Author: admin
ಸಾಗರ: ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ, ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಗರ ಉಪ ವಿಭಾಗದ ಪತ್ತಿನ ಮತ್ತು ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಶಿಕಾರಿಪುರದ ಶ್ರೀ ಕಂತೆ ಸಿದ್ದೇಶ್ವರ ಸಭಾಂಗಣದಲ್ಲಿ ನೇತ್ರಾ ದೇವರಾಜ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. https://chat.whatsapp.com/Ge11n7QCiMj5QyPvCc0H19 ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷ ವಿ.ರಾಜು ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ತೋಟಗಾರಿಕಾ ಮಹಾಮಂಡಳದ ಅಧ್ಯಕ್ಷ ಬಿ.ಡಿ.ಭೂಕಾಂತ, ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ಉಪಾಧ್ಯಕ್ಷೆ ಶಾಂತಲಾ ಭೂಕಾಂತ್, ನಿರ್ದೇಶಕರಾದ ಶಿವಮ್ಮ ಬಸವರಾಜಪ್ಪ, ಕವಿತಾ ಸುರೇಶ್, ಶಶಿಕಲಾ ರುದ್ರೇಶ್, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಡಿ.ಎಲ್. ಬಸವರಾಜ್, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಕೆ.ಜಿ. ಮಮತಾ ಚಂದ್ರಕುಮಾರ್, ಶಿವಮೊಗ್ಗ ಜಿಲ್ಲಾ ಸಹಕಾರ…
ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ವಿನೂತನ ಯೋಜನೆ ನವಂಬರ್ 9ರ ಶನಿವಾರ ಸಮಾರಂಭ ಮಂಗಳೂರು: ಸದಾ ಒಂದಿಲ್ಲೊಂದು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ರಿಯಾಶೀಲವಾಗಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮತ್ತೊಂದು ವಿನೂತನ ಯೋಜನೆ ತಯಾರಾಗಿದ್ದು 50 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಗ್ರಂಥಾಲಯಕ್ಕೆ 5000 ಪುಸ್ತಕಗಳ ವಿತರಿಸುವ ಕಾರ್ಯಕ್ರಮ ನವಂಬರ್ 9ರಂದು ಶನಿವಾರ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಮಂಗಳೂರಿನ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ನ.9ರಂದು ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಡೆಯಲಿದ್ದು ಮಂಗಳೂರಿನ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಮಹಾರಾಜ್ ಉಪಸ್ಥಿತರಿರುವರು. ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹೊ, ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕಿ ಭಾರತಿ ಜಿ.ಭಟ್, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಭಾಗವಹಿಸುವರು. ಶ್ರೀಶಾ ಸೌಹಾರ್ದ ಕೋ…
ನವದೆಹಲಿ: ಕೇಂದ್ರ ಸಹಕಾರ ಸಚಿವಾಲಯದ ಸಲಹಾ ಸಮಿತಿಯನ್ನು ಕೇಂದ್ರ ಸರ್ಕಾರವು ರಚಿಸಿದ್ದು ಉಭಯ ಸದನಗಳ ಸದಸ್ಯರು ಇದರಲ್ಲಿ ಒಳಗೊಂಡಿದ್ದಾರೆ. ಬಿಜೆಪಿಯ ಝಾನ್ಸಿ ಲೋಕಸಭಾ ಕ್ಷೇತ್ರದ ಸಂಸದ ಅನುರಾಗ್ ಶರ್ಮ ಕಳೆದ ಬಾರಿಯ ತಂಡದಲ್ಲಿದ್ದ ಏಕೈಕ ಸದಸ್ಯರಾಗಿ ಉಳಿದುಕೊಂಡಿದ್ದಾರೆ. https://chat.whatsapp.com/Ge11n7QCiMj5QyPvCc0H19 2019ರ ಅಕ್ಟೋಬರ್ 23ರಂದು ಈ ಹಿಂದಿನ ಸಮಿತಿ ರಚಿಸಲಾಗಿದ್ದು ಅದರಲ್ಲಿ 20 ಲೋಕಸಭಾ ಸದಸ್ಯರು ಮತ್ತು 8 ರಾಜ್ಯಸಭಾ ಸದಸ್ಯರಿದ್ದರು. ಈ ಬಾರಿ ರಚಿಸಲಾಗಿರುವ ತಂಡದಲ್ಲಿ 9 ಲೋಕಸಭಾ ಸದಸ್ಯರು ಮತ್ತು 4 ರಾಜ್ಯಸಭಾ ಸದಸ್ಯರಿದ್ದಾರೆ. ಸಮಿತಿಯಲ್ಲಿ ಹೊಸಬರನ್ನು ಸೇರ್ಪೆಡೆ ಮಾಡುವ ಉದ್ದೇಶದಿಂದ ಹೊಸ ಸದಸ್ಯರನ್ನು ಸೇರಿಸಲಾಗಿದ್ದು ಉತ್ತರ ಪ್ರದೇಶದ ಬೃಜ್ಭೂಷಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್(ಬಿಜೆಪಿ), ಮಧ್ಯಪ್ರದೇಶದ ಶಿವಮಂಗಲ್ ಸಿಂಗ್ ತೋಮರ್(ಬಿಜೆಪಿ), ಮಹಾರಾಷ್ಟ್ರದ ಧಾರಯಶೀಲ್ ಮೋಹಿತೆ ಪಾಟೀಲ್(ಎನ್ಸಿಪಿ -ಶರದ್ ಪವಾರ್ ಬಣ), ಕರ್ನಾಟಕದ ಶ್ರೇಯಸ್ ಎಂ.ಪಟೇಲ್(ಕಾಂಗ್ರೆಸ್), ತೆಲಂಗಾಣದ ಸುರೇಶ್ ಕುಮಾರ್ ಶೇಟ್ಕರ್(ಕಾಂಗ್ರೆಸ್), ಉತ್ತರ ಪ್ರದೇಶದ ಅನುರಾಗ್ ಶರ್ಮ(ಬಿಜೆಪಿ), ಗುಜರಾತ್ನ ಪೂನಂಬೆನ್ ಮೇಡಮ್(ಬಿಜೆಪಿ), ಗುಜರಾಥ್ನ ದಭಿ ಭರತ್ಸಿಂಹಜಿ(ಕಾಂಗ್ರೆಸ್), ಮಹಾರಾಷ್ಟ್ರದ…
ಮಂಗಳೂರು: 71ನೇ ಅಖಿಲ ಭಾರತ ಸಹಕಾರ ಸಪ್ತಾಹವು ‘ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ’ ಎಂಬ ಧ್ಯೇಯದೊಂದಿಗೆ ನವಂಬರ್ 14ರಿಂದ 20ರವರೆಗೆ ದೇಶಾದ್ಯಂತ ನಡೆಯಲಿದ್ದು, ಮಂಗಳೂರಿನಲ್ಲಿ ನ.16ರಂದು ‘ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ವಿಷಯದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಸೋಮವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ನಡೆದ ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ತಯಾರಿ ನಡೆದಿದೆ. ಆ ಮೂಲಕ ಸಹಕಾರ ಕ್ಷೇತ್ರದ ಸಾಧನೆಗಳನ್ನು ಸಾರ್ವಜನಿಕರ ಗಮನಕ್ಕೆ ತರುವುದು ಅಗತ್ಯವಾಗಿದ್ದು ಇದರ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದರು. https://chat.whatsapp.com/Ge11n7QCiMj5QyPvCc0H19 ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಪಿ ಮಾತನಾಡಿ, ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ಇಡೀ ರಾಜ್ಯದಲ್ಲೇ ಮಾದರಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದು ಶ್ಲಾಘನೀಯ ಸಂಗತಿ ಎಂದರು.…
ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ – ಈ ಬಾರಿಯ ಧ್ಯೇಯವಾಕ್ಯ ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನೇತೃತ್ವದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆಯು ನವಂಬರ್ 14ರಿಂದ 20ರ ತನಕ ನಡೆಯಲಿದೆ. ರಾಜ್ಯಮಟ್ಟದಲ್ಲಿ ಏಳು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ವಿವಿಧ ಮಹಾಮಂಡಲಗಳ ನೇತೃತ್ವದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಈ ಬಾರಿ ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧ್ಯೇಯವಾಕ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ನವಂಬರ್ 14ರಂದು ಗುರುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕೆಎಂಎಫ್ ನೇತೃತ್ವದಲ್ಲಿ ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು ಎಂಬ ವಿಷಯದಲ್ಲಿ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ನವಂಬರ್ 15ರಂದು ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ಮತ್ತು ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು…
2024-25ನೇ ಸಾಲಿನ ಎರಡು ಲಕ್ಷ ರೂ.ಗಳ ವಿದ್ಯಾರ್ಥಿವೇತನಕ್ಕೆ ಮಾದರಿ ಪರೀಕ್ಷೆ ಸಿಂಧನೂರು: ಇಲ್ಲಿನ ಆಕ್ಸ್ಫರ್ಡ್ ಸೌಹಾರ್ದ ಸಂಘದ ವತಿಯಿಂದ ನೀಡಲಾಗುವ ಎರಡು ಲಕ್ಷ ರೂ.ಗಳ ವಿದ್ಯಾರ್ಥಿವೇತನದ ಪೋಸ್ಟರ್ ಬಡುಗಡೆ ಕಾರ್ಯಕ್ರಮ ಶುಕ್ರವಾರ ಸಂಘದ ಲಕ್ಷ್ಮೀಪೂಜೆ ಸಂದರ್ಭದಲ್ಲಿ ನಡೆಯಿತು.https://chat.whatsapp.com/Ge11n7QCiMj5QyPvCc0H19 ಶುಕ್ರವಾರ ಸಹಕಾರಿಯ ಕಚೇರಿಯಲ್ಲಿ ಲಕ್ಷ್ಮೀದೇವಿ ಪೂಜಾ ಕಾರ್ಯಕ್ರಮ ನಡೆದ ಬಳಿ, ದೀಪಾವಳಿಯು ವಿದ್ಯಾರ್ಥಿಗಳ ಜೀವನದಲ್ಲಿ ಹೊಸ ಭರವಸೆ ಮತ್ತು ನಾಳೆಯ ಹೊಸ ಕನಸುಗಳ ಈಡೇರಿಕೆಗೆ ನೆರವಾಗಲು 2024-25ನೇ ಸಾಲಿನ ಎರಡು ಲಕ್ಷ ರೂ.ಗಳ ಆಕ್ಸ್ಫರ್ಡ್ ವಿದ್ಯಾರ್ಥಿವೇತನದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಆಕ್ಸ್ಫರ್ಡ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎನ್.ಸತ್ಯನಾರಾಯಣ ಶ್ರೇಷ್ಠಿ, ನಿರ್ದೇಶಕರಾದ ಪ್ರವೀಣ ಸೋಲಂಕಿ, ನಾಗರಾಜ್ ಗುಪ್ತ, ಬಸವರಾಜ್ ಪಾಟೀಲ್, ಮುಖ್ಯ ಕಾರ್ಯನಿರ್ವಾಹಕ ವಿಶ್ವನಾಥ ಕುಲಕರ್ಣಿ, ಸಿಬ್ಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು. 2024-25ನೇ ಸಾಲಿನ ವಿದ್ಯಾರ್ಥಿವೇತನದ ವಿವರ: ಆಕ್ಸ್ಫರ್ಡ್ ಸೌಹಾರ್ದ ಸಹಕಾರಿ ಸಂಘದಿಂದ ಪ್ರಸಕ್ತ ಎರಡನೇ ವರ್ಷ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಎರಡು ಸಾವಿರ ರೂ.ಗಳ ವಾರ್ಷಿಕ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಪಿಯುಸಿ, ಪದವಿ ಮತ್ತು…
ಮಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘದ ಐದನೇ ಶಾಖೆ ಮೆಲ್ಕಾರ್ನಲ್ಲಿ ನವಂಬರ್ 18ರಂದು ಸೋಮವಾರ ಕಾರ್ಯಾರಂಭಗೊಳ್ಳಲಿದೆ. ಮೆಲ್ಕಾರ್ನ ಆರ್.ಆರ್ ಕಮರ್ಷಿಯಲ್ ಸೆಂಟರ್ನ ನೆಲಮಹಡಿಯಲ್ಲಿ ಬೆಳಗ್ಗೆ 11ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣನವರು ದೀಪ ಬೆಳಗಿಸಿ ಶಾಖಾ ಕಚೇರಿ ಉದ್ಘಾಟಿಸುವರು. ಕಟ್ಟಡದ ಮಾಲೀಕ ಎಂ.ರಾಮರಾಜ್ ರಾವ್ ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ಸಹಕಾರ ರತ್ನ ರಾಜಶೇಖರ ಗಾಣಿಗ ಭದ್ರತಾ ಕೋಶ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಭಟ್ ಶಾಖಾಧಿಕಾರಿ ಕೊಠಡಿ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ವ್ಯವಸ್ಥಾಪಕ ಗುರುಪ್ರಸಾದ್ ಬಂಗೇರ ನಗದು ಕೊಠಡಿ ಉದ್ಘಾಟಿಸಲಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಗಣಕಯಂತ್ರ ಉದ್ಘಾಟಿಸುವರು. 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಮುಂಬೈನ ಸಾಫಲ್ಯ ಸೇವಾ…
ಮಂಗಳೂರು: ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಕಚೇರಿಯಲ್ಲಿ ಗುರುವಾರ ದೀಪಾವಳಿ ಲಕ್ಷ್ಮೀಪೂಜೆ ನಡೆಯಿತು. ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್ ಆರ್ ಹರೀಶ್ ಆಚಾರ್ಯ, ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎ.ಸುರೇಶ್ ರೈ, ಶ್ರೀದೇವಿ ಕಾಲೇಜು ಪ್ರಾಂಶುಪಾಲ ಸುಧೀಶ್ ಪೂಜಾರಿ, ಸ್ಪಂದನ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ ನವೀನ್ ಎಲ್.ಆರ್ ಕಾವೂರು, ಯುವ ಸ್ಪಂದನ ಸೊಸೈಟಿಯ ಅಧ್ಯಕ್ಷ ಜಿತಿನ್ ಜೀಜೊ, ಉಪಾಧ್ಯಕ್ಷೆ ದೀಕ್ಷಾ ಡಿ.ಎಂ, ನಿರ್ದೇಶಕರಾದ ಚೇತನ್ ಕೊಟ್ಟಾರಿ, ಶೆಲ್ಡನ್ ಹರ್ಮನ್ ತಾವ್ರೊ, ಗುರು ಆದಿತ್ಯ, ನಿಶ್ಮಾ ವಿ.ಕೆ, ನರಸಿಂಹ ಎಸ್.ಭಂಡಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಎ.ಎಲ್, ಸಿಬ್ಬಂದಿ ಧನುಶ್ರೀ, ಸಹಕಾರ ಸ್ಪಂದನ ಸಂಪಾದಕ ಮೋಹನ್ದಾಸ್ ಮರಕಡ ಮೊದಲಾದವರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಹಬ್ಬದ ಆಚರಣೆಯಿಂದ ಸಹೋದರತ್ವ ಭಾವ: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅಭಿಪ್ರಾಯ ಉಡುಪಿ: ಎಂ.ಸಿ.ಸಿ. ಬ್ಯಾಂಕ್ನ ಬ್ರಹ್ಮಾವರ, ಕುಂದಾಪುರ ಮತ್ತು ಉಡುಪಿ ಶಾಖೆಗಳ ಸಂಯುಕ್ತಾಶ್ರಯದಲ್ಲಿ ಬ್ರಹ್ಮಾವರ ಶಾಖೆಯ ಆವರಣದಲ್ಲಿ ಬುಧವಾರ ದೀಪಾವಳಿ ಹಬ್ಬ ಆಚರಿಸಲಾಯಿತು. ಎಂಸಿಸಿ ಬ್ಯಾಂಕ್ ಬ್ರಹ್ಮಾವರ ಶಾಖೆಯ ಸಿಬ್ಬಂದಿ ಪ್ರಾರ್ಥನಾ ಗೀತೆಯೊಂದಿಗೆ ಸಂಭ್ರಮಾಚರಣೆಗೆ ಮೆರುಗು ನೀಡಿದರು. ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅತಿಥಿಗಳೊಂದಿಗೆ ದೀಪ ಬೆಳಗಿಸಿದರು. https://chat.whatsapp.com/Ge11n7QCiMj5QyPvCc0H19 ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೀಪಾವಳಿ ಆಚರಣೆಯ ಮಹತ್ವದ ಬಗ್ಗೆ ಹೇಳಿದರು. ಹಬ್ಬವು ಜನರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿ ಬ್ಯಾಂಕಿಗೆ ನಿರಂತರ ಬೆಂಬಲ ನೀಡಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಈಶ್ವರ ಮಲ್ಪೆ ಅವರ ಸಾಧನೆ ಮತ್ತು ಸಮಾಜಸೇವೆಗೆ ನೀಡಿದ ಕೊಡುಗೆಗಳಿಗಾಗಿ ಅವರನ್ನು ಅನಿಲ್ ಲೋಬೊ ಸನ್ಮಾನಿಸಿದರು. ಇನ್ನೋರ್ವ ಅತಿಥಿ ಬಿ.ಎನ್.ಶಂಕರ್, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪಿ.ಎ. ಹೆಗ್ಡೆ ಶುಭ ಹಾರೈಸಿದರು. ಬ್ರಹ್ಮಾವರದ…
ಮಂಗಳೂರು: ಗುರುಪುರ ಕೈಕಂಬದ ಬೆನಕ ಸೌಧದ ಒಂದನೇ ಮಹಡಿಯಲ್ಲಿರುವ ಸಫಲ ಸೌಹಾರ್ದ ಸಹಕಾರಿ ಸಂಘದ ಪ್ರಧಾನ ಕಚೇರಿಯನ್ನು ಬೆನಕ ಸೌಧದ ಎರಡನೇ ಮಹಡಿಗೆ ಸ್ಥಳಾಂತರ ಮಾಡುವ ಕಾರ್ಯಕ್ರಮ ನವಂಬರ್ 1ರಂದು ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಮಧ್ಯಾಹ್ನ 12.05ಕ್ಕೆ ಕಾರ್ಯಕ್ರಮ ನಡೆಯಲಿದ್ದು ಉಳ್ಳಾಲ ಉಳಿಯದ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣನವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕಿ ಭಾರತಿ ಭಟ್, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ದ.ಕ. ಮತ್ತು ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಜಿಲ್ಲಾಧ್ಯಕ್ಷ ಭಾಸ್ಕರ ದೇವಸ್ಯ, ಗುರುಪುರ ಕೈಕಂಬ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ವಿನೋದ್ ಮಾಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು…
