Author: admin
ಭಾರತದ ಡೈರಿ ಚಳವಳಿಯ ನೈಜ ಕಥೆಯಾಧರಿಸಿದ ಸಿನಿಮಾ 1976ರಲ್ಲಿ ಬಿಡುಗಡೆ ಚಿತ್ರದ ಪ್ರಮುಖ ಪಾತ್ರದಲ್ಲಿದ್ದರು ಅನಂತ್ನಾಗ್, ಗಿರೀಶ್ ಕಾರ್ನಾಡ್ ದೇಶದ ಡೈರಿ ಚಳವಳಿಯ ದಿಕ್ಕನ್ನೇ ಬದಲಿಸಿತ್ತು ಹಾಲಿನ ಮನುಷ್ಯ ವರ್ಗೀಸ್ ಕುರಿಯನ್ ಪ್ರಯತ್ನ ಸಹಕಾರ ಕ್ಷೇತ್ರ ಇಂದು ಎಲ್ಲ ವಲಯಗಳಲ್ಲೂ ಮುಂಚೂಣಿಯಲ್ಲಿದೆ. ಹಣಕಾಸು, ಆರ್ಥಿಕ ವ್ಯವಹಾರ, ಕೃಷಿ, ಮೀನುಗಾರಿಕೆ, ಉದ್ಯಮ, ಹೈನುಗಾರಿಕೆ ಇತ್ಯಾದಿ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿರುವ ಸಹಕಾರಿಗಳು ಒಂದು ಕಾಲದಲ್ಲಿ ಸಿನಿಮಾ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು ಎಂಬ ವಿಷಯ ಅನೇಕರಿಗೆ ತಿಳಿದಿಲ್ಲ. https://chat.whatsapp.com/Ge11n7QCiMj5QyPvCc0H19 ಇಂದು ಆರೋಗ್ಯ, ವಿದ್ಯಾಭ್ಯಾಸ, ಬಡವರ ಮನೆ ನಿರ್ಮಾಣಗಳಿಗೆ ಕ್ರೌಡ್ಫಂಡಿಂಗ್ ಸಾಮಾನ್ಯವಾಗಿದೆ. ಸಿನಿಮಾಕ್ಕೂ ಕ್ರೌಡ್ಫಂಡಿಂಗ್ ಮಾಡಲಾಗಿತ್ತು ಎಂಬುದು ಬಹಳ ಹಿಂದಿನ ಅಂದರೆ 48 ವರ್ಷಗಳ ಹಿಂದಿನ ಮಾತು. ದೇಶದ ಮೊದಲ ಕ್ರೌಡ್ಫಂಡಿಂಗ್ ಸಿನಿಮಾ ಎನಿಸಿರುವ ಶ್ಯಾಮ್ ಬೆನಗಲ್ ನಿರ್ದೇಶನದ “ಮಂಥನ್ʼʼ ಸಿನಿಮಾವನ್ನು ಕ್ರೌಡ್ಫಂಡಿಂಗ್ ಮೂಲಕವೇ ನಿರ್ಮಾಣ ಮಾಡಲಾಗಿತ್ತು. ಇದಕ್ಕೆ ಐದು ಲಕ್ಷ ರೈತರು ಹಣ ತೊಡಗಿಸಿದ್ದು ಅವರೆಲ್ಲರೂ ಸಹಕಾರ ಕ್ಷೇತ್ರಕ್ಕೆ ಸೇರಿದವರು ಎಂಬುದು ಕುತೂಹಲಕಾರಿ ವಿಷಯ. 1976ರಲ್ಲಿ…
103ನೇ ಜನ್ಮದಿನಾಚರಣೆ ಹಲವೆಡೆ ಆಚರಣೆ ನವದೆಹಲಿ: ಭಾರತದ ಶ್ವೇತಕ್ರಾಂತಿಯ ಹರಿಕಾರ, ಹಾಲಿನ ಮನುಷ್ಯ ಎಂಬ ಖ್ಯಾತಿಯ ವರ್ಗೀಸ್ ಕುರಿಯನ್ ಅವರ ೧೦೩ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಹಲವೆಡೆ ಮಂಗಳವಾರ ಕಾರ್ಯಕ್ರಮಗಳು ನಡೆದಿದ್ದು ಅವರಿಗೆ ಗೌರವ ಸಲ್ಲಿಸಲಾಯಿತು. ಮೀನುಗಾರಿಕಾ, ಪಶುಸಂಗೋಪನಾ ಮತ್ತು ಹೈನುಗಾರಿಕೆ ಸಚಿವಾಲಯದ ವತಿಯಿಂದ ವರ್ಗೀಸ್ ಕುರಿಯನ್ ಸ್ಮರಣಾರ್ಥ ಕಾರ್ಯಕ್ರಮ ನಡೆದಿದ್ದು ರಾಜಕಾರಣಿಗಳು, ರೈತರು, ಉದ್ಯಮಿಗಳು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಕುರಿಯನ್ಗೆ ನುಡಿನಮನ ಸಲ್ಲಿಸಿದರು. https://chat.whatsapp.com/Ge11n7QCiMj5QyPvCc0H19 ವರ್ಗೀಸ್ ಕುರಿಯನ್ ಜನ್ಮದಿನ ಅಂಗವಾಗಿ ದೆಹಲಿಯ ಮಾಣೆಕ್ ಶಾ ಕೇಂದ್ರದಲ್ಲಿ ಅಮುಲ್ ಕ್ಲೀನ್ ಫ್ಯುಯೆಲ್ ರ್ಯಾಲಿ ನಡೆಯಿತು. ದೇಶಾದ್ಯಂತದ ಅಮುಲ್ ಕಂಪನಿಯ ಸದಸ್ಯರು, ನೌಕರರು ಪಾಲ್ಗೊಂಡು ದೇಶದ ಹಾಲಿನ ಡೇರಿ ಇತಿಹಾಸದ ಸಾಧನೆಗಳನ್ನು ಮೆಲುಕು ಹಾಕಿದರು. ಹಾಲು ಮತ್ತು ಹಾಲಿನ ಉತ್ಪನ್ನಗಳ ಉನ್ನತಿಗಾಗಿ ರೈತರು ಮತ್ತು ಪಶುಸಂಗೋಪನಾ ಇಲಾಖೆ ಹಮ್ಮಿಕೊಂಡ ವಿವಿಧ ಕಾರ್ಯಕ್ರಮಗಳ ಮೆಲುಕು ಹಾಕಲಾಯಿತು. ಮಹಿಳೆಯರ ನೇತೃತ್ವದಲ್ಲಿ ಜಾನುವಾರು ಮತ್ತು ಡೇರಿ ವಲಯ ಹಾಗೂ ಸ್ಥಳೀಯ ಪಶುವೈದ್ಯಕೀಯ ನೆರವಿನಿಂದ ರೈತರ ಸಬಲೀಕರಣ…
ಜನಸಂಖ್ಯೆಯ 30 ಶೇಕಡಾ ಪ್ರಮಾಣ ಸಹಕಾರ ಸಂಘಗಳ ಸದಸ್ಯರು! ದೇಶ ಪುಟ್ಟದಾದರೂ ಸಹಕಾರ ಕ್ಷೇತ್ರದ ಬೆಳವಣಿಗೆ ಮಾದರಿ ಮಂಗಳೂರು: ವಿಶ್ವ ಭೂಪಟದಲ್ಲಿ ಆ ದೇಶ ಪುಟ್ಟದಾಗಿದ್ದು ಕರ್ನಾಟಕದಷ್ಟೂ ಜನಸಂಖ್ಯೆಯನ್ನು ಹೊಂದಿಲ್ಲ. ಆದರೆ ಸಹಕಾರ ಕ್ಷೇತ್ರಕ್ಕೆ ಆ ದೇಶದ ಕೊಡುಗೆ ಅದ್ವಿತೀಯವಾದುದು. ಕೇವಲ 52 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಆ ದೇಶದ ಜನ ತಮ್ಮ ದೇಶದ ಜಿಡಿಪಿಗೆ ಕೊಡುವ ಕೊಡುಗೆ ಆ ದೇಶದ ಒಟ್ಟು ಜಿಡಿಪಿಯ ಐದನೇ ಒಂದು ಪಾಲು. ಅಂದರೆ ಶೇ.20ರಷ್ಟು. ಯಾವುದು ಆ ದೇಶ ಎಂಬ ಕುತೂಹಲ ಸಹಜ. ಉತ್ತರ ನ್ಯೂಜಿಲೆಂಡ್. ಒಂದು ಸಂಶೋಧನೆಯ ಪ್ರಕಾರ ನ್ಯೂಜಿಲೆಂಡ್ಗೆ ಆ ದೇಶದ ಸಹಕಾರ ಕ್ಷೇತ್ರದಿಂದ ಶೇ.18-20ರಷ್ಟು ಕೊಡುಗೆ ಲಭಿಸುತ್ತಿದ್ದು ಇದು ವಿಶ್ವದಲ್ಲೇ ಅತಿ ಹೆಚ್ಚು. ನ್ಯೂಜಿಲೆಂಡ್ನ ಒಟ್ಟು ಜನಸಂಖ್ಯೆಯ ಶೇ.30ರಷ್ಟು (ಸರಿಸುಮಾರು 1.50 ಮಿಲಿಯ) ಜನ ಸಹಕಾರಿ ಕ್ಷೇತ್ರದ ಸದಸ್ಯರಾಗಿದ್ದು, ಸುಮಾರು 50,000 ಉದ್ಯೋಗಿಗಳು ಇಲ್ಲಿನ ಸಹಕಾರಿ ಕ್ಷೇತ್ರದ ಉದ್ಯೋಗಿಗಳಿದ್ದಾರೆ. https://chat.whatsapp.com/Ge11n7QCiMj5QyPvCc0H19 ಒಂದು ಅಂಕಿ ಆಂಶದ ಪ್ರಕಾರ ನ್ಯೂಜಿಲೆಂಡ್ನ ಅಗ್ರ 30…
ಮಂಗಳೂರು: ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆಯಾಗಿದ್ದಾರೆ. ದಾವಣಗೆರೆಯ ಶ್ರೀ ಶಾಮನೂರು ಶಿವಶಂಕರಪ್ಪ ಸಭಾಭವನದಲ್ಲಿ ನವೆಂಬರ್ 22ರದು ಜರುಗಿದ ಸಹಕಾರ ಭಾರತಿಯ 7ನೇ ರಾಜ್ಯ ಅಧಿವೇಶನದಲ್ಲಿ ಸಾಣೂರು ನರಸಿಂಹ ಕಾಮತ್ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆರಿಸಲಾಯಿತು. ಚುನಾವಣಾ ಅಧಿಕಾರಿಯಾಗಿದ್ದ ಹಿರಿಯ ಸಹಕಾರಿ ಬಾಗಲಕೋಟೆಯ ಜಿ.ಎನ್ ಪಾಟೀಲ್ ಈ ಆಯ್ಕೆಯನ್ನು ಘೋಷಿಸಿದರು. https://chat.whatsapp.com/Ge11n7QCiMj5QyPvCc0H19 ನಿರ್ಗಮನ ಪ್ರಧಾನ ಕಾರ್ಯದರ್ಶಿ ಉತ್ತರ ಕನ್ನಡ ಜಿಲ್ಲಾ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನ್ದಾಸ್ ನಾಯಕ್ ಸಹಕಾರಿ ಧ್ವಜ ಹಸ್ತಾಂತರಿಸುವುದರ ಮೂಲಕ ಜವಾಬ್ದಾರಿಯ ವರ್ಗಾವಣೆ ಮಾಡಿದರು. ಈ ಸಂದರ್ಭ ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ ಪಾಚ್ಪುರೆ, ರಾಷ್ಟ್ರೀಯ ಸಂರಕ್ಷಕ ಕೊಪ್ಪಳದ ರಮೇಶ್ ವೈದ್ಯ, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಮತ್ತೂರು, ಉತ್ತರ ಪ್ರಾಂತ ಸಂಘದ ಹಿರಿಯರಾದ ಅರವಿಂದ ದೇಶಪಾಂಡೆ ಹುಬ್ಬಳ್ಳಿ ನಿರ್ಗಮನ ಅಧ್ಯಕ್ಷ ಬಾಗಲಕೋಟೆಯ ರಾಜಶೇಖರ ಶೀಲವಂತ, ನೂತನ…
ಬೆಳ್ತಂಗಡಿ: ಎಂ.ಸಿ.ಸಿ. ಬ್ಯಾಂಕಿನ 18 ಶಾಖೆಯು ಬೆಳ್ತಂಗಡಿ ಚರ್ಚ್ ರಸ್ತೆಯ ಹತ್ತಿರ, ವೈಭವ್ ಆರ್ಕೇಡ್ನ ನೆಲಮಹಡಿಯಲ್ಲಿ ಭಾನುವಾರ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ಧರ್ಮಗುರು ಫಾ| ವಾಲ್ಟರ್ ಡಿಮೆಲ್ಲೊ ಆಶೀರ್ವಚಿಸಿದರು. https://chat.whatsapp.com/Ge11n7QCiMj5QyPvCc0H19 ಭದ್ರತಾ ಕೊಠಡಿಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರೊಕ್ಯೂರೇಟರ್ ಅಬ್ರಹಾಂ ಪಟ್ಟೆರಿಲ್ ಉದ್ಘಾಟಿಸಿದರು. ಇ-ಸ್ಟ್ಯಾಂಪಿಂಗ್ ವ್ಯವಸ್ಥೆಯನ್ನು ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹೆನ್ರಿ ಲೋಬೊ ಉದ್ಘಾಟಿಸಿದರು. ಸಿರಿಯನ್ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಎ.ಜೆ. ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರ ರತ್ನ ಅನಿಲ್ ಲೋಬೊ, ಬ್ಯಾಂಕಿನ ಸೇವೆ ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಬೆಳ್ತಂಗಡಿ ಪರಿಸರದಲ್ಲಿ ಬ್ಯಾಂಕಿನ ಸಿಬ್ಬಂದಿಗಳು ಭೇಟಿ ಮಾಡಿದ ಸಂದರ್ಭದಲ್ಲಿ ಬೆಳ್ತಂಗಡಿ ಪರಿಸರದ ಜನರು ನೀಡಿದ ಸಹಕಾರ ಮತ್ತು ಬೆಂಬಲಕ್ಕಾಗಿ ವಂದನೆ ಸಲ್ಲಿಸಿದರು. ಶಾಖೆ ಪ್ರಾರಂಭವಾದ ಒಂದು ವರ್ಷದೊಳಗೆ ಲಾಭ ಗಳಿಸಲು ಮತ್ತು ಸಮಾಜಕ್ಕೆ ಸೇವೆ…
ಮಂಗಳೂರು: ಸಹಕಾರ ಭಾರತಿಯ ರಾಜ್ಯ ಸಹಕಾರಿ ಸಮಾವೇಶ ನವೆಂಬರ್ 22ನೇ ಶುಕ್ರವಾರ ದಾವಣಗೆರೆಯ ಮಾಗನೂರು ಬಸಪ್ಪ ರಸ್ತೆ (ಹದಡಿ ರಸ್ತೆ) ರಸ್ತೆಯಲ್ಲಿರುವ ಶ್ರೀ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11ರಿಂದ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಹಾಸನ ಜಿಲ್ಲೆಯ ಬೇಲೂರು ಶ್ರೀ ಪುಷ್ಪಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಸಹಕಾರಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸಹಕಾರ ಭಾರತಿಯ ರಾಷ್ಟ್ರೀಯ ಅಧ್ಯಕ್ಷ ದಿನನಾಥ ಠಾಕೂರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ, ಡಾಕ್ಟರ್ ಉದಯ್ ವಾಸುದೇವ ಜೋಶಿ, ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಪಾಲ್ಗೊಳ್ಳಲಿದ್ದಾರೆ. ಸಹಕಾರ ಭಾರತಿ ರಾಜ್ಯಾಧ್ಯಕ್ಷ ರಾಜಶೇಖರ್ ಶೀಲವಂತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ, ಪಂಚ ಪರಿವರ್ತನೆ, ಸಹಕಾರಿ ಸಂಘಗಳಲ್ಲಿ ಆಡಳಿತ ಮಂಡಳಿ ಜವಾಬ್ದಾರಿ ಸೇರಿದಂತೆ ಅನೇಕ ವಿಚಾರಗೋಷ್ಠಿಗಳು…
ಸಹಕಾರ ಸಪ್ತಾಹ ಸಮಾರೋಪದಲ್ಲಿ ಸಚಿವ ರಾಜಣ್ಣ ಪ್ರತಿಪಾದನೆ ಬೆಳಗಾವಿ: ‘ಈ ಹಿಂದೆ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸದ ಕಾರಣ, ರೈತರು ತಾವು ಬೆಳೆದ ಬೆಳೆಗೆ ಬೆಂಕಿ ಹಚ್ಚಬೇಕಾದ ಪರಿಸ್ಥಿತಿ ಇತ್ತು. ಆದರೆ ಅಪೆಕ್ಸ್ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳು ಸಕ್ಕರೆ ಕಾರ್ಖಾನೆಗಳ ಸ್ಥಾಪನೆಗೆ ಸಾಲ ಸೌಲಭ್ಯ ಒದಗಿಸಿದ ನಂತರ, ಅನೇಕ ಸಹಕಾರ ಮತ್ತು ಖಾಸಗಿ ಕಾರ್ಖಾನೆ ಆರಂಭವಾದವು. ಹಾಗಾಗಿ ಇಂದು ಕಬ್ಬು ಬೆಳೆಗಾರರು ನೆಮ್ಮದಿಯಿಂದ ಇದ್ದಾರೆ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಬೆಳಗಾವಿಯಲ್ಲಿ ಬುಧವಾರ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘ಸಹಕಾರ ಸಂಘಗಳಲ್ಲಿ ಕೆಲವರು ಮಾಡಿದ ತಪ್ಪುಗಳು ಇಡೀ ಕ್ಷೇತ್ರಕ್ಕೆ ಕಳಂಕ ತರುತ್ತಿರುವುದು ಸರಿಯಲ್ಲ, ವಂಚಕರು ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರು ಬಳಸಿಕೊಂಡು ಜನರನ್ನು ವಂಚಿಸಿದ ಘಟನೆಗಳೂ ನಮ್ಮ ಗಮನಕ್ಕೆ ಬಂದಿವೆ’ ಎಂದು ಹೇಳಿದರು. https://chat.whatsapp.com/Ge11n7QCiMj5QyPvCc0H19 ‘ನಿರ್ದೇಶಕ ಮಂಡಳಿಯ ವಿಶ್ವಾಸಾರ್ಹತೆ ಆಧರಿಸಿ, ಜನ ಸಹಕಾರ ಸಂಸ್ಥೆಗಳಲ್ಲಿ ಠೇವಣಿ ಇರಿಸುತ್ತಾರೆ. ಉತ್ತಮರಲ್ಲದವರು…
ಬೆಳಗಾವಿ: ರಾಜ್ಯದ ಸಹಕಾರ ಕ್ಷೇತ್ರದಲ್ಲಿ ವಿಶಿಷ್ಠ, ವಿಶೇಷ ಸೇವಾ ಕಾರ್ಯಗಳು ಮತ್ತು ಶಿಸ್ತುಬದ್ಧ ಆಡಳಿತದಿಂದ ತನ್ನದೇ ಛಾಪು ಮೂಡಿಸಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಬೆಳಗಾವಿಯಲ್ಲಿ ಗುರುವಾರ ಸಮಾಪನಗೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ “ಶ್ರೇಷ್ಠ ಸಹಕಾರಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎಸ್.ಗುರುರಾಜ್ ಅವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಮತ್ತು ಅನೇಕ ಸಂಸ್ಥೆಗಳು ಜಂಟಿಯಾಗಿ ಬೆಳಗಾವಿಯ ಕೆಎಲ್ಇ ವಿದ್ಯಾಸಂಸ್ಥೆಯ ಜೆ.ಎನ್.ಎಂ.ಸಿ. ಆವರಣದಲ್ಲಿ ಆಯೋಜಿಸಿದ್ದ ವರ್ಣರಂಜಿತ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಯಿತು. https://chat.whatsapp.com/Ge11n7QCiMj5QyPvCc0H19 ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಎಂಟು ಜಿಲ್ಲೆಗಳನ್ನೊಳಗೊಂಡ ಮೈಸೂರು ಪ್ರಾಂತದ ಒಬ್ಬರಿಗೆ ಮಾತ್ರ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿದೆ. ಸೊಸೈಟಿಯ ಸರ್ವತೋಮುಖ ಏಳಿಗೆ ಹಾಗೂ ಗಳಿಸಿದ ಲಾಭಾಂಶದಲ್ಲಿ ಒಂದು ಪಾಲನ್ನು ಸಮಾಜಮುಖಿ ಕಾರ್ಯಗಳಿಗೆ ಮುಖ್ಯವಾಗಿ ಆರೋಗ್ಯ, ಸಾಹಿತ್ಯ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡಿ…
ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ, ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ಗೆ ಗೌರವ ತಂದುಕೊಟ್ಟ ಸಾಧಕ ಮಂಗಳೂರು: ಕರ್ನಾಟಕ ರಾಜ್ಯ ಏಕೀಕರಣಕ್ಕೆ 69 ವರ್ಷ ತುಂಬಿದ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ನೀಡಲಾಗುವ ಪ್ರತಿಷ್ಠಿತ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತ್ರಿಕೋದ್ಯಮದ ಇತಿಹಾಸದಲ್ಲಿ ಮೊದಲ ಬಾರಿ ನೀಡುವ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ತಿಳಿಸಿದ್ದಾರೆ. ಸಹಕಾರಿ ರಂಗದಲ್ಲಿ ಹೊಸ ಹೊಸ ಅವಿಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆ ನೀಡುತ್ತಾ…
ಮಂಗಳೂರು: ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಕಾವೂರು ಇದರ ಕೋಡಿಕಲ್ ಶಾಖೆ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಮಂದಿರ ಕೋಡಿಕಲ್ ಹಾಗೂ ಗಿರಿಜಾ ಸರ್ಜಿಕಲ್ ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಕೋಡಿಕಲ್ ಶಾಖೆಯ ಆವರಣದಲ್ಲಿ ಇತ್ತೀಚೆಗೆ ನಡೆಸಲಾಯಿತು. https://chat.whatsapp.com/Ge11n7QCiMj5QyPvCc0H19 ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುರುಅಂಬಾ ದೇವಸ್ಥಾನದ ಮುಖ್ಯ ಅರ್ಚಕ ರವೀಶ ರಾವ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಎಸ್.ಎನ್.ಡಿ.ಪಿ ಸಂಘ ಕೋಡಿಕಲ್ ಇದರ ಅಧ್ಯಕ್ಷ ಪದ್ಮನಾಭ ಕಾರ್ನಾಡ್, ಗಿರಿಜಾ ಸರ್ಜಿಕಲ್ ಪಾಲುದಾರರಾದ ಹರೀಶ್ ಕುಮಾರ್ ಯು, ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್, ಕೆಸಿ ಎಂಟರ್ಪ್ರೈಸರ್ಸ್ ಮಾಲೀಕ ಕೆ.ಚೆನ್ನಯ್ಯ , ಎಸ್.ಎನ್.ಡಿ.ಪಿ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ದಯಾಮಣಿ…
