Author: admin
ನವದೆಹಲಿ: ಸಹಕಾರ ಕ್ಷೇತ್ರದ ವೃತ್ತಿಪರ ಸಾಧಕರಾದ ಡಾ.ಮಂಗಳಾ ರೈ ಹಾಗೂ ಡಾ.ಅಶೋಕ್ ಗುಲಾಟಿ ಅವರಿಗೆ 2023-24ನೇ ಸಾಲಿನ ಯು.ಎಸ್.ಅವಸ್ಥಿ ಇಫ್ಕೋ ಜೀವಮಾನ ಸಾಧಕ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಗಿದೆ. https://chat.whatsapp.com/Ge11n7QCiMj5QyPvCc0H19 ಗುರುವಾರ ಭಾರತೀಯ ರಸಗೊಬ್ಬರ ಸಂಘ(ಎಫ್ಎಐ- ಫರ್ಟಿಲೈಸರ್ ಅಸೋಸಿಯೇಶನ್ ಆಫ್ ಇಂಡಿಯಾ)ದ 60ನೇ ವಾರ್ಷಿಕ ಸೆಮಿನಾರ್ನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೃಷಿ ಮತ್ತು ರಸಗೊಬ್ಬರ ಕ್ಷೇತ್ರದಲ್ಲಿ ಮಾಡಿರುವ ಅದ್ವಿತೀಯ ಸಾಧನೆಗಾಗಿ ಈ ಇಬ್ಬರಿಗೆ ಈ ಪ್ರಶಸ್ತಿ ನೀಡಲಾಗಿದೆ. ಡಾ.ಮಂಗಳಾ ರೈ ಅವರಿಗೆ ಕೃಷಿ ಕ್ಷೇತ್ರದಲ್ಲಿ ಮಾಡಿರುವ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಈ ಪುರಸ್ಕಾರ ಪ್ರದಾನ ಮಾಡಲಾಗಿದ್ದರೆ, ಡಾ.ಅಶೋಕ್ ಗುಲಾಟಿ ರಸಗೊಬ್ಬರ ಕ್ಷೇತ್ರದಲ್ಲಿ ಮಾಡಿರುವ ಉನ್ನತ ಸಾಧನೆಗಾಗಿ ಈ ಪುರಸ್ಕಾರ ಪ್ರದಾನ ಮಾಡಲಾಗಿದೆ. ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವರಾದ ಅನುಪ್ರಿಯಾ ಎಸ್.ಪಟೇಲ್ ಈ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು 2.5 ಮಿಲಿಯ ರೂ., ಚಿನ್ನದ ಪದಕ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. 2017ರಲ್ಲಿ…
ನವದೆಹಲಿ: ಬಹು-ರಾಜ್ಯ ಸಹಕಾರ ಸಂಘಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವ, ಹಣಕಾಸಿನ ಅಕ್ರಮಗಳನ್ನು ತಡೆಗಟ್ಟುವ ಮತ್ತು ಹೊಣೆಗಾರಿಕೆಯ ಕುರಿತು ಮಾಡಲಾಗಿರುವ ತಿದ್ದುಪಡಿಗಳ ಬಗ್ಗೆ ಕೇಂದ್ರ ಗೃಹ ಸಚಿವರೂ ಆಗಿರುವ ಸಹಕಾರ ಸಚಿವ ಅಮಿತ್ ಷಾ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಮೀನುಗಾರಿಕಾ ಸಹಕಾರ ಸಂಘಗಳ ಬಗ್ಗೆಯೂ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ರಾಜ್ಯಸಭೆಯಲ್ಲಿ ಮಾತನಾಡಿದ ಅಮಿತ್ ಷಾ, ಆರ್ಥಿಕ ಸ್ಥಿರತೆ ಮತ್ತು ಸಹಕಾರ ಸಂಘಗಳ ಸದಸ್ಯರ ಹಿತಾಸಕ್ತಿಗಳನ್ನು ಕಾಪಾಡಲು ಕೇಂದ್ರ ಸರ್ಕಾರವು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದು, ವಿವೇಕದ ಮಾನದಂಡಗಳನ್ನು ವಿಧಿಸಲಿದೆ ಎಂದು ಹೇಳಿದರು. https://chat.whatsapp.com/Ge11n7QCiMj5QyPvCc0H19 ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು ಮಹತ್ವದ ಹೆಜ್ಜೆ ಇಡಲಾಗಿದ್ದು, ಇದರ ಭಾಗವಾಗಿ ಸಂಸತ್ನಲ್ಲಿ ಬಹರಾಜ್ಯ ಅಪೆಕ್ಸ್ ಸಹಕಾರಿ ಸಂಘಗಳ ಆಡಿಟ್ ವರದಿಗಳನ್ನು ಸಂಸತ್ನಲ್ಲಿ ಮಂಡಿಸುವ ಪ್ರಸ್ತಾಪ ಇಡಲಾಗಿದೆ. ಸ್ವಜನಪಕ್ಷಪಾತ ಮತ್ತು ಪಕ್ಷಪಾತದ ಉಪಟಳ ತಡೆಗಟ್ಟುವ ನಿಟ್ಟಿನಲ್ಲಿ ಸಹಕಾರ ಸಂಘಗಳ ನಿರ್ದೇಶಕರು ಅವರು ಅಥವಾ ಅವರ…
ಅಡಿಕೆಯ ಸಮಗ್ರ ಸಂಶೋಧನೆಗೆ ಕೇಂದ್ರ ಕೃಷಿ ಸಚಿವಾಲಯ ನಿರ್ಧಾರ ಮಂಗಳೂರು: ಅಡಿಕೆ ಕ್ಯಾನ್ಸರ್ಕಾರಕವೆಂದು ವರ್ಗೀಕರಿಸಿದ ವಿಶ್ವ ಆರೋಗ್ಯ ಸಂಸ್ಥೆಯ ಪ್ರಮಾದವನ್ನು ಪುರಾವೆ ಸಮೇತ ಸಂಸದರಿಗೆ ಮನವರಿಕೆ ಮಾಡಿಸಿದ ಕ್ಯಾಂಪ್ಕೊ ಸಂಸ್ಥೆಯ ಪ್ರಯತ್ನಕ್ಕೆ ಯಶಸ್ಸು ಲಭಿಸಿದೆ. ಸಂಸತ್ ಅಧಿವೇಶನದಲ್ಲಿ ಅಡಿಕೆ ಬೆಳೆಯುವ ಪ್ರದೇಶದ ಸಂಸದರ ಪ್ರಯತ್ನದಿಂದಾಗಿ, “ಅಡಿಕೆ ಮತ್ತು ಮಾನವರ ಆರೋಗ್ಯದ ಕುರಿತು ಪುರಾವೆ ಆಧಾರಿತ ಸಂಶೋಧನೆ” ನಡೆಸಲು ನಿರ್ಧರಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಕ್ಯಾಂಪ್ಕೊ ಶ್ಲಾಘಿಸಿದೆ. ಇದಕ್ಕೆ ಶ್ರಮಿಸಿದ ಅಡಿಕೆ ಬೆಳೆಯುವ ಪ್ರದೇಶದ ಎಲ್ಲಾ ಸಂಸದರಿಗೆ ಹಾಗೂ ಭಾರತೀಯ ಜೀವನಕ್ರಮದಲ್ಲಿ ಅಡಿಕೆಯ ಪಾತ್ರವನ್ನು ಗುರುತಿಸಿರುವ ಕೇಂದ್ರ ಕೃಷಿ ಸಚಿವರಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿಯವರು, ಅಡಿಕೆ ಬೆಳೆಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. https://chat.whatsapp.com/Ge11n7QCiMj5QyPvCc0H19 ವಿಶ್ವ ಆರೋಗ್ಯ ಸಂಸ್ಥೆ , ತಪ್ಪು ಗ್ರಹಿಕೆಯಿಂದ ಅಡಿಕೆಯನ್ನು ಕ್ಯಾನ್ಸರ್ಕಾರಕವೆಂದು ವರ್ಗೀಕರಿಸಿರುವ ಕ್ರಮದ ವಿರುದ್ಧ ಕ್ಯಾಂಪ್ಕೊ ಮಾಧ್ಯಮಗಳು ಮತ್ತು ಜನಪ್ರತಿನಿಧಿಗಳ ಮೂಲಕ ನಿರಂತರ ಅಭಿಯಾನ ಮಾಡುತ್ತಲೇ ಬಂದಿದ್ದು, ಕೊನೆಗೂ ಸರಕಾರಕ್ಕೆ ಮನವರಿಕೆ ಮಾಡುವಲ್ಲಿ ಯಶಸ್ವಿಯಾಗಿದೆ. ಎಐಐಎಂಎಸ್,…
ಖಾತೆದಾರರಿಗೆ 4 ನಾಮಿನಿ ಅವಕಾಶ ನವದೆಹಲಿ: ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) 2024 ಮಸೂದೆಯು ಸೋಮವಾರ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರವಾಗಿದೆ. ಇದರಲ್ಲಿ ಪ್ರಸ್ತಾಪಿಸಲಾದ ಬದಲಾವಣೆಗಳು ಬ್ಯಾಂಕಿಂಗ್ ವಲಯದ ಆಡಳಿತವನ್ನು ಬಲಪಡಿಸಲಿದೆ ಮತ್ತು ಗ್ರಾಹಕರ ಅನುಕೂಲತೆಗಳನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. https://chat.whatsapp.com/Ge11n7QCiMj5QyPvCc0H19 ಲೋಕಸಭೆಯ ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಮಸೂದೆ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಭಾರತೀಯ ರಿಸರ್ವ್ ಬ್ಯಾಂಕ್ ಕಾಯ್ದೆ -1934, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ -1949, ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ, ಬ್ಯಾಂಕಿಂಗ್ ಕಂಪನಿಗಳು (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ-1970 ಮತ್ತು ಬ್ಯಾಂಕಿಂಗ್ ಕಂಪನಿಗಳು (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ-1980ರಲ್ಲಿ ಬದಲಾವಣೆಗಳನ್ನು ತರಲು ಒಟ್ಟು 19 ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ ಎಂದು ಹೇಳಿದರು. ಬ್ಯಾಂಕ್ ಖಾತೆದಾರರು ತಮ್ಮ ಖಾತೆಯಲ್ಲಿ ನಾಲ್ಕು ನಾಮಿನಿಗಳನ್ನು ಹೊಂದಲು ಈ ಮಸೂದೆ ಪ್ರಸ್ತಾಪಿಸುತ್ತದೆ. ಒಟ್ಟಾರೆ ಹೂಡಿಕೆದಾರರ ಹಿತಾಸಕ್ತಿಗಳನ್ನು ಕಾಪಾಡುವ ಹಲವು ಅಂಶಗಳು ಈ ಮಸೂದೆಯಲ್ಲಿವೆ. ಬ್ಯಾಂಕಿಂಗ್ ಕ್ಷೇತ್ರವು ವಿಕಸನಗೊಂಡಿರುವುದರಿಂದ ಮತ್ತು ಬ್ಯಾಂಕ್…
ವೈದ್ಯಕೀಯ, ದಂತ, ನೇತ್ರ ತಪಾಸಣಾ, ಚಿಕಿತ್ಸಾ ರಕ್ತದಾನ ಶಿಬಿರದಲ್ಲಿ ಎಂ.ಎಸ್.ಗುರುರಾಜ್ ಹೇಳಿಕೆ ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಭಾನುವಾರ ಕೂಟ ಮಹಾಜಗತ್ತು ಮಂಗಳೂರು ಅಂಗಸಂಸ್ಥೆ ಹಾಗೂ ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ ಇವುಗಳ ಸಹಯೋಗದೊಂದಿಗೆ ಮಂಗಳೂರಿನ ಪಾಂಡೇಶ್ವರದಲ್ಲಿನ ಶ್ರೀ ಗುರುನರಸಿಂಹ ಸಭಾಭವನದಲ್ಲಿ ಬೃಹತ್ ಉಚಿತ ಆರೋಗ್ಯ -ದಂತ -ಕಣ್ಣಿನ -ತಪಾಸಣಾ -ಚಿಕಿತ್ಸಾ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. https://chat.whatsapp.com/Ge11n7QCiMj5QyPvCc0H19 ಮಂಗಳೂರಿನ ಅತ್ತಾವರ ಕೆ.ಎಂ.ಸಿ. ಆಸ್ಪತ್ರೆ ಹಾಗೂ ದೇರಳಕಟ್ಟೆ ಯೇನಪೊಯ ದಂತ ಕಾಲೇಜಿನ ನುರಿತ, ಅನುಭವಿ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದರು. 485 ರೋಗಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಕಣ್ಣಿನ ಸಮಸ್ಯೆ ಇದ್ದ 85 ಜನರಿಗೆ ಸ್ಥಳದಲ್ಲೇ ಉಚಿತವಾಗಿ ಕನ್ನಡಕ ಹಾಗೂ ಎಲ್ಲಾ ಖಾಯಿಲೆಗಳಿಗೆ ಔಷಧಗಳನ್ನು ಉಚಿತವಾಗಿ ನೀಡಲಾಯಿತು. 48 ಜನರಿಗೆ ಇಸಿಜಿ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆ ಆವಶ್ಯಕತೆಯುಳ್ಳವರನ್ನು ಗುರುವಾರ ಕೆಎಂಸಿ ಅತ್ತಾವರ ಆಸ್ಪತ್ರೆಗೆ ಹಾಗೂ ಹಲ್ಲಿನ ಸಮಸ್ಯೆಯುಳ್ಳವರಿಗೆ ದೇರಳಕಟ್ಟೆ ಯೆನೆಪೋಯ ದಂತ ಆಸ್ಪತ್ರೆಗೆ ಬರಲು ಸೂಚಿಸಲಾಗಿದೆ. ಅನೇಕರಿಗೆ …
ಮಂಗಳೂರು: ಅಡಿಕೆಯ ಸುರಕ್ಷತೆ ಮತ್ತು ಕ್ಯಾನ್ಸರ್ ರೋಗ ಶಮನಗೊಳಿಸುವ ಅದರ ಆಯುರ್ವೇದೀಯ ಗುಣಗಳ ಬಗ್ಗೆ ಸಮಗ್ರ ಸಂಶೋಧನೆ ನಡೆಸಬೇಕು, ಇದಕ್ಕಾಗಿ ಮುಂಬರುವ ಬಜೆಟಟ್ನಲ್ಲಿ ನಿಧಿ ಹಂಚಿಕೆ ಮಾಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಪತ್ರ ಬರೆದು ಮನವಿ ಮಾಡಿದ್ದಾರೆ. ಅಡಿಕೆ ಕೃಷಿ ಲಕ್ಷಾಂತರ ಬೆಳೆಗಾರರಿಗೆ ಜೀವನಾಧಾರವಾಗಿದೆ. ಭಾರತದ ಸಾಂಸ್ಕೃತಿಕ ಜನಜೀವನದಲ್ಲಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಅಡಿಕೆಯು ಮಹತ್ತರ ಪಾತ್ರ ವಹಿಸಿರುವುದರ ಕುರಿತು ಹಣಕಾಸು ಸಚಿವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಭಾರತದಲ್ಲಿ ಸುಮಾರು ೯.೫೫ ಲಕ್ಷ ಹೆಕ್ಟೇರ್ ವ್ಯಾಪ್ತಿಯಲ್ಲಿ ಅಡಿಕೆ ಕೃಷಿ ವಿಸ್ತರಿಸಿದ್ದು, ವಾರ್ಷಿಕ ೧೪ರಿಂದ ೧೮ ಲಕ್ಷ ಮೆಟ್ರಿಕ್ ಟನ್ಗಳಷ್ಟು ಅಡಿಕೆ ಉತ್ಪಾದನೆಯಾಗುತ್ತಿದೆ. ಕೇಂದ್ರ ಸರಕಾರ ಜಿಎಸ್ಟಿ ಪದ್ಧತಿ ಜಾರಿಗೊಳಿಸಿದಂದಿನಿಂದ ಈವರೆಗೆ ಬರೇ ಕ್ಯಾಂಪ್ಕೊ ಒಂದೇ ಸಂಸ್ಥೆ ಸುಮಾರು ೬೫೦ ಕೋಟಿ ರೂ. ತೆರಿಗೆ ಪಾವತಿ ಮಾಡಿರುವುದರ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತರಲಾಗಿದೆ. https://chat.whatsapp.com/Ge11n7QCiMj5QyPvCc0H19 ವಿಶ್ವ ಆರೋಗ್ಯ ಸಂಸ್ಥೆಯು…
ಸಹಕಾರ ರತ್ನ ಡಾ.ಹರೀಶ್ ಆಚಾರ್ಯರಿಗೆ ಅಭಿನಂದಿಸಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಆಶೀರ್ವಚನ ಮಂಗಳೂರು: ರಾಜ್ಯ ಸರಕಾರದಿಂದ ಇತ್ತೀಚೆಗೆ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಡಾ.ಎಸ್.ಆರ್. ಹರೀಶ್ ಆಚಾರ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮ ದ.ಕ. ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿಶ್ವಕರ್ಮ ಸಹಕಾರ ಬ್ಯಾಂಕ್ ಹಿತೈಷಿಗಳ ಬಳಗ ಮತ್ತು ಸಹಕಾರಿ ಮಿತ್ರರು ಆಶ್ರಯದಲ್ಲಿ ರಥಬೀದಿಯ ಪಟ್ಟೆ ಲಿಂಗಪ್ಪಾಚಾರ್ಯ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆಯಿತು. ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಡುಕುತ್ಯಾರಿನ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. https://chat.whatsapp.com/Ge11n7QCiMj5QyPvCc0H19 ಪಡುಕುತ್ಯಾರಿನ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ನಮ್ಮ ಬದುಕು ಒಳ್ಳೆಯತನದಲ್ಲಿ ಇನ್ನೊಬ್ಬರಿಗೆ ಆದರ್ಶವಾಗಿರಬೇಕು. ನಮ್ಮ ನಡೆ -ನುಡಿಗಳು, ಬದುಕಿನ ರೀತಿ ದೇವರು ಮೆಚ್ಚುವಂತಿರಬೇಕು ಎಂದು ಹೇಳಿದರು. ಸಹಕಾರ ಕ್ಷೇತ್ರದಲ್ಲಿ ಮಾಡಿರುವ…
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ, ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಸ್ ಆರ್ ಹರೀಶ್ ಆಚಾರ್ಯ ಅವರಿಗೆ ಡಿಸೆಂಬರ್ 1ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. https://chat.whatsapp.com/Ge11n7QCiMj5QyPvCc0H19 ದಕ್ಷಿಣ ಕನ್ನಡ ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿಶ್ವಕರ್ಮ ಸಹಕಾರ ಬ್ಯಾಂಕ್ ಹಿತೈಷಿಗಳ ಬಳಗ ಮತ್ತು ಸಹಕಾರಿ ಮಿತ್ರರು ಕಾರ್ಯಕ್ರಮ ಹಮ್ಮಿಕೊಂಡಿದ್ದು ಡಿಸೆಂಬರ್ 1ರಂದು ಸಂಜೆ 5 ಗಂಟೆಗೆ ಕಾರ್ಸ್ಟ್ರೀಟ್ ಪಟ್ಟೆ ಲಿಂಗಪ್ಪಾಚಾರ್ಯ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 5ರಿಂದ ವಿಶ್ವಾಸ್ ಕೃಷ್ಣ ಮತ್ತು ಬಳಗದವರಿಂದ ಪಿಟೀಲು ವಾದನ -ಸಂವಾದನ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಸಹಕಾರಿ ಮಿತ್ರರು ಹಾಗೂ ಗಣ್ಯರು ಡಾ.ಎಸ್ ಆರ್ ಹರೀಶ್ ಆಚಾರ್ಯ ಅವರನ್ನು ಅಭಿನಂದಿಸಲಿದ್ದಾರೆ. ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರೂ…
ಸಹಕಾರಿ ಕ್ಷೇತ್ರದ ಅಧ್ಯಯನ ಹಾಗೂ ಉದ್ಯೋಗ ಬಯಸುವವರಿಗೆ ಪೂರಕವಾಗುವಂತೆ ವಿವಿ ಸ್ಥಾಪನೆಯ ನಿರೀಕ್ಷೆ ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಈ ಬಾರಿಯ ಅಧಿವೇಶನದಲ್ಲೇ ಬಹುನಿರೀಕ್ಷಿತ ರಾಷ್ಟ್ರೀಯ ಸಹಕಾರಿ ವಿಶ್ವವಿದ್ಯಾಲಯ ಮಸೂದೆಯನ್ನು ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ದೇಶದಲ್ಲಿ ಸಹಕಾರಿ ಕ್ಷೇತ್ರದ ಅಧ್ಯಯನ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಉದ್ಯೋಗ ಬಯಸುವವರಿಗೆ ಪೂರಕವಾಗುವಂತೆ ರಾಷ್ಟ್ರೀಯ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಅಗತ್ಯ ಮಸೂದೆಯನ್ನು ಈ ಬಾರಿಯ ಅಧಿವೇಶನದಲ್ಲಿ ಮಂಡಿಸಲಾಗುವುದು. ಸಹಕಾರ ನಿರ್ವಹಣೆಯ ಕೋರ್ಸುಗಳಿಗಾಗಿ ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪಿಸಲಿದೆ. ದೇಶದಲ್ಲಿ ಸಹಕಾರಿ ಚಳವಳಿಯ ತಳಹದಿಯನ್ನು ಗಟ್ಟಿ ಮಾಡಲು ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದರು. https://chat.whatsapp.com/Ge11n7QCiMj5QyPvCc0H19 ರಾಷ್ಟ್ರೀಯ ಸಹಕಾರಿ ವಿಶ್ವವಿದ್ಯಾಲಯದಲ್ಲಿ ಪದವಿ ಪೂರೈಸಿ ಹೊರಬರುವ ವಿದ್ಯಾರ್ಥಿಗಳಿಗೆ ಸಹಕಾರಿ ವಲಯದಲ್ಲಿ ವಿಪುಲ ಅವಕಾಶಗಳು ಸೃಷ್ಟಿಯಾಗಲಿವೆ. ಸಹಕಾರ ನಿರ್ವಹಣೆಯ…
ವರ್ಗೀಸ್ ಕುರಿಯನ್ ಬಳಿಕ ಈ ಪ್ರಶಸ್ತಿ ಪಡೆದ ಎರಡನೇ ಭಾರತೀಯನೆಂಬ ಹೆಗ್ಗಳಿಕೆ ನವದೆಹಲಿ: ಭಾರತೀಯ ರೈತರ ರಸಗೊಬ್ಬರ ಸಹಕಾರಿ ಲಿಮಿಟೆಡ್ನ (ಇಫ್ಕೋ) ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಯು.ಎಸ್.ಅವಸ್ಥಿ ಅವರಿಗೆ ಮಂಗಳವಾರ ಪ್ರಸಕ್ತ ಸಾಲಿನ ಐಸಿಎ(ಅಂತಾರಾಷ್ಟ್ರೀಯ ಸಹಕಾರ ಒಕ್ಕೂಟ)ದ ಪ್ರತಿಷ್ಠಿತ ರಾಕ್ಡೇಲ್ ಪಯೋನಿಯರ್ಸ್ ಪುರಸ್ಕಾರ ಪ್ರದಾನ ಮಾಡಲಾಯಿತು. https://chat.whatsapp.com/Ge11n7QCiMj5QyPvCc0H19 ದೆಹಲಿಯಲ್ಲಿ ನಡೆಯುತ್ತಿರುವ ಐಸಿಎ ಸಮಾರಂಭದಲ್ಲಿ ಈ ಪುರಸ್ಕಾರ ಪ್ರದಾನ ಮಾಡಲಾಯಿತು. 2000ನೇ ಇಸವಿಯಲ್ಲಿ ಈ ಪುರಸ್ಕಾರ ನೀಡುವುದನ್ನು ಆರಂಭಿಸಲಾಗಿದ್ದು, ಇದು ಸಹಕಾರಿ ವಲಯದಲ್ಲಿ ನೀಡುತ್ತಿರುವ ಉತ್ಕೃಷ್ಟ ಸೇವೆಗೆ ಸಹಕಾರಿ ಸಾಧಕ ವ್ಯಕ್ತಿ ಅಥವಾ ಸಂಸ್ಥೆಗೆ ಐಸಿಎ ನೀಡುತ್ತಿರುವ ಅತ್ಯುನ್ನತ ಪುರಸ್ಕಾರವಾಗಿದೆ. ಡಾ.ಅವಸ್ಥಿ ಈ ಪುರಸ್ಕಾರ ಪಡೆಯುತ್ತಿರುವ ಎರಡನೇ ಭಾರತೀಯರಾಗಿದ್ದು, 2001ರಲ್ಲಿ ಡಾ.ವರ್ಗೀಸ್ ಕುರಿಯನ್ ಈ ಪುರಸ್ಕಾರ ಪಡೆದಿದ್ದ ಮೊದಲ ಭಾರತೀಯ ಎನಿಸಿದ್ದರು. ಐಸಿಎ ಅಧ್ಯಕ್ಷ ಆರಿಯಲ್ ಗ್ವಾರ್ಕೋ ಡಾ.ಅವಸ್ಥಿ ಅವರಿಗೆ ಪುರಸ್ಕಾರ ಪ್ರದಾನ ಮಾಡಿದರು. ಇಫ್ಕೋ ಆಶ್ರಯದಲ್ಲಿ ನವದೆಹಲಿಯಲ್ಲಿ ಐಸಿಎಯ ಸಾಮಾನ್ಯ ಸಭೆ ಮತ್ತು ಜಾಗತಿಕ ಸಹಕಾರ ಅಧಿವೇಶನ ನಡೆಯುತ್ತಿದ್ದು ನ.30ರಂದು ಕೊನೆಗೊಳ್ಳಲಿದೆ. ಡಾ.ಅವಸ್ಥಿ…
