Author: admin

ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋಆಪರೇಟಿವ್‌ ಸೊಸೈಟಿಯಿಂದ ಆಯೋಜನೆ ಪುತ್ತೂರು: ವಜ್ರಮಹೋತ್ಸವ ವರ್ಷ ಆಚರಿಸುತ್ತಿರುವ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋಆಪರೇಟಿವ್ ಸೊಸೈಟಿ ಮಂಗಳೂರು, ವಿಶ್ವಬ್ರಾಹ್ಮಣ ಸೇವಾ ಸಂಘ ಬೊಳುವಾರು, ವಿಶ್ವಕರ್ಮ ಯುವ ಸಮಾಜ ಬೊಳುವಾರು, ವಿಶ್ವಕರ್ಮ ಮಹಿಳಾ ಮಂಡಳಿ ಬೊಳುವಾರು ಜಂಟಿ ಪ್ರಾಯೋಜಕತ್ವದಲ್ಲಿ ರೋಟರಿ ಕ್ಯಾಂಪ್ಕೋ-ಬ್ಲಡ್ ಬ್ಯಾಂಕ್ ಪುತ್ತೂರು, ರೋಟರಿ ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ, ಕೆಎಂಸಿ ಆಸ್ಪತ್ರೆ ಮಂಗಳೂರು ಹಾಗೂ ರೋಟರಾಕ್ಟ್ ಕ್ಲಬ್ ಸಹಕಾರದೊಂದಿಗೆ ಇತ್ತೀಚೆಗೆ ಪುತ್ತೂರಿನ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ರಕ್ತದಾನ, ನೇತ್ರ ತಪಾಸಣೆ, ಹೃದಯ ತಪಾಸಣಾ ಉಚಿತ ಶಿಬಿರ ನಡೆಯಿತು. https://chat.whatsapp.com/Ge11n7QCiMj5QyPvCc0H19 ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋಆಪರೇಟಿವ್‌ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರ ಆರೋಗ್ಯದ ಕಾಳಜಿಯ ಉದ್ದೇಶದಿಂದ ಸಂಘ ಸಂಸ್ಥೆಗಳು ಜತೆಗೂಡಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಬೇಕು. ಸೊಸೈಟಿಯು ವಜ್ರಮಹೋತ್ಸವ ಸಂಭ್ರಮದಲ್ಲಿದ್ದು, ಹಲವು ಜನೋಪಯೋಗಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ವಿಶ್ವಕರ್ಮ ಯುವ ಸಮಾಜ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ರಕ್ತದಾನ ಶ್ರೇಷ್ಠವಾದ…

Read More

ಮಂಗಳೂರು: ಮಂಗಳೂರು ಹದಿನಾರು ಪಟ್ಣ ಮೀನುಗಾರಿಕಾ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘದ ಸಾಮಾನ್ಯ ಸಭೆ ಇತ್ತೀಚೆಗೆ ಮಂಗಳೂರು ಯಾಂತ್ರಿಕ ಮೀನುಗಾರರ ಸಹಕಾರಿ ಸಂಘದ ಮತ್ಸ್ಯಗಂಧ ಕಟ್ಟಡದ ಸಭಾಂಗಣದಲ್ಲಿ ಅಧ್ಯಕ್ಷ ಕುಲಶೇಖರ ಪುತ್ರನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. https://chat.whatsapp.com/Ge11n7QCiMj5QyPvCc0H19 ಅಧ್ಯಕ್ಷ ಕುಲಶೇಖರ ಪುತ್ರನ್‌ ಸ್ವಾಗತಿಸಿದರು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಹಕಾರಿಯ ಉಪಾಧ್ಯಕ್ಷ ಅಮಿತ್ರ ಸುವರ್ಣ, ಆಡಳಿತ ಮಂಡಳಿಯ ಸದಸ್ಯರಾದ ಹೇಮಚಂದ್ರ ಸಾಲ್ಯಾನ್, ಮಾಧವ ಪುತ್ರನ್ ಕುದ್ರೋಳಿ, ನವೀನ್ ಕರ್ಕೇರ, ಶ್ಯಾಮಸುಂದರ್ ಕಾಂಚನ್, ಧನಪಾಲ ಕೋಟ್ಯಾನ್, ಹರಿಶ್ಚಂದ್ರ ಮೆಂಡನ್, ಯಶವಂತ ಪಿ. ಅಮೀನ್ ಉಳ್ಳಾಲ, ಓಂದಾಸ್ ಬೆಂಗ್ರೆ, ಚಂದ್ರರಾಮ ಸುವರ್ಣ, ಮೀರಾ ಕೆ. ಕರ್ಕೇರ ಉಪಸ್ಥಿತರಿದ್ದರು. ಸಹಕಾರಿಯು ಗತ ವರ್ಷದಲ್ಲಿ 8,77,06,065.00 ರೂ. ವ್ಯವಹಾರ ನಡೆಸಿದ್ದು 10,65,650.71 ರೂ. ನಿವ್ವಳ ಲಾಭ ಗಳಿಸಿತ್ತು. ವರದಿ ವರ್ಷದಲ್ಲಿ 11,46,80,540.00 ರೂ. ವ್ಯವಹಾರ ನಡೆಸಿದ್ದು 17,74,648.00 ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.20 ಡಿವಿಡೆಂಡ್ ಘೋಷಿಸಲಾಯಿತು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು…

Read More

ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಸಮಾಜಮುಖಿ ಕಾರ್ಯಕ್ರಮ ದಿ.ಫಾ.ವಲೇರಿಯನ್ ಮೆಂಡೋನ್ಸ ಅವರ ಸಾಮಾಜಿಕ ಚಿಂತನೆಯ ಫಲ: ಸೊಸೈಟಿಯ ಸಂಸ್ಥಾಪಕ ಜೀವನ್ ಡಿಸೋಜ ಬ್ರಹ್ಮಾವರ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಬ್ರಹ್ಮಾವರದ ಸ್ನೇಹಾಲಯ ಸಂಸ್ಥೆಗೆ ದಿನಸಿ ಸಾಮಗ್ರಿಗಳನ್ನು ಶುಕ್ರವಾರ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಜೀವನ್ ಡಿಸೋಜ ಮಾತನಾಡಿ, ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ.ಫಾ.ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಈ ಕಾರ್ಯಕ್ರಮದ ಶ್ರೇಯಸ್ಸು ವಲೇರಿಯನ್ ಮೆಂಡೋನ್ಸ ಇವರಿಗೆ ಅರ್ಪಿಸಲಾಗುವುದು. ಮೊದಲು ಪಾಂಬೂರಿನ ಮಾನಸ ಪುನರ್ವಸತಿ ಕೇಂದ್ರದ ವಿಶೇಷ ಚೇತನ ಮಕ್ಕಳೊಂದಿಗೆ ಸಂಭ್ರಮ ಆಚರಿಸಿದ್ದು, ಎರಡನೆಯದಾಗಿ ಉದ್ಯಾವರದ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟ್‌ನಲ್ಲಿ ಆಚರಿಸಿಕೊಂಡು ಶುಕ್ರವಾರ ಇಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. https://chat.whatsapp.com/Ge11n7QCiMj5QyPvCc0H19 ಮುಖ್ಯ ಅತಿಥಿ…

Read More

ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಮಂಗಳೂರಿನ ಬಿಜೈ ಕಾಪಿಕಾಡ್‌ನಲ್ಲಿನ ಸರ್ಕಾರಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉತ್ತಮ ಗುಣಮಟ್ಟದ ವಾಟರ್ ಪ್ರೂಫ್ ಸ್ಕೂಲ್ ಬ್ಯಾಗ್‌ಗಳನ್ನು ಶುಕ್ರವಾರ ಹಸ್ತಾಂತರಿಸಲಾಯಿತು. https://chat.whatsapp.com/Ge11n7QCiMj5QyPvCc0H19 ಶಾಲೆಯ ಶಿಕ್ಷಕ ವೃಂದ ಹಾಗೂ ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್‌.ಗುರುರಾಜ್‌, ಸಿಇಒ ಚಿತ್ರಾ ಸಹಕರಿಸಿದರು. ಸೊಸೈಟಿಯ ವಾರ್ಷಿಕ ಮಹಾಸಭೆಯಲ್ಲಿ ಸಾಂಕೇತಿಕವಾಗಿ ಶಾಲೆಯ ಮುಖ್ಯ ಶಿಕ್ಷಕಿಗೆ ನಾಲ್ಕು ಬ್ಯಾಗ್‌ಗಳನ್ನು ನೀಡಲಾಗಿತ್ತು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಮಂಗಳೂರು: ಬೋಳಾರ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ 13ನೇ ವಾರ್ಷಿಕ ಸಾಮಾನ್ಯ ಸಭೆ ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದ ಬಳಿಯ ಶ್ರೀದೇವಿ ನಿಲಯದಲ್ಲಿ ನಡೆಯಿತು. https://chat.whatsapp.com/Ge11n7QCiMj5QyPvCc0H19 ಸಹಕಾರಿಯ ಉಪಾಧ್ಯಕ್ಷ ರಮಾನಂದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮನಾಥ್ ಸ್ವಾಗತಿಸಿದರು. ನಿರ್ದೇಶಕ ವರುಣ್‌ರಾಜ್ ಅಂಬಟ್ ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕ ಕೃಷ್ಣಮೂರ್ತಿ ಲೆಕ್ಕಪತ್ರ ಮಂಡಿಸಿದರು. ನಿರ್ದೇಶಕರಾದ ಗುರು ಪ್ರವೀಣ್ , ಸುಜಿತ್ ಕುಮಾರ್ , ರೊನಾಲ್ಡ್ ಡಿಸೋಜ, ಉದಯಕುಮಾರ್, ರಾಜೇಂದ್ರ ವಿಠ್ಠಲ್, ಮಮತಾ ಮತ್ತು ಉಷಾ ಎಸ್.ರಾವ್ ಉಪಸಿತರಿದ್ದರು. ಸಹಕಾರಿಯ ವರದಿ ಸಾಲಿನಲ್ಲಿ ರೂ.14,68,994.62 ಲಾಭ ಗಳಿಸಿದ್ದು, ಸದಸ್ಯರಿಗೆ ಶೇಕಡ 15 ಡಿವಿಡೆಂಟ್ ಘೋಷಿಸಲಾಯಿತು. ಐದು ಜನ ಸದಸ್ಯರ ಮಕ್ಕಳಿಗೆ ಧನಸಹಾಯ ನೀಡಲಾಯಿತು. ಮಂಗಳೂರಿನ ಉಪಮೇಯರ್‌ ಆಗಿ ಆಯ್ಕೆಯಾದ ಭಾನುಮತಿ ಕೆ.ಎಸ್ ಹಾಗೂ ಇತ್ತೀಚೆಗೆ ಡಾಕ್ಟರೇಟ್ ಪಡೆದ ಡಾ.ರಂಜಿತಾ ಅವರನ್ನು ಸನ್ಮಾನಿಸಲಾಯಿತು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಜನಸಾಮಾನ್ಯರ ಮೇಲಿನ ತೆರಿಗೆ ಹೊರೆ ತಗ್ಗಿಸಲು ಚಿಂತನೆ 100ಕ್ಕೂ ಅಧಿಕ ವಸ್ತುಗಳ ಮೇಲಿನ ತೆರಿಗೆ ಪರಿಷ್ಕರಣೆ ಸಾಧ್ಯತೆ ನವದೆಹಲಿ: ಕೃಷಿ ಉತ್ಪನ್ನ, ರಸಗೊಬ್ಬರ, ಜವಳಿ, ಕೈಮಗ್ಗ, ಶೈಕ್ಷಣಿಕ ಸಾಮಗ್ರಿ ಸೇರಿದಂತೆ 100ಕ್ಕೂ ಅಧಿಕ ವಸ್ತುಗಳ ಮೇಲಿನ ತೆರಿಗೆಯನ್ನು ಪರಿಷ್ಕರಿಸಲು ಗೋವಾದಲ್ಲಿ ಬುಧವಾರ ನಡೆದ ಆರು ಸಚಿವರ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ. ಜನಸಾಮಾನ್ಯರ ಮೇಲಿನ ತೆರಿಗೆ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೆಲವು ಸರಕುಗಳ ಮೇಲೆ ವಿಧಿಸುತ್ತಿರುವ ಶೇ.12ರಷ್ಟು ಜಿಎಸ್‌ಟಿಯನ್ನು ಶೇ.5ಕ್ಕೆ ಇಳಿಸುವ ಬಗ್ಗೆಯೂ ಸಮಾಲೋಚನೆ ನಡೆದಿದೆ. ಆದರೆ ಈ ವಿಷಯದಲ್ಲಿ ಯಾವುದೇ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ. https://chat.whatsapp.com/Ge11n7QCiMj5QyPvCc0H19 ಅಕ್ಟೋಬರ್‌ 20ರಂದು ನಡೆಯುವ ಸಚಿವರ ಸಮಿತಿಯ ಮುಂದಿನ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ನವೆಂಬರ್‌ನಲ್ಲಿ ನಡೆಯುವ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ. ಪ್ರಸ್ತುತ ಸರಕು ಮತ್ತು ಸೇವಾ ತೆರಿಗೆ 5, 12, 18 ಮತ್ತು 28ರಷ್ಟು ಸ್ಲ್ಯಾಬ್‌ಗಳನ್ನು ಹೊಂದಿರುವ ನಾಲ್ಕು ಹಂತದ ತೆರಿಗೆ ರಚನೆಯಾಗಿದೆ.…

Read More

ಸರ್ವ ಸದಸ್ಯರ ಮಹಾಸಭೆಯಲ್ಲಿ ಸೊಸೈಟಿಯ ಅಧ್ಯಕ್ಷ ಡಾ.ಅಶೋಕ್‌ವರ್ಧನ್‌ ಹೇಳಿಕೆ ಸೊಸೈಟಿಗೆ 61 ಲಕ್ಷ ನಿವ್ವಳ ಲಾಭ ಕೆಜಿಎಫ್‌: ವಾಣಿಜ್ಯೋದ್ಯಮವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ವ್ಯಾಪಾರಸ್ಥರು ಹಾಗೂ ಇತರೆ ವರ್ಗದವರಿಗೆ ಸಣ್ಣ ಪ್ರಮಾಣದ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಸ್ವರ್ಣ ವಿಲಾಸ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಯಶಸ್ವಿ ಹೆಜ್ಜೆ ಇಟ್ಟಿದೆ ಎಂದು ಸೊಸೈಟಿಯ ಅಧ್ಯಕ್ಷ ಡಾ.ಅಶೋಕ್‌ವರ್ಧನ್ ತಿಳಿಸಿದರು. ಕೆಜಿಎಫ್‌ ನಗರದ ಒಂದನೇ ಅಡ್ಡರಸ್ತೆಯಲ್ಲಿರುವ ವಿಷ್ಣು ಸಮಾಜ ಭವನದಲ್ಲಿ ಹಮ್ಮಿಕೊಂಡಿದ್ದ ಏಳನೇ ವರ್ಷದ ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 61 ಲಕ್ಷ ನಿವ್ವಳ ಲಾಭ : ಕಳೆದ ವರ್ಷ ರೂ.45.60.177 ನಿವ್ವಳ ಲಾಭ ಗಳಿಸಿದ್ದು, ಪ್ರಸಕ್ತ ಸಾಲಿನಲ್ಲಿ ಬ್ಯಾಂಕ್‌ ಉತ್ತಮ ರೀತಿಯಲ್ಲಿ ವಸೂಲಾತಿ ಮಾಡಿರುವುದರಿಂದ 61,52,874 ರೂ. ನಿವ್ವಳ ಲಾಭ ಗಳಿಸಿದೆ ಎಂದು ಅಶೋಕ್‌ವರ್ಧನ್‌ ತಿಳಿಸಿದರು. ಗ್ರಾಹಕರು 2023-24 ನೇ ಸಾಲಿನ ವರ್ಷಾಂತ್ಯಕ್ಕೆ ರೂ. 21,41,62.500 ಠೇವಣಿ ಇಟ್ಟಿದ್ದು, ಇದರಲ್ಲಿ 17,86,27,463 ರೂ. ಸಾಲ ಮತ್ತು…

Read More

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಸಂಸ್ಥಾಪಕ ಜೀವನ್‌ ಡಿಸೋಜ ಅಭಿಪ್ರಾಯ ಸೊಸೈಟಿಯ ಎರಡನೇ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟ್‌ಗೆ ದಿನಸಿ ಸಾಮಗ್ರಿ ವಿತರಣೆ ಉದ್ಯಾವರ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟ್‌ನ ಮಕ್ಕಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಜೀವನ್ ಡಿಸೋಜ ಮಾತನಾಡಿ, ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ.ಫಾ.ವಲೇರಿಯನ್ ಮೆಂಡೋನ್ಸ ಅವರು. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ ಅಗಲುವಿಕೆ ನಮಗೆ ತುಂಬಲಾಗದ ನಷ್ಟ. ಈ ಕಾರ್ಯಕ್ರಮದ ಶ್ರೇಯಸ್ಸು ದಿ.ಫಾ.ವಲೇರಿಯನ್ ಮೆಂಡೋನ್ಸ ಇವರಿಗೆ ಅರ್ಪಿಸುತ್ತೇನೆ. ಅವರಿಗೆ ಗೌರವ ಸಮರ್ಪಣೆಯಿಂದ ನಾವು ಮೊದಲು ಮಾನಸ ಪುನರ್ವಸತಿ ಕೇಂದ್ರ ಪಾಂಬೂರು ಇಲ್ಲಿನ…

Read More

ಉಡುಪಿ: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್, ಉಡುಪಿ ಇದರ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಇತ್ತೀಚೆಗೆ ಸಂಘದ ಅಧ್ಯಕ್ಷ ಹೆಚ್.ಮಹೇಶ್ ಶೆಣೈ ಅಧ್ಯಕ್ಷತೆಯಲ್ಲಿ ಉಡುಪಿಯ ವಳಕಾಡು ಪದ್ಮಾವತಿ ಸಭಾಸದನದಲ್ಲಿ ನಡೆಯಿತು.https://chat.whatsapp.com/Ge11n7QCiMj5QyPvCc0H19 ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಬೆಂಗಳೂರು ಇದರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ. ಎಸ್. ಹಾಗೂ ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಜಿ.ಸಾಲಿಯಾನ್ ಉಪಸ್ಥಿತರಿದ್ದರು. ಸಂಘವು ವರದಿ ವರ್ಷದಲ್ಲಿ 5.97 ಕೋಟಿ ರೂ. ದುಡಿಯುವ ಬಂಡವಾಳ, 4.24 ಕೋಟಿ ರೂ. ಹೊರಬಾಕಿ ಸಾಲ ಹೊಂದಿದ್ದು, 15.30 ಲಕ್ಷ ರೂ. ನಿವ್ವಳ ಲಾಭ ಪಡೆದು, ಸದಸ್ಯರಿಗೆ ಶೇ.8ರಷ್ಟು ಡಿವಿಡೆಂಡ್ ಘೋಷಿಸಲಾಯಿತು. ಸಹಕಾರಿಯ ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು, ಗ್ರಾಹಕರು, ಪಿಗ್ಮಿ ಸಂಗ್ರಾಹಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಬೈಂದೂರು: ಹೋಲಿಕ್ರಾಸ್ ಸೌಹಾರ್ದ‌ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು ಇದರ 2023-24ನೇ ಸಾಲಿನ ಸಾಮಾನ್ಯ ಸಭೆಯು ಬುಧವಾರ ಬೈಂದೂರಿನ ಸಹಕಾರಿಯ ಪ್ರಧಾನ ಕಛೇರಿ ವಠಾರದಲ್ಲಿ ನಡೆಯಿತು. ಸಹಕಾರಿಯ ಅಧ್ಯಕ್ಷ ದ್ಯಾನೆಲ್ ನಜರೆತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಸ್ಥೆಯು ಬೆಳೆಯಲು ಸಿಬ್ಬಂದಿಗಳ ನಗುಮೊಗದ ಸೇವೆ ಹಾಗೂ ತಾಳ್ಮೆಯೇ ಕಾರಣ. ಸಹಕಾರಿಯ ಸದಸ್ಯರಿಗೆ ಸಕಾಲದಲ್ಲಿ ತ್ವರಿತ ಸೇವೆ ಒದಗಿಸುವುದೇ ನಮ್ಮ ಧ್ಯೇಯ. ಈಗಾಗಲೇ ನಾವು ಎರಡು ಶಾಖೆಗಳನ್ನು ಪ್ರಾರಂಭಿಸಿದ್ದು ಮುಂದಿನ ತಿಂಗಳ ಮೊದಲ ವಾರದಲ್ಲಿ ಸಂತೆಕಟ್ಟೆಯಲ್ಲಿ ನೂತನ ಶಾಖೆ ತೆರೆಯುವುದಾಗಿ ತಿಳಿಸಿದರು. ಈ ವರ್ಷ ಎ ತರಗತಿಯ ಸದಸ್ಯರಿಗೆ 8.5% ಡಿವಿಡೆಂಡ್ (ಲಾಭಾಂಶ ) ನೀಡುವುದಾಗಿ ಘೋಷಿಸಲಾಯಿತು. https://chat.whatsapp.com/Ge11n7QCiMj5QyPvCc0H19 ಸಹಕಾರಿಯ ನಿರ್ದೇಶಕರಾದ ಜೆಸಿಂತಾ ಡಿ ನಜರೆತ್, ಮಥಾಯಸ್ ರೆಬೆಲ್ಲೋ, ಫ್ಲಾವಿಯಾ ರೆಬೆಲ್ಲೋ, ರೀನಾ ವಿಲ್ಸನ್ ಗೋಮ್ಸ್, ಬ್ರಾಯನ್ ಡುಮಿಂಗ್ ಡಯಾಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಲಿಯಂ ಗೋಮ್ಸ್, ಉಪ್ಪುಂದ ಶಾಖೆಯ ಶಾಖಾ ವ್ಯವಸ್ಥಾಪಕ ಉದಯ ಎಸ್., ತ್ರಾಸಿ ಶಾಖೆಯ ಶಾಖಾ ವ್ಯವಸ್ಥಾಪಕ…

Read More