೇಶವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಹಲವಾರು ಮಹತ್ವದ ಉಪಕ್ರಮಗಳ ಬಗ್ಗೆ ಅಮಿತ್ ಷಾ ಮಾಹಿತಿ…
ಲೋಕಸಭೆಯಲ್ಲಿ ಸಹಕಾರ ಸಚಿವ ಅಮಿತ್ ಷಾ ಮಾಹಿತಿ ನವದೆಹಲಿ: ಸಹಕಾರಿ ಉದ್ಯಮ ಬೆಂಬಲ ಮತ್ತು ನಾವೀನ್ಯತಾ ಯೋಜನೆಯ ಯುವ -ಸಹಕಾರ ಸ್ಕೀಮ್ನಡಿ ವಿವಿಧ ಸಹಕಾರ ಸಂಘಗಳ 19 ಸಾವಿರ ಸದಸ್ಯರಿಗೆ ಉಪಯೋಗವಾಗಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. https://chat.whatsapp.com/Ge11n7QCiMj5QyPvCc0H19 ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು, 2024ರ ನವೆಂಬರ್ 30ರ ಅಂಕಿ ಅಂಶಗಳ ಪ್ರಕಾರ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ(ಎನ್ಸಿಡಿಸಿ)ವು 4,734.97 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ಯುವ ಸಹಕಾರ ಯೋಜನೆಯಡಿ ಮಂಜೂರು ಮಾಡಿದೆ. ಇದರಿಂದ 18,915 ಸಹಕಾರಿ ಸದಸ್ಯರಿಗೆ ಪ್ರಯೋಜನವಾಗಿದೆ, 294.44 ಲಕ್ಷ ರೂಪಾಯಿಗಳನ್ನು ಈಗಾಗಲೇ ವಿತರಿಸಲಾಗಿದೆ. ಪ್ರಸಕ್ತ ಆರ್ಥಿಕ ವರ್ಷ 230.61 ಲಕ್ಷ ರೂ. ಮಂಜೂರಾಗಿದ್ದು, 89.88 ಲಕ್ಷ ರೂ. ವಿತರಿಸಲಾಗಿದೆ ಎಂದು ಹೇಳಿದರು. ಆದರೂ ಹಿಮಾಚಲ ಪ್ರದೇಶ ಮತ್ತು ಆಂಧ್ರಪ್ರದೇಶ ರಾಜ್ಯಗಳಿಂದ ಯುವ ಸಹಕಾರ ಯೋಜನೆಯ ಕುರಿತು ಯಾವುದೇ ಪ್ರಸ್ತಾವನೆಗಳು ಬಂದಿಲ್ಲ. ಇದು ಈ ರಾಜ್ಯಗಳಲ್ಲಿ ಈ ಯೋಜನೆಯ ಅರಿವಿನ…
ಮಂಗಳೂರು: ಅಡಿಕೆ ಉತ್ಪನ್ನಗಳ ನ್ಯಾಯಯುತ ನಿಯಂತ್ರಣಕ್ಕಾಗಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮನವಿ ಮೂಲಕ ಒತ್ತಾಯಿಸಿದ್ದಾರೆ. ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ಗೆ ಪತ್ರ ಬರೆದಿರುವ ಕ್ಯಾಂಪ್ಕೊ ಅಧ್ಯಕ್ಷರು, ನೂತನವಾಗಿ ಅಧಿಕಾರ ವಹಿಸಿಕೊಂಡ ಮುಖ್ಯಮಂತ್ರಿ ಅವರನ್ನು ಅಭಿನಂದಿಸಿದ್ದು, ಮಹಾರಾಷ್ಟ್ರದಲ್ಲಿ ದೀರ್ಘಕಾಲೀನ ನಿಷೇಧದಲ್ಲಿರುವ ಸುವಾಸನೆಯ ಸುಪಾರಿ ಉತ್ಪನ್ನಗಳ ಮೇಲಿನ ನಿಷೇಧ ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ. 2013ರಿಂದ ಮಹಾರಾಷ್ಟ್ರದಲ್ಲಿ ಸುವಾಸನೆಯ ಸುಪಾರಿ ಉತ್ಪನ್ನಗಳ ವಾರ್ಷಿಕ ನಿಷೇಧ ಮಾಡಲಾಗಿದ್ದು, ಈ ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಒತ್ತಾಯಿಸಿದ್ದಾರೆ. ಈ ನಿಷೇಧವು ರೈತರು, ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಅನಗತ್ಯ ತೊಂದರೆಗಳನ್ನು ಉಂಟುಮಾಡುತ್ತಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷರು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿದ್ದಾರೆ. https://chat.whatsapp.com/Ge11n7QCiMj5QyPvCc0H19 ಕ್ಯಾಂಪ್ಕೊದ ಸುವಾಸನೆಯ ಸುಪಾರಿ ಉತ್ಪನ್ನಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯನ್ನು ಸಂಪೂರ್ಣವಾಗಿ ಅನುಸರಿಸುತ್ತವೆ ಮತ್ತು ತಂಬಾಕು, ಗುಟ್ಕಾ ಅಥವಾ ಪಾನ್ ಮಸಾಲಾಗಳಂತಹ ಹಾನಿಕಾರಕ ಉತ್ಪನ್ನಗಳಿಂದ ಭಿನ್ನವಾಗಿವೆ ಎಂದು ಕಿಶೋರ್ ಕುಮಾರ್ ಕೊಡ್ಗಿಯವರು ಮನವಿಯಲ್ಲಿ ಒತ್ತಿ…
ಮಂಗಳೂರು: ಎಸ್.ಕೆ. ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ನ 2025ನೇ ಸಾಲಿನ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ ಕಾರ್ಯಕ್ರಮ ಮಂಗಳವಾರ ನಡೆಯಿತು. ಎಸ್.ಕೆ. ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ನ ಆಡಳಿತ ಕಚೇರಿ “ವಿಶ್ವ ಸೌಧ”ದಲ್ಲಿ ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ, ಉಪಾಧ್ಯಕ್ಷ ಎ.ಆನಂದ ಆಚಾರ್ಯ, ನಿರದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ಜಯ ವಿ.ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಹಾಗೂ ಪುತ್ತೂರು ಶಾಖಾ ಪ್ರಭಾರ ವ್ಯವಸ್ಥಾಪಕ ಕಿರಣ್ ಬಿ.ವಿ. ಉಪಸ್ಥಿತಿಯಲ್ಲಿ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆಗೊಳಿಸಲಾಯಿತು. https://chat.whatsapp.com/Ge11n7QCiMj5QyPvCc0H19
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ)ದ ನೂತನ ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಇವರು ಆರ್ಬಿಐ ಗವರ್ನರ್ ಆಗಿರುವ ಶಕ್ತಿಕಾಂತ್ ದಾಸ್ ಅವರ ಸ್ಥಾನ ತುಂಬಲಿದ್ದಾರೆ. ಶಕ್ತಿಕಾಂತ್ ದಾಸ್ ಅವರ ಅವಧಿ ಇಂದು ಸಂಜೆಗೆ ಕೊನೆಗೊಳ್ಳಲಿದ್ದು ಮಲ್ಹೋತ್ರಾ ಡಿಸೆಂಬರ್ 11ರಿಂದಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಸಂಜಯ್ ಮಲ್ಹೋತ್ರಾ ಅಧಿಕಾರಾವಧಿ ಇರಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ 26ನೇ ಗವರ್ನರ್ ಆಗಲಿರುವ ಮಲ್ಹೋತ್ರಾ 1990ರ ಬ್ಯಾಚ್ ರಾಜಸ್ಥಾನ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದರು. ಆರ್ಬಿಐನ ಕಾರ್ಯನಿರ್ವಹಣೆಯನ್ನು ಸಾಮಾನ್ಯವಾಗಿ ಕೇಂದ್ರೀಯ ನಿರ್ದೇಶಕರ ಮಂಡಳಿಯು ನೋಡಿಕೊಳ್ಳುತ್ತಿದ್ದು, ಸಂಜಯ್ ಮಲ್ಹೋತ್ರಾ ಈ ಕೆಲಸದಲ್ಲಿ ಮುಂಚೂಣಿಯಲಿದ್ದರಿಂದ ಅವರ ಹೆಸರೇ ಆರ್ಬಿಐ ಗವರ್ನರ್ ಹುದ್ದೆಗೆ ಪ್ರಧಾನವಾಗಿ ಕೇಳಿಬರುತ್ತಿತ್ತು. ಸಂಜಯ್ ಮಲ್ಹೋತ್ರಾ ಅವರು ಐಐಟಿ ಕಾನ್ಪುರದಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದು, ಅಮೆರಿಕದ ಪ್ರಿನ್ಸ್ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 33 ವರ್ಷಗಳ ವ್ಯಾಪಕ…
ನವದೆಹಲಿ: ಸಹಕಾರ ಭಾರತಿ ರಾಷ್ಟ್ರಾಧ್ಯಕ್ಷರಾಗಿ ಡಾ.ಉದಯ ಜೋಶಿ, ಪ್ರಧಾನ ಕಾರ್ಯದರ್ಶಿಯಾಗಿ ದೀಪಕ್ ಚೌರಾಸಿಯ ಮುಂದಿನ ಮೂರು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ. ಅಮೃತ್ಸರ್ನಲ್ಲಿ ನಡೆಯುತ್ತಿರುವ ಸಹಕಾರ ಭಾರತಿಯ ರಾಷ್ಟ್ರೀಯ ಅಧಿವೇಶನದಲ್ಲಿ ಈ ಘೋಷಣೆ ಮಾಡಲಾಗಿದೆ. ಡಾ.ಉದಯ ಜೋಶಿ ರಾಷ್ಟ್ರಾಧ್ಯಕ್ಷರಾಗಿ ಡಿ.ಎನ್.ಠಾಕೂರ್ ಅವರ ಸ್ಥಾನ ತುಂಬಲಿದ್ದಾರೆ. ಸಹಕಾರ ಭಾರತಿಯ ದೀಘರ್ಕಾಲೀನ ಸಕ್ರಿಯ ಕಾರ್ಯಕರ್ತರಾಗಿದ್ದ ಬಿಹಾರದ ದೀಪಕ್ ಚೌರಾಸಿಯ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಉದಯ ಜೋಶಿ ಅವರ ಸ್ಥಾನ ತುಂಬಲಿದ್ದಾರೆ. 1957ರ ಸೆಪ್ಟೆಂಬರ್ 17ರಂದು ಜನಿಸಿದ್ದ ಡಾ.ಜೋಶಿ ಅಲಿಬಾಘ್ನ ಜೆಎಸ್ಎಂ ಕಾಲೇಜಿನಲ್ಲಿ 35 ವರ್ಷ ಕಾಲ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದರು. 2016ರಲ್ಲಿ ಉಪಪ್ರಾಂಶುಪಾಲರರಾಗಿ ಭಡ್ತಿ ಪಡೆದಿದ್ದರು. ಮುಂಬೈ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಕಾಲೇಜು ದಿನಗಳಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ, 37 ವರ್ಷಗಳಷ್ಟು ಕಾಲ ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಎನ್ಸಿಯುಐ (ಭಾರತೀಯ ರಾಷ್ಟ್ರೀಯ ಸಹಕಾರ ಒಕ್ಕೂಟ)ನ ಸರ್ಕಾರದ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಹಣಕಾಸು ಸಚಿವರ ಜೊತೆ…
ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ, ಸಾಲದ ಇಎಂಐ ಇಳಿಕೆಯ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ಸತತ 11ನೇ ಬಾರಿ ರೆಪೊ ದರವನ್ನು ಬದಲಿಸದೆ ಶೇಕಡಾ 6.5ರಷ್ಟು ಯಥಾಸ್ಥಿತಿಯಲ್ಲೇ ಕಾಯ್ದಿರಿಸಿದೆ. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 7.2 ರ ಬದಲು ಶೇಕಡಾ 6.6ಕ್ಕೆ ತಗ್ಗಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು 7 ತ್ರೈಮಾಸಿಕ ಕನಿಷ್ಠ 5.4 ಶೇಕಡಾಕ್ಕೆ ಕುಸಿದಿದ್ದರೂ ಬಡ್ಡಿದರದ ಯಥಾಸ್ಥಿತಿ ಕಾಯ್ದುಕೊಂಡಿದೆ. ಪ್ರಸಕ್ತ ಹಣಕಾಸು ವರ್ಷದ ಐದನೇ ದ್ವೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್, ವಿತ್ತೀಯ ನೀತಿ ಸಮಿತಿಯು (ಎಂಪಿಸಿ) ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಶೇಕಡಾ 6.5ದಲ್ಲಿ ಇರಿಸಲು ನಿರ್ಧರಿಸಿದೆ ಮತ್ತು ನೀತಿ ನಿಲುವನ್ನು ತಟಸ್ಥವಾಗಿ ಇರಿಸಿದೆ ಎಂದು ಹೇಳಿದರು. https://chat.whatsapp.com/Ge11n7QCiMj5QyPvCc0H19 ಆರ್ಬಿಐ, ಜಿಡಿಪಿ ಬೆಳವಣಿಗೆಯ ಪ್ರಕ್ಷೇಪಣವನ್ನು ಹಿಂದಿನ ಶೇಕಡಾ 7.2ರಿಂದ ಶೇಕಡಾ 6.6ಕ್ಕೆ ಕಡಿತಗೊಳಿಸಿದ್ದು, ಪ್ರಸಕ್ತ…
ತುಮಕೂರು: ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ. ತುಮಕೂರು ಇದರ ಗುರುಕುಲ ಕ್ಲಿನಿಕ್ ಮತ್ತು ಡಯಾಗ್ನಾಸ್ಟಿಕ್ಸ್ ಸೆಂಟರ್ ಅನ್ನು ಗುರುವಾರ ತುಮಕೂರಿನ ಸಿದ್ಧಗಂಗಾ ಬಡಾವಣೆಯ ಗುರುಕುಲ ಆರ್ಕೇಡ್ನಲ್ಲಿ ಪ್ರಾರಂಭಿಸಲಾಗಿದೆ. ಗುರುಕುಲ ಕ್ಲಿನಿಕ್ ಆಂಡ್ ಡಯಾಗ್ನಾಸ್ಟಿಕ್ಸ್ ಸೆಂಟರ್ ಅನ್ನು ತಮಕೂರು ನಗರದ ಶಾಸಕ ಜಿ.ಬಿ ಜ್ಯೋತಿ ಗಣೇಶ್ ಉದ್ಘಾಟಿಸಿದರು. ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಜಿ.ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸಿದ್ದರು. https://chat.whatsapp.com/Ge11n7QCiMj5QyPvCc0H19 ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಸಿ.ಪಿ ವಿಜಯ್, ಸ್ನೇಹ ಸಂಗಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಲಿಮಿಟೆಡ್ನ ಅಧ್ಯಕ್ಷ ಬಿ.ಎಸ್ ಮಂಜುನಾಥ್, ಶ್ರೀ ವೀರಶೈವ ಗುರುಕುಲ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಬಿ.ಎನ್ ಬಸವರಾಜಪ್ಪ, ಸಿದ್ದರಾಮೇಶ್ವರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಎಸ್ ರವಿಶಂಕರ್, ತುಮಕೂರು ಬಸವೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಟಿ.ಸಿ ಓಹಿಲೇಶ್ವರ್, ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಅಧ್ಯಕ್ಷ ಪಿ.ಮೂರ್ತಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮ ಗುರುಕುಲ ಸುವರ್ಣ…
